ಸಿದ್ದಾಪುರ : ಅಖಿಲ ಭಾರತೀಯ ಸಾಹಿತ್ಯ ಪರಿಷದ್ ತಾಲೂಕು ಸಮಿತಿ ಪದಾಧಿಕಾರಿಗಳ ಪದಗ್ರಹಣ

ಸಿದ್ದಾಪುರ : ಅಖಿಲ ಭಾರತೀಯ ಸಾಹಿತ್ಯ ಪರಿಷದ್ ನ ಶಿರಸಿ ಜಿಲ್ಲೆಯ ಸಿದ್ದಾಪುರ ತಾಲೂಕು ಸಮಿತಿಯ ಪದಾಧಿಕಾರಿಗಳ ಪದಗ್ರಹಣ ಮತ್ತು ಶ್ರಾವಣ ಮಾಸದ ನಿಮಿತ್ತ ಶ್ರೀರಾಮ ಭಜನೆ ಕಾರ್ಯಕ್ರಮ ಸಿದ್ದಾಪುರದ ಶ್ರೀ ರಾಘವೇಂದ್ರ ಮಠದಲ್ಲಿ ಶನಿವಾರ (ಆಗಸ್ಟ್ 31) ಸಂಜೆ ನಡೆಯಿತು. ಜಿ . ಎಸ್.ಬಿ. ಸಮಾಜದ ಅಧ್ಯಕ್ಷರಾದ ಜಯವಂತ ಪದ್ಮನಾಭ ಶಾನಭಾಗ್, ಸಂಘಟನೆಯ ರಾಜ್ಯ … Continued

ಅರುಂಧತಿ ಅನಂತ ಹೆಗಡೆ ಕೊಳಗಿ ನಿಧನ

ಸಿದ್ದಾಪುರ : ಖ್ಯಾತ ಯಕ್ಷಗಾನದ ಕಲಾವಿದ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ದಿವಂಗತ ಅನಂತ ಹೆಗಡೆ ಕೊಳಗಿ ಅವರ ಪತ್ನಿ ಅರುಂಧತಿ ಅನಂತ ಹೆಗಡೆ (೮೨) ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಸ್ವಲ್ಪಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಶನಿವಾರ ನಿಧನರಾಗಿದ್ದಾರೆ. ಮೃತರು ಯಕ್ಷಗಾನದ ಪ್ರಸಿದ್ಧ ಭಾಗವತ ಕೇಶವ ಹೆಗಡೆ ಕೊಳಗಿ ಸೇರಿದಂತೆ ಮೂವರು ಪುತ್ರರು, ಮೂವರು … Continued

ಕುಮಟಾ : ಜೂನ್‌ 21ರಂದು ವಿಶ್ವ ಸಂಗೀತ ದಿನಾಚರಣೆ ವಿಶೇಷ ಕಾರ್ಯಕ್ರಮ

ಕುಮಟಾ : ವಿಶ್ವ ಸಂಗೀತ ದಿನಾಚರಣೆ ಅಂಗವಾಗಿ ಕುಮಟಾದ ಗಂಧರ್ವ ಕಲಾ ಕೇಂದ್ರದ ವಿದ್ಯಾರ್ಥಿಗಳಿಂದ ವಿಶೇಷ ಕಾರ್ಯಕ್ರಮವನ್ನು ಜೂನ್‌ 21ರಂದು ಸಂಜೆ 4:30ರಿಂದ ಪಟ್ಟಣದ ವೈಭವ ಹೊಟೇಲ್‌ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಕುಮಟಾದ ಗಂಧರ್ವ ಕಲಾ ಕೇಂದ್ರದ ವಿದ್ಯಾರ್ಥಿಗಳಿಂದ ಸಂಗೀತ, ಭಜನೆ, ಭಾವಗೀತೆ ಹಾಗೂ ಕೊಳಲು ವಾದನ ಕಾರ್ಯಕ್ರಮ ನಡೆಯಲಿದ್ದು, ಸಂಗೀತಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು … Continued

ಬಾಡ -ಗುಡೆಅಂಗಡಿ ಹವ್ಯಕ ವಲಯದ ವಾರ್ಷಿಕೋತ್ಸವ ; ನರಸಿಂಹ ಭಟ್ಟರಿಗೆ ಸನ್ಮಾನ

ಕುಮಟಾ : ಹವ್ಯಕರ ಭಾಷೆ, ಸಂಪ್ರದಾಯಗಳು ಸೊಗಸು, ಸೊಗಡಿನಿಂದ ಕೂಡಿದೆ, ಹವ್ಯಕರ ಆಚಾರ-ವಿಚಾರಗಳು, ಖಾದ್ಯಗಳು, ತಿಂಡಿ-ತಿನಿಸುಗಳನ್ನು ಮತ್ತೆಲ್ಲೂ ಕಾಣಲು ಸಾಧ್ಯವಿಲ್ಲ, ಹವ್ಯಕರ ಹಾಡು, ಹವ್ಯಕರ ಗ್ರಾಮೀಣ ಕ್ರೀಡೆಗಳನ್ನು ಉಳಿಸಿಕೊಳ್ಳುವುದು ಪ್ರತಿಯೊಬ್ಬ ಹವ್ಯಕರ ಕರ್ತವ್ಯ ಎಂದು ಪ್ರೊ. ಡಿ. ಪಿ. ಹೆಗಡೆ ಹೇಳಿದರು. ಅವರು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಬಾಡ -ಗುಡೆ ಅಂಗಡಿ ಹವ್ಯಕ … Continued

ಎಸ್.ಎಸ್.ಎಲ್.ಸಿ ಫಲಿತಾಂಶ : ಕುಮಟಾ ಕೊಂಕಣ ಎಜ್ಯುಕೇಶನ್ ಟ್ರಸ್ಟ್ ಪ್ರೌಢಶಾಲೆ ನೂರಕ್ಕೆ ನೂರು ಫಲಿತಾಂಶ, ರಾಜ್ಯಮಟ್ಟದಲ್ಲಿ 7 ರ‍್ಯಾಂಕ್‌

 ಕುಮಟಾ : ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಕೊಂಕಣ ಎಜ್ಯುಕೇಶನ್ ಟ್ರಸ್ಟ್ ನ ಸಿ.ವಿ.ಎಸ್.ಕೆ ಪ್ರೌಢಶಾಲಾ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಶಾಲೆಗೆ ನೂರಕ್ಕೆ ನೂರು ಫಲಿತಾಂಶ ಬಂದಿದ್ದು, ರಾಜ್ಯಕ್ಕೆ ಏಳು ರ‍್ಯಾಂಕ್‌ ಗಳಿಸಿದ್ದಾರೆ. ಪರೀಕ್ಷೆ ಬರೆದ ಒಟ್ಟೂ 154 ವಿದ್ಯಾರ್ಥಿಗಳಲ್ಲಿ, 105 ಮಂದಿ ಡಿಸ್ಟಿಂಕ್ಷನ್‌, … Continued

ಗೋಪಾಲಕೃಷ್ಣ ಭಟ್ಟ ನಿಧನ

ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ  ಸಿದ್ದಾಪುರ  ತಾಲೂಕಿನ ವಾಜಗದ್ದೆ ಸಮೀಪದ ಗೊಡ್ವೆಮನೆಯ ಗೋಪಾಲಕೃಷ್ಣ ಸುಬ್ರಾಯ ಭಟ್ಟ (59) ಮೇ 7ರಂದು  ನಿಧನರಾಗಿದ್ದಾರೆ. ಅವರು ಪತ್ನಿ, ಓರ್ವ ಪುತ್ರ, ತಾಯಿ, ಮೂವರು ಸಹೋದರರು,ಇಬ್ಬರು ಸಹೋದರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ತುಮಕೂರಿನ ಸಾಕೇತ್ ಅಟೋಮೊಬೈಲ್ಸ್‌ನಲ್ಲಿ ಹಿರಿಯ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಅವರು ಹೃದಯಸ್ಥಂಭನದಿಂದ ಹಠಾತ್ತಾಗಿ ನಿಧನರಾಗಿದ್ದಾರೆ. ಅವರ … Continued

ಕುಮಟಾ : ನಿವೃತ್ತ ಮುಖ್ಯಾಧ್ಯಾಪಕ ಹೊಲನಗದ್ದೆ ಆರ್.ಎನ್.ಹೆಗಡೆ ನಿಧನ

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹೊಲನಗದ್ದೆಯ ಆರ್.ಎನ್.ಹೆಗಡೆ (66) ಅವರು ಮಂಗಳವಾರ ಬೆಳಗಿನ ಜಾವ ನಿಧನರಾಗಿದ್ದಾರೆ. ಆರ್.ಎನ್.ಹೆಗಡೆ ಅವರು ಪ್ರಾಥಮಿಕ ಶಾಲಾ ಮುಖ್ಯಧ್ಯಾಪಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಸಮಾಜ ಕಾರ್ಯದಲ್ಲಿಯೂ ಗುರುತಿಸಿ ಕೊಂಡಿದ್ದ ಅವರು ಕಾಂಚಿಕಾಂಬಾ ಹವ್ಯಕ ವಲಯದ ಅಧ್ಯಕ್ಷರಾಗಿ ಸೇವೆಸಲ್ಲಿಸಿದ್ದರು. ಕುಮಟಾ ಕನ್ನಡ ಸಂಘದ ಸದಸ್ಯರಾಗಿದ್ದ ಅನೇಕ ಸಾಮಾಜಿಕ ಕಾರ್ಯದಲ್ಲಿ … Continued

ದ್ವಿತೀಯ ಪಿಯುಸಿ ಪರೀಕ್ಷೆ: ಕುಮಟಾ ಸರಸ್ವತಿ ಪಿಯು ಕಾಲೇಜು ಶೇ.100 ಫಲಿತಾಂಶ; ನಾಲ್ವರು ವಿದ್ಯಾರ್ಥಿಗಳಿಂದ ರಾಜ್ಯಮಟ್ಟದ ಸಾಧನೆ

ಕುಮಟಾ: ವಿಧಾತ್ರಿ ಅಕಾಡೆಮಿಯ ಸಹಭಾಗಿತ್ವದ ಕೊಂಕಣ ಎಜುಕೇಶನ್ ಟ್ರಸ್ಟ್ ನ ಬಿ. ಕೆ. ಭಂಡಾರಕರ್ಸ್‌ ಸರಸ್ವತಿ ಪದವಿಪೂರ್ವ ಕಾಲೇಜಿನ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು 2023-24ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳಿಸಿ ರಾಜ್ಯ ಮಟ್ಟದಲ್ಲಿ ನಾಲ್ಕು ಸ್ಥಾನ ಪಡೆದಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಶ್ರಾವ್ಯ ಭಟ್ಟ 592 ಅಂಕಗಳಿಸಿ ರಾಜ್ಯ ಮಟ್ಟದಲ್ಲಿ … Continued

ದ್ವಿತೀಯ ಪಿಯು : ಕುಮಟಾ ಡಾ. ಬಾಳಿಗಾ ವಾಣಿಜ್ಯ ಕಾಲೇಜ್‌ ಫಲಿತಾಂಶ ಶೇ.92, ಅನನ್ಯ ಕಾಮತ್‌ (ಶೇ.98) ಪ್ರಥಮ

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಡಾ. ಎ. ವಿ. ಬಾಳಿಗಾ ವಾಣಿಜ್ಯ ಮಹಾವಿದ್ಯಾಲಯದ ದ್ವಿತೀಯ ಪಿಯುಸಿ ಫಲಿತಾಂಶ ಶೇ.92 ಆಗಿದ್ದು ಪರೀಕ್ಷೆಗೆ ಕುಳಿತವರಲ್ಲಿ 17 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಹಾಗೂ 40 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಕಾಲೇಜು ವಿದ್ಯಾರ್ಥಿನಿ ಅನನ್ಯ ಕಾಮತ್ ಶೇ.98 (588)ಅಂಕ ಪಡೆದು ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಇವರು … Continued

ಕುಮಟಾ: ಮಿರ್ಜಾನ-ಕೋಡ್ಕಣಿಯ ವೈದ್ಯ ಡಾ. ರತ್ನಾಕರ ಶಾನಭಾಗ ನಿಧನ

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಮಿರ್ಜಾನ-ಕೋಡ್ಕಣಿಯ ಹೆಸರಾಂತ ವೈದ್ಯರಾಗಿದ್ದ ಡಾ. ರತ್ನಾಕರ ರಾಮ ಶಾನಭಾಗ (77) ಗುರುವಾರ ತಡರಾತ್ರಿ ನಿಧನರಾಗಿದ್ದಾರೆ. ಕಳೆದ ವಾರ ಮಿರ್ಜಾನ ಬಳಿ ನಡೆದ ರಿಕ್ಷಾ ಅಪಘಾತದಲ್ಲಿ ಗಾಯಗೊಂಡ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ, ಅಪಾರ … Continued