ಗಾಜಿಯಾಬಾದ್‌ನಲ್ಲಿ ನಿರ್ಭಯಾ ಮಾದರಿ ದುಷ್ಕೃತ್ಯ: ದೆಹಲಿ ಮಹಿಳೆ ಅಪಹರಿಸಿ 2 ದಿನ ಸಾಮೂಹಿಕ ಅತ್ಯಾಚಾರ, ಚಿತ್ರಹಿಂಸೆ; ಶರೀರದೊಳಕ್ಕೆ ಇತ್ತು ಕಬ್ಬಿಣದ ರಾಡ್‌..!

ನವದೆಹಲಿ: ಗಾಜಿಯಾಬಾದ್‌ನ 38 ವರ್ಷದ ಮಹಿಳೆಯನ್ನು ಅಪಹರಿಸಿದ ಐವರು ದುಷ್ಕರ್ಮಿಗಳ ಗುಂಪು, ಆಕೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಎರಡು ದಿನಗಳ ಕಾಲ ಕ್ರೂರವಾಗಿ ಚಿತ್ರಹಿಂಸೆ ನೀಡಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ಮಹಿಳೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ. ನಿರ್ಭಯಾ ಅತ್ಯಾಚಾರ ಮಾದರಿಯ ಈ ಕೃತ್ಯ ದೆಹಲಿಯ ಜನತೆಯಲ್ಲಿ ಮತ್ತೆ ಆತಂಕ ಸೃಷ್ಟಿಸಿದೆ.
38 ವರ್ಷದ ಮಹಿಳೆಯ ಮೇಲೆ ನಡೆದ ಕ್ರೂರ ಸಾಮೂಹಿಕ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ದೆಹಲಿ ಮಹಿಳಾ ಆಯೋಗ (ಡಿಸಿಡಬ್ಲ್ಯು) ಗಾಜಿಯಾಬಾದ್ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದೆ, ಈ ದಾಳಿಯು ನಿರ್ಭಯಾ ಪ್ರಕರಣವನ್ನು ನೆನಪಿಸುತ್ತದೆ ಎಂದು ಆಯೋಗ ಹೇಳಿದೆ.
ದೆಹಲಿಯ ನಿವಾಸಿಯಾಗಿರುವ ಮಹಿಳೆಯನ್ನು “ಸೆಣಬಿನ ಚೀಲದಲ್ಲಿ ಸುತ್ತಿ, ಅವಳ ಕೈ ಮತ್ತು ಕಾಲುಗಳನ್ನು ಕಟ್ಟಿಹಾಕಿ ಮತ್ತು ಅವಳ ಖಾಸಗಿ ಭಾಗದಲ್ಲಿ ಕಬ್ಬಿಣದ ರಾಡ್ ನಿಂದ ಹಿಂಸೆ ನೀಡಲಾಗಿದೆ ಎಂದು ದೆಹಲಿ ಮಹಿಳಾ ಆಯೋಗ (DCW) ಹೇಳಿದೆ.
ದೆಹಲಿ ಮತ್ತು ಗಾಜಿಯಾಬಾದ್ ಅನ್ನು ಸಂಪರ್ಕಿಸುವ ಆಶ್ರಮ ರಸ್ತೆಯ ಬಳಿ ಮಹಿಳೆಯೊಬ್ಬರು ಬಿದ್ದಿರುವ ಬಗ್ಗೆ ಪೊಲೀಸರಿಗೆ ಮಂಗಳವಾರ ಮಾಹಿತಿ ಬಂದಿತ್ತು. ಕೂಡಲೇ ಅಲ್ಲಿಗೆ ತೆರಳಿದ ಪೊಲೀಸರು, ಮಹಿಳೆಯನ್ನು ಜಿಟಿಬಿ ಆಸ್ಪತ್ರೆಗೆ ದಾಖಲಿಸಿ, ಅವರಿಂದ ದೂರು ಪಡೆದುಕೊಂಡಿದ್ದಾರೆ.

ಪ್ರಮುಖ ಸುದ್ದಿ :-   127 ವರ್ಷಗಳಷ್ಟು ಹಳೆಯ ಗೋದ್ರೇಜ್ ಗ್ರುಪ್‌ ಇಬ್ಭಾಗ

ಮಹಿಳೆ ಅಕ್ಟೋಬರ್ 16 ಗಾಜಿಯಾಬಾದ್‌ನಲ್ಲಿ ಬರ್ಥಡೇ ಪಾರ್ಟಿ ಮುಗಿಸಿಕೊಂಡು ಮಹಿಳೆ ದೆಹಲಿಗೆ ಮರಳುತ್ತಿದ್ದರು. ಅವರ ಸಹೋದರ ಬಸ್ ನಿಲ್ದಾಣಕ್ಕೆ ಅವರನ್ನು ಬಿಟ್ಟು ಹೋಗಿದ್ದರು. ಮಹಿಳೆ ಬಸ್‌ಗಾಗಿ ಕಾಯುತ್ತಿದ್ದಾಗ ಕಾರ್ ಒಂದು ಅವರ ಸಮೀಪ ಬಂದಿತ್ತು. ಐವರು ವ್ಯಕ್ತಿಗಳು ಅವರನ್ನು ಕಾರಿನ ಒಳಗೆ ಎಳೆದುಕೊಂಡಿದ್ದರು. ಬಳಿಕ ಅಪರಿಚಿತ ಸ್ಥಳವೊಂದಕ್ಕೆ ಕರೆದುಕೊಂಡು ಹೋಗಿ, ಆಕೆ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಹೇಳಲಾಗಿದೆ. ಪ್ರಕರಣದ ಸಂಬಂಧ ನಾಲ್ವರನ್ನು ಬಂಧಿಸಲಾಗಿದೆ.

ಸಂತ್ರಸ್ತೆ ಮತ್ತು ಆರೋಪಿಗಳ ಮಧ್ಯೆ ಆಸ್ತಿ ವಿವಾದ ಇತ್ತು. ಅದು ನ್ಯಾಯಾಲಯದ ಮುಂದೆ ಇತ್ತು ಎಂದು ನಮಗೆ ತಿಳಿದುಬಂದಿದೆ. ನಾವು ಎಲ್ಲ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ” ಎಂದು ಗಾಜಿಯಾಬಾದ್ ಪೊಲೀಸ್ ವಕ್ತಾರ ನಿಪುಣ್ ಅಗರ್ವಾಲ್ ತಿಳಿಸಿದ್ದಾರೆ.
ದೆಹಲಿ ಮಹಿಳಾ ಆಯೋಗದ ಮುಖಸ್ಥೆ ಸ್ವಾತಿ ಮಲಿವಾಲ್ ಈ ಬಗ್ಗೆ ಟ್ವೀಟ್ ಮಾಡಿದ್ದು, ದೆಹಲಿ ಮಹಿಳೆ ರಾತ್ರಿಯಲ್ಲಿ ಗಾಜಿಯಾಬಾದ್‌ನಿಂದ ಹಿಂತಿರುಗುತ್ತಿದ್ದಾಗ ಬಲವಂತವಾಗಿ ಕಾರಿನಲ್ಲಿ ಎಳೆದೊಯ್ಯಲಾಯಿತು. 5 ಮಂದಿ 2 ದಿನಗಳ ಕಾಲ ಅತ್ಯಾಚಾರ ಎಸಗಿ ಆಕೆಯ ಖಾಸಗಿ ಭಾಗಕ್ಕೆ ರಾಡ್‌ ನಿಂದ  ಕ್ರೌರ್ಯ ಮೆರೆದಿದ್ದಾರೆ. ಮಹಿಳೆಯ ಸ್ಥಿತಿ ಬಹಳ ಗಂಭೀರವಾಗಿದೆ. ಒಂದು ಕಬ್ಬಿಣದ ರಾಡು ಇನ್ನೂ ಆಕೆಯ ದೇಹದ ಒಳಗೆ ಇದೆ.   ಮಹಿಳೆ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ. ಎಸ್‌ಎಸ್‌ಪಿ ಗಾಜಿಯಾಬಾದ್‌ಗೆ ನೋಟಿಸ್ ನೀಡಲಾಗಿದೆ ಎಂದು ಹೇಳಿದ್ದಾರೆ.

ಪ್ರಮುಖ ಸುದ್ದಿ :-   50 ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ : ಮಕ್ಕಳನ್ನು ಮನೆಗೆ ಕಳುಹಿಸಿದ ಶಾಲೆಗಳು, ಪರೀಕ್ಷೆಗಳು ಸ್ಥಗಿತ

3 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement