ವೀಡಿಯೊ…| ಶಿವಸೇನೆ ನಾಯಕಿ ಕರೆದೊಯ್ಯಲು ಬಂದಿದ್ದ ಹೆಲಿಕಾಪ್ಟರ್ ಅಪಘಾತ

ರಾಯಗಢ: ಶಿವಸೇನೆ ಉಪನಾಯಕಿ ಸುಷ್ಮಾ ಅಂಧಾರೆಯನ್ನು ಕರೆದುಕೊಂಡು ಬರಲು ಹೊರಟಿದ್ದ ಖಾಸಗಿ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಹಠಾತ್ ಅಪಘಾತಕ್ಕೀಡಾಗಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಅಂಧಾರೆ ಹಂಚಿಕೊಂಡ ವೀಡಿಯೊ ದೃಶ್ಯಾವಳಿ ಪ್ರಕಾರ, ಹೆಲಿಕಾಪ್ಟರ್ ಅಪರಿಚಿತ ಸ್ಥಳದಲ್ಲಿ ಲ್ಯಾಂಡಿಂಗ್ ಮಾಡಲು ಪ್ರಯತ್ನಿಸುತ್ತಿದೆ ಮತ್ತು ಇದ್ದಕ್ಕಿದ್ದಂತೆ ಅದು ತಿರುಗಲು ಪ್ರಾರಂಭಿಸಿದೆ. ನಂತರ ಸಮತೋಲನವನ್ನು ಕಳೆದುಕೊಂಡು ತೆರೆದ ಮೈದಾನದಲ್ಲಿ ಧೂಳಿನ … Continued

ಶಿರಸಿ: ಕೆಪಿಸಿಸಿ ಸದಸ್ಯ ದೀಪಕ ದೊಡ್ಡೂರು, ಇತರರ ನಿವಾಸದ ಮೇಲೆ ಐಟಿ ದಾಳಿ

ಶಿರಸಿ: ಉದ್ಯಮಿ ಹಾಗೂ ಕೆಪಿಸಿಸಿ ಸದಸ್ಯ ಶಿರಸಿಯ ದೀಪಕ ದೊಡ್ಡೂರು ಹಾಗೂ ಇವರ ಪಾಲುದಾರರ ನಿವಾಸದ ಮೇಲೆ ಶುಕ್ರವಾರ ಆದಾಯ ತೆರಿಗೆ ಅಧಿಕಾರಿಗಳ ತಂಡ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಮೂರು ಕಾರುಗಳಲ್ಲಿ ಬಂದ ಆದಾಯ ತೆರಿಗೆ ಅಧಿಕಾರಿಗಳ ತಂಡ ದೀಪಕ ಅವರ ನಗರದ ನಿವಾಸದಲ್ಲಿ ಪರಿಶೀಲನೆ ನಡೆಸಿದ್ದಾರೆ. ಸುಮಾರು 10 ಜನ ಅಧಿಕಾರಿಗಳ ತಂಡ … Continued

ಲೋಕಸಭೆ ಚುನಾವಣೆ ; ಮತ್ತೊಂದು ಕ್ಷೇತ್ರದಿಂದಲೂ ರಾಹುಲ್‌ ಗಾಂಧಿ ಸ್ಪರ್ಧೆ

ನವದೆಹಲಿ : ರಾಹುಲ್‌ ಗಾಂಧಿ ಅಮೇಥಿಯನ್ನು ಮರಳಿ ಗೆಲ್ಲಲು ಸಂಪೂರ್ಣ ಪ್ರಯತ್ನ ನಡೆಸಲಿದ್ದಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಕಾಂಗ್ರೆಸ್‌ ಪಕ್ಷವು ರಾಹುಲ್ ಗಾಂಧಿ ಅವರನ್ನು ರಾಯ್ಬರೇಲಿಯಿಂದ ಕಣಕ್ಕಿಳಿಸುವುದಾಗಿ ಪ್ರಕಟಿಸಿದೆ. ಕಾಂಗ್ರೆಸ್ ಶುಕ್ರವಾರ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ರಾಯ್ಬರೇಲಿಯಿಂದ ರಾಹುಲ್ ಗಾಂಧಿ ಮತ್ತು ಅಮೇಥಿಯಿಂದ ಕಿಶೋರಿ ಲಾಲ್ ಶರ್ಮಾ ಅವರನ್ನು ಕಣಕ್ಕಿಳಿಸಿದೆ. ಉತ್ತರ ಪ್ರದೇಶದ … Continued

ಪ್ರಜ್ವಲ್‌ ಲೈಂಗಿಕ ದೌರ್ಜನ್ಯ ಹಗರಣ: ಮಧ್ಯಂತರ ಜಾಮೀನು ಕೋರಿ ಜನಪ್ರತಿನಿಧಿಗಳ ನ್ಯಾಯಾಲಯದ ಮೆಟ್ಟಿಲೇರಿದ ರೇವಣ್ಣ

ಬೆಂಗಳೂರು : ಪ್ರಜ್ವಲ್‌ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮೊದಲನೇ ಆರೋಪಿಯಾಗಿರುವ ಹಾಗೂ ಬಂಧನ ಭೀತಿ ಎದುರಿಸುತ್ತಿರುವ ಜೆಡಿಎಸ್‌ ಶಾಸಕ ಎಚ್‌ ಡಿ ರೇವಣ್ಣ ಮಧ್ಯಂತರ ಜಾಮೀನು ಕೋರಿ ಗುರುವಾರ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ರೇವಣ್ಣ ಮಧ್ಯಂತರ ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಎಚ್‌ ಡಿ ರೇವಣ್ಣ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಜನಪ್ರತಿನಿಧಿಗಳ … Continued

ಬೆಂಗಳೂರಿನ ಹಲವೆಡೆ ಜೋರಾಗಿ ಮಳೆ

ಬೆಂಗಳೂರು: ಬಿಸಿಲಿನಿಂದ ಕಂಗೆಟ್ಟ ರಾಜಧಾನಿ ಬೆಂಗಳೂರು ಜನತೆಗೆ ಮಳೆರಾಯ ಬುಧವಾರ ಕೊಂಚ ತಂಪೆರೆದಿದ್ದಾನೆ. ನಗರದ ಮೆಜೆಸ್ಟಿಕ್ ಸೇರಿದಂತೆ ಹಲವೆಡೆ ಮಳೆಯಾಗಿದ್ದು ಬಿಸಿಲಿನಿಂದ ಬೇಸತ್ತಿದ್ದ ಜನ ಕೊಂಚ ರಿಲೀಫ್ ಆಗಿದ್ದಾರೆ. ಸುಮಾರು 5 ತಿಂಗಳ ಬಳಿಕ ಬೆಂಗಳೂರಿನಲ್ಲಿ ಜೋರಾಗಿ ಮಳೆಯಾಗಿದೆ. ಗುರುವಾರ ಸಂಜೆ 6 ಗಂಟೆ ಸುಮಾರಿಗೆ ಆರಂಭವಾದ ಮಳೆಯು ತುಸು ಕಾಲ ಜೋರಾಗಿ ಸುರಿಯಿತು. ಆ … Continued

ಪ್ರಜ್ವಲ್ ರೇವಣ್ಣಗೆ ನಾವು ಅನುಮತಿ ನೀಡಿಲ್ಲ ; ರಾಜತಾಂತ್ರಿಕ ಪಾಸ್‌ಪೋರ್ಟ್‌ನಲ್ಲಿ ಜರ್ಮನಿಗೆ ತೆರಳಿದ್ದಾರೆ : ವಿದೇಶಾಂಗ ಸಚಿವಾಲಯ

ನವದೆಹಲಿ: ಅಶ್ಲೀಲ ವಿಡಿಯೋಗಳು ಬಹಿರಂಗವಾದ ಬೆನ್ನಲ್ಲೇ ವಿದೇಶಕ್ಕೆ ಹಾರಿರುವ ಜೆಡಿಎಸ್‌ ಸಂಸದ ಪ್ರಜ್ವಲ್‌ ರೇವಣ್ಣ ಅವರು ಜರ್ಮನಿಗೆ ಪ್ರಯಾಣಿಸಲು ಯಾವುದೇ ರಾಜಕೀಯ ಅನುಮತಿ ಕೋರಿಲ್ಲ ಅಥವಾ ಅವರಿಗೆ ಅನುಮತಿ ನೀಡಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ(ಎಂಇಎ) ಗುರುವಾರ ಸ್ಪಷ್ಟಪಡಿಸಿದೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಅವರು ವಿದೇಶಕ್ಕೆ ಹೋಗುವಂತೆ ಹೇಳಿದ್ಯಾರು? ವೀಸಾ ಇಲ್ಲದೇ … Continued

ರೇವಣ್ಣ, ಪ್ರಜ್ವಲ್ ಎಸ್‌ಐಟಿ ವಿಚಾರಣೆಗೆ ಹಾಜರಾಗದಿದ್ದರೆ ಕಾನೂನು ಪ್ರಕಾರ ಬಂಧನ: ಗೃಹ ಸಚಿವ ಪರಮೇಶ್ವರ

ಕಲಬುರಗಿ: ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಎರಡನೇ ಪ್ರಕರಣ ದಾಖಲಾಗಿದ್ದು, ಈ ಪ್ರಕರಣಗಳಲ್ಲಿ ಯಾರನ್ನೂ ರಕ್ಷಿಸುವ ಮಾತೇ ಇಲ್ಲ. ನೋಟಿಸ್‌ಗೆ ಬೆಲೆ ನೀಡಿ ರೇವಣ್ಣ ಅವರು ತನಿಖೆಗೆ ಹಾಜರಾಗಬೇಕು. ಇಲ್ಲದಿದ್ದರೆ ಕಾನೂನಿನಂತೆ ಅವರನ್ನು ಬಂಧಿಸಲಾಗುತ್ತದೆ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದ್ದಾರೆ. ಕಲಬುರಗಿ ನಗರ ಕಾಂಗ್ರೆಸ್‌ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಗತ್ತೇ … Continued

ರಾಜ್ಯದ ವಿಧಾನ ಪರಿಷತ್ತಿನ 6 ಸ್ಥಾನಗಳಿಗೆ ಚುನಾವಣೆ ಘೋಷಣೆ

ಬೆಂಗಳೂರು: ಕರ್ನಾಟಕ ವಿಧಾನಪರಿಷತ್‌ನ (Karnataka Legislative Council Elections 2024) ಆರು ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದೆ. 3 ಶಿಕ್ಷಕರ ಕ್ಷೇತ್ರ ಮತ್ತು 3 ಪದವೀಧರ ಕ್ಷೇತ್ರಗಳಿಗೆ ಚುನಾವಣೆ ಘೋಷಣೆ ಆಗಿದ್ದು, ಜೂನ್ 3 ರಂದು ಮತದಾನ ನಡೆಯಲಿದೆ ಹಾಗೂ ಜೂನ್ 6 ರಂದು ಮತ ಎಣಿಕೆ ನಡೆಯಲಿದೆ. ಬೆಂಗಳೂರು ಪದವೀಧರ ಕ್ಷೇತ್ರ , ಕರ್ನಾಟಕ ಈಶಾನ್ಯ … Continued

ಸಂಸದ ಪ್ರಜ್ವಲ್ ರೇವಣ್ಣಗೆ ಎಸ್‍ಐಟಿ ಲುಕೌಟ್ ನೋಟಿಸ್ ಜಾರಿ

ಬೆಂಗಳೂರು : ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಸಂಸದ ಪ್ರಜ್ವಲ್ ರೇವಣ್ಣಗೆ ಲುಕೌಟ್ ನೋಟಿಸ್ ಜಾರಿ ಮಾಡಲಾಗಿದೆ ಎಂದು ತಿಳಿದುಬಂದಿದೆ. ವಿಮಾನ ನಿಲ್ದಾಣದ ಇಮಿಗ್ರೇಷನ್ ಲುಕೌಟ್ ನೋಟಿಸ್ ಸರ್ವ್ ಮಾಡಲಾಗಿದೆ. ಎಲ್ಲಾ ವಿಮಾನ ನಿಲ್ದಾಣದ ಇಮಿಗ್ರೇಷನ್‍ ವಿಭಾಗಕ್ಕೆ ಎಸ್‍ಐಟಿ ಅಧಿಕಾರಿಗಳು ಲುಕೌಟ್ ನೋಟಿಸ್ ತಲುಪಿಸಿದ್ದಾರೆ. ಈ ಮಧ್ಯೆ ವಿಚಾರಣೆಗೆ ಹಾಜರಾಗಲು 7 ದಿನ ಅವಕಾಶ ನೀಡುವಂತೆ … Continued

ಪ್ರಧಾನಿ ಬಗ್ಗೆ ವಿವಾದಾತ್ಮಕ ಹೇಳಿಕೆ, ವಿದ್ಯುತ್‌ ಕಡಿತ ಬೆದರಿಕೆ: ಶಾಸಕ ರಾಜು ಕಾಗೆಗೆ ಚುನಾವಣೆ ಆಯೋಗದಿಂದ ನೋಟಿಸ್‌

ಬೆಳಗಾವಿ : ಪ್ರಧಾನಿ ಬಗ್ಗೆ ವಿವಾದಾತ್ಮಕ ಹೇಳಿಕೆ ಹಾಗೂ ಕಾಂಗ್ರೆಸ್‌ಗೆ ಮತ ನೀಡದಿದ್ದರೆ ವಿದ್ಯುತ್‌ ಕಡಿತ ಮಾಡುವ ಹೇಳಿಕೆ ನೀಡಿದ ಶಾಸಕ ಭರಮಗೌಡ (ರಾಜು) ಕಾಗೆ ಅವರಿಗೆ ಚಿಕ್ಕೊಡಿ ಜಿಲ್ಲಾ ಚುನಾವಣಾಧಿಕಾರಿ ‘ನೀತಿ ಸಂಹಿತೆ ಉಲ್ಲಂಘನೆ’ ಅಡಿ ಬುಧವಾರ ನೋಟಿಸ್‌ ನೀಡಿದ್ದಾರೆ. ತಮ್ಮ ಎರಡೂ ಹೇಳಿಕೆಗಳ ಕುರಿತು 24 ಗಂಟೆಯೊಳಗೆ ವಿವರಣೆ ಕೊಡಬೇಕು ಎಂದು ಕಾಗವಾಡ … Continued