ಗೋಪಾಲಕೃಷ್ಣ ಭಟ್ಟ ನಿಧನ

ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ  ಸಿದ್ದಾಪುರ  ತಾಲೂಕಿನ ವಾಜಗದ್ದೆ ಸಮೀಪದ ಗೊಡ್ವೆಮನೆಯ ಗೋಪಾಲಕೃಷ್ಣ ಸುಬ್ರಾಯ ಭಟ್ಟ (59) ಮೇ 7ರಂದು  ನಿಧನರಾಗಿದ್ದಾರೆ. ಅವರು ಪತ್ನಿ, ಓರ್ವ ಪುತ್ರ, ತಾಯಿ, ಮೂವರು ಸಹೋದರರು,ಇಬ್ಬರು ಸಹೋದರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ತುಮಕೂರಿನ ಸಾಕೇತ್ ಅಟೋಮೊಬೈಲ್ಸ್‌ನಲ್ಲಿ ಹಿರಿಯ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಅವರು ಹೃದಯಸ್ಥಂಭನದಿಂದ ಹಠಾತ್ತಾಗಿ ನಿಧನರಾಗಿದ್ದಾರೆ. ಅವರ … Continued

ಕುಮಟಾ : ನಿವೃತ್ತ ಮುಖ್ಯಾಧ್ಯಾಪಕ ಹೊಲನಗದ್ದೆ ಆರ್.ಎನ್.ಹೆಗಡೆ ನಿಧನ

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹೊಲನಗದ್ದೆಯ ಆರ್.ಎನ್.ಹೆಗಡೆ (66) ಅವರು ಮಂಗಳವಾರ ಬೆಳಗಿನ ಜಾವ ನಿಧನರಾಗಿದ್ದಾರೆ. ಆರ್.ಎನ್.ಹೆಗಡೆ ಅವರು ಪ್ರಾಥಮಿಕ ಶಾಲಾ ಮುಖ್ಯಧ್ಯಾಪಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಸಮಾಜ ಕಾರ್ಯದಲ್ಲಿಯೂ ಗುರುತಿಸಿ ಕೊಂಡಿದ್ದ ಅವರು ಕಾಂಚಿಕಾಂಬಾ ಹವ್ಯಕ ವಲಯದ ಅಧ್ಯಕ್ಷರಾಗಿ ಸೇವೆಸಲ್ಲಿಸಿದ್ದರು. ಕುಮಟಾ ಕನ್ನಡ ಸಂಘದ ಸದಸ್ಯರಾಗಿದ್ದ ಅನೇಕ ಸಾಮಾಜಿಕ ಕಾರ್ಯದಲ್ಲಿ … Continued

ದ್ವಿತೀಯ ಪಿಯುಸಿ ಪರೀಕ್ಷೆ: ಕುಮಟಾ ಸರಸ್ವತಿ ಪಿಯು ಕಾಲೇಜು ಶೇ.100 ಫಲಿತಾಂಶ; ನಾಲ್ವರು ವಿದ್ಯಾರ್ಥಿಗಳಿಂದ ರಾಜ್ಯಮಟ್ಟದ ಸಾಧನೆ

ಕುಮಟಾ: ವಿಧಾತ್ರಿ ಅಕಾಡೆಮಿಯ ಸಹಭಾಗಿತ್ವದ ಕೊಂಕಣ ಎಜುಕೇಶನ್ ಟ್ರಸ್ಟ್ ನ ಬಿ. ಕೆ. ಭಂಡಾರಕರ್ಸ್‌ ಸರಸ್ವತಿ ಪದವಿಪೂರ್ವ ಕಾಲೇಜಿನ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು 2023-24ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳಿಸಿ ರಾಜ್ಯ ಮಟ್ಟದಲ್ಲಿ ನಾಲ್ಕು ಸ್ಥಾನ ಪಡೆದಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಶ್ರಾವ್ಯ ಭಟ್ಟ 592 ಅಂಕಗಳಿಸಿ ರಾಜ್ಯ ಮಟ್ಟದಲ್ಲಿ … Continued

ದ್ವಿತೀಯ ಪಿಯು : ಕುಮಟಾ ಡಾ. ಬಾಳಿಗಾ ವಾಣಿಜ್ಯ ಕಾಲೇಜ್‌ ಫಲಿತಾಂಶ ಶೇ.92, ಅನನ್ಯ ಕಾಮತ್‌ (ಶೇ.98) ಪ್ರಥಮ

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಡಾ. ಎ. ವಿ. ಬಾಳಿಗಾ ವಾಣಿಜ್ಯ ಮಹಾವಿದ್ಯಾಲಯದ ದ್ವಿತೀಯ ಪಿಯುಸಿ ಫಲಿತಾಂಶ ಶೇ.92 ಆಗಿದ್ದು ಪರೀಕ್ಷೆಗೆ ಕುಳಿತವರಲ್ಲಿ 17 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಹಾಗೂ 40 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಕಾಲೇಜು ವಿದ್ಯಾರ್ಥಿನಿ ಅನನ್ಯ ಕಾಮತ್ ಶೇ.98 (588)ಅಂಕ ಪಡೆದು ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಇವರು … Continued

ಕುಮಟಾ: ಮಿರ್ಜಾನ-ಕೋಡ್ಕಣಿಯ ವೈದ್ಯ ಡಾ. ರತ್ನಾಕರ ಶಾನಭಾಗ ನಿಧನ

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಮಿರ್ಜಾನ-ಕೋಡ್ಕಣಿಯ ಹೆಸರಾಂತ ವೈದ್ಯರಾಗಿದ್ದ ಡಾ. ರತ್ನಾಕರ ರಾಮ ಶಾನಭಾಗ (77) ಗುರುವಾರ ತಡರಾತ್ರಿ ನಿಧನರಾಗಿದ್ದಾರೆ. ಕಳೆದ ವಾರ ಮಿರ್ಜಾನ ಬಳಿ ನಡೆದ ರಿಕ್ಷಾ ಅಪಘಾತದಲ್ಲಿ ಗಾಯಗೊಂಡ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ, ಅಪಾರ … Continued

ಕುಮಟಾ : ಬಾಳಿಗಾ ಕಾಲೇಜಿನಲ್ಲಿ ಪಿಯು ವಿದ್ಯಾರ್ಥಿಗಳಿಗೆ ಸಂಭವನೀಯ ಅಪಾಯದಿಂದ ಪಾರಾಗುವ ಬಗ್ಗೆ ಪ್ರಾತ್ಯಕ್ಷಿಕೆ

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಡಾ.ಎ. ವಿ. ಬಾಳಿಗಾ ಮಹಾವಿದ್ಯಾಲಯದಲ್ಲಿ ಕಲಾ, ವಿಜ್ಞಾನ ಮತ್ತು ವಾಣಿಜ್ಯ ವಿಭಾಗದ ಪದವಿಪೂರ್ವ ವಿದ್ಯಾರ್ಥಿಗಳಿಗೆ ಸಂಭವನೀಯ ಅಪಾಯದಿಂದ ಪಾರಾಗುವ ಕುರಿತು ಸೋಮವಾರ ಮಾಹಿತಿ ನೀಡಲಾಯಿತು. ಅಗ್ನಿಶಾಮಕ ದಳದ ಎಸ್. ಪಿ. ರಾಘವೇಂದ್ರ ಪಟಗಾರ ಮಾಹಿತಿ ನೀಡಿ, ಎಲ್ ಪಿ ಜಿ ಗ್ಯಾಸ್, ನೀರಿನಲ್ಲಿ ಮುಳುಗುತ್ತಿರುವವರ ರಕ್ಷಣೆ, ವಿದ್ಯುತ್ … Continued

ಉತ್ತರ ಕನ್ನಡ ಜಿಲ್ಲೆಯ 9 ತಾಲೂಕುಗಳು ಬರ ಪೀಡಿತ : ಸರ್ಕಾರ ಘೋಷಣೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ 9 ತಾಲೂಕುಗಳನ್ನು ಬರ ಪೀಡಿತ ತಾಲೂಕುಗಳು ಎಂದು ಘೋಷಿಸಲಾಗಿದೆ. ರಾಜ್ಯದ 195 ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಲಾಗಿದೆ. ಅದರಲ್ಲಿ 161 ತೀವ್ರ ಬರ ಪೀಡಿತ ತಾಲೂಕುಗಳು ಹಾಗೂ 34 ತಾಲೂಕುಗಳನ್ನು ಸಾಧಾರಣ ಬರ ಪೀಡಿತ ಎಂದು ಕಂದಾಯ ಇಲಾಖೆ ವಿಪತ್ತು ನಿರ್ವಹಣಾ ವಿಭಾಗದ ಸರ್ಕಾರದ‌ ಜಂಟಿ ಕಾರ್ಯದರ್ಶಿ ಟಿ.ಸಿ.ಕಾಂತರಾಜ್ … Continued

ಶ್ರೀ ಲಕ್ಷ್ಮೀ ನರಸಿಂಹ ದೇವರಿಗೆ ಲಕ್ಷಾಧಿಕ ತುಳಸಿ ದಳದಿಂದ ಅರ್ಚನೆ

ಕುಮಟಾ : ತಾಲೂಕಿನ ಹೊಲನಗದ್ದೆ ತೆಪ್ಪದಮಠದ ಶ್ರೀ ಲಕ್ಷ್ಮೀನರಸಿಂಹ ದೇವಾಲಯದಲ್ಲಿ ಭಾನುವಾರ ಲಕ್ಷಾಧಿಕ ತುಳಸಿ ದಳದಿಂದ ಪೂಜೆ ನಡೆಯಿತು. ಸತತವಾಗಿ 10 ವರ್ಷದಿಂದ ಪ್ರತಿವರ್ಷ ವಾರ್ಷಿಕವಾಗಿ ಲಕ್ಷಾಧಿಕ ತುಳಸಿದಳದಿಂದ ಪೂಜೆ ನಡೆಸಿಕೊಂಡು ಬರಲಾಗುತ್ತಿದೆ. ಈವರ್ಷ ಅಧಿಕ ಮಾಸ ಇರುವುದರಿಂದ ಈ ಸಂದರ್ಭದಲ್ಲಿ ನಾಡಿನ ಕ್ಷೇಮಕ್ಕಾಗಿ ನಡೆಸುವ ಈ ಪೂಜೆಯಿಂದ ಜನರಿಗೆ ಅಧಿಕ ಫಲ ಪ್ರಾಪ್ತಿಯಾಗುವದು ಎಂದು … Continued

ಹೊಲನಗದ್ದೆಯ ಗ್ರಾಪಂ ಅಧ್ಯಕ್ಷರಾಗಿ ಎಂ. ಎಂ. ಹೆಗಡೆ ಆಯ್ಕೆ

ಕುಮಟಾ: ತಾಲೂಕಿನ ಹೊಲನಗದ್ದೆಯ ಗ್ರಾಮ ಪಂಚಾಯತ ಅಧ್ಯಕ್ಷರಾಗಿ ಭಾರತೀಯ ಜನತಾ ಪಕ್ಷದ ಎಂ. ಎಂ. ಹೆಗಡೆ ಹಾಗೂ ಉಪಾಧ್ಯಕ್ಷರಾಗಿ ಮಹಾಂತೇಶ ಹರಿಕಂತ್ರ ಅವರು ಆಯ್ಕೆಯಾಗಿದ್ದಾರೆ. ಸತತವಾಗಿ 5 ಬಾರಿ ಆಯ್ಕೆಯಾಗಿದ್ದ ವೇಳೆ ಗ್ರಾಮ ಪಂಚಾಯತ ಅಧ್ಯಕ್ಷ ಸ್ಥಾನದಿಂದ ವಂಚಿತವಾಗಿದ್ದ ಎಂ.ಎಂ. ಹೆಗಡೆ ಅವರು ಕೊನೆಗೂ 6ನೇ ಬಾರಿ ಗಾಪಂಗೆ ಆಯ್ಕೆಯಾಗಿರುವ ವೇಳೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಎಂ.ಎಂ. … Continued

ಕುಮಟಾ: ಜುಲೈ 23ರಂದು ಗಂಧರ್ವ ಕಲಾಕೇಂದ್ರದ ವಾರ್ಷಿಕೋತ್ಸವ

ಕುಮಟಾ: ಇಲ್ಲಿನ ಗಂಧರ್ವ ಕಲಾಕೇಂದ್ರದ ವಾರ್ಷಿಕೋತ್ಸವ ಜುಲೈ 23, ಭಾನುವಾರ ಮೂರೂರು ರಸ್ತೆಯಲ್ಲಿರುವ ಹವ್ಯಕ ಸಭಾಭವನದಲ್ಲಿ ನಡೆಯಲಿದೆ. ಭಾನುವಾರ ಬೆಳಿಗ್ಗೆ 9 ಗಂಟೆಯಿಂದ ವಿವಿಧ ಕಲಾವಿದರು ಹಾಗೂ ವಿದ್ಯಾರ್ಥಿಗಳಿಂದ ಕಾರ್ಯಕ್ರಮ ನಡೆಯಲಿದೆ. ಸಂಜೆ 4 ಗಂಟೆಗೆ ಸಭಾ ಕಾರ್ಯಕ್ರಮವಿದ್ದು, ವೈದ್ಯ ಡಾ.ಅನಿಲ ಹೆಗಡೆ ಅಧ್ಯಕ್ಷತೆ ವಹಿಸಲಿದ್ದಾರೆ. ಅತಿಥಿಗಳಾಗಿ ಅರೇಅಂಗಡಿಯ ಎಸ್‌.ಕೆ.ಪಿ.ಸಂಯುಕ್ತ ಪದವಿಪೂರ್ವ ಕಾಲೇಜಿನ ನಿವೃತ್ತ ಉಪನ್ಯಾಸಕರಾದ … Continued