ಲಕ್ನೋ: ಉತ್ತರ ಪ್ರದೇಶದ ಲಕ್ನೋದ ಮದರಸಾದಲ್ಲಿ ಓಡಿಹೋಗದಂತೆ ತಡೆಯಲು ಮೌಲಾನಾ ಇಬ್ಬರು ಹುಡುಗರ ಕಾಲುಗಳನ್ನು ಸರಪಳಿಯಲ್ಲಿ ಕಟ್ಟಿದ್ದಾರೆ ಎಂದು ಆರೋಪಿಸಲಾಗಿದೆ.
ಸ್ಥಳೀಯರೊಬ್ಬರು ವಿಡಿಯೋ ಮಾಡಿ ಪೊಲೀಸರಿಗೆ ಕಳುಹಿಸಿದ್ದರಿಂದ ಪ್ರಕರಣ ಬೆಳಕಿಗೆ ಬಂದಿದ್ದು, ಪೊಲೀಸರು ಸ್ಥಳಕ್ಕಾಗಮಿಸಿ ಆರೋಪಿಗಳನ್ನು ಮಕ್ಕಳನ್ನು ಬಿಡುಗಡೆಗೊಳಿಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಏತನ್ಮಧ್ಯೆ, ಮೌಲಾನಾ ವಿರುದ್ಧ ಯಾವುದೇ ಕಾನೂನು ಕ್ರಮ ಕೈಗೊಳ್ಳಲು ಬಯಸುವುದಿಲ್ಲ ಎಂದು ಬಾಲಕರ ಪೋಷಕರು ಲಿಖಿತ ಅರ್ಜಿ ಸಲ್ಲಿಸಿದ್ದಾರೆ. ಮೌಲಾನಾ ಮಕ್ಕಳೊಂದಿಗೆ ಕಟ್ಟುನಿಟ್ಟಾಗಿ ವರ್ತಿಸುವಂತೆ ಹೇಳಿದ್ದು ನಾವು, ಈ ಹಿಂದೆ ಈ ಮಕ್ಕಳು ಹಲವು ಬಾರಿ ಓದು ತಪ್ಪಿಸಿಕೊಳ್ಳಲು ಓಡಿಹೋಗಲು ಯತ್ನಿಸಿದ್ದರು ಎಂದು ಪೋಷಕರು ತಿಳಿಸಿದ್ದಾರೆ.
ಓದಲು ಇಷ್ಟವಿಲ್ಲದ ಕಾರಣ ಓಡಿಹೋಗಲು ಯತ್ನಿಸಿರುವುದಾಗಿ ಮಕ್ಕಳು ತಿಳಿಸಿದ್ದಾರೆ. ಒಬ್ಬ ಹುಡುಗನು ಓದುವುದನ್ನು ತಪ್ಪಿಸಲು ಶೌಚಾಲಯದಲ್ಲಿ ಅಡಗಿಕೊಂಡಿದ್ದೆ ಎಂದು ಹೇಳಿದ್ದಾನೆ.
ನಿಮ್ಮ ಕಾಮೆಂಟ್ ಬರೆಯಿರಿ