ಬೆಂಗಳೂರಿನ ಐಐಎಸ್‌ಸಿ ಮೇಲಿನ ದಾಳಿ ರೂವಾರಿ, ಲಷ್ಕರ್-ಎ-ತೊಯ್ಬಾದ ನೊಟೋರಿಯಸ್‌ ಭಯೋತ್ಪಾದಕ ಸೈಫುಲ್ಲಾ ಖಾಲಿದ್‌ ಹತ್ಯೆ

ಇಸ್ಲಾಮಾಬಾದ್: ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪು ಲಷ್ಕರ್-ಎ-ತೈಬಾ (ಎಲ್‌ಇಟಿ) ನ ಉನ್ನತ ಕಮಾಂಡರ್ ಸೈಫುಲ್ಲಾ ಅವರನ್ನು ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ಅಪರಿಚಿತ ದಾಳಿಕೋರರು ಕೊಂದಿದ್ದಾರೆ ಎಂದು ವರದಿಯಾಗಿದೆ. ಈತ ಪಾಕಿಸ್ತಾನದ ಸಿಂಧ್‌ನ ಬಾಡಿನ್ ಜಿಲ್ಲೆಯಲ್ಲಿ ಕೊಲ್ಲಲ್ಪಟ್ಟ. ಮೂಲಗಳ ಪ್ರಕಾರ, ಭಾನುವಾರ ಸಿಂಧ್‌ನ ಬಾಡಿನ್ ಜಿಲ್ಲೆಯ ಮಟ್ಲಿ ತಾಲೂಕಿನಲ್ಲಿ ಸೈಫುಲ್ಲಾ ಕೊಲ್ಲಲ್ಪಟ್ಟ. ಈತನ ಸಾವು ಈ ಪ್ರದೇಶದಲ್ಲಿ … Continued

ಭಾರತೀಯ ಸಂಜಾತ ಲೇಖಕ ಸಲ್ಮಾನ್ ರಶ್ದಿ ಇರಿದ ವ್ಯಕ್ತಿಗೆ 25 ವರ್ಷ ಜೈಲು ಶಿಕ್ಷೆ

ನ್ಯೂಯಾರ್ಕ್: 2022 ರಲ್ಲಿ ನ್ಯೂಯಾರ್ಕ್ ಉಪನ್ಯಾಸ ವೇದಿಕೆಯಲ್ಲಿ ಖ್ಯಾತ ಲೇಖಕ ಹಾಗೂ ಭಾರತದ ಸಂಜಾತ ಸಲ್ಮಾನ್ ರಶ್ದಿ ಅವರನ್ನು ಇರಿದು, ಅವರ ಒಂದು ಕಣ್ಣನ್ನು ಕುರುಡನನ್ನಾಗಿ ಮಾಡಿದ ಆರೋಪದ ಮೇಲೆ ಶಿಕ್ಷೆಗೊಳಗಾದ ವ್ಯಕ್ತಿಗೆ ಶುಕ್ರವಾರ 25 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಯಿತು. 27 ವರ್ಷದ ಹಾದಿ ಮತರ್ ಎಂಬಾತನನ್ನು ಕೊಲೆ ಯತ್ನ ಮತ್ತು ಹಲ್ಲೆಯ ಆರೋಪದಲ್ಲಿ … Continued

ಸಂಸತ್ತಿನಲ್ಲಿ ಪಾಕಿಸ್ತಾನ ವಾಯುಪಡೆ ಹೊಗಳಲು ʼನಕಲಿ ಸುದ್ದಿʼ ಉಲ್ಲೇಖಿಸಿ ತಮ್ಮ ದೇಶದ ಮಾಧ್ಯಮಗಳಿಂದಲೇ ನಗೆಪಾಟಲಿಗೀಡಾದ ಪಾಕ್‌ ಉಪಪ್ರಧಾನಿ..!

ಆಪರೇಶನ್‌ ಸಿಂಧೂರ ಕಾರ್ಯಾಚರಣೆಯ ನಂತರ ಪಾಕಿಸ್ತಾನಕ್ಕೆ ಹಿನ್ನಡೆಯಾಗಿದ್ದು, ಅದನ್ನು ಒಪ್ಪಕೊಳ್ಳದ ಪಾಕಿಸ್ತಾನದ ಈಗ ಪದೇಪದೇ ಮುಜುಗರಕ್ಕೆ ಒಳಗಾಗುತ್ತಿದೆ. ಈಗ ಪಾಕಿಸ್ತಾನಕ್ಕೆ ಅದರ ಉಪಪ್ರಧಾನಿಯೇ ಮತ್ತೊಂದು ಮುಜುಗರಕ್ಕೆ ಕಾರಣರಾಗಿದ್ದಾರೆ. ಪಾಕಿಸ್ತಾನದ ಉಪ ಪ್ರಧಾನಮಂತ್ರಿ ಮತ್ತು ವಿದೇಶಾಂಗ ಸಚಿವರಾದ ಇಶಾಕ್ ದಾರ್ ಅವರು ಸೆನೆಟ್ ಅನ್ನು ಉದ್ದೇಶಿಸಿ ಮಾಡಿದ ಭಾಷಣದಲ್ಲಿ ನಕಲಿ ಸುದ್ದಿಯನ್ನು ಉಲ್ಲೇಖಿಸಿ ತನ್ನ ದೇಶದಲ್ಲೇ ನಗೆಪಾಟಲಿಗೆ … Continued

ಪಾಕಿಸ್ತಾನ ತುಂಡಾಗುತ್ತಾ..? ಪಾಕ್‌ ನಿಂದ ಸ್ವಾತಂತ್ರ್ಯ ಘೋಷಿಸಿಕೊಂಡ ಬಲೂಚ್ ನಾಯಕರು…! ಮಾನ್ಯತೆ ನೀಡಲು ಭಾರತ, ವಿಶ್ವಸಂಸ್ಥೆಗೆ ಒತ್ತಾಯ

ಕ್ವೆಟ್ಟಾ: ದಶಕಗಳ ಕಾಲದ ಹಿಂಸಾಚಾರ, ಬಲವಂತದ ಕಣ್ಮರೆಗಳು ಮತ್ತು ಈ ಪ್ರದೇಶದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯನ್ನು ಉಲ್ಲೇಖಿಸಿ, ಬಲೂಚಿಸ್ತಾನ ಪಾಕಿಸ್ತಾನದಿಂದ ಸ್ವಾತಂತ್ರ್ಯ ಪಡೆದಿದೆ ಎಂದು ಬಲೂಚಿಸ್ತಾನ ನಾಯಕ ಮೀರ್ ಯಾರ್ ಬಲೂಚ್ ಘೋಷಿಸಿದ್ದಾರೆ. ಭಾರತೀಯ ನಾಗರಿಕರು, ವಿಶೇಷವಾಗಿ ಮಾಧ್ಯಮಗಳು, ಯೂಟ್ಯೂಬರ್‌ಗಳು ಮತ್ತು ಬುದ್ಧಿಜೀವಿಗಳು ಬಲೂಚಿಸ್ತಾನದವರನ್ನು “ಪಾಕಿಸ್ತಾನಿಗಳು” ಎಂದು ಕರೆಯುವುದು ಬೇಡ ಎಂದು ಒತ್ತಾಯಿಸಿದ್ದಾರೆ. ನಾವು ಪಾಕಿಸ್ತಾನದವರಲ್ಲ … Continued

ಟೆಕ್‌ ದೈತ್ಯ ಮೈಕ್ರೋಸಾಫ್ಟ್‌ ನಿಂದ 6,000 ಉದ್ಯೋಗಿಗಳ ವಜಾ : ಎಐ (AI) ನಿರ್ದೇಶಕರಿಗೂ ಉದ್ಯೋಗ ನಷ್ಟ

ಇತ್ತೀಚಿನ ವಜಾಗೊಳಿಸುವಿಕೆಯಲ್ಲಿ, ಟೆಕ್‌ ದೈತ್ಯ ಮೈಕ್ರೋಸಾಫ್ಟ್ ಕಂಪನಿ ಸುಮಾರು 6,000 ಉದ್ಯೋಗಿಗಳನ್ನು ಅಥವಾ ಅದರ ಒಟ್ಟು ಉದ್ಯೋಗಿಗಳಲ್ಲಿ 3% ರಷ್ಟು ಜನರನ್ನು ಕೆಲಸದಿಂದ ತೆಗೆದುಹಾಕಿದೆ. ಅನೇಕ ಉದ್ಯೋಗಿಗಳನ್ನು ತಕ್ಷಣವೇ ಹೊರಹೋಗುವಂತೆ ಸೂಚಿಸಲಾಗಿದೆ. “ನಮ್ಮನ್ನು ತಕ್ಷಣ ಕೆಲಸ ನಿಲ್ಲಿಸಲು ಮತ್ತು ಕಚೇರಿಯಿಂದ ಹೊರಗೆ ಹೋಗಲು (ಅಧಿಸೂಚನೆ) ಸೂಚಿಸಲಾಯಿತು. ಆದರೆ ನಾನು ಸ್ವಲ್ಪ ಸಮಯ ಇರಲು ನಿರ್ಧರಿಸಿದೆ – … Continued

ಆಪರೇಶನ್‌ ಸಿಂಧೂರ | ಪಾಕಿಸ್ತಾನ ಅಣ್ವಸ್ತ್ರ ಸಂಗ್ರಹ ಘಟಕಕ್ಕೆ ಹಾನಿಯಾಯ್ತೆ : ಈಜಿಪ್ಟಿನಿಂದ ಬೋರಾನ್‌ ಆಮದು..? ಏನಿದು ರಾಸಾಯನಿಕ…

ಇಸ್ಲಾಮಾಬಾದ್: ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆ ಬಳಿಕ ನಡೆದ ಭಾರತ ಮತ್ತು ಪಾಕಿಸ್ತಾನ ಸೇನಾ ಸಂಘರ್ಷದಲ್ಲಿ ಪಾಕಿಸ್ತಾನಕ್ಕೆ ಮರ್ಮಾಘಾತ ನೀಡಿರುವ ಭಾರತ ಪಾಕಿಸ್ತಾನದ ಅಣ್ವಸ್ತ್ರ ಶೇಖರಣಾ ಕೇಂದ್ರಗಳ ಮೇಲೂ ಕ್ಷಿಪಣಿ ಮಾಡಿದೆ ಎಂದು ಕೆಲವು ವರದಿಗಳು ಹೇಳುತ್ತಿದ್ದು, ಈ ಪ್ರದೇಶದಲ್ಲಿ ವಿಕಿರಣ ಸೋರಿಕೆ ಸಮಸ್ಯೆಯಾಗಿದೆ ಎಂದು ಹೇಳಲಾಗಿದೆ. … Continued

ಭಯೋತ್ಪಾದಕರ ಅಂತ್ಯಕ್ರಿಯೆ ನೇತೃತ್ವ ವಹಿಸಿದ್ದ ಘೋಷಿತ ಭಯೋತ್ಪಾದಕನನ್ನು ‘ಕೌಟುಂಬಿಕ ವ್ಯಕ್ತಿ’-‘ಧರ್ಮ ಪ್ರಚಾರಕ’ ಎಂದ ಪಾಕಿಸ್ತಾನ ಸೇನೆ…!

ನವದೆಹಲಿ: ಆಪರೇಷನ್ ಸಿಂಧೂರ ಕಾರ್ಯಾಚರಣೆ ವೇಳೆ ಭಾರತೀಯ ವೈಮಾನಿಕ ದಾಳಿಯಲ್ಲಿ ಕೊಲ್ಲಲ್ಪಟ್ಟ ಭಯೋತ್ಪಾದಕರ ಅಂತ್ಯಕ್ರಿಯೆಯ ನೇತೃತ್ವ ವಹಿಸಿದ್ದ, ಅಮೆರಿಕದಿಂದ ಘೋಷಿತ ಜಾಗತಿಕ ಭಯೋತ್ಪಾದಕ ಹಫೀಜ್ ಅಬ್ದುರ್ ರೌಫ್ ಒಬ್ಬ ಸಾಮಾನ್ಯ ನಾಗರಿಕ ಎಂದು ಪಾಕಿಸ್ತಾನಿ ಸಶಸ್ತ್ರ ಪಡೆಗಳು ಹೇಳಿಕೊಂಡಿವೆ…! ಪಾಕಿಸ್ತಾನದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ಡಿಜಿ ಐಎಸ್‌ಪಿಆರ್) ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ, … Continued

ಜಿನೀವಾ ಮಾತುಕತೆಯ ನಂತರ ಅಮೆರಿಕ-ಚೀನಾ ಮಧ್ಯೆ ವ್ಯಾಪಾರ ಒಪ್ಪಂದ

ಜಿನೀವಾ: ಹಾನಿಕಾರಕ ವ್ಯಾಪಾರ ಯುದ್ಧವನ್ನು ತಗ್ಗಿಸಲು ಚೀನಾದ ಉನ್ನತ ಆರ್ಥಿಕ ಅಧಿಕಾರಿಗಳೊಂದಿಗೆ ಅಮೆರಿಕ ನಡೆಸಿದ ಮಾತುಕತೆಗಳಲ್ಲಿ “ಗಣನೀಯ ಪ್ರಗತಿ” ಕಂಡುಬಂದಿದೆ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಭಾನುವಾರ ವರದಿ ಮಾಡಿದ್ದಾರೆ. ಆದರೆ ಜಿನೀವಾದಲ್ಲಿ ಎರಡು ದಿನಗಳ ಮಾತುಕತೆಗಳು ಮುಕ್ತಾಯಗೊಂಡ ನಂತರ ತಲುಪಿದ ಒಪ್ಪಂದದ ಬಗ್ಗೆ ವಿವರಗಳನ್ನು ನೀಡಿಲ್ಲ. ಸೋಮವಾರ ವಿವರಗಳನ್ನು ಪ್ರಕಟಿಸಲಾಗುವುದು ಮತ್ತು … Continued

ಪದಚ್ಯುತ ಮಾಜಿ ಪ್ರಧಾನಿ ಹಸೀನಾ ಪಕ್ಷ ಅವಾಮಿ ಲೀಗ್‌ ನಿಷೇಧಕ್ಕೆ ಮುಂದಾದ ಬಾಂಗ್ಲಾದೇಶದ ಮಧ್ಯಂತರ ಸರ್ಕಾರ

ಢಾಕಾ : ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರ ಅವಾಮಿ ಲೀಗ್ ಅನ್ನು ನಿಷೇಧಿಸುವ ಬಗ್ಗೆ “ತ್ವರಿತ ನಿರ್ಧಾರ” ತೆಗೆದುಕೊಳ್ಳುವುದಾಗಿ ಬಾಂಗ್ಲಾದೇಶದ ಮಧ್ಯಂತರ ಸರ್ಕಾರ ಶುಕ್ರವಾರ ಹೇಳಿದೆ. ಹಸೀನಾ ಅವರ ಪಕ್ಷವನ್ನು ವಿಸರ್ಜಿಸುವಂತೆ ಒತ್ತಾಯಿಸಿ ವಿದ್ಯಾರ್ಥಿ ನೇತೃತ್ವದ ಹೊಸದಾಗಿ ರಚನೆಯಾದ ರಾಷ್ಟ್ರೀಯ ನಾಗರಿಕ ಪಕ್ಷದ (ಎನ್‌ಸಿಪಿ) ಕಾರ್ಯಕರ್ತರು ರಾತ್ರೋರಾತ್ರಿ ಅವರ ಅಧಿಕೃತ ನಿವಾಸದ ಮುಂದೆ ರ್ಯಾಲಿ … Continued

ಪಾಕಿಸ್ತಾನ ಸೇನೆಯ ವಕ್ತಾರ ಅಹ್ಮದ್ ಶರೀಫ್ ಚೌಧರಿ ವಿಶ್ವಸಂಸ್ಥೆಯಿಂದ ಘೋಷಿತ ಭಯೋತ್ಪಾದಕನ ಮಗ…!

ಪಾಕಿಸ್ತಾನದ ಮಿಲಿಟರಿಯು ಜಿಹಾದಿ ಮತ್ತು ಭಯೋತ್ಪಾದಕ ಅಂಶಗಳಿಂದ ಬೇರ್ಪಡಿಸಲಾಗದಂತೆ ಹೆಣೆದುಕೊಂಡಿದೆ ಎಂಬುದಕ್ಕೆ ಒಂದು ಪ್ರಮುಖ ಉದಾಹರಣೆಯೆಂದರೆ, ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR)ನ ಮಹಾನಿರ್ದೇಶಕರಾದ ತ್ರಿ-ಸ್ಟಾರ್‌ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ. ಭಾರತ-ಪಾಕಿಸ್ತಾನ ಮಿಲಿಟರಿ ಬಿಕ್ಕಟ್ಟಿನ ಬಗ್ಗೆ ಜಗತ್ತಿಗೆ ಮಾಹಿತಿ ನೀಡುತ್ತಿರುವ ಚೌಧರಿ, ಅಲ್-ಖೈದಾ ಮುಖ್ಯಸ್ಥ ಒಸಾಮಾ ಬಿನ್ ಲಾಡೆನ್ ಅವರ ಸಹಾಯಕರಾಗಿದ್ದ ಘೋಷಿತ ಭಯೋತ್ಪಾದಕ … Continued