ಕುಮಟಾ:  ದ್ವಿತೀಯ ಪಿಯು ಫಲಿತಾಂಶ, ಬಾಳಿಗಾ ವಾಣಿಜ್ಯ ಕಾಲೇಜಿಗೆ ಮೇಘಾ ಹೆಗಡೆ ಪ್ರಥಮ

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಬಾಳಿಗಾ ವಾಣಿಜ್ಯ ಕಾಲೇಜಿನ ಪಿಯುಸಿ ದ್ವಿತೀಯ ವರ್ಷದ ವಿದ್ಯಾರ್ಥಿಗಳ ಫಲಿತಾಂಶ ಬಂದಿದ್ದು ಪರೀಕ್ಷೆ ಎದುರಿಸಿದ ಒಟ್ಟೂ ೧೧೦ ವಿದ್ಯಾರ್ಥಿಗಳಲ್ಲಿ ೨೬ ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‌ನಲ್ಲಿ ಉತ್ತೀರ್ಣರಾಗಿದ್ದಾರೆ. ಮೇಘಾ ದತ್ತಾತ್ರಯ ಹೆಗಡೆ ಶೇ. ೯೬.೮೩ (೫೮೧/೬೦೦) ಅಂಕ ಗಳಿಸಿ ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ರವಿ ಗೋವಿಂದರಾಯ ಪ್ರಭು ಶೇ. ೯೬.೬೬ … Continued

ಕುಮಟಾ; ಕುಡಿಯುವ ನೀರಿನ ಯೋಜನೆಗೆ 120 ಕೋಟಿ ರೂ ಮಂಜೂರು: .ಶಾಸಕ  ದಿನಕರ ಶೆಟ್ಟಿ

ಕುಮಟಾ; ತಾಲೂಕಿನ ಹೆಗಡೆ ಜಿಲ್ಲಾ ಪಂಚಾಯತವ್ಯಾಪ್ತಿಯ ೯ ಗ್ರಾ.ಪಂ ಸಂಬಂಧಿಸಿದಂತೆ ಪ್ರತ್ಯೇಕ ಕುಡಿಯುವ ನೀರಿನ ಯೋಜನೆಗೆ 120 ಕೋಟಿ ಮಂಜೂರಾಗಿದ್ದು ಸದ್ಯದಲ್ಲೇ ಟೆಂಡರ್ ಕರೆಯಲಾಗುತ್ತಿದೆ ಎಂದು ಶಾಸಕ ದಿನಕರ ಶೆಟ್ಟಿ ತಿಳಿಸಿದರು. ಅವರು ಹಾಳಾಗಿರುವ ಬರ್ಸಗುಣಿ ರಸ್ತೆಯನ್ನು ಕಾಂಕ್ರೀಟ್‌ ರಸ್ತೆ ನಿರ್ಮಾಣಕ್ಕಾಗಿ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಹಾಳಾಗಿರುವ ರಸ್ತೆಯ ೧೨೦ ಮೀಟರ್‌ ಉದ್ದದ … Continued

ಕುಮಟಾ: ಜಿಪಂ ಸದಸ್ಯ, ವಕೀಲರ ಸಂಘದ ಅಧ್ಯಕ್ಷರು ಪ್ರಯಾಣಿಸುತ್ತಿದ್ದ ಕಾರು ಅಪಘಾತ, ಆಸ್ಪತ್ರೆಗೆ ದಾಖಲು, ಪ್ರಾಣಾಪಾಯದಿಂದ ಪಾರು

ಕುಮಟಾ; ತಾಲೂಕಿನ ಬಾಡದವರಾದ ಜಿಲ್ಲಾಪ ಪಂಚಾಯತ ಸದಸ್ಯ ರತ್ನಾಕರ ನಾಯ್ಕ ಮತ್ತು ಕುಮಟಾದ ವಕೀಲರ ಸಂಘದ ಅಧ್ಯಕ್ಷರಾದ ಆರ್.ಜಿ.ನಾಯ್ಕ ಅವರು ಪ್ರಯಾಣಿಸುತ್ತಿರುವ ಕಾರು ಅಪಘಾತಕ್ಕೀಡಾಗಿದ್ದು, ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಭಾನುವಾರ ಸಂಜೆ ಕುಂದಾಪುರದ ಸಮೀಪದ ನಾವುಂದದಲ್ಲಿ ಕಾರು ಡಿವೈಡರಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಇಬ್ಬರನ್ನು ತಕ್ಷಣ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವಕೀಲರಾದ … Continued

ಕುಮಟಾ ಡಾ.ಬಾಳಿಗಾ ವಾಣಿಜ್ಯ ಕಾಲೇಜ್ ಮುಖ್ಯ ಗ್ರಂಥಪಾಲಕ‌ ಡಾ. ಶಿವಾನಂದ ಬುಳ್ಳಾಗೆ ಸೋಶಿಯಲ್ ಸೈಂಟಿಸ್ಟ್ ಪ್ರಶಸ್ತಿ

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಡಾ. ಎ.ವಿ.ಬಾಳಿಗಾ ವಾಣಿಜ್ಯ ಮಹಾವಿದ್ಯಾಲಯದ ಮುಖ್ಯ ಗ್ರಂಥಪಾಲಕರಾದ ಡಾ. ಶಿವಾನಂದ ಬುಳ್ಳಾ ಅವರ ಪಿ.ಎಚ್.ಡಿ ಪ್ರಬಂಧ ಹಾಗೂ ಗ್ರಂಥಾಲಯ ವಿಜ್ಞಾನಕ್ಕೆ ನೀಡಿದ ಅಮೂಲ್ಯ ವೈಜ್ಞಾನಿಕ ಕೊಡುಗೆಗಾಗಿ, ಅತ್ಯಂತ ಪ್ರತಿಷ್ಠಿತ ಪ್ರಶಸ್ತಿಗಳಲ್ಲಿ ಒಂದಾದ “ಗ್ರಾಬ್ಸ್ ಬೆಸ್ಟ್ ಸೋಶಿಯಲ್ ಸೈಂಟಿಸ್ಟ್ ಪ್ರಶಸ್ತಿ” ನೀಡಲಾಗಿದೆ. ಚೆನ್ನೈನ ಆನಂದಭವನ ಸಭಾಂಗಣದಲ್ಲಿ ಅಸೋಸಿಯೇಶನ್ ಆಫ್ … Continued

ಮಲ್ಲಾಪುರದಲ್ಲಿ ಏಪ್ರಿಲ್‌ 30ರಂದು ಭಾವಗೀತೆ-ಭಕ್ತಿಗೀತೆಗಳ ಪ್ರಸ್ತುತಿ ಭಾವಧಾರಾ ಕಾರ್ಯಕ್ರಮ

ಕುಮಟಾ: ಕೂಜಳ್ಳಿಯ ಷಡಕ್ಷರಿ ಗವಾಯಿಗಳ ಅಕಾಡೆಮಿ ವತಿಯಿಂದ ಭಾವಗೀತೆ ಹಾಗೂ ಭಕ್ತಿಗೀತೆಗಳ ಕಾರ್ಯಕ್ರಮ ಭಾವಧಾರಾ ಏಪ್ರಿಲ್‌  30ರಂದು ಕೂಜಳ್ಳಿ ಸಮೀಪದ ಮಲ್ಲಾಪುರದ ಗುರುಮಠದಲ್ಲಿ ನಡೆಯಲಿದೆ. ಏಪ್ರಿಲ್‌ 30ರಂದು ಮಧ್ಯಾಹ್ನ 3ರಿಂದ ರಾತ್ರಿ 8ರ ವರೆಗೆ ಕಾರ್ಯಕ್ರಮ ನಡೆಯಲಿದ್ದು ಅನೇಕ ಹಿರಿಯ-ಕಿರಿಯ ಕಲಾವಿದರು ಪಾಲ್ಗೊಳ್ಳಲಿದ್ದಾರೆ. ಶ್ರೀಲತಾ ಗುರುರಾಜ ಆಡುಕಳ, ಗಣೇಶ ಭಟ್‌ ಕಡತೋಕ, ಅಶ್ವಿನಿ ಕುಮಟಾ, ಧನ್ಯಾ … Continued

ಏಪ್ರಿಲ್‌ ೨೫ರಂದು ಜಿಲ್ಲಾಮಟ್ಟದ ಹೆಬ್ಬಾರ ಟ್ರೋಫಿ ಕಬಡ್ಡಿ ಪಂದ್ಯಾವಳಿ

ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ತಾಲೂಕಿನ ನಂದೊಳ್ಳಿಯ ಶ್ರೀ ಸಿದ್ಧಿವಿನಾಯಕ ಗೆಳೆಯರ ಬಳಗ (ಕಬಡ್ಡಿ) ಸಮಿತಿಯ ಆಶ್ರಯದಲ್ಲಿ ಏಪ್ರಿಲ್‌ ೨೫ ರಂದು ನಂದೊಳ್ಳಿಯ ಪ್ರೌಢಶಾಲಾ ಮೈದಾನದಲ್ಲಿ ಜಿಲ್ಲಾ ಮಟ್ಟದ ಮ್ಯಾಟ್ ಹೆಬ್ಬಾರ ಟ್ರೋಫಿ ಕಬಡ್ಡಿ ಪಂದ್ಯಾವಳಿ ನಡೆಯಲಿದೆ. ಪ್ರಥಮ ಬಹುಮಾನ ೨೫೦೦೧, ದ್ವಿತೀಯ ಬಹುಮಾನ ೧೫೦೦೧, ತೃತೀಯ ೧೦೦೦೧, ಚತುರ್ಥ ಬಹುಮಾನ ೭೦೦೧ ರೂ.ಗಳ ಬಹುಮಾನವಿದೆ. … Continued

ಕುಮಟಾ: ಅದ್ಧೂರಿಯಾಗಿ ನಡೆದ ಬಾಡದ ಶ್ರೀಕಾಂಚಿಕಾ ಪರಮೇಶ್ವರಿ ದೇವಿಯ ರಥೋತ್ಸವ

ಕುಮಟಾ;ಉತ್ತರ ಕನ್ನಡ ಜಿಲ್ಲೆಯ ಹೆಸರುವಾಸಿ ಜಾತ್ರೆಗಳಲ್ಲೊಂದಾದ ಬಾಡದ ಶ್ರೀಕಾಂಚಿಕಾ ಪರಮೇಶ್ವರಿ ದೇವಿಯ ರಥೋತ್ಸವು ಶನಿವಾರ ನಡೆಯಿತು. ಇದು ಪ್ರತಿವರ್ಷ ಚೈತ್ರ ಶುದ್ಧ ಹುಣ್ಣಿಮೆ ದಿನದಂದು ನಡೆಯುತ್ತದೆ.ಕೊರೊನಾ ಕಾರಣದಿಂದ ಕಳೆದ ಎರಡು ವರ್ಷದಿಂದ ರಥೋತ್ಸವ ಸ್ಥಗಿತವಾಗಿತ್ತು.ಈ ವರ್ಷ ಯಾವುದೇ ಆತಂಕವಿಲ್ಲದೆ ರಥೋತ್ಸವ ಅದ್ಧೂರಿಯಾಗಿ ಸಂಪನ್ನವಾಯಿತು. ಸಾವಿರಾರು ಜನರು ರಥೋತ್ಸವದಲ್ಲಿ ಭಾಗವಹಿಸಿ ಶ್ರೀದೇವಿಗೆ ವಿವಿಧ ಹರಕೆ ಪೂಜೆಯನ್ನು ನೆರವೇರಿಸಿದರು. … Continued

ಕುಮಟಾ: ಟಿ.ಡಿ.ಕಾಮತ್‌ ನಿಧನ

ಕುಮಟಾ: ಮೂಲತಃ ಕುಮಟಾದವರಾದ ಹಾಲಿ ಮುಂಬೈ ನಿವಾಸಿಯಾಗಿದ್ದ ಟಿ.ಡಿ.ಕಾಮತ್‌ ಅವರು ಮುಂಬೈನಲ್ಲಿ ನಿಧನರಾಗಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು. ಮೃತರು ಒಬ್ಬ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಇವರು ಕುಮಟಾದ ಪ್ರಸಿದ್ಧ ಜವಳಿ ವ್ಯಾಪಾರಿ ಡಿ.ಟಿ. ಕಾಮತ್‌ ಅವರ ಪುತ್ರರಾಗಿದ್ದರು. ಅಶೋಕ ಲೇಲ್ಯಾಂಡ್‌ ಸೇರಿದಂತೆ ಹಲವು ಕಂಪನಿಗಳಲ್ಲಿ ಉನ್ನತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿ ನಿವೃತ್ತರಾಗಿದ್ದ ಟಿ.ಡಿ.ಕಾಮತ್‌ ಕುಮಟಾದ … Continued

ಪ್ರಜಾರಾಜ್ಯೋತ್ಸವ ಕಪ್ ಕ್ರಿಕೆಟ್ ಪಂದ್ಯಾವಳಿ ಆರಂಭ

ಅಂಕೋಲಾ : ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಆಯೋಜಿಸಿರುವ ಅಂಕೋಲಾ ಪ್ರಜಾರಾಜ್ಯೋತ್ಸವ ಕಪ್ ಕ್ರಿಕೆಟ್ ಪಂದ್ಯಾವಳಿ ಸೋಮವಾರ ಜೈಹಿಂದ ಕ್ರೀಡಾಂಗೆಣದಲ್ಲಿ ಆರಂಭವಾಯಿತು. ಒಟ್ಟಾರೆ 16 ತಂಡಗಳು ಈ ಪಂದ್ಯಾವಳಿಯಲ್ಲಿ ಆಡುತ್ತಿದ್ದಾರೆ. ಪುರಸಭೆಯ ಮುಖ್ಯಾಧಿಕಾರಿ ಶೃತಿ ಗಾಯಕವಾಡ್ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿ, ವಿವಿಧ ಇಲಾಖೆಗಳ ಮಧ್ಯೆ ಸಮನ್ವಯ ಸಾಧಿಸಲು ಇಂತಹ ಪಂದ್ಯಾವಳಿ ಅಗತ್ಯ ಎಂದರು. ಪತ್ರಕರ್ತ ವಿಠ್ಠಲದಾಸ … Continued

ಮುರ್ಡೇಶ್ವರದ ಸಾರ್ವಜನಿಕ ಮಹಾರಥೋತ್ಸವ ಇಲ್ಲ: ಒಳಾಂಗಣ ಪೂಜೆಗಷ್ಟೇ ಸೀಮಿತ

ಭಟ್ಕಳ: ರಾಜ್ಯದಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನೆವರಿ 20 ರಂದು ನಡೆಯಲಿರುವ ಮುರ್ಡೇಶ್ವರದ ಮಹಾರಥೋತ್ಸವ ಕಾರ್ಯಕ್ರಮಕ್ಕೆ ಸರ್ಕಾರದ ಕೋವಿಡ್ ನಿಯಮಗಳ ಪ್ರಕಾರ ಅನುಮತಿ ನೀಡಿಲ್ಲ.ಜಾತ್ರೆ ಕೇವಲ ದೇವಾಲಯದ ಒಳಾಂಗಣದ ಪೂಜೆ ಪುರಸ್ಕಾರಗಳಿಗೆ ಮಾತ್ರ ಸೀಮಿತವಾಗಿರಲಿದೆ ಟ್ಕಳ ಸಹಾಯಕ ಆಯುಕ್ತೆ ಮಮತಾ ದೇವಿ ತಿಳಿಸಿದ್ದಾರೆ. ಹೀಗಾಗಿ ಸಾರ್ವಜನಿಕರು ಮತ್ತು ಭಕ್ತಾರು ಕೋವಿಡ್ ಮಾರ್ಗಸೂಚಿಗಳ ಉಲ್ಲಂಘನೆ ಆಗದಂತೆ … Continued