ಪವಿತ್ರಾ ಲೋಕೇಶ ಜೊತೆ ಶೀಘ್ರದಲ್ಲೇ ಮದುವೆ: ವೀಡಿಯೊ ಮೂಲಕ ಹೇಳಿಕೊಂಡ ನಟ ನರೇಶ

ನಟ ನರೇಶ್ ತಮ್ಮ ಟ್ವಿಟರ್ ಮೂಲಕ ವಿಶೇಷ ವಿಡಿಯೋ ಒಂದನ್ನು ಬಿಡುಗಡೆ ಮಾಡಿದ್ದು ಅದರಲ್ಲಿ ನಟಿ ಪವಿತ್ರಾ ಲೋಕೇಶ ಅವರನ್ನು ಮದುವೆಯಾಗುವುದಾಗಿ ಹೇಳಿದ್ದಾರೆ. ಟ್ವಿಟರ್‌ನಲ್ಲಿ ಕಿರು ವೀಡಿಯೊ ಕ್ಲಿಪ್‌ ಮೂಲಕ ಪವಿತ್ರಾ ಲೋಕೇಶ ಜೊತೆಗೆ ವಿವಾಹವನ್ನು ನರೇಶ್ ಘೋಷಿಸಿದ್ದಾರೆ. ‘ಹೊಸ ವರ್ಷ, ಹೊಸ ಆರಂಭ, ನಿಮ್ಮೆಲ್ಲರ ಆಶೀರ್ವಾದ ಬೇಕು’ ಎಂಬ ಶೀರ್ಷಿಕೆಯಡಿ, ನಟ ಈ ವೀಡಿಯೊದೊಂದಿಗೆ … Continued

ಬಿಹಾರದ ಬಿಜೆಪಿ ಉಪಾಧ್ಯಕ್ಷರ ಉಚ್ಚಾಟನೆ

ಪಾಟ್ನಾ: ಬಿಹಾರದ ಬಿಜೆಪಿಯು ಪಕ್ಷದ ಉಪಾಧ್ಯಕ್ಷ ರಾಜೀವ ರಂಜನ್ ಅವರನ್ನು ಅಶಿಸ್ತಿನ ಕಾರಣಕ್ಕಾಗಿ ವಜಾಗೊಳಿಸಿದೆ. ರಂಜನ್ ಅವರು ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವುದಾಗಿ ಹೇಳಿಕೊಂಡ ಸ್ವಲ್ಪ ಸಮಯದ ನಂತರ ಡಿಸೆಂಬರ್ 29 ರಂದು ರಾಜ್ಯ ಘಟಕದ ಮುಖ್ಯಸ್ಥ ಸಂಜಯ ಜೈಸ್ವಾಲ್ ಅವರು ಹೊರಡಿಸಿದ ಪತ್ರವನ್ನು ಪಕ್ಷವು ಹಂಚಿಕೊಂಡಿದೆ. ನಿಮ್ಮ ಮಾತುಗಳು ರಾಜ್ಯ ಉಪಾಧ್ಯಕ್ಷರಿಗೆ ಯೋಗ್ಯವಲ್ಲ … Continued

12 ಹೆಂಡತಿಯರು, 102 ಮಕ್ಕಳು, 568 ಮೊಮ್ಮಕ್ಕಳು… ಇನ್ಮುಂದೆ ಮಕ್ಕಳು ಬೇಡ ಎಂದ ಈತ…!

12 ಮದುವೆಗಳು, 102 ಜನ ಮಕ್ಕಳು ಮತ್ತು 568 ಮೊಮ್ಮಕ್ಕಳನ್ನು ಹೊಂದಿರುವ ಉಗಾಂಡಾದ ರೈತ ಮೂಸಾ ಹಸಾಹ್ಯಾ ಇನ್ನು ಮುಂದೆ ಮಕ್ಕಳನ್ನು ಪಡೆಯುವುದು ಬೇಡ ಎಂಬ ನಿರ್ಧಾರಕ್ಕೆ ಬಂದಿದ್ದಾರೆ. ಇಷ್ಟು ದೊಡ್ಡ ಕುಟುಂಬವನ್ನು ಬೆಳೆಸಿದ ನಂತರ, 67 ವರ್ಷದ ಮೂಸಾ ಹಸಾಹ್ಯಾ ಎಂಬ ರೈತ ಜೀವನದ ವೆಚ್ಚ ಹೆಚ್ಚುತ್ತಿರುವ ಕಾರಣ ಇನ್ನು ಮುಂದೆ ಮಕ್ಕಳನ್ನು ಹೊಂದಲು … Continued

ಬೆಂಗಳೂರಿನ ಐಕೆಇಎಯಲ್ಲಿ ಶಾಪಿಂಗ್ ಮಾಡುವಾಗ ಹೃದಯಾಘಾತದಿಂದ ಕುಸಿದುಬಿದ್ದ ವ್ಯಕ್ತಿಗೆ ಸಿಪಿಆರ್‌ ಮಾಡಿ ಜೀವ ಉಳಿಸಿದ ವೈದ್ಯರು | ವೀಕ್ಷಿಸಿ

ಬೆಂಗಳೂರು: ಬೆಂಗಳೂರಿನ ಐಕೆಇಎ ಸ್ಟೋರ್‌ನಲ್ಲಿ ಶಾಪಿಂಗ್ ಮಾಡುವಾಗ ಹೃದಯಾಘಾತದಿಂದ ಕುಸಿದುಬಿದ್ದ ವ್ಯಕ್ತಿಗೆ ಅಲ್ಲಿಯೇ ಇದ್ದ ವೈದ್ಯರು ಜೀವ ಉಳಿಸಿದ್ದಾರೆ. ಅವರು ಸಮಯಕ್ಕೆ ಸರಿಯಾಗಿ ಹೃದಯರಕ್ತನಾಳದ ಪುನರುಜ್ಜೀವನ ಅಥವಾ ಸಿಪಿಆರ್ ಮಾಡುವ ಮೂಲಕ ವ್ಯಕ್ತಿಯನ್ನು ಪುನರುಜ್ಜೀವನಗೊಳಿಸುವಲ್ಲಿ ಯಶಸ್ವಿಯಾದರು. ಘಟನೆಯ ವಿಡಿಯೋವನ್ನು ವೈದ್ಯರ ಮಗ ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ವ್ಯಕ್ತಿ ಪ್ರಜ್ಞಾಹೀನನಾಗಿ ನೆಲದ ಮೇಲೆ ಬಿದ್ದಿರುವುದನ್ನು ವೀಡಿಯೊ ತೋರಿಸುತ್ತದೆ. … Continued

ಚಾಲಕನಿಗೆ ಹೃದಯಾಘಾತವಾಗಿ ಎಸ್‌ಯುವಿ ಕಾರಿಗೆ ಡಿಕ್ಕಿ ಹೊಡೆದ ಬಸ್ : 9 ಸಾವು, 28 ಮಂದಿಗೆ ಗಾಯ

ಗಾಂಧಿನಗರ: ಗುಜರಾತ್‌ನ ನವಸಾರಿ ಜಿಲ್ಲೆಯಲ್ಲಿ ಶನಿವಾರ ಮುಂಜಾನೆ ಬಸ್ ಮತ್ತು ಎಸ್‌ಯುವಿ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂಬತ್ತು ಜನರು ಮೃತಪಟ್ಟಿದ್ದಾರೆ ಮತ್ತು 28 ಮಂದಿ ಗಾಯಗೊಂಡಿದ್ದಾರೆ. ಸೂರತ್‌ನಿಂದ ಪ್ರಮುಖ್ ಸ್ವಾಮಿ ಮಹಾರಾಜ ಶತಾಬ್ದಿ ಮಹೋತ್ಸವ ಕಾರ್ಯಕ್ರಮದಿಂದ ವಾಪಸಾಗುತ್ತಿದ್ದ ಜನರಿಂದ ತುಂಬಿದ್ದ ಬಸ್ ಚಾಲಕನಿಗೆ ನವಸಾರಿ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 48 ರಲ್ಲಿ ಹೃದಯಾಘಾತ … Continued

ಅಥಣಿ : ಜೆಡಿಎಸ್‌ ಮುಖಂಡನ ಕಾರು ಪಲ್ಟಿ ; 6 ಜನರಿಗೆ ಗಾಯ

ಬೆಳಗಾವಿ : ಅಥಣಿ ಪಟ್ಟಣದ ಹೊರವಲಯದಲ್ಲಿ ಮಾಜಿ ಶಾಸಕ, ಜೆಡಿಎಸ್ ಮುಖಂಡ ಕಲ್ಲಪ್ಪ ಮಗೆಣ್ಣನವರ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ರಸ್ತೆಯಲ್ಲಿ ಚಲಿಸುತ್ತಿದ್ದ ಲಾರಿಯೊಂದರ ಟೈರ್​ ಬ್ಲಾಸ್ಟ್ ಆಗಿ ಕಾರಿನ ಮೇಲೆ ಟೈರ್ ಬಿದ್ದ ಪರಿಣಾಮ, ಚಾಲಕನ ನಿಯಂತ್ರಣ ಕಳೆದುಕೊಂಡು ಕಾರು ಪಲ್ಟಿಯಾಗಿದೆ ಎಂದು ಹೇಳಲಾಗಿದೆ. ಮಾಜಿ ಶಾಸಕರು ಸೇರಿದಂತೆ 6 ಜನರು ವಿಜಯಪುರದಿಂದ ಚಿಕ್ಕೋಡಿ ತಾಲೂಕಿನ … Continued

ಕೋವಿಡ್ ಸಾವುಗಳ ಕುರಿತು ಚೀನಾದಿಂದ ಹೆಚ್ಚಿನ ಡೇಟಾ ಕೇಳಿದ ವಿಶ್ವ ಆರೋಗ್ಯ ಸಂಸ್ಥೆ

ಚೀನಾದಿಂದ ಬರುವ ಪ್ರಯಾಣಿಕರಿಗೆ ಕಡ್ಡಾಯ ಕೋವಿಡ್ ಪರೀಕ್ಷೆಗಳನ್ನು ಜಾರಿಗೆ ತರುವುದರಲ್ಲಿ ಬ್ರಿಟನ್‌ ಮತ್ತು ಫ್ರಾನ್ಸ್ ದೇಶಗಳು ಭಾರತ, ಅಮೆರಿಕ ಮತ್ತು ಇತರ ದೇಶಗಳೊಂದಿಗೆ ಸೇರಿಕೊಂಡಿವೆ. ಚೀನಾದಲ್ಲಿ ಕೊರೊನಾ ವೈರಸ್ ಆತಂಕಕಾರಿ ಉಲಬಣದ ನಂತರ ಈ ಕ್ರಮ ಬಂದಿದೆ. ಕೊರೊನಾ ಪರಿಸ್ಥಿತಿಯ ಕುರಿತು ಹೆಚ್ಚಿನ ಡೇಟಾ ಮತ್ತು ನಿಯಮಿತ ನವೀಕರಣಗಳನ್ನು ಒದಗಿಸುವಂತೆ ವಿಶ್ವ ಆರೋಗ್ಯ ಸಂಸ್ಥೆ ಬೀಜಿಂಗ್‌ … Continued

ಮುಖದ ಗಾಯಗಳು, ಸೀಳಿದ ಗಾಯಗಳಿಗೆ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡ ಕ್ರಿಕೆಟಿಗ ರಿಷಬ್ ಪಂತ್ : ವರದಿ

ನವದೆಹಲಿ: ಶುಕ್ರವಾರ ಮುಂಜಾನೆ ದೆಹಲಿ-ಡೆಹ್ರಾಡೂನ್ ಹೆದ್ದಾರಿಯಲ್ಲಿ ಕ್ರಿಕೆಟಿಗ ರಿಷಬ್ ಪಂತ್ ಅವರ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದು, ನಂತರ ಪ್ಲಾಸ್ಟಿಕ್ ಸರ್ಜರಿಗೆ ಒಳಗಾಗಿದ್ದಾರೆ ಎಂದು ಶುಕ್ರವಾರ ಸುದ್ದಿ ವರದಿಯೊಂದು ತಿಳಿಸಿದೆ. ದೆಹಲಿಯಿಂದ ರೂರ್ಕಿಗೆ ಹಿಂದಿರುಗುತ್ತಿದ್ದಾಗ ಅವರು ಭೀಕರ ಅಪಘಾತಕ್ಕೆ ಒಳಗಾದ ನಂತರ ರಿಷಬ್ ಪಂತ್ ಅವರ ಮೆದುಳು ಮತ್ತು ಬೆನ್ನುಹುರಿಯ MRI … Continued

ಮತ್ತೆ ಕಾಂಗ್ರೆಸ್‌ಗೆ ಮರಳುವುದಿಲ್ಲ : ಊಹಾಪೋಹಕ್ಕೆ ಸ್ಪಷ್ಟನೆ ನೀಡಿದ ಗುಲಾಂ ನಬಿ ಆಜಾದ್‌

ನವದೆಹಲಿ : ಹಿರಿಯ ರಾಜಕಾರಣಿ ಮತ್ತು ಹೊಸದಾಗಿ ರೂಪುಗೊಂಡ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಆಜಾದ್ ಪಕ್ಷದ ಮುಖ್ಯಸ್ಥ ಗುಲಾಂ ನಬಿ ಆಜಾದ್ ಅವರು ಈ ವರ್ಷದ ಆರಂಭದಲ್ಲಿ ತಮ್ಮ 52 ವರ್ಷಗಳ ಕಾಂಗ್ರೆಸ್‌ ಸಂಬಂಧ ಮುರಿದುಕೊಂಡು ಬಂದಿದ್ದು, ಮತ್ತೆ ಕಾಂಗ್ರೆಸ್‌ಗೆ ಮರಳುವ ಯಾವುದೇ ಇರಾದೆಯಿಲ್ಲ ಎಂದು ಹೇಳಿದ್ದಾರೆ. ಮಾಜಿ ಕೇಂದ್ರ ಸಚಿವ ಮತ್ತು ಜಮ್ಮು ಮತ್ತು ಕಾಶ್ಮೀರದ … Continued

ಭೀಕರ ಕಾರು ಅಪಘಾತದ ನಂತರ ರಿಷಬ್ ಪಂತ್ ತಾಯಿಗೆ ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

ನವದೆಹಲಿ: ಭೀಕರ ಕಾರು ಅಪಘಾತದ ನಂತರ ಗಂಭೀರವಾಗಿ ಗಾಯಗೊಂಡಿರುವ ಭಾರತದ ಕ್ರಿಕೆಟ್‌ ಆಟಗಾರ ರಿಷಬ್‌ ಪಂತ್‌ ರಿಷಬ್ ಪಂತ್ ಅವರ ತಾಯಿಯೊಂದಿಗೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಮಾತನಾಡಿದ್ದು, ಅವರ ಆರೋಗ್ಯ ಮತ್ತು ಚೇತರಿಕೆಯ ಬಗ್ಗೆ ವಿಚಾರಿಸಿದ್ದಾರೆ. ಭಾರತೀಯ ಕ್ರಿಕೆಟಿಗ ರಿಷಬ್ ಪಂತ್ ದೆಹಲಿಯಿಂದ ರೂರ್ಕಿಯಲ್ಲಿರುವ ತಮ್ಮ ಮನೆಗೆ ಬರುತ್ತಿದ್ದಾಗ ಭೀಕರ ಅಪಘಾತದಲ್ಲಿ ಗಾಯಗೊಂಡರು. ಹಮ್ಮದ್‌ಪುರ … Continued