ಪಹಲ್ಗಾಮ್ ಭಯೋತ್ಪಾದಕ ದಾಳಿ ಪ್ರಕರಣ : ಎಲ್‌ಇಟಿ ಉಗ್ರ ಹಫೀಜ್ ಸಯೀದ್ ವಿರುದ್ಧ ಜಾಮೀನು ರಹಿತ ವಾರಂಟ್

ನವದೆಹಲಿ: ಜಮ್ಮುವಿನ ಎನ್‌ಐಎ ವಿಶೇಷ ನ್ಯಾಯಾಲಯವು ಪಹಲ್ಗಾಮ್ ಭಯೋತ್ಪಾದಕ ದಾಳಿ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಪಾಕಿಸ್ತಾನ ಮೂಲದ ಲಷ್ಕರ್-ಇ-ತೊಯ್ಬಾ (ಎಲ್‌ಇಟಿ) ಉಗ್ರ ಸಂಘಟನೆಯ ಮುಖ್ಯಸ್ಥ ಹಫೀಜ್ ಸಯೀದ್ ವಿರುದ್ಧ ಜಾಮೀನು ರಹಿತ ವಾರಂಟ್ (ಎನ್‌ಬಿಡಬ್ಲ್ಯು) ಹೊರಡಿಸಿದೆ. ಪಹಲ್ಗಾಮ್ ಉಗ್ರ ದಾಳಿಯ ತನಿಖೆಗೆ ಸಂಬಂಧಿಸಿದ ಪೂರಕ ಆರೋಪಪಟ್ಟಿಯಲ್ಲಿ (Supplementary Chargesheet) ಹಫೀಜ್ ಸಯೀದ್ ನನ್ನು ಎನ್‌ಐಎ ಹೆಸರಿಸಿದ್ದು, … Continued

ತಂದೆ-ತಾಯಿ ಕೊಂದಿದ್ದ ಆನೆಯಿಂದ ಪಾರಾಗಲು 2 ನದಿ ದಾಟಿ ಬಂದಿದ್ದ ಕುಟುಂಬ; 14 ವರ್ಷದ ಬಳಿಕ ಅಲ್ಲಿಗೂ ಬಂದು ಮತ್ತಿಬ್ಬರನ್ನು ಸಾಯಿಸಿದ ಅದೇ ಆನೆ !

ಕಠ್ಮಂಡು: ತಂದೆ-ತಾಯಿಯನ್ನು ಬಲಿ ಪಡೆದಿದ್ದ ಕಾಡಾನೆಯಿಂದ ತಪ್ಪಿಸಿಕೊಳ್ಳಲು ಮನೆ ಮಾರಾಟ ಮಾಡಿ, ಅದು ಜಾಡು ಹಿಡಿದು ಬರಬಾರದೆಂದು ಎರಡು ದೊಡ್ಡ ನದಿಗಳನ್ನು ದಾಟಿ ಕುಟುಂಬ ಸಮೇತ ವಲಸೆ ಹೋಗಿ ಬೇರೆ ಪ್ರದೇಶದಲ್ಲಿ ಹೊಸ ಜೀವನ ಆರಂಭಿಸಿದ್ದ ವ್ಯಕ್ತಿಗೆ ವಿಧಿ ಮತ್ತೊಮ್ಮೆ ಕ್ರೂರ ಮುಖ ತೋರಿಸಿದೆ. ಬರೋಬ್ಬರಿ 14 ವರ್ಷಗಳ ಬಳಿಕ ಅದೇ ಆನೆ ಇವರ ಹೊಸ … Continued

ವಿಡಿಯೊ | ಇದೇ ಮೊದಲ ಬಾರಿಗೆ ಸಮುದ್ರ ಡ್ರೋನ್‌ಗಳ ಮೂಲಕ ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕ ದಾಳಿ

ವಾಷಿಂಗ್ಟನ್: ಇರಾನ್‌ನಲ್ಲಿರುವ ಜಲಾಂತರ್ಗಾಮಿ ನೌಕೆ ಹಾಗೂ ಹಡಗುಗಳ ನಿರ್ವಹಣಾ ಕೇಂದ್ರದ ಮೇಲೆ ಅಮೆರಿಕದ ಸೇನೆ ದಾಳಿ ನಡೆಸಿದೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (CENTCOM) ಸೋಮವಾರ ತಿಳಿಸಿದೆ. ಭಾನುವಾರ ಬಹುಸಂಖ್ಯೆಯ ಸಮುದ್ರ ಡ್ರೋನ್‌ಗಳನ್ನು (One-way Attack Surface Drones) ಬಳಸಿಕೊಂಡು ಈ ಕಾರ್ಯಾಚರಣೆ ನಡೆಸಲಾಗಿದೆ ಎಂದು ಸೆಂಟ್ಕಾಮ್ ಎಕ್ಸ್ (X) ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದೆ. “ನಿನ್ನೆ … Continued

ಬಿಜೆಪಿ ಹಿರಿಯ ನಾಯಕ-ಮಾಜಿ ಸಚಿವ ರಾಮಚಂದ್ರೇಗೌಡ ನಿಧನ

ಬೆಂಗಳೂರು: ಕರ್ನಾಟಕದ ಬಿಜೆಪಿಯ (BJP) ಹಿರಿಯ ನಾಯಕ ಹಾಗೂ ಮಾಜಿ ಸಚಿವ ರಾಮಚಂದ್ರೇಗೌಡ (88) ಅವರು ಇಂದು, ಮಂಗಳವಾರ (ಜುಲೈ 14) ಮುಂಜಾನೆ ನಿಧನರಾಗಿದ್ದಾರೆ. ಕಳೆದ ಒಂದು ತಿಂಗಳಿನಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ರಾಮಚಂದ್ರೇಗೌಡ (Ramachandre Gowda) ಅವರು ರಾಜಾಜಿನಗರದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಕರ್ನಾಟಕದಲ್ಲಿ ಬಿಜೆಪಿ ಪಕ್ಷವನ್ನು ತಳಮಟ್ಟದಿಂದ ಕಟ್ಟಿ ಬೆಳೆಸುವಲ್ಲಿ ಮಾಜಿ … Continued

ಪೋಕ್ಸೋ ಪ್ರಕರಣ: ವಚನಾನಂದ ಶ್ರೀಗಳಿಗೆ ಜಾಮೀನು ಮಂಜೂರು

ದಾವಣಗೆರೆ : ಪೋಕ್ಸೋ ಪ್ರಕರಣದಲ್ಲಿ​ ವಚನಾನಂದ ಶ್ರೀಗಳಿಗೆ ದಾವಣಗೆರೆ ಜಿಲ್ಲಾ ವಿಶೇಷ ಕೋರ್ಟ್ ಸೋಮವಾರ ಜಾಮೀನು ಮಂಜೂರು ಮಾಡಿದೆ. ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ವಚನಾನಂದ ಶ್ರೀ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿ ಎದುರಿಸುತ್ತಿದ್ದ ಶ್ರೀಗಳು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಜಾಮೀನು … Continued

2020ರ ದೆಹಲಿ ಗಲಭೆ : ಐಬಿ ಅಧಿಕಾರಿ ಅಂಕಿತ್ ಶರ್ಮಾ ಹತ್ಯೆ ಪ್ರಕರಣದಲ್ಲಿ ಎಎಪಿ ಮಾಜಿ ಕೌನ್ಸಿಲರ್ ತಾಹಿರ್ ಹುಸೇನ್ ದೋಷಿ

ನವದೆಹಲಿ : 2020ರ ಈಶಾನ್ಯ ದೆಹಲಿ ಗಲಭೆ ವೇಳೆ ನಡೆದ ಗುಪ್ತಚರ ಇಲಾಖೆ (ಐಬಿ) ಅಧಿಕಾರಿ ಅಂಕಿತ್ ಶರ್ಮಾ ಹತ್ಯೆ ಪ್ರಕರಣದಲ್ಲಿ ಮಹತ್ವದ ತೀರ್ಪು ನೀಡಿರುವ ದೆಹಲಿಯ ಕರ್ಕರಡೂಮಾ ನ್ಯಾಯಾಲಯವು ಮಾಜಿ ಆಮ್ ಆದ್ಮಿ ಪಕ್ಷದ (ಎಎಪಿ) ಕೌನ್ಸಿಲರ್ ತಾಹಿರ್ ಹುಸೇನ್ ಅವರನ್ನು ಕೊಲೆ ಪ್ರಕರಣದಲ್ಲಿ ದೋಷಿ ಎಂದು ಸೋಮವಾರ ತೀರ್ಪು ಪ್ರಕಟಿಸಿದೆ. ಆದರೆ, ಅವರ … Continued

ಹಾರ್ಮುಜ್ ಜಲಸಂಧಿ ಈಗ ಅಮೆರಿಕ ನಿಯಂತ್ರಣದಲ್ಲಿ : ಭದ್ರತೆಗಾಗಿ ವಾಣಿಜ್ಯ ಹಡಗುಗಳಿಂದ 20% ಶುಲ್ಕ ವಸೂಲಿ; ಟ್ರಂಪ್‌ ಘೋಷಣೆ

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಮವಾರ ಮಹತ್ವದ ಘೋಷಣೆ ಮಾಡಿದ್ದು, ಹಾರ್ಮುಜ್ ಜಲಸಂಧಿಯ (Strait of Hormuz) ಮೂಲಕ ಸಾಗುವ ಎಲ್ಲ ಸರಕು ಸಾಗಣೆಯ ಮೇಲೆ ಅಮೆರಿಕವು ಇನ್ನು ಮುಂದೆ 20 ಪ್ರತಿಶತ ಶುಲ್ಕ ವಿಧಿಸಲಿದೆ ಎಂದು ಪ್ರಕಟಿಸಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣ ಟ್ರೂತ್ ಸೋಷಿಯಲ್ (Truth Social) ನಲ್ಲಿ ಈ ಕುರಿತು ಪ್ರಕಟಣೆ … Continued

ವಿಡಿಯೊ : ಕೊಂಬಿನಿಂದ ಪ್ರವಾಸಿಗನನ್ನು 8 ಅಡಿ ಎತ್ತರಕ್ಕೆ ಎಸೆದ ಬೃಹತ್‌ ಬೈಸನ್‌ ; ಗಂಭೀರ ಗಾಯ

ವಾಷಿಂಗ್ಟನ್ : ಅಮೆರಿಕದ ಯೆಲ್ಲೋಸ್ಟೋನ್ ರಾಷ್ಟ್ರೀಯ ಉದ್ಯಾನದಲ್ಲಿ ಶುಕ್ರವಾರ ಸಂಜೆ ನಡೆದ ಭೀಕರ ಘಟನೆಯಲ್ಲಿ, ಕಾಡುಕೋಣ (ಬೈಸನ್) ದಾಳಿಗೆ ಒಳಗಾದ ಪ್ರವಾಸಿಗರೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ. ಈ ಘಟನೆ ಫಿಶಿಂಗ್ ಬ್ರಿಡ್ಜ್‌ನ ದಕ್ಷಿಣ ಭಾಗದಲ್ಲಿರುವ ಬ್ರಿಡ್ಜ್ ಬೇ ಕ್ಯಾಂಪ್‌ಗ್ರೌಂಡ್ ಪ್ರದೇಶದಲ್ಲಿ ನಡೆದಿದೆ. ಘಟನೆಗೂ ಮುನ್ನವೇ ಅದೇ ಬೈಸನ್ ಜನರು ಹಾಗೂ ವಾಹನಗಳ ಮೇಲೆ … Continued

ಕರ್ನಾಟಕದ ಮುಜರಾಯಿ ದೇವಾಲಯಗಳ ಹುಂಡಿ ಹಣದ ಸುರಕ್ಷತೆಗೆ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ

ಬೆಂಗಳೂರು : ದೇಶದ ವಿವಿಧೆಡೆ ಹಾಗೂ ಮುಜರಾಯಿ ಇಲಾಖೆಯ ವ್ಯಾಪ್ತಿಯ ದೇವಸ್ಥಾನಗಳ ಹುಂಡಿಗಳಲ್ಲಿ ಕಳ್ಳತನ ಮತ್ತು ಎಣಿಕೆ ಸಂದರ್ಭದಲ್ಲಿ ಹಣ ದುರುಪಯೋಗ ಆಗುತ್ತಿರುವ ಪ್ರಕರಣಗಳನ್ನು ತಡೆಗಟ್ಟಲು ಕರ್ನಾಟಕ ಸರ್ಕಾರವು  ಕ್ರಮಕ್ಕೆ ಮುಂದಾಗಿದೆ. ದೇವಸ್ಥಾನಗಳ ಹುಂಡಿಗಳಲ್ಲಿ ಆಗುತ್ತಿರುವ ಕಳ್ಳತನ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯದ ಎಲ್ಲ ಮುಜರಾಯಿ ದೇವಸ್ಥಾನಗಳಲ್ಲಿ ಹುಂಡಿ ಹಣ ಎಣಿಕೆಗೆ ಸರ್ಕಾರ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. … Continued