ಕೇಂದ್ರ ಸಚಿವ ನಿಸಿತ್ ಪ್ರಮಾಣಿಕ್ ಬೆಂಗಾವಲು ವಾಹನದ ಮೇಲೆ ದಾಳಿ

ನವದೆಹಲಿ: ಪಶ್ಚಿಮ ಬಂಗಾಳದ ಕೂಚ್ ಬಿಹಾರ್ ಜಿಲ್ಲೆಯಲ್ಲಿ ಶನಿವಾರ ಪಕ್ಷದ ಕಾರ್ಯಕರ್ತರನ್ನು ಭೇಟಿ ಮಾಡಲು ತೆರಳುತ್ತಿದ್ದಾಗ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ಗೃಹ ಮತ್ತು ಯುವ ವ್ಯವಹಾರಗಳು ಮತ್ತು ಕ್ರೀಡಾ ಕಾತೆ ರಾಜ್ಯ ಸಚಿವ ನಿಸಿತ್ ಪ್ರಮಾಣಿಕ್ ಅವರ ಬೆಂಗಾವಲು ಪಡೆಯ ಮೇಲೆ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ.
ವರದಿಗಳ ಪ್ರಕಾರ, ಪ್ರಮಾಣಿಕ್ ಅವರ ಬೆಂಗಾವಲು ಪಡೆ ಬಂಗಾಳ ಜಿಲ್ಲೆಯ ದಿನ್ಹತಾ ಪ್ರದೇಶದ ಮೂಲಕ ಹಾದು ಹೋಗುತ್ತಿದ್ದಾಗ ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಟಿಎಂಸಿ ಕಾರ್ಯಕರ್ತರ ನಡುವೆ ಘರ್ಷಣೆ ಸಂಭವಿಸಿದೆ.
ನಿಸಿತ್ ಪ್ರಮಾಣಿಕ್ ಅವರ ಬೆಂಗಾವಲು ಪಡೆ ಈ ಪ್ರದೇಶದಲ್ಲಿ ಹಾದು ಹೋಗುತ್ತಿದ್ದಾಗ ಟಿಎಂಸಿ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿದ್ದಾರೆ. ನಂತರ ಬಿಜೆಪಿ ಕಾರ್ಯಕರ್ತರು ಹಾಗೂ ಟಿಎಂಸಿ ಕಾರ್ಯಕರ್ತರ ನಡುವೆ ಘರ್ಷಣೆ ನಡೆಯಿತು. ಕಾರ್ಯಕರ್ತರು ಪರಸ್ಪರ ಕಲ್ಲು ತೂರಾಟವನ್ನೂ ನಡೆಸಿದ್ದಾರೆ.
ವರದಿಗಳ ಪ್ರಕಾರ, ಸಚಿವರ ಬೆಂಗಾವಲು ಪಡೆಗೆ ಪೊಲೀಸರು ಮತ್ತು ಕೇಂದ್ರ ಪಡೆಗಳ ರಕ್ಷಣೆಯಿದ್ದರೂ ಕಾರಿನ ಮೇಲೆ ಕಲ್ಲು ತೂರಾಟವಾಗಿದೆ. ಅದೃಷ್ಟವಶಾತ್ ಕಲ್ಲು ತೂರಾಟದಲ್ಲಿ ಕೇಂದ್ರ ಸಚಿವರಿಗೆ ಯಾವುದೇ ಗಾಯವಾಗಿಲ್ಲ.
ಬಿಜೆಪಿ ಮತ್ತು ಟಿಎಂಸಿ ಕಾರ್ಯಕರ್ತರ ನಡುವಿನ ಘರ್ಷಣೆಯಲ್ಲಿ ಕಚ್ಚಾ ಬಾಂಬ್‌ಗಳನ್ನು ಎಸೆಯಲಾಗಿದೆ ಎಂದು ವರದಿಯಾಗಿದೆ.
ಪರಿಸ್ಥಿತಿಯನ್ನು ಹತೋಟಿಗೆ ತರಲು ಪೊಲೀಸರು ಅಶ್ರುವಾಯು ಶೆಲ್ ಫೈರಿಂಗ್ ಮತ್ತು ಲಾಠಿ ಚಾರ್ಜ್ ಮಾಡಬೇಕಾಯಿತು.
ವರದಿಗಳ ಪ್ರಕಾರ, ಬುಡಕಟ್ಟು ಜನಾಂಗದವರ ಹತ್ಯೆಯ ಬಗ್ಗೆ ಸ್ಥಳೀಯರು ಕೇಂದ್ರ ಸಚಿವ ಪ್ರಮಾಣಿಕ್ ಬಗ್ಗೆ ಅಸಮಾಧಾನಗೊಂಡಿದ್ದಾರೆ. ಯಾಕೆಂದರೆ ಬುಡಕಟ್ಟು ಗೃಹ ಸಚಿವಾಲಯದಡಿ ಬರುವ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಗುಂಡಿಗೆ ಮೃತಪಟ್ಟಿದ್ದಾರೆ.
ತೃಣಮೂಲ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ, ಇತ್ತೀಚೆಗೆ ಕೂಚ್ ಬೆಹಾರ್‌ನಲ್ಲಿ ನಡೆದ ರ್ಯಾಲಿಯಲ್ಲಿ, ಹತ್ಯೆಯ ನಂತರ ಬುಡಕಟ್ಟು ಜನಾಂಗದವರ ನೋವಿ ಹೋಗುವಂತೆ ಮಾಡಲು ಪ್ರಮಾಣಿಕ ಸರಿಯಾಗಿ ಕೆಲಸ ಮಾಡಲಿಲ್ಲ ಎಂದು ಆರೋಪಿಸಿದ್ದರು.

ಪ್ರಮುಖ ಸುದ್ದಿ :-   ಉದ್ಧವ್‌ ಠಾಕ್ರೆಗೆ ತೀವ್ರ ಮುಖಭಂಗ: ಪಕ್ಷದ ಸಂಸದೀಯ ಸಭೆಗೆ 3 ಸಂಸದರು ಮಾತ್ರ ಹಾಜರು, 6 ಸಂಸದರು ಗೈರು...!

3 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement