ಕ್ರೆಡಿಟ್ ಕಾರ್ಡ್ ಹೆಸರಿನಲ್ಲಿ ಜಸ್ಟೀಸ್ ಸಂತೋಷ್ ಹೆಗ್ಡೆ ವಂಚನೆಗೆ ಯತ್ನ

ಬೆಂಗಳೂರು: ನಿವೃತ್ತ ಲೋಕಾಯುಕ್ತ ನ್ಯಾ. ಎನ್‌. ಸಂತೋಷ್ ಹೆಗ್ಡೆ ಅವರಿಗೆ ಕ್ರೆಡಿಟ್ ಕಾರ್ಡ್ ಹೆಸರಿನಲ್ಲಿ ವಂಚಿಸಲು ಯತ್ನಿಸಲಾಗಿದೆ. ವಂಚನೆ ಮಾಡಲು ಯತ್ನಿಸಿದ ಸೈಬರ್ ವಂಚಕರ ವಿರುದ್ಧ ಅವರು ಕೇಂದ್ರ ವಿಭಾಗದ ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಕನ್ಹಿಂಗ್ ಹ್ಯಾಮ್ ರಸ್ತೆಯಲ್ಲಿರುವ ಎಂಬಸಿ ಅಪಾರ್ಟಟ್‌ಮೆಂಟ್‌ನಲ್ಲಿ ವಾಸವಾಗಿರುವ ಎನ್. ಸಂತೋಷ್ ಹೆಗ್ಡೆ ಸಿಟಿ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಹೊಂದಿದ್ದಾರೆ. ಜೂ. 14 ರಂದು ಕರೆ ಮಾಡಿರುವ ಅಪರಿಚಿತರು, ಅವರ ಕ್ರೆಡಿಟ್ ಕಾರ್ಡ್ ಬಗ್ಗೆ ಮಾತನಾಡಿದ್ದಾರೆ. ನಿಮ್ಮ ಕ್ರೆಡಿಟ್ ಕಾರ್ಡ್ ಪಾಯಿಂಟ್ಸ್ ಮುಕ್ತಾಯವಾಗಿದ್ದು, ಬರುವ ಒಟಿಪಿಯನ್ನು ಶೇರ್ ಮಾಡುವಂತೆ ಮನವಿ ಮಾಡಿದ್ದರು. ಕರೆ ಸ್ವೀಕರಿಸಿದ ಕೂಡಲೇ ವಂಚಕರು ಎಂದು ಅನುಮಾನಗೊಂಡಿದ್ದ ನಿವೃತ್ತ ಲೋಕಾಯುಕ್ತರು ಕರೆ ಕಡಿತ ಮಾಡಿರಲಿಲ್ಲ. ಆನಂತರ ಎರಡು ಸಲ ಮೊಬೈಲ್ ನಂಬರ್‌ಗೆ ಒಟಿಪಿ ಬಂದಿದ್ದು, ಕರೆ ಮಾಡಿದ್ದ ಮಹಿಳೆ ವಿರುದ್ಧ ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement