ಇನ್ನೂ ಮಳೆಯಿದೆ…ಆಕಾಶ ತತ್ವದ ಪ್ರಕಾರ ತೊಂದರೆ ಆಗಬಹುದು…ರಾಜನ ಮೇಲೆ ಭಂಗ ಬೀರಲಿದೆ ; ಕೋಡಿಮಠ ಶ್ರೀಗಳ ಭವಿಷ್ಯ

ಹಾಸನ : ದೇಶದಲ್ಲಿ ಮಳೆ ಇನ್ನೂ ಮುಂದುವರಿಯಲಿದೆ. ನಾನು ಈ ಹಿಂದೆ ಪ್ರಾಕೃತಿಕ ದೋಷವಿದೆ ಎಂದು ಹೇಳಿದಂತೆ ಅದಿನ್ನೂ ಸಂಭವಿಸುತ್ತದೆ. ಈ ಬಾರಿ ಆಕಾಶದಿಂದ ದೊಡ್ಡ ಆಪತ್ತು ಕಾದಿದೆ ಎಂದು ಹಾರನಹಳ್ಳಿ ಗ್ರಾಮದ ಕೋಡಿಮಠ ಪೀಠಾಧ್ಯಕ್ಷ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.
ಪಂಚ ಭೂತಗಳಿಂದಲೂ ದೇಶಕ್ಕೆ ತೊಂದರೆ ಇದೆ. ಆದರೆ ಆಗಸದಿಂದ ಅಪಾಯ ಸಂಭವಿಸಲಿದೆ ಎಂದು ಅವರು ಹೇಳಿದ್ದಾರೆ
ಹಾಸನ ಜಿಲ್ಲೆ, ಅರಸೀಕೆರೆ ತಾಲೂಕಿನ, ಹಾರನಹಳ್ಳಿಯ ಕೋಡಿಮಠದಲ್ಲಿ ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ವರ್ಷದ ಮಳೆಯಿಂದ ದೇಶದಲ್ಲಿ ಜಾಸ್ತಿ ತೊಂದರೆ ಇದೆ. ಪ್ರಾಕೃತಿಕ ತೊಂದರೆ ಇದೆ. ನಮಗೆ ಪಂಚ ಶಕ್ತಿಗಳಿಂದಲೂ ತೊಂದರೆ ಇದೆ. ಭೂಮಿ, ಅಗ್ನಿ, ವಾಯು, ಆಕಾಶ, ಪ್ರಕೃತಿ ಸೇರಿದಂತೆ ಎಲ್ಲಾ ಕಡೆ ತೊಂದರೆ ಆಗುತ್ತದೆ. ಇನ್ನೂ ಹೇಳಬೇಕೆಂದರೆ ಆಕಾಶದಲ್ಲಿ ಸಂಭವಿಸುವ ದೊಡ್ಡ ಸುದ್ದಿ ಇದೆ ಎಂದು ಹೇಳಿದ್ದಾರೆ.

ಜನ ಇದ್ದಕ್ಕಿದ್ದಂತೆ ಸಾಯುತ್ತಾರೆ. ಭೂಮಿ ಬಿರುಕು ಬಿಡುತ್ತದೆ, ಗುಡ್ಡ ಹೋಗುತ್ತದೆ ಎಂದು ಹೇಳಿದ್ದೆ. ಪ್ರವಾಹದಲ್ಲಿ ಜಗತ್ತಿನಾದ್ಯಂತ ಹಲವು ದೇಶಗಳು ಮುಳುಗುತ್ತವೆ ಎಂದು ಹೇಳಿದ್ದೆ. ಇನ್ನೂ ಮಳೆ ಇದೆ, ಇನ್ನೂ ಅನಾಹುತಗಳು ಸಂಭವಿಸಲಿವೆ ಎಂದು ಎಚ್ಚರಿಸಿದ್ದಾರೆ.
ಆಕಾಶ ತತ್ವ ಪ್ರಕಾರ ತೊಂದರೆ ಆಗಬಹುದು. ಅದು ರಾಜನ ಮೇಲೆ ಭಂಗ ಬೀರುತ್ತದೆ. ಅಭಿಮನ್ಯುವಿನ ಬಿಲ್ಲನ್ನು ಮೋಸದಿಂದ ಕರ್ಣನ ಕೈಯಲ್ಲಿ ದಾರ ಕಟ್ ಮಾಡಿಸಲಾಯಿತು. ಮಹಾಭಾರತದಲ್ಲಿ ಕೃಷ್ಣ ಇದ್ದ, ಗದಾಯುದ್ಧದಲ್ಲಿ ಭೀಮ ಗೆದ್ದ. ಇದೀಗ ಕೃಷ್ಣ ಇಲ್ಲದೆ ದುರ್ಯೋಧನ ಗೆಲ್ಲುತ್ತಾನೆ. ಕೇಂದ್ರ ಹಾಗೂ ರಾಜ್ಯದಲ್ಲಿಯೂ ಇದೇ ಆಗುತ್ತದೆ ಎಂದು ಅವರು ಹೇಳಿದರು.

ಪ್ರಮುಖ ಸುದ್ದಿ :-   ಸಾಹಿತಿ ದೊಡ್ಡರಂಗೇಗೌಡರ ಆರೋಗ್ಯದಲ್ಲಿ ಏರುಪೇರು ; ಆಸ್ಪತ್ರೆಗೆ ದಾಖಲು

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement