ಕಾಡಿನಲ್ಲಿಟ್ಟ ಕನ್ನಡಿಯಲ್ಲಿ ತನ್ನ ಪ್ರತಿಬಿಂಬ ನೋಡಿದ ದೈತ್ಯ ಕರಡಿ.. ಮುಂದೇನಾಯ್ತು | ವೀಕ್ಷಿಸಿ

ಒಂದು ಉಲ್ಲಾಸದ ವೀಡಿಯೊ ಅಂತರ್ಜಾಲದಲ್ಲಿ ವೈರಲ್ ಆಗುತ್ತಿದೆ, ಇದು ಕರಡಿ ಕನ್ನಡಿಯಲ್ಲಿ ತನ್ನನ್ನು ತಾನೇ ನೋಡಿಕೊಂಡು ಆಶ್ಚರ್ಯಪಡುವುದನ್ನು ತೋರಿಸುತ್ತದೆ. ಕಾಡಿನಲ್ಲಿ ಕಂಬದ ಮೇಲೆ ಇರಿಸಿದ ಕನ್ನಡಿಯೊಂದು ಆ ಪ್ರದೇಶದಲ್ಲಿ ಹಾದುಹೋಗುವ ಕರಡಿಯ ಗಮನವನ್ನು ಸೆಳೆಯುತ್ತದೆ. ಆದರೆ ಕರಡಿಯು ಕನ್ನಡಿಯಲ್ಲಿ ತನ್ನದೇ ಪ್ರತಿಬಿಂಬವನ್ನು ಗುರುತಿಸಿದ ತಕ್ಷಣ ಆಘಾತಕ್ಕೊಳಗಾಗುತ್ತದೆ. ತಕ್ಷಣವೇ ಕರಡಿಯು ಕನ್ನಡಿಯಿಂದ ದೂರ ಜಿಗಿಯುವುದನ್ನು ವೀಡಿಯೊ ತೋರಿಸುತ್ತದೆ. … Continued

ದುಬೈಗೆ ಪಲಾಯನ ಮಾಡಲು ವ್ಯರ್ಥ ಪ್ರಯತ್ನ ಮಾಡಿದ ಶ್ರೀಲಂಕಾ ಅಧ್ಯಕ್ಷರ ಸಹೋದರ: ವಿಮಾನ ನಿಲ್ದಾಣದಿಂದ ಅರ್ಧಕ್ಕೇ ವಾಪಸ್‌…!

ಕೊಲಂಬೊ: ಶ್ರೀಲಂಕಾದ ಮಾಜಿ ಹಣಕಾಸು ಸಚಿವ ಬಾಸಿಲ್ ರಾಜಪಕ್ಸೆ ಅವರು ದೇಶದಲ್ಲಿ ಪ್ರತಿಭಟನೆಯ ಅಲೆಯ ನಡುವೆ ದುಬೈಗೆ ಪಲಾಯನ ಮಾಡಲು ಪ್ರಯತ್ನಿಸಿದ್ದು, ಆದರೆ ವಿಮಾನ ನಿಲ್ದಾಣದಲ್ಲಿ ಜನರು ಅವರನ್ನು ಗುರುತಿಸಿದ ನಂತರ ಮತ್ತು ವಲಸೆ ಅಧಿಕಾರಿಗಳು ಅವರ ಪ್ರಯಾಣಕ್ಕೆ ಅನುಮತಿ ನಿರಾಕರಿಸಿದ ನಂತರ ಅವರು ವಾಪಸ್‌ ಬರಬೇಕಾಯಿತು ಎಂದು ವರದಿಯಾಗಿದೆ. ಶ್ರೀಲಂಕಾ ಅಧ್ಯಕ್ಷ ಗೋತಬಯ ರಾಜಪಕ್ಸೆ … Continued

ತನ್ನ ಕೈ, ಬಾಯಿ-ಕಾಲುಗಳಲ್ಲಿ ಹಣ್ಣುಗಳನ್ನು ಒಯ್ಯುವ ದುರಾಸೆಯ ಚಿಂಪಾಂಜಿ: ಅದರ ಬುದ್ಧಿವಂತಿಕೆಗೆ ಇಂಟರ್ನೆಟ್‌ ಕ್ಲೀನ್‌ ಬೌಲ್ಡ್‌| ವೀಕ್ಷಿಸಿ

ಕೋತಿಗಳು ಭೂಮಿಯ ಮೇಲಿನ ಅತ್ಯಂತ ಬುದ್ಧಿವಂತ ಪ್ರಾಣಿಗಳಲ್ಲಿ ಒಂದು. ಅವು ಕೆಲವೊಮ್ಮೆ ಮನುಷ್ಯರಂತೆ ವರ್ತಿಸುತ್ತವೆ. ಇದಕ್ಕೆ ನಿದರ್ಶನವೆಂಬಂತೆ ಹಸಿದ ಚಿಂಪಾಂಜಿಯು ಜನರಂತೆ ವರ್ತಿಸುವುದನ್ನು ತೋರಿಸುವ ಒಂದು ಉಲ್ಲಾಸದ ವೀಡಿಯೊ ವೈರಲ್ ಆಗುತ್ತಿದೆ. ಚಿಂಪಾಂಜಿಯು ಕಾಡಿನಲ್ಲಿ ಬಹಳಷ್ಟು ಕಿತ್ತಳೆ ಹಣ್ಣುಗಳನ್ನು ಹೊತ್ತೊಯ್ಯುತ್ತಿರುವುದನ್ನು ಕ್ಲಿಪ್ ತೋರಿಸುತ್ತದೆ. ಚಿಂಪಾಂಜಿ ಕೈಗಳು ಹಣ್ಣುಗಳಿಂದ ತುಂಬಿವೆ, ಅದು ಕಿತ್ತಳೆಗಳನ್ನು ಕೇಔಲ ಕೈಗಳಷ್ಟೇ ಅಲ್ಲದೆ, … Continued

ಬ್ರಿಟನ್ ಪ್ರಧಾನಿ ಹುದ್ದೆ ರೇಸ್‌: ಮುನ್ನಡೆ ಕಾಯ್ದುಕೊಂಡ ರಿಷಿ ಸುನಕ್

ಲಂಡನ್: ಬ್ರಿಟನ್ ಪ್ರಧಾನಿ ಸ್ಪರ್ಧೆಯಲ್ಲಿ ಭಾನುವಾರ ಒಂಬತ್ತು ಅಭ್ಯರ್ಥಿಗಳ ಹೆಸರು ಕೇಳಿಬಂದಿದ್ದು, ಮಾಜಿ ಸಚಿವ ರಿಷಿ ಸುನಕ್ ಅವರು ಕನ್ಸರ್ವೇಟಿವ್ ಪಕ್ಷದ ನಾಯಕ ಸ್ಥಾನ ಹಾಗೂ ಪ್ರಧಾನಿ ಹುದ್ದೆಯ ಆಕಾಂಕ್ಷಿಗಳ ಪಟ್ಟಿಯಲ್ಲೂ ಮುನ್ನಡೆ ಕಾಯ್ದುಕೊಂಡಿದ್ದಾರೆ. ಪ್ರಮುಖ ಅಭ್ಯರ್ಥಿಗಳ ಪಟ್ಟಿಗೆ ಭಾನುವಾರ ವಾಣಿಜ್ಯ ಸಚಿವ ಪೆನ್ನಿ ಮೊರ್ಡಾಂಟ್ ಅವರ ಹೆಸರು ಸೇರ್ಪಡೆಗೊಂಡಿದೆ. ರಿಷಿ ಅವರ ಬಳಿಕ ಪ್ರಧಾನಿ … Continued

ಅಧ್ಯಕ್ಷರು ಪಲಾಯನ ಮಾಡುತ್ತಿದ್ದಂತೆ ಶ್ರೀಲಂಕಾ ನೌಕಾಪಡೆಯ ಹಡಗಿನಲ್ಲಿ ಸೂಟ್‌ಕೇಸ್‌ ತುಂಬಲಾಯ್ತು: ಗೊತಬಯ ಎಲ್ಲಿದ್ದಾರೆಂದು ಗೊತ್ತಿಲ್ಲ | ವೀಕ್ಷಿಸಿ

ಕೊಲಂಬೊ: ಶ್ರೀಲಂಕಾ ಅಧ್ಯಕ್ಷ ಗೊತಬಯ ರಾಜಪಕ್ಸೆ ರಾಜೀನಾಮೆಗೆ ಒತ್ತಾಯಿಸಿ ಸಾವಿರಾರು ಸರ್ಕಾರಿ ವಿರೋಧಿ ಪ್ರತಿಭಟನಾಕಾರರು ಶನಿವಾರ ಅವರ ನಿವಾಸಕ್ಕೆ ನುಗ್ಗಿದ್ದರಿಂದ ರಾಜಪಕ್ಸೆ ತಮ್ಮ ಅಧಿಕೃತ ನಿವಾಸದಿಂದ ಪರಾರಿಯಾಗಿದ್ದಾರೆ. ಗೊಂದಲದ ಮಧ್ಯೆ, ಶ್ರೀಲಂಕಾ ನೌಕಾಪಡೆಯ ಹಡಗಿನಲ್ಲಿ ಸೂಟ್‌ಕೇಸ್‌ಗಳನ್ನು ಲೋಡ್ ಮಾಡುತ್ತಿರುವ ವೀಡಿಯೊಗಳು ಹೊರಹೊಮ್ಮಿದವು ಹಾಗೂ ಈ ಸೂಟ್‌ಕೇಸ್‌ಗಳು ಅಧ್ಯಕ್ಷ ರಾಜಪಕ್ಸೆ ಅವರದ್ದು ಎಂದು ಶ್ರೀಲಂಕಾ ಮಾಧ್ಯಮಗಳು ಹೇಳಿಕೊಂಡಿವೆ. … Continued

ಇತಿಹಾಸ ಸೃಷ್ಟಿಸಿದ ಎಲೆನಾ ರೈಬಾಕಿನಾ ಏಶಿಯಾದ ಮೊದಲನೇ ಮಹಿಳಾ ವಿಂಬಲ್ಡನ್ ಚಾಂಪಿಯನ್

ನವದೆಹಲಿ: 17ನೇ ಶ್ರೇಯಾಂಕದ ಆಟಗಾರ್ತಿ ಎಲೆನಾ ರೈಬಾಕಿನಾ ಶನಿವಾರ ನಡೆದ ಮಹಿಳೆಯರ ಸಿಂಗಲ್ಸ್ ವಿಭಾಗದ ಫೈನಲ್‌ನಲ್ಲಿ ಟುನೀಶಿಯಾದ ಓನ್ಸ್ ಜಬೇರ್ ಅವರನ್ನು ಸೋಲಿಸುವ ಮೂಲಕ ಏಷ್ಯಾದ ಮೊದಲ ವಿಂಬಲ್ಡನ್ ಚಾಂಪಿಯನ್ ಆದರು. ಅವರು 1 ಗಂಟೆ, 48 ನಿಮಿಷಗಳ ಕಾಲ ನಡೆದ ಫೈನಲ್‌ನಲ್ಲಿ ಟ್ಯುನಿಷಿಯಾದ ಎದುರಾಳಿಯನ್ನು 3-6, 6-2, 6-2 ಸೆಟ್‌ಗಳಿಂದ ಸೋಲಿಸುವ ಮೂಲಕ ಮೊದಲ … Continued

ಭಾರತ, ಇತರ 4 ದೇಶಗಳ ಉಕ್ರೇನ್‌ ರಾಯಭಾರಿಗಳನ್ನು ವಜಾಗೊಳಿಸಿದ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ

ಕೀವ್:‌ ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಶನಿವಾರ ಜರ್ಮನಿ ಹಾಗೂ ಭಾರತ ಸೇರಿದಂತೆ ಕೆಲವು ದೇಶಗಳ ಉಕ್ರೇನಿನ ಉನ್ನತ ವಿದೇಶಿ ರಾಯಭಾರಿಗಳನ್ನು ವಜಾಗೊಳಿಸಿದ್ದಾರೆ ಎಂದು ಅಧ್ಯಕ್ಷೀಯ ವೆಬ್‌ಸೈಟ್ ತಿಳಿಸಿದೆ. ಈ ಕ್ರಮಕ್ಕೆ ಯಾವುದೇ ಕಾರಣವನ್ನು ನೀಡಿಲ್ಲ. ಜರ್ಮನಿ, ಭಾರತ, ಜೆಕ್ ರಿಪಬ್ಲಿಕ್, ನಾರ್ವೆ ಮತ್ತು ಹಂಗೇರಿಯಲ್ಲಿ ಉಕ್ರೇನ್‌ನ ರಾಯಭಾರಿಗಳನ್ನು ವಜಾಗೊಳಿಸುವುದಾಗಿ ಅವರು ಪ್ರಕಟಿಸಿದ್ದಾರೆ. ರಾಯಭಾರಿಗಳಿಗೆ … Continued

ಶ್ರೀಲಂಕಾ ಬಿಕ್ಕಟ್ಟು ಮತ್ತಷ್ಟು ಉಲ್ಬಣ: ಪ್ರಧಾನಿ ಮನೆಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಬುಧವಾರ ಅಧ್ಯಕ್ಷ ರಾಕಪಕ್ಸೆ ರಾಜೀನಾಮೆ

ಕೊಲಂಬೊ: ಅಭೂತಪೂರ್ವ ಆರ್ಥಿಕ ಬಿಕ್ಕಟ್ಟಿನ ಮಧ್ಯೆ ಶ್ರೀಲಂಕಾ ಅಧ್ಯಕ್ಷ ಗೋತಬಯ ರಾಜಪಕ್ಸೆ ವಿರುದ್ಧ ತಿಂಗಳುಗಳ ಪ್ರತಿಭಟನೆಯ ನಂತರ ಮುಂದಿನ ಬುಧವಾರ (ಜುಲೈ 13) ಅವರು ರಾಜೀನಾಮೆ ನೀಡಲಿದ್ದಾರೆ. ಕೊಲಂಬೊದಲ್ಲಿರುವ ಲಂಕಾ ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರ ಮನೆಗೆ ಪ್ರತಿಭಟನಾಕಾರರು ಇಂದು, ಶನಿವಾರ ಬೆಂಕಿ ಹಚ್ಚಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ‘ಪ್ರತಿಭಟನಾಕಾರರು ಪ್ರಧಾನಿ ರನಿಲ್ ವಿಕ್ರಮಸಿಂಘೆ … Continued

ಶ್ರೀಲಂಕಾ ಬಿಕ್ಕಟ್ಟು: ನಾಯಕರು ರಾಜೀನಾಮೆಗೆ ಒತ್ತಾಯಿಸಿದ ನಂತರ ಶ್ರೀಲಂಕಾ ಪ್ರಧಾನಿ ವಿಕ್ರಮಸಿಂಘೆ ರಾಜೀನಾಮೆ

ಕೊಲಂಬೊ: ಅಧ್ಯಕ್ಷರ ನಿವಾಸ ಮತ್ತು ಕಚೇರಿಗೆ ಪ್ರತಿಭಟನಾಕಾರರು ಮುತ್ತಿಗೆ ಹಾಕಿದ ದಿನದಂದು ಶ್ರೀಲಂಕಾದ ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಅವರು ನಾಯಕರ ಶಿಫಾರಸಿನಂತೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ಟ್ವಿಟ್ಟರ್‌ನಲ್ಲಿ ವಿಕ್ರಮಸಿಂಘೆ, “ಎಲ್ಲಾ ನಾಗರಿಕರ ಸುರಕ್ಷತೆ ಸೇರಿದಂತೆ ಸರ್ಕಾರದ ಮುಂದುವರಿಕೆಯನ್ನು ಖಚಿತಪಡಿಸಿಕೊಳ್ಳಲು ನಾನು ಇಂದು, ಶನಿವಾರ ಪಕ್ಷದ ನಾಯಕರ ಅತ್ಯುತ್ತಮ ಶಿಫಾರಸನ್ನು ಸ್ವೀಕರಿಸುತ್ತೇನೆ, ಸರ್ವಪಕ್ಷ ಸರ್ಕಾರಕ್ಕೆ ದಾರಿ ಮಾಡಿಕೊಡುತ್ತೇನೆ. … Continued

ಅಧ್ಯಕ್ಷ ರಾಜಪಕ್ಸೆ ವಿರುದ್ಧ ಪ್ರತಿಭಟನೆಯಲ್ಲಿ ಪಾಲ್ಗೊಂಡ ಶ್ರೀಲಂಕಾ ಖ್ಯಾತ ಕ್ರಿಕೆಟಿಗ ಸನತ್ ಜಯಸೂರ್ಯ

ಕೋಲಂಬೊ:  ಶ್ರೀಲಂಕಾ ಕ್ರಿಕೆಟ್ ತಂಡದ ಮಾಜಿ ನಾಯಕ ಸನತ್ ಜಯಸೂರ್ಯ ಅವರು ಶನಿವಾರ ಶ್ರೀಲಂಕಾ ಅಧ್ಯಕ್ಷ ಗೋತಬಯ ರಾಜಪಕ್ಸೆ ವಿರುದ್ಧ ಪ್ರತಿಭಟನೆಯಲ್ಲಿ ಪಾಲ್ಗೊಂಡರು. ಟ್ವಿಟರ್‌ನಲ್ಲಿ ಸನತ್ ಜಯಸೂರ್ಯ ಅವರು, “ನಾನು ಯಾವಾಗಲೂ ಶ್ರೀಲಂಕಾದ ಜನರೊಂದಿಗೆ ನಿಲ್ಲುತ್ತೇನೆ ಮತ್ತು ಶೀಘ್ರದಲ್ಲೇ ವಿಜಯವನ್ನು ಆಚರಿಸುತ್ತೇನೆ. ಇದು ಯಾವುದೇ ಉಲ್ಲಂಘನೆಯಿಲ್ಲದೆ ಮುಂದುವರಿಯಬೇಕು ಎಂದು ಹೇಳಿದ್ದಾರೆ. “ಮುತ್ತಿಗೆ ಮುಗಿದಿದೆ. ನಿಮ್ಮ ಭದ್ರಕೋಟೆ … Continued