ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಶಿರಾಲಿಯಲ್ಲಿ ಪೊಲೀಸ್ ಜೀಪ್ ಡಿಕ್ಕಿಯಾಗಿ ಮಹಿಳೆ ಮೃತಪಟ್ಟಿರುವ ಘಟನೆ ನಡೆದ ಬಗ್ಗೆ ವರದಿಯಾಗಿದೆ.
ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರಿಗೆ ಪೈಲಟ್ ಮಾಡುವ ಸಲುವಾಗಿ ಬೆಳಕೆ ಕಡೆಯಿಂದ ಸಾರದಹೊಳೆ ಕಡೆಗೆ ಹೋಗುತ್ತಿರುವಾಗ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ.
ಮೃತ ಮಹಿಳೆಯನ್ನು ವೆಂಕಟಾಪುರ ನಿವಾಸಿ ವಿಜಯಾ ಹೊನ್ನಾವರಕರ ಎಂದು ಹೇಳಲಾಗಿದೆ. ರಾಷ್ಟ್ರೀಯ ಹೆದ್ದಾರಿ 66 ಶಿರಾಲಿಯ ಶ್ರೀ ಕೃಷ್ಣ ಪ್ರಸಾದ ಹೊಟೇಲ್ ಸಮೀಪ ಒಲೀಸ್ ಜೀಪ್ ನಿಯಂತ್ರಣ ತಪ್ಪಿ ರಸ್ತೆ ದಾಟುತ್ತಿದ್ದ ಮಹಿಳೆಗೆ ಡಿಕ್ಕಿಹೊಡೆದಿದೆ ಎಂದು ಹೇಳಲಾಗಿದೆ.ತೀವ್ರವಾಗಿ ಗಾಯಗೊಂಡ ಮಹಿಳೆಯನ್ನು ತಕ್ಷಣವೇ ಭಟ್ಕಳ ಸರ್ಕಾರಿ ಆಸ್ಪತ್ರೆ ಕರೆದೊಯ್ದು ಚಿಕಿತ್ಸೆ ನೀಡಿ ನಂತರ ಮಣಿಪಅಲ ಆಸ್ಪತ್ರೆಗೆ ಕರೆದೊಯ್ಯುವಾಗ ಮಹಿಳೆಮೃತಪಟ್ಟಿದ್ದಾಳೆ ಎಂದು ಹೇಳಲಾಗಿದೆ. ಭಟ್ಕಳ ಗ್ರಾಮೀಣ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ