ಪೆಟ್ರೋಲ್, ಡೀಸೆಲ್‌ ಅಭಾವದಿಂದ ಕಂಗೆಟ್ಟ ಪಾಕಿಸ್ತಾನ: ಗಣರಾಜ್ಯೋತ್ಸವ ಪರೇಡ್‌, ಸಂಭ್ರಮಾಚರಣೆ ರದ್ದುಗೊಳಿಸಿದ ಪಾಕ್‌…!

ಇಸ್ಲಾಮಾಬಾದ್‌ : ಮಧ್ಯಪ್ರಾಚ್ಯದಲ್ಲಿ ಇರಾನ್ ಯುದ್ಧದಿಂದ ಉಂಟಾಗಿರುವ ಇಂಧನ ಬಿಕ್ಕಟ್ಟು ಈಗ ಪಾಕಿಸ್ತಾನಕ್ಕೆ ಹೊಸ ಸಮಸ್ಯೆ ತಂದೊಡ್ಡಿದೆ. ವರದಿಗಳ ಪ್ರಕಾರ, ಮಾರ್ಚ್ 23 ರಂದು ನಡೆಯಬೇಕಿದ್ದ ಪಾಕಿಸ್ತಾನದ ‘ಗಣರಾಜ್ಯೋತ್ಸವ’ದ (Republic Day) ಮಿಲಿಟರಿ ಪರೇಡ್ ಮತ್ತು ಔಪಚಾರಿಕ ನಡಾವಳಿಗಳನ್ನು ರದ್ದುಗೊಳಿಸಲು ಪಾಕಿಸ್ತಾನದ ಪ್ರಧಾನ ಮಂತ್ರಿ ಕಾರ್ಯಾಲಯ ಮಂಗಳವಾರ ನಿರ್ಧರಿಸಿದೆ. ಪ್ರಧಾನಿ ಶೆಹಬಾಜ್ ಶರೀಫ್ ಅವರ ಕಚೇರಿಯು, … Continued

ಇಸ್ರೇಲ್ ವೈಮಾನಿಕ ದಾಳಿಯಲ್ಲಿ ಇರಾನ್ ಗುಪ್ತಚರ ಸಚಿವ ಇಸ್ಮಾಯಿಲ್ ಖತೀಬ್ ಸಾವು

ತೆಹ್ರಾನ್/ಜೆರುಸಲೇಂ: ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ ತಾರಕಕ್ಕೇರಿದ್ದು, ಇರಾನ್‌ನ ಗುಪ್ತಚರ ಸಚಿವ ಇಸ್ಮಾಯಿಲ್ ಖತೀಬ್ ಅವರನ್ನು ಹತ್ಯೆ ಮಾಡಿರುವುದಾಗಿ ಇಸ್ರೇಲ್ ಸೇನೆ ಬುಧವಾರ ಪ್ರಕಟಿಸಿದೆ. ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಈ ಸುದ್ದಿಯನ್ನು ಖಚಿತಪಡಿಸಿದ್ದು, ಇದೊಂದು “ಹೇಡಿಗಳ ಕೃತ್ಯ” ಎಂದು ಕಿಡಿಕಾರಿದ್ದಾರೆ. ಇಸ್ರೇಲ್ ರಕ್ಷಣಾ ಸಚಿವ ಇಸ್ರೇಲ್ ಕಾಟ್ಜ್ ಬುಧವಾರ ರಾತ್ರಿಯಿಡೀ ನಡೆದ ದಾಳಿಯಲ್ಲಿ … Continued

ಹಾರ್ಮುಜ್ ಜಲಸಂಧಿ ಬಳಿ ಇರಾನ್ ಕ್ಷಿಪಣಿ ನೆಲೆಗಳ ಮೇಲೆ 2,200 ಕೆಜಿ ತೂಕದ ‘ಬಂಕರ್ ಬಸ್ಟರ್’ ಬಾಂಬ್ ಹಾಕಿದ ಅಮೆರಿಕ

ವಿಶ್ವದ ಪ್ರಮುಖ ತೈಲ ಸಾರಿಗೆ ಮಾರ್ಗವಾದ ಹಾರ್ಮುಜ್ ಜಲಸಂಧಿಯ  (Strait of Hormuz) ಮೇಲೆ ನಿಯಂತ್ರಣ ಪಡೆಯಲು ಅಮೆರಿಕ ಸೇನೆಯು ತನ್ನ ಮೊದಲ ಪ್ರಮುಖ ಮಿಲಿಟರಿ ಕಾರ್ಯಾಚರಣೆಯನ್ನು ಆರಂಭಿಸಿದೆ. ಇರಾನ್‌ನ ಕರಾವಳಿ ತೀರದಲ್ಲಿರುವ ಕ್ಷಿಪಣಿ ಉಡಾವಣಾ ಕೇಂದ್ರಗಳ ಮೇಲೆ ಅಮೆರಿಕ ತನ್ನ ಅತ್ಯಂತ ಶಕ್ತಿಶಾಲಿ ‘ಬಂಕರ್ ಬಸ್ಟರ್’ ಬಾಂಬ್‌ಗಳ ಮೂಲಕ ದಾಳಿ ನಡೆಸಿರುವುದಾಗಿ ಪ್ರಕಟಿಸಿದೆ. ಅಮೆರಿಕದ … Continued

ಇಸ್ರೇಲ್ ದಾಳಿಯಲ್ಲಿ ತಂದೆ, ಹಿರಿಯ ಅಧಿಕಾರಿಗಳು ಸಾವಿಗೀಡಾದರು ; ಆದ್ರೆ ಮೊಜ್ತಾಬಾ ಖಮೇನಿ ಕೂದಲೆಳೆ ಅಂತರದಲ್ಲಿ ಪಾರಾಗಿದ್ದು ಹೇಗೆ ?

ಇರಾನ್‌ ರಾಜಧಾನಿ ತೆಹ್ರಾನ್ ಮೇಲೆ ಅಮೆರಿಕ-ಇಸ್ರೇಲ್ ನಡೆಸಿದ ದಾಳಿಯ ಸಂದರ್ಭದಲ್ಲಿ ಈಗಿನ ಇರಾನ್‌ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಕೂದಲೆಳೆ ಅಂತರದಲ್ಲಿ ಬದುಕುಳಿದಿರುವುದು ಜಾಗತಿಕ ಗಮನ ಸೆಳೆದಿದೆ. ಹೊರಬರುತ್ತಿರುವ ವಿವರಗಳ ಪ್ರಕಾರ, ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರನ್ನು ಬಲಿಪಡೆದ ಅದೇ ದಾಳಿಯಿಂದ ಮೊಜ್ತಾಬಾ ಕೆಲವೇ ಸೆಕೆಂಡುಗಳ ವ್ಯತ್ಯಾಸದಲ್ಲಿ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. … Continued

ವಾಯು ದಾಳಿಯಲ್ಲಿ ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ, ಕಮಾಂಡರ್ ಗುಲಾಮ್ರೆಜಾ ಸೊಲೈಮಾನಿ ಸಾವು : ಇಸ್ರೇಲ್ ಹೇಳಿಕೆ

ಮಧ್ಯಪ್ರಾಚ್ಯದಲ್ಲಿ ಸಂಘರ್ಷ ತೀವ್ರಗೊಂಡಿದ್ದು, ಮಂಗಳವಾರ ಮುಂಜಾನೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಮತ್ತು ಉನ್ನತ ಕಮಾಂಡರ್ ಘೋಲಮ್ರೆಜಾ ಸೊಲೈಮನಿ ಅವರನ್ನು ಹತ್ಯೆ ಮಾಡಲಾಗಿದೆ ಎಂದು ಇಸ್ರೇಲ್ ರಕ್ಷಣಾ ಸಚಿವ ಇಸ್ರೇಲ್ ಕಾಟ್ಜ್ ಹೇಳಿದ್ದಾರೆ. ಆದರೆ, ಇರಾನ್ ಈ ವರದಿಯನ್ನು ಇನ್ನೂ ಅಧಿಕೃತವಾಗಿ ಖಚಿತಪಡಿಸಿಲ್ಲ.  ಇರಾನ್ ರಾಜಧಾನಿ ತೆಹ್ರಾನ್ ಸೇರಿದಂತೆ … Continued

2000 ವರ್ಷಗಳ ನಂತರ ಪತ್ತೆಯಾದ ʼಅಲೆಕ್ಸಾಂಡರ್ ದಿ ಗ್ರೇಟ್ʼ ನಿರ್ಮಿಸಿದ್ದ ‘ಕಣ್ಮರೆಯಾಗಿದ್ದ ನಗರ’..!

ಜಗತ್ತನ್ನೇ ಗೆಲ್ಲ ಹೊರಟಿದ್ದ ಗ್ರೀಕ್ ಚಕ್ರವರ್ತಿ ಅಲೆಕ್ಸಾಂಡರ್ ದಿ ಗ್ರೇಟ್ ಸ್ಥಾಪಿಸಿದನೆನ್ನಲಾದ, ಶತಮಾನಗಳಿಂದ ಮಣ್ಣಿನಡಿಯಲ್ಲಿ ಹೂತುಹೋಗಿದ್ದ ಐತಿಹಾಸಿಕ ನಗರವೊಂದನ್ನು ಪುರಾತತ್ವ ಶಾಸ್ತ್ರಜ್ಞರು ಪತ್ತೆಹಚ್ಚಿದ್ದಾರೆ. ದಕ್ಷಿಣ ಇರಾಕ್‌ನ ಟೈಗ್ರಿಸ್ ನದಿಯ ದಡದಲ್ಲಿರುವ ಈ ನಗರವನ್ನು ‘ಅಲೆಕ್ಸಾಂಡ್ರಿಯಾ’ ಎಂದು ಗುರುತಿಸಲಾಗಿದೆ. ಸುಮಾರು ಕ್ರಿ.ಪೂ. 4ನೇ ಶತಮಾನದಲ್ಲಿ ನಿರ್ಮಾಣವಾಗಿದ್ದ ಈ ನಗರವು ಕಾಲಕ್ರಮೇಣ ಇತಿಹಾಸದ ಪುಟಗಳಿಂದ ಮರೆಯಾಗಿತ್ತು. ಕಳೆದ ದಶಕದಿಂದಲೂ … Continued

ಕಾಬೂಲ್ ಆಸ್ಪತ್ರೆ ಮೇಲೆ ಪಾಕಿಸ್ತಾನ ವಾಯುದಾಳಿ: 400 ಸಾವು, 250 ಜನರಿಗೆ ಗಾಯ ; ತಾಲಿಬಾನ್‌

ಕಾಬೂಲ್: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿರುವ ಆಸ್ಪತ್ರೆಯೊಂದರ ಮೇಲೆ ಪಾಕಿಸ್ತಾನ ನಡೆಸಿದ ವಾಯುದಾಳಿಯಲ್ಲಿ ಕನಿಷ್ಠ 400 ಜನರು ಸಾವಿಗೀಡಾಗಿದ್ದಾರೆ ಮತ್ತು ಸುಮಾರು 250 ಜನರು ಗಾಯಗೊಂಡಿದ್ದಾರೆ ಎಂದು ತಾಲಿಬಾನ್ ವಕ್ತಾರರು ಮಂಗಳವಾರ ಬೆಳಿಗ್ಗೆ ತಿಳಿಸಿದ್ದಾರೆ. ಅಫ್ಘಾನಿಸ್ತಾನದ ಉಪ ಸರ್ಕಾರಿ ವಕ್ತಾರ ಹಮ್ದುಲ್ಲಾ ಫಿತ್ರತ್ ಈ ಬಗ್ಗೆ ಮಾಹಿತಿ ನೀಡಿ, ಸ್ಥಳೀಯ ಕಾಲಮಾನ ರಾತ್ರಿ 9 ಗಂಟೆ ಸುಮಾರಿಗೆ … Continued

ಇರಾನ್‌ ಸರ್ವೋಚ್ಚ ನಾಯಕ ಬಳಸುತ್ತಿದ್ದ ವಿಮಾನ ಧ್ವಂಸ ಮಾಡಿದ್ದೇವೆ ಎಂದ ಇಸ್ರೇಲ್‌

ತೆಹ್ರಾನ್: ಇರಾನ್‌ನ ದಿವಂಗತ ಸರ್ವೋಚ್ಚ ನಾಯಕ ಅಲಿ ಹೊಸೇನಿ ಖಮೇನಿ ಅವರ ವಿಮಾನವನ್ನು ತೆಹ್ರಾನ್‌ನ ಮೆಹ್ರಾಬಾದ್ ವಿಮಾನ ನಿಲ್ದಾಣದಲ್ಲಿ ಸೋಮವಾರ ರಾತ್ರಿ ನಡೆಸಿದ ವೈಮಾನಿಕ ದಾಳಿಯಲ್ಲಿ ಧ್ವಂಸಗೊಳಿಸಿರುವುದಾಗಿ ಇಸ್ರೇಲ್ ತಿಳಿಸಿದೆ. ಈ ದಾಳಿಯು ಇರಾನ್‌ನ ಪ್ರಾದೇಶಿಕ ಸಮನ್ವಯ ಸಾಮರ್ಥ್ಯಕ್ಕೆ ಬಿದ್ದ ದೊಡ್ಡ ಹೊಡೆತ ಎಂದು ಇಸ್ರೇಲ್ ಬಣ್ಣಿಸಿದೆ. ಇಸ್ರೇಲ್ ರಕ್ಷಣಾ ಪಡೆ (IDF) ಪ್ರಕಾರ, ಈ … Continued

ವೀಡಿಯೊ | ರಾಡಾರ್‌ಗಳಿಗೂ ಸಿಗದ ಇರಾನಿನ ‘ಮಾಯಾವಿ’ ಕ್ಷಿಪಣಿ; ಯುದ್ಧದಲ್ಲಿ ಮೊದಲ ಬಾರಿಗೆ ‘ಡ್ಯಾನ್ಸಿಂಗ್ ಮಿಸೈಲ್’ ಬಳಕೆ

ಇರಾನ್ ಹಾಗೂ ಅಮೆರಿಕ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚಾಗುತ್ತಿದ್ದು, ಭಾನುವಾರ ಇರಾನ್ ರಾಜಧಾನಿ ತೆಹ್ರಾನ್‌ನಿಂದ ಇಸ್ರೇಲ್‌ ಮತ್ತು ಅಮೆರಿಕಕ್ಕೆ ಸಂಬಂಧಿಸಿದ ನೆಲೆಗಳನ್ನು ಗುರಿಯಾಗಿಸಿಕೊಂಡು ಸುಧಾರಿತ ಕ್ಷಿಪಣಿಗಳನ್ನು ಉಡಾಯಿಸಿದೆ. ಇದರಲ್ಲಿ ಇರಾನ್ ದೇಶೀಯವಾಗಿ ಅಭಿವೃದ್ಧಿಪಡಿಸಿದ ‘ಸೆಜ್ಜಿಲ್’ (Sejjil) ಕ್ಷಿಪಣಿಯೂ ಸೇರಿದೆ. ಫೆಬ್ರವರಿ 28 ರಂದು ಯುದ್ಧ ಆರಂಭವಾದ ನಂತರ ಈ ಕ್ಷಿಪಣಿಯನ್ನು ಇರಾನ್‌ … Continued

ಹಾರ್ಮುಜ್ ಜಲಸಂಧಿ ಎಲ್ಲರಿಗೂ ಮುಕ್ತ, ಆದರೆ….: ಇರಾನಿನ ಷರತ್ತು ಏನೆಂದರೆ….

ತೆಹ್ರಾನ್: ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ತಲ್ಲಣ ಸೃಷ್ಟಿಸಿರುವ ಹಾರ್ಮುಜ್ ಜಲಸಂಧಿಯ ಬಿಕ್ಕಟ್ಟಿನ ನಡುವೆ, ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಗ್ಚಿ ಶನಿವಾರ ಮಹತ್ವದ ಸ್ಪಷ್ಟನೆ ನೀಡಿದ್ದಾರೆ. “ಹಾರ್ಮುಜ್ ಜಲಸಂಧಿಯು ಎಲ್ಲರಿಗೂ ಮುಚ್ಚಿಲ್ಲ; ಇದು ಕೇವಲ ಅಮೆರಿಕ, ಇಸ್ರೇಲ್ ಮತ್ತು ಅವರ ಮಿತ್ರ ರಾಷ್ಟ್ರಗಳ ಹಡಗುಗಳಿಗೆ ಮಾತ್ರ ಬಂದ್ ಆಗಿದೆ,” ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಶತ್ರು ರಾಷ್ಟ್ರಗಳಿಗೆ … Continued