2024ರಲ್ಲಿ ಸತ್ಯ ನಾಡೆಲ್ಲಾ, ಪಿಚೈ ಹಿಂದಿಕ್ಕಿ ದಾಖಲೆಯ 1,157 ಕೋಟಿ ರೂ. ಪಡೆದ ಭಾರತೀಯ ಮೂಲದ ಟೆಸ್ಲಾ ಕಾರ್ಯನಿರ್ವಾಹಕ ಅಧಿಕಾರಿ…!

ಟೆಸ್ಲಾ ಕಂಪನಿಯ ಭಾರತೀಯ ಮೂಲದ ಮುಖ್ಯ ಹಣಕಾಸು ಅಧಿಕಾರಿ ವೈಭವ್ ತನೇಜಾ ಅವರು 2024 ರಲ್ಲಿ $139 ಮಿಲಿಯನ್ (ಸುಮಾರು ರೂ. 1,157 ಕೋಟಿ) ಪಡೆದಿದ್ದಾರೆ. 2023 ರ ಬಡ್ತಿಯ ನಂತರದ ಅವರ ವೇತನ ಪ್ಯಾಕೇಜ್, ಷೇರು ಆಯ್ಕೆಗಳು ಮತ್ತು ಇಕ್ವಿಟಿಗಳಿಂದಾಗಿ ಹೆಚ್ಚಿನ ಹಣ ಪಡೆದಿದ್ದಾರೆ. ಇದು ಹಲವಾರು ಉನ್ನತ ಟೆಕ್‌ಕಂಪನಿಗಳ ಸಿಇಒಗಳ ಗಳಿಕೆಯನ್ನು ಮೀರಿಸಿದೆ. … Continued

ಆಪರೇಷನ್ ಸಿಂಧೂರ | ಭಾರತದ ವಿರುದ್ಧ ಸೋಲಿನ ನಂತರವೂ ಪಾಕಿಸ್ತಾನದ ಸೇನಾ ಮುಖ್ಯಸ್ಥನಿಗೆ ಅತ್ಯುನ್ನತ ಮಿಲಿಟರಿ ಹುದ್ದೆಗೆ ಬಡ್ತಿ…!

ನವದೆಹಲಿ: ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಅವರನ್ನು ಫೀಲ್ಡ್ ಮಾರ್ಷಲ್ ಎಂಬ ಅತ್ಯುನ್ನತ ಮಿಲಿಟರಿ ಹುದ್ದೆಗೆ ಬಡ್ತಿ ನೀಡಲಾಗಿದೆ – ಇದು ಅಪರೂಪದ ಸಂದರ್ಭಗಳಲ್ಲಿ ಮತ್ತು ಸಶಸ್ತ್ರ ಪಡೆಗಳಲ್ಲಿ ತಮ್ಮ ವೃತ್ತಿಜೀವನದುದ್ದಕ್ಕೂ ಅದ್ಭುತ ಕಾರ್ಯಾಚರಣೆ ದಾಖಲೆಯನ್ನು ಸಾಧಿಸಿದ ನಂತರ ಮಾತ್ರ ನೀಡಲಾಗುವ ಗೌರವವಾಗಿದೆ. ಆದರೆ ಭಾರತದ ಆಪರೇಶನ್‌ ಸಿಂಧೂರ ಕಾರ್ಯಾಚರಣೆಯಲ್ಲಿ ಸೈನ್ಯದ ಹಿನ್ನಡೆಯ … Continued

ಆಪರೇಶನ್‌ ಸಿಂಧೂರ ಪರಿಣಾಮ : ಪಾಕಿಸ್ತಾನಕ್ಕೆ 11 ಹೊಸ ಷರತ್ತು ವಿಧಿಸಿದ ಐಎಂಎಫ್‌

ಇಸ್ಲಾಮಾಬಾದ್: ಅಂತಾರಾಷ್ಟ್ರೀಯ ಹಣಕಾಸು ನಿಧಿ (IMF) ತನ್ನ ಬೇಲ್‌ಔಟ್ ಕಾರ್ಯಕ್ರಮದ ಮುಂದಿನ ಕಂತನ್ನು ಬಿಡುಗಡೆ ಮಾಡಲು ಪಾಕಿಸ್ತಾನಕ್ಕೆ 11 ಹೊಸ ಷರತ್ತುಗಳನ್ನು ವಿಧಿಸಿದೆ ಮತ್ತು ಭಾರತದ ಜೊತೆಗೆ ಸಂಘರ್ಷವು ಯೋಜನೆಯ ಹಣಕಾಸು, ಬಾಹ್ಯ ಮತ್ತು ಸುಧಾರಣಾ ಉದ್ದೇಶಗಳಿಗೆ ಅಪಾಯ ಹೆಚ್ಚಿಸಬಹುದು ಎಂದು ಭಾನುವಾರ ಮಾಧ್ಯಮ ವರದಿಯೊಂದು ತಿಳಿಸಿದೆ. ಪಾಕಿಸ್ತಾನದ ಮೇಲೆ ವಿಧಿಸಲಾದ ಹೊಸ ಷರತ್ತುಗಳಲ್ಲಿ 17.6 … Continued

ಬೆಂಗಳೂರಿನ ಐಐಎಸ್‌ಸಿ ಮೇಲಿನ ದಾಳಿ ರೂವಾರಿ, ಲಷ್ಕರ್-ಎ-ತೊಯ್ಬಾದ ನೊಟೋರಿಯಸ್‌ ಭಯೋತ್ಪಾದಕ ಸೈಫುಲ್ಲಾ ಖಾಲಿದ್‌ ಹತ್ಯೆ

ಇಸ್ಲಾಮಾಬಾದ್: ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪು ಲಷ್ಕರ್-ಎ-ತೈಬಾ (ಎಲ್‌ಇಟಿ) ನ ಉನ್ನತ ಕಮಾಂಡರ್ ಸೈಫುಲ್ಲಾ ಅವರನ್ನು ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ಅಪರಿಚಿತ ದಾಳಿಕೋರರು ಕೊಂದಿದ್ದಾರೆ ಎಂದು ವರದಿಯಾಗಿದೆ. ಈತ ಪಾಕಿಸ್ತಾನದ ಸಿಂಧ್‌ನ ಬಾಡಿನ್ ಜಿಲ್ಲೆಯಲ್ಲಿ ಕೊಲ್ಲಲ್ಪಟ್ಟ. ಮೂಲಗಳ ಪ್ರಕಾರ, ಭಾನುವಾರ ಸಿಂಧ್‌ನ ಬಾಡಿನ್ ಜಿಲ್ಲೆಯ ಮಟ್ಲಿ ತಾಲೂಕಿನಲ್ಲಿ ಸೈಫುಲ್ಲಾ ಕೊಲ್ಲಲ್ಪಟ್ಟ. ಈತನ ಸಾವು ಈ ಪ್ರದೇಶದಲ್ಲಿ … Continued

ಭಾರತೀಯ ಸಂಜಾತ ಲೇಖಕ ಸಲ್ಮಾನ್ ರಶ್ದಿ ಇರಿದ ವ್ಯಕ್ತಿಗೆ 25 ವರ್ಷ ಜೈಲು ಶಿಕ್ಷೆ

ನ್ಯೂಯಾರ್ಕ್: 2022 ರಲ್ಲಿ ನ್ಯೂಯಾರ್ಕ್ ಉಪನ್ಯಾಸ ವೇದಿಕೆಯಲ್ಲಿ ಖ್ಯಾತ ಲೇಖಕ ಹಾಗೂ ಭಾರತದ ಸಂಜಾತ ಸಲ್ಮಾನ್ ರಶ್ದಿ ಅವರನ್ನು ಇರಿದು, ಅವರ ಒಂದು ಕಣ್ಣನ್ನು ಕುರುಡನನ್ನಾಗಿ ಮಾಡಿದ ಆರೋಪದ ಮೇಲೆ ಶಿಕ್ಷೆಗೊಳಗಾದ ವ್ಯಕ್ತಿಗೆ ಶುಕ್ರವಾರ 25 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಯಿತು. 27 ವರ್ಷದ ಹಾದಿ ಮತರ್ ಎಂಬಾತನನ್ನು ಕೊಲೆ ಯತ್ನ ಮತ್ತು ಹಲ್ಲೆಯ ಆರೋಪದಲ್ಲಿ … Continued

ಸಂಸತ್ತಿನಲ್ಲಿ ಪಾಕಿಸ್ತಾನ ವಾಯುಪಡೆ ಹೊಗಳಲು ʼನಕಲಿ ಸುದ್ದಿʼ ಉಲ್ಲೇಖಿಸಿ ತಮ್ಮ ದೇಶದ ಮಾಧ್ಯಮಗಳಿಂದಲೇ ನಗೆಪಾಟಲಿಗೀಡಾದ ಪಾಕ್‌ ಉಪಪ್ರಧಾನಿ..!

ಆಪರೇಶನ್‌ ಸಿಂಧೂರ ಕಾರ್ಯಾಚರಣೆಯ ನಂತರ ಪಾಕಿಸ್ತಾನಕ್ಕೆ ಹಿನ್ನಡೆಯಾಗಿದ್ದು, ಅದನ್ನು ಒಪ್ಪಕೊಳ್ಳದ ಪಾಕಿಸ್ತಾನದ ಈಗ ಪದೇಪದೇ ಮುಜುಗರಕ್ಕೆ ಒಳಗಾಗುತ್ತಿದೆ. ಈಗ ಪಾಕಿಸ್ತಾನಕ್ಕೆ ಅದರ ಉಪಪ್ರಧಾನಿಯೇ ಮತ್ತೊಂದು ಮುಜುಗರಕ್ಕೆ ಕಾರಣರಾಗಿದ್ದಾರೆ. ಪಾಕಿಸ್ತಾನದ ಉಪ ಪ್ರಧಾನಮಂತ್ರಿ ಮತ್ತು ವಿದೇಶಾಂಗ ಸಚಿವರಾದ ಇಶಾಕ್ ದಾರ್ ಅವರು ಸೆನೆಟ್ ಅನ್ನು ಉದ್ದೇಶಿಸಿ ಮಾಡಿದ ಭಾಷಣದಲ್ಲಿ ನಕಲಿ ಸುದ್ದಿಯನ್ನು ಉಲ್ಲೇಖಿಸಿ ತನ್ನ ದೇಶದಲ್ಲೇ ನಗೆಪಾಟಲಿಗೆ … Continued

ಪಾಕಿಸ್ತಾನ ತುಂಡಾಗುತ್ತಾ..? ಪಾಕ್‌ ನಿಂದ ಸ್ವಾತಂತ್ರ್ಯ ಘೋಷಿಸಿಕೊಂಡ ಬಲೂಚ್ ನಾಯಕರು…! ಮಾನ್ಯತೆ ನೀಡಲು ಭಾರತ, ವಿಶ್ವಸಂಸ್ಥೆಗೆ ಒತ್ತಾಯ

ಕ್ವೆಟ್ಟಾ: ದಶಕಗಳ ಕಾಲದ ಹಿಂಸಾಚಾರ, ಬಲವಂತದ ಕಣ್ಮರೆಗಳು ಮತ್ತು ಈ ಪ್ರದೇಶದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯನ್ನು ಉಲ್ಲೇಖಿಸಿ, ಬಲೂಚಿಸ್ತಾನ ಪಾಕಿಸ್ತಾನದಿಂದ ಸ್ವಾತಂತ್ರ್ಯ ಪಡೆದಿದೆ ಎಂದು ಬಲೂಚಿಸ್ತಾನ ನಾಯಕ ಮೀರ್ ಯಾರ್ ಬಲೂಚ್ ಘೋಷಿಸಿದ್ದಾರೆ. ಭಾರತೀಯ ನಾಗರಿಕರು, ವಿಶೇಷವಾಗಿ ಮಾಧ್ಯಮಗಳು, ಯೂಟ್ಯೂಬರ್‌ಗಳು ಮತ್ತು ಬುದ್ಧಿಜೀವಿಗಳು ಬಲೂಚಿಸ್ತಾನದವರನ್ನು “ಪಾಕಿಸ್ತಾನಿಗಳು” ಎಂದು ಕರೆಯುವುದು ಬೇಡ ಎಂದು ಒತ್ತಾಯಿಸಿದ್ದಾರೆ. ನಾವು ಪಾಕಿಸ್ತಾನದವರಲ್ಲ … Continued

ಟೆಕ್‌ ದೈತ್ಯ ಮೈಕ್ರೋಸಾಫ್ಟ್‌ ನಿಂದ 6,000 ಉದ್ಯೋಗಿಗಳ ವಜಾ : ಎಐ (AI) ನಿರ್ದೇಶಕರಿಗೂ ಉದ್ಯೋಗ ನಷ್ಟ

ಇತ್ತೀಚಿನ ವಜಾಗೊಳಿಸುವಿಕೆಯಲ್ಲಿ, ಟೆಕ್‌ ದೈತ್ಯ ಮೈಕ್ರೋಸಾಫ್ಟ್ ಕಂಪನಿ ಸುಮಾರು 6,000 ಉದ್ಯೋಗಿಗಳನ್ನು ಅಥವಾ ಅದರ ಒಟ್ಟು ಉದ್ಯೋಗಿಗಳಲ್ಲಿ 3% ರಷ್ಟು ಜನರನ್ನು ಕೆಲಸದಿಂದ ತೆಗೆದುಹಾಕಿದೆ. ಅನೇಕ ಉದ್ಯೋಗಿಗಳನ್ನು ತಕ್ಷಣವೇ ಹೊರಹೋಗುವಂತೆ ಸೂಚಿಸಲಾಗಿದೆ. “ನಮ್ಮನ್ನು ತಕ್ಷಣ ಕೆಲಸ ನಿಲ್ಲಿಸಲು ಮತ್ತು ಕಚೇರಿಯಿಂದ ಹೊರಗೆ ಹೋಗಲು (ಅಧಿಸೂಚನೆ) ಸೂಚಿಸಲಾಯಿತು. ಆದರೆ ನಾನು ಸ್ವಲ್ಪ ಸಮಯ ಇರಲು ನಿರ್ಧರಿಸಿದೆ – … Continued

ಆಪರೇಶನ್‌ ಸಿಂಧೂರ | ಪಾಕಿಸ್ತಾನ ಅಣ್ವಸ್ತ್ರ ಸಂಗ್ರಹ ಘಟಕಕ್ಕೆ ಹಾನಿಯಾಯ್ತೆ : ಈಜಿಪ್ಟಿನಿಂದ ಬೋರಾನ್‌ ಆಮದು..? ಏನಿದು ರಾಸಾಯನಿಕ…

ಇಸ್ಲಾಮಾಬಾದ್: ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆ ಬಳಿಕ ನಡೆದ ಭಾರತ ಮತ್ತು ಪಾಕಿಸ್ತಾನ ಸೇನಾ ಸಂಘರ್ಷದಲ್ಲಿ ಪಾಕಿಸ್ತಾನಕ್ಕೆ ಮರ್ಮಾಘಾತ ನೀಡಿರುವ ಭಾರತ ಪಾಕಿಸ್ತಾನದ ಅಣ್ವಸ್ತ್ರ ಶೇಖರಣಾ ಕೇಂದ್ರಗಳ ಮೇಲೂ ಕ್ಷಿಪಣಿ ಮಾಡಿದೆ ಎಂದು ಕೆಲವು ವರದಿಗಳು ಹೇಳುತ್ತಿದ್ದು, ಈ ಪ್ರದೇಶದಲ್ಲಿ ವಿಕಿರಣ ಸೋರಿಕೆ ಸಮಸ್ಯೆಯಾಗಿದೆ ಎಂದು ಹೇಳಲಾಗಿದೆ. … Continued

ಭಯೋತ್ಪಾದಕರ ಅಂತ್ಯಕ್ರಿಯೆ ನೇತೃತ್ವ ವಹಿಸಿದ್ದ ಘೋಷಿತ ಭಯೋತ್ಪಾದಕನನ್ನು ‘ಕೌಟುಂಬಿಕ ವ್ಯಕ್ತಿ’-‘ಧರ್ಮ ಪ್ರಚಾರಕ’ ಎಂದ ಪಾಕಿಸ್ತಾನ ಸೇನೆ…!

ನವದೆಹಲಿ: ಆಪರೇಷನ್ ಸಿಂಧೂರ ಕಾರ್ಯಾಚರಣೆ ವೇಳೆ ಭಾರತೀಯ ವೈಮಾನಿಕ ದಾಳಿಯಲ್ಲಿ ಕೊಲ್ಲಲ್ಪಟ್ಟ ಭಯೋತ್ಪಾದಕರ ಅಂತ್ಯಕ್ರಿಯೆಯ ನೇತೃತ್ವ ವಹಿಸಿದ್ದ, ಅಮೆರಿಕದಿಂದ ಘೋಷಿತ ಜಾಗತಿಕ ಭಯೋತ್ಪಾದಕ ಹಫೀಜ್ ಅಬ್ದುರ್ ರೌಫ್ ಒಬ್ಬ ಸಾಮಾನ್ಯ ನಾಗರಿಕ ಎಂದು ಪಾಕಿಸ್ತಾನಿ ಸಶಸ್ತ್ರ ಪಡೆಗಳು ಹೇಳಿಕೊಂಡಿವೆ…! ಪಾಕಿಸ್ತಾನದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ಡಿಜಿ ಐಎಸ್‌ಪಿಆರ್) ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ, … Continued