ವೀಡಿಯೊಗಳು | ಮಾನಸ್ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರವಾಸಿಗರಿಗೆ ಶಾಕ್‌ ; ಸಫಾರಿ ಜೀಪನ್ನು ಎತ್ತಿ ಒಗೆಯಲು ಪ್ರಯತ್ನಿಸಿದ ಖಡ್ಗಮೃಗ-ವೀಕ್ಷಿಸಿ

ದಿಸ್ಪುರ್‌: ಇತ್ತೀಚೆಗೆ ಅಸ್ಸಾಂನ ಮಾನಸ್ ರಾಷ್ಟ್ರೀಯ ಉದ್ಯಾನವನದಲ್ಲಿ ಸಫಾರಿ ವಾಹನದ ಮೇಲೆ ಖಡ್ಗಮೃಗ (Rhinoceros) ದಾಳಿಗೆ ಮುಂದಾಗಿದ್ದು, ಅದು ಸಫಾರಿ ಜೀಪನ್ನೇ ಎತ್ತಿದೆ. ಈ ಘಟನೆಯಿಂದ ಪ್ರವಾಸಿಗರು ಬೆಚ್ಚಿಬಿದ್ದಿದ್ದಾರೆ. ಈ ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ವೈರಲ್ ಆದ ವೀಡಿಯೊದಲ್ಲಿ ಖಡ್ಗಮೃಗವು ಜೀಪ್ ನಿಲ್ಲಿಸಿದ್ದ ರಸ್ತೆಯ ಕಡೆಗೆ ನಡೆದುಕೊಂಡು ಹೋಗುತ್ತಿರುವುದನ್ನು ಸೆರೆಹಿಡಿಯಲಾಗಿದೆ. ಅಲ್ಲದೆ, … Continued

ವೀಡಿಯೊ…| ಭ್ರಷ್ಟಾಚಾರ ನಿಗ್ರಹ ದಳದ ದಾಳಿ ವೇಳೆ ಕಿಟಕಿಯಿಂದ ಹಣ ಎಸೆದ ಇಂಜಿನಿಯರ್‌ ; 2.1 ಕೋಟಿ ರೂ. ಪತ್ತೆ

ಭುವನೇಶ್ವರ : ಒಡಿಶಾ ವಿಜಿಲೆನ್ಸ್ ಅಧಿಕಾರಿಗಳು ಶುಕ್ರವಾರ ಭುವನೇಶ್ವರದ ಗ್ರಾಮೀಣ ಕಾಮಗಾರಿ ಇಲಾಖೆಯ ಮುಖ್ಯ ಎಂಜಿನಿಯರ್ (ಯೋಜನಾ ರಸ್ತೆಗಳು) ಬೈಕುಂಠನಾಥ ಸಾರಂಗಿ ಅವರಿಗೆ ಸಂಬಂಧಿಸಿದ ಹಲವು ಸ್ಥಳಗಳಲ್ಲಿ ನಡೆಸಿದ ದಾಳಿಯ ಸಂದರ್ಭದಲ್ಲಿ 2.1 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಲೆಕ್ಕಕ್ಕೆ ಸಿಗದ ಹಣವನ್ನು ವಶಪಡಿಸಿಕೊಂಡಿದ್ದಾರೆ. ಅಕ್ರಮ ಆಸ್ತಿ ಹೊಂದಿರುವ ಆರೋಪದ ನಂತರ ಈ ದಾಳಿಗಳನ್ನು ನಡೆಸಲಾಯಿತು. … Continued

ರೆಸಾರ್ಟ್‌ ರಿಸೆಪ್ಶನಿಸ್ಟ್‌ ಅಂಕಿತಾ ಭಂಡಾರಿ ಕೊಲೆ ಪ್ರಕರಣ : ಬಿಜೆಪಿಯ ನಾಯಕನ ಪುತ್ರ, ಇತರ ಇಬ್ಬರಿಗೆ ಜೀವಾವಧಿ ಶಿಕ್ಷೆ

ಡೆಹ್ರಾಡೂನ್: ಅಂಕಿತಾ ಭಂಡಾರಿ ಕೊಲೆ ಪ್ರಕರಣದ ಮೂವರು ಆರೋಪಿಗಳಿಗೆ ಉತ್ತರಾಖಂಡದ ನ್ಯಾಯಾಲಯ ಶುಕ್ರವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ಕೋಟ್ವಾರ್‌ನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಆರೋಪಿಗಳಾದ ಪುಲ್ಕಿತ್ ಆರ್ಯ, ಸೌರಭ ಭಾಸ್ಕರ ಮತ್ತು ಅಂಕಿತ ಗುಪ್ತಾ ಅವರನ್ನು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302 (ಕೊಲೆ), 201 (ಸಾಕ್ಷ್ಯ ನಾಶಪಡಿಸುವುದು), 120 ಬಿ (ಕ್ರಿಮಿನಲ್ … Continued

ಮಂಗಳೂರು | ಗುಡ್ಡ ಕುಸಿದು ಅನಾಹುತ ; ಬಾಲಕಿ ಸೇರಿ ಇಬ್ಬರು ಸಾವು, ಅವಶೇಷಗಳಡಿ ಸಿಲುಕಿರುವ ಮೂವರ ರಕ್ಷಣೆಗೆ ಪ್ರಯತ್ನ

ಮಂಗಳೂರು: ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಗೆ ದಕ್ಷಿಣ ಕನ್ನಡದ ಹಲvew ಅನಾಹುತಗಳು ಸಂಭವಿಸಿವೆ. ಕೆಲವೆಡೆ ಗುಡ್ಡ ಕುಸಿತ (Landslide) ಉಂಟಾಗಿದೆ. ಮಳೆ ಸಂಬಂಧಿ ಅನಾಹುತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ದೇರಳಕಟ್ಟೆ ಮೊಂಟೆಪದವಿನ ಪಂಬದ ಹಿತ್ಲುವಿನಲ್ಲಿ ಗುಡ್ಡ ಕುಸಿದು ಮಣ್ಣು ಮನೆಗಳ ಮೇಲೆ ಬಿದ್ದಿದೆ. ಮನೆಗಳ ಅಡಿಯಲ್ಲಿ ಒಂದೇ ಕುಟುಂಬದ ಸಿಲುಕಿಕೊಂಡಿದ್ದಾರೆ. ಅವರಲ್ಲಿ ಓರ್ವ ಮಹಿಳೆ ಸಾವಿಗೀಡಾಗಿದ್ದಾರೆ. ಓರ್ವರನ್ನು … Continued

ಕನ್ನಡದ ಖ್ಯಾತ ಸಾಹಿತಿ ಎಚ್‌.ಎಸ್. ವೆಂಕಟೇಶಮೂರ್ತಿ ಇನ್ನಿಲ್ಲ

ಬೆಂಗಳೂರು: ಕನ್ನಡದ ಖ್ಯಾತ ಕವಿ, ನಾಟಕ ರಚನೆ ಕಾರರು, ಸಾಹಿತಿಯಾಗಿರುವ ಎಚ್‌ ಎಸ್ ವೆಂಕಟೇಶ ಮೂರ್ತಿ ನಿಧನರಾಗಿದ್ದಾರೆ. ಕವಿ, ನಾಟಕಕಾರ, ವಿಮರ್ಶಕ, ಪ್ರಾಧ್ಯಾಪಕ, ಭಾವಗೀತ ರಚನಕಾರ, ಚಲನಚಿತ್ರ ನಿರ್ದೇಶಕ, ಕತೆಗಾರ, ಚಿತ್ರಗೀತ ರಚನೆಕಾರ ಆಗಿದ್ದ ಅವರು ಅಲ್ಪಕಾಲದ ಅಸೌಖ್ಯದ ಬಳಿಕ ಇಂದು, ಶುಕ್ರವಾರ (ಮೇ 30) ನಿಧನರಾಗಿದ್ದಾರೆ. 81 ವರ್ಷ ವಯಸ್ಸಿನ ಎಚ್‌ಎಸ್‌ವಿ ಎಂದೇ ಕರೆಯಲ್ಪಡುತ್ತಿದ್ದ … Continued

ಭಾರೀ ಮಳೆ : ಮೇ 30 ರಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಅಂಗನವಾಡಿಗಳು, ಶಾಲೆಗಳಿಗೆ ರಜೆ

ಮಂಗಳೂರು/ಉಡುಪಿ : ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುತ್ತಿರುವುದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಮೇ 30 ರಂದು ಈ ಎರಡು ಜಿಲ್ಲೆಗಳ ಅಂಗನವಾಡಿಗಳು ಮತ್ತು ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಕಳೆದ ಕೆಲವು ದಿನಗಳಿಂದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ವಿಪತ್ತು ನಿರ್ವಹಣಾ ಪ್ರಾಧಿಕಾರವು ಕೆಲವು ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿಗಳು, ಪ್ರಾಥಮಿಕ … Continued

ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ; ಕಾಂಗ್ರೆಸ್‌ ಹುದ್ದೆಗಳಿಗೆ ದಕ್ಷಿಣ ಕನ್ನಡ ಮುಸ್ಲಿಂ ನಾಯಕರ ಸಾಮೂಹಿಕ ರಾಜೀನಾಮೆ

ಮಂಗಳೂರು : ಅಬ್ದುಲ್ ರಹೀಂ ಅಲಿಯಾಸ್ ಇಮ್ತಿಯಾಜ್ ಹತ್ಯೆಯನ್ನು ಸರ್ಕಾರ ನಿರ್ವಹಿಸುತ್ತಿರುವ ರೀತಿಯನ್ನು ವಿರೋಧಿಸಿ ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ಸಿನ  ಮುಸ್ಲಿಂ ನಾಯಕರು ಪಕ್ಷದ ಹುದ್ದೆಗಳಿಗೆ ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ನೀಡಿದವರಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಪ್ರಧಾನ ಕಾರ್ಯದರ್ಶಿ ಎಂ.ಎಸ್. ಮುಹಮ್ಮದ್ ಮತ್ತು ದಕ್ಷಿಣ ಕನ್ನಡ ಅಲ್ಪಸಂಖ್ಯಾತ ವಿಭಾಗದ ಜಿಲ್ಲಾಧ್ಯಕ್ಷ ಶಾಹುಲ್ … Continued

ದಕ್ಷಿಣ ಕನ್ನಡದಲ್ಲಿ ಸರಣಿ ಹತ್ಯೆ ; ಇಬ್ಬರು ಹಿರಿಯ ಪೊಲೀಸ್‌ ಅಧಿಕಾರಿಗಳ ಎತ್ತಂಗಡಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ (Dakshina Kannada) ನಡೆದ ಸಾಲು ಸಾಲು ಹತ್ಯೆಗಳ ಬಳಿಕ ಇಬ್ಬರು ಐಪಿಎಸ್‌ ಅಧಿಕಾರಿಗಳನ್ನು ಸರ್ಕಾರ ಎತ್ತಂಗಡಿ ಮಾಡಿದೆ. ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಹಾಗೂ ದಕ್ಷಿಣ ಕನ್ನಡ ಪೊಲೀಸ್‌ ವರಿಷ್ಠಾಧಿಕಾರಿ ಯತೀಶ್.ಎನ್ ಅವರನ್ನು ಸರ್ಕಾರ ಏಕಕಾಲಕ್ಕೆ ವರ್ಗಾವಣೆ ಮಾಡಿ‌ ಸರ್ಕಾರ ಆದೇಶ ಹೊರಡಿಸಿದೆ. ಮಂಗಳೂರು ನೂತನ ಪೊಲೀಸ್ ಆಯುಕ್ತರಾಗಿ … Continued

ಕಲಬುರಗಿ ಜಿಲ್ಲಾಧಿಕಾರಿ ನಿಂದನೆ : ಬಿಜೆಪಿ ಪರಿಷತ್‌ ಸದಸ್ಯ ರವಿಕುಮಾರಗೆ​ ಹೈಕೋರ್ಟ್ ತರಾಟೆ

ಬೆಂಗಳೂರು : ಕಲಬುರಗಿ ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್‌ ಅವರನ್ನು ಪಾಕಿಸ್ತಾನಿ ಎಂದು ಕರೆದಿರುವ ಆರೋಪಕ್ಕೆ ಗುರಿಯಾಗಿರುವ ವಿಧಾನ ಪರಿಷತ್‌ನ ಬಿಜೆಪಿ ಸದಸ್ಯ ಎನ್‌ ರವಿಕುಮಾರ ನಡೆಗೆ ತೀವ್ರ ಅತೃಪ್ತಿ ವ್ಯಕ್ತಪಡಿಸಿರುವ ಕರ್ನಾಟಕ ಹೈಕೋರ್ಟ್, ತನಿಖೆಗೆ ಸಹಕರಿಸುವಂತೆ ಆದೇಶಿಸಿದೆ. ಅಲ್ಲದೇ, ತರನ್ನುಮ್‌ ಅವರಿಗೆ ಕ್ಷಮೆ ಕೋರಿರುವ ಕುರಿತು ಅಫಿಡವಿಟ್‌ ಸಲ್ಲಿಸುವಂತೆ ಗುರುವಾರ ನಿರ್ದೇಶಿಸಿದೆ. ಕಲಬುರ್ಗಿಯ ಸ್ಟೇಷನ್‌ ಬಜಾರ್‌ … Continued

ವೀಡಿಯೊ..| ನಾವು ದಾಳಿ ನಡೆಸುವ ಮೊದಲೇ ಭಾರತ ನಮ್ಮ ವಾಯುನೆಲೆಗಳ ಮೇಲೆ ʼಬ್ರಹ್ಮೋಸ್ʼ ದಾಳಿ ನಡೆಸಿತು ಎಂದು ಒಪ್ಪಿಕೊಂಡ ಪಾಕಿಸ್ತಾನ ಪ್ರಧಾನಿ…!

ನವದೆಹಲಿ: ಮೇ 9-10ರ ಮಧ್ಯರಾತ್ರಿ ರಾವಲ್ಪಿಂಡಿಯ ವಿಮಾನ ನಿಲ್ದಾಣ ಸೇರಿದಂತೆ ನಮ್ಮ ಪ್ರಮುಖ ಸೇನಾ ನೆಲೆಗಳ ಮೇಲೆ ಬ್ರಹ್ಮೋಸ್ ಕ್ಷಿಪಣಿಗಳನ್ನು ಉಡಾಯಿಸಿ ನಮ್ಮ ಯೋಜನೆಗಳನ್ನು ಭಾರತವು ವಿಫಲಗೊಳಿಸಿತು ಎಂದು ಪಾಕಿಸ್ತಾನದ ಪ್ರಧಾನಿ ಶಹಬಾಜ್ ಷರೀಫ್ ಸಾರ್ವಜನಿಕವಾಗಿ ಒಪ್ಪಿಕೊಂಡಿದ್ದಾರೆ. ಪಾಕಿಸ್ತಾನದ ಪರವಾಗಿ ನಿಂತ ಕೆಲವೇ ರಾಷ್ಟ್ರಗಳಲ್ಲಿ ಒಂದಾದ ಅಜೆರ್ಬೈಜಾನ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಪಾಕ್‌ ಪ್ರಧಾನಿ ಷರೀಫ್, … Continued