ಸೇರಿದ 10 ದಿನಕ್ಕೇ ಜಗನ್ ರೆಡ್ಡಿ ವೈಎಸ್‌ಆರ್‌ಸಿಪಿ ಪಕ್ಷ ತೊರೆದ ಮಾಜಿ ಕ್ರಿಕೆಟಿಗ ಅಂಬಟಿ ರಾಯುಡು

ಯುವಜನ ಶ್ರಮಿಕ ರೈತ ಕಾಂಗ್ರೆಸ್ ಪಕ್ಷಕ್ಕೆ (ವೈಎಸ್‌ಆರ್‌ಸಿಪಿ) ಸೇರಿದ ಕೇವಲ ಎಂಟು ದಿನಗಳ ನಂತರ ಕ್ರಿಕೆಟಿಗ ಅಂಬಟಿ ರಾಯುಡು ಅವರು ಶನಿವಾರ ಪಕ್ಷ ತೊರೆಯುವ ನಿರ್ಧಾರ ಪ್ರಕಟಿಸಿದ್ದಾರೆ.
ರಾಯುಡು ಜೂನ್ 2023 ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದರು ಮತ್ತು ರಾಜಕೀಯಕ್ಕೆ ಸೇರುವ ಆಸಕ್ತಿಯನ್ನು ವ್ಯಕ್ತಪಡಿಸಿದರು.
ರಾಯುಡು ತಮ್ಮ ಎಕ್ಸ್ ಪೋಸ್ಟ್‌ನಲ್ಲಿ, “ನಾನು ವೈಎಸ್‌ಆರ್‌ಸಿಪಿ ಪಕ್ಷವನ್ನು ತೊರೆಯಲು ಮತ್ತು ಸ್ವಲ್ಪ ಸಮಯದವರೆಗೆ ರಾಜಕೀಯದಿಂದ ದೂರವಿರಲು ನಿರ್ಧರಿಸಿದ್ದೇನೆ ಎಂದು ಎಲ್ಲರಿಗೂ ತಿಳಿಸಲು ಬಯಸುತ್ತೇನೆ. ಮುಂದಿನ ಕ್ರಮವನ್ನು ಸೂಕ್ತ ಸಮಯದಲ್ಲಿ ತಿಳಿಸಲಾಗುವುದು” ಎಂದು ಹೇಳಿದ್ದಾರೆ.
ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ಮೋಹನ್ ರೆಡ್ಡಿ ಅವರು 45 ದಿನಗಳ ಕ್ರೀಡಾ ಉತ್ಸವ ‘ಅದುಧಮ್ ಆಂಧ್ರ’ (ನಾವು ಆಂಧ್ರದಲ್ಲಿ ಆಡೋಣ) ಅನ್ನು ಪ್ರಾರಂಭಿಸಿದ ಎರಡು ದಿನಗಳ ನಂತರ, ಡಿಸೆಂಬರ್ 28 ರಂದು ಚೆನ್ನೈ ಸೂಪರ್ ಕಿಂಗ್ಸ್ ಬ್ಯಾಟರ್ ಆಗಿದ್ದ ಅಂಬಟಿ ರಾಯುಡು ಅವರು ವೈಎಸ್‌ಆರ್‌ಸಿಪಿಗೆ ಸೇರಿದ್ದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement