ಬೆಳಗಾವಿ: ವಿಚಾರಣೆಗೆ ಕರೆತಂದಿದ್ದಾಗ ಕೋರ್ಟ್‌ ಆವರಣದಿಂದ ಪರಾರಿಯಾಗಿದ್ದ ಆರೋಪಿ ನಾಲ್ಕೇ ತಾಸಲ್ಲಿ ಸಿಕ್ಕಿಬಿದ್ದ..

ಬೆಳಗಾವಿ : ನ್ಯಾಯಾಲಯಕ್ಕೆ ವಿಚಾರಣೆಗೆಂದು ಕರೆತಂದಿದ್ದಾಗ ಪೊಲೀಸರ ಕಣ್ತಪ್ಪಿಸಿ ಪರಾರಿಯಾಗಿದ್ದ ಆರೋಪಿಯನ್ನು ನಾಲ್ಕು ತಾಸಿನಲ್ಲಿ ಮತ್ತೆ ಬಂಧಿಸುವಲ್ಲಿ ಹಿರೇಬಾಗೇವಾಡಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿಯ ಹಲವು ಠಾಣೆಗಳಿಗೆ ಬೇಕಾಗಿದ್ದ ಅಬ್ದುಲ್ ಗನಿ ಶಬ್ಬೀರ್ ಶೇಕ್ ಗುರುವಾರ ವಿಚಾರಣೆಗಾಗಿ ಕರೆತಂದಿದ್ದಾಗ ಬೆಳಗಾವಿಯ ಜೆ ಎಂ ಎಫ್ ಸಿ ನ್ಯಾಯಾಲಯದ ಆವರಣದಿಂದ ಪೊಲೀಸರ ಸಮ್ಮುಖದಲ್ಲಿಯೇ ಓಡಿ ಪರಾರಿಯಾಗಿದ್ದ. ಇದನ್ನು ಗಂಭೀರವಾಗಿ ಪರಿಗಣಿಸಿದ್ದ ಆಯುಕ್ತ ಸಿದ್ದರಾಮಪ್ಪ ಹಾಗೂ ಡಿಸಿಪಿ ಸ್ನೇಹಾ ಪಿ.ವಿ. ತಕ್ಷಣ ಕಾರ್ಯ ಪ್ರವೃತ್ತರಾಗಿ ಪೊಲೀಸರಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದರು.

ಬೆಳಗಾವಿಯಿಂದ ನಾಪತ್ತೆಯಾಗಿದ್ದ ಈತ ಹಿರೇಬಾಗೇವಾಡಿಯ ಮುಸ್ಲಿಂ ಗಲ್ಲಿಯಲ್ಲಿ ಅವಿತಿದ್ದ. ಇವನನ್ನು ಪತ್ತೆ ಹಚ್ಚುವಲ್ಲಿ ಹಿರೇ ಬಾಗೇವಾಡಿ ಪೊಲೀಸರು ಯಶಸ್ವಿಯಾಗಿದ್ದು ಪಿಎಸ್ಐ ಅವಿನಾಶ ನೇತೃತ್ವದಲ್ಲಿ ನಡೆದ ಕಾರ್ಯಾಚರನೆಯಲ್ಲಿ ಕೆಲವೇ ಗಂಟೆಗಳಲ್ಲಿ ಸಿಕ್ಕಿಬಿದ್ದಿದ್ದಾನೆ. ಹಿರೇಬಾಗೇವಾಡಿ ಪಿಎಸ್ಐ ಅವಿನಾಶ ಯರಗೊಪ್ಪ, ಸಿಬ್ಬಂದಿ ನಾಗಪ್ಪ ಸುತಗಟ್ಟಿ ಮತ್ತು ಬಾಬಣ್ಣ ಅವರಿಗೆ ನಗರ ಪೊಲೀಸ್ ಆಯುಕ್ತ ಸಿದ್ದರಾಮಪ್ಪ ಬಹುಮಾನ ಘೋಷಣೆ ಮಾಡಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement