ಬೆಂಗಳೂರು: ಒಂದರಿಂದ 10ನೇ ತರಗತಿ ವರೆಗಿನ ಪರಿಷ್ಕೃತ ಪಠ್ಯ ಪುಸ್ತಕದಲ್ಲಿ ಮೈಸೂರು ಹುಲಿ ಎಂದೇ ಬಿಂಬಿತವಾಗಿದ್ದ ಟಿಪ್ಪು ಸುಲ್ತಾನ್ ಬಿರುದುಗಳಿಗೆ ಕತ್ತರಿ ಪ್ರಯೋಗವಾಗಿದೆ. ರೋಹಿತ್ ಚಕ್ರತೀರ್ಥ ಅವರ ನೇತೃತ್ವದ ಪಠ್ಯಪುಸ್ತಕ ಸಮಿತಿ ಮಾಡಿರುವ ಪರಿಷ್ಕೃತ ಪಠ್ಯದಲ್ಲಿ ಟಿಪ್ಪು ಸುಲ್ತಾನ್ ಅವರ ವೈಭವೀಕರಣವನ್ನು ತೆಗೆದುಹಾಕಿದೆ.
ಈತನಿಗೆ ಮೈಸೂರು ಹುಲಿ ಪಠ್ಯ ಪುಸ್ತಕದಲ್ಲಿ ಟಿಪ್ಪು ಸುಲ್ತಾನ್ಗೆ ಮೈಸೂರು ಹುಲಿ ಎಂಬ ಬಿರುದು ತೆಗೆದುಹಾಕಲಾಗಿದೆ. ಹೊಸ ಪಠ್ಯಪುಸ್ತಕದಲ್ಲಿ ಮೈಸೂರು ರಾಜ ವಂಶಸ್ಥರು ಬೇರೆ ರಾಜರಂತೆ ಸಾಮ್ರಾಜ್ಯ ವಿಸ್ತರಣೆಗೆ ಒತ್ತು ಕೊಡದ ಯದುವಂಶಸ್ಥರು ನಾಡಿನ ಜನ ಕಲ್ಯಾಣಕ್ಕಾಗಿ ಆದ್ಯತೆ ನೀಡಿದ್ದರು ಎಂದು ಉಲ್ಲೇಖ ಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ.
ನಿಮ್ಮ ಕಾಮೆಂಟ್ ಬರೆಯಿರಿ