ಕರ್ನಾಟಕದಲ್ಲಿ ಮಂಗಳವಾರ ಕೊರೊನಾ ಸೋಂಕು ಮತ್ತಷ್ಟು ಇಳಿಕೆ

ಬೆಂಗಳೂರು:ರಾಜ್ಯದಲ್ಲಿ ಕಳೆದ 24 ತಾಸಿನಲ್ಲಿ (ಮಂಗಳವಾರ) ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಇಳಿಕೆಯಾಗಿದ್ದು, ಹೊಸದಾಗಿ 851 ಜನರಿಗೆ ಕೊರೊನಾ ಸೋಂಕು ವರದಿಯಾಗಿದೆ. ಇದೇ ಸಮಯದಲ್ಲಿ 15 ಜನ ಸೋಂಕಿತರು ಮೃತಪಟ್ಟಿದ್ದಾರೆ ಹಾಗೂ 790 ಜನ ಚೇತರಿಸಿಕೊಂಡು ಬಿಡುಗಡೆಯಾಗಿದ್ದಾರೆ.
ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 29,56,988ಕ್ಕೆ ಏರಿಕೆಯಾಗಿದೆ. ಇದುವರೆಗೆ 37,441 ಸೋಂಕಿತರು ಮೃತಪಟ್ಟಿದ್ದಾರೆ. ಇಂದು ಇದುವರೆಗೆ 29,02,089 ಜನ ಗುಣಮುಖರಾಗಿದ್ದಾರೆ.ರಾಜ್ಯದಲ್ಲಿ 17,432 ಸಕ್ರಿಯ ಪ್ರಕರಣಗಳಿವೆ. ರಾಜ್ಯದ ಪಾಸಿಟಿವಿಟಿ ದರ ಶೇಕಡ 0.71 ರಷ್ಟು ಇದೆ. ಇವತ್ತು 1,18,791 ಪರೀಕ್ಷೆ ನಡೆಸಲಾಗಿದೆ.
ರಾಜಧಾನಿ ಬೆಂಗಳೂರಿನಲ್ಲಿ ಇಂದು 248 ಜನರಿಗೆ ಸೋಂಕು ತಗುಲಿದ್ದು, ಮೂವರು ಸೋಂಕಿತರು ಮೃತಪಟ್ಟಿದ್ದಾರೆ. 362 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 7063 ಸಕ್ರಿಯ ಪ್ರಕರಣಗಳಿವೆ. ಉಳಿದಂತೆ ದಕ್ಷಿಣಕನ್ನಡ 227, ಚಿಕ್ಕಮಗಳೂರು 49, ಮೈಸೂರು 53, ತುಮಕೂರು 44, ಉಡುಪಿ 74 ಹೆಚ್ಚು ಪ್ರಕರಣಗಳು ವರದಿಯಾಗಿದೆ.
ಜಿಲ್ಲಾವಾರು ಸಂಪೂರ್ಣ ಮಾಹಿತಿಯನ್ನು ಪಿಡಿಎಫ್‌ನಲ್ಲಿ ಕೆಳಗೆ ಕೊಡಲಾಗಿದೆ.

07-09-2021 HMB Kannada

 

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement