ಶಿಕ್ಷಣ ಸಚಿವರಿಂದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಂಪ್ಯೂಟರ್ ಲ್ಯಾಬ್- ರಸಾಯನ ಶಾಸ್ತ್ರ ಪ್ರಯೋಗಾಲಯ ಉದ್ಘಾಟನೆ

ಕುಮಟಾ; ಸರ್ಕಾರಿ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳು ಗುಣಮಟ್ಟದ ಶಿಕ್ಷಣಕ್ಕೆ ಮಹತ್ವ ನೀಡುತ್ತಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಶಿಕ್ಷಣಕ್ಕೆ ಮಹತ್ವ ನೀಡುತ್ತಿದ್ದು .ಭಾರತ ಶಿಕ್ಷಣದಲ್ಲಿ ಯಾವ ದೇಶಕ್ಕಿಂತ ಕಡಿಮೆ ಇಲ್ಲ. ಜಗತ್ತಿನ ಪ್ರಮುಖ ದೇಶದಲ್ಲಿ ಶೇ.೫೦ ಕ್ಕಿಂತ ಹೆಚ್ಚಿನ ಕ್ಷೇತ್ರದಲ್ಲಿ ಭಾರತೀಯರಿದ್ದಾರೆ. ಇಂದು ಭಾರತದ ಹಳ್ಳಿ-ಹಳ್ಳಿಗಳಲ್ಲಿ ಪುರೋಹಿತರು ಸಿಗದಿದ್ದರೂ ಸೋಪ್ಟ್‌ವೇರ್ ಎಂಜಿನಿಯರ್ ಸಿಗುತ್ತಿದ್ದಾರೆ ಎಂದು … Continued

ಶ್ರೀ ಕಾಂಚಿಕಾ ಪರಮೇಶ್ವರಿ ದೇವಾಲಯದಲ್ಲಿ ನವರಾತ್ರಿ ಉತ್ಸವ

ಕುಮಟಾ;ಬಾಡದ ಶ್ರೀಕಾಂಚಿಕಾ ಪರಮೇಶ್ವರಿ ದೇವಾಲಯದಲ್ಲಿ ಗುರುವಾರದಿಂದ ನವರಾತ್ರಿ ಉತ್ಸವ ಆರಂಭವಾಗಲಿದೆ.ಶ್ರೀದೇವಾಲಯದಲ್ಲಿ ಪ್ರತಿವರ್ಷದಂತೆ ನವರಾತ್ರಿ ಪೂಜಾ ಕಾರ್ಯಕ್ರಮ ಗುರುವಾರ ಮುಂಜಾನೆಯಿಂದ ಆರಂಭವಾಗಲಿದೆ. ಶ್ರೀದುರ್ಗಾಪಾರಾಯಣ,ಸರ್ವಾಂಕಾರ ಪೂಜೆ,ಸರ್ವಾಪೂಜಾಸೇವೆ,ಫಲಪಂಚಾಮೃತ ಪೂಜೆ,ಪಂಚಾವಾದ್ಯ ಸೇವೆ ಮಹಾಮಂಗಳಾರತಿ ಪೂಜೆ ದಿನಾಂಕ ೧೫ ಶುಕ್ರವಾರದ ತನಕ ಪ್ರತಿನಿತ್ಯ ನಡೆಯಲಿದೆ.ದಿನಾಂಕ ೧೧ ರಂದು ಶಾರದಾಸ್ಥಾಪನೆ,೧೨ ತ್ರಿದಿನ ದೇವಿ ಪೂಜೆ,೧೩ ರಂದು ದುರ್ಗಾಷ್ಟಮಿ,೧೪ ರಂದು ಮಹಾನವಮಿ ಹಾಗೂ ೧೫ ಶುಕ್ರವಾರದಂದು … Continued

ಕುಮಟಾ; ಬಾಳಿಗಾ ವಾಣಿಜ್ಯ ಕಾಲೇಜಿನಲ್ಲಿ ಸ್ವಚ್ಛತೆ -ಕರ್ತವ್ಯ ಮಾಸಾಚರಣೆಗೆ ಚಾಲನೆ

ಕುಮಟಾ;ಡಾ.ಎ.ವಿ.ಬಾಳಿಗಾ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಸ್ವಚ್ಛತಾ ಮಾಸಾಚರಣೆಗೆ ಪ್ರಾಚಾರ್ಯ ಡಾ. ಎಸ್.ವಿ.ಶೇಣ್ವಿ ಚಾಲನೆ ಶನಿವಾರ ನೀಡಿದರು ಮಹಾತ್ಮ ಗಾಂಧಿ ಹಾಗೂ ಲಾಲಬಹಾದ್ದೂರ ಶಾಸ್ತ್ರೀ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿದರು. .ಮಹಾತ್ಮ ಗಾಂಧೀಜಿ ಮತ್ತು ಲಾಲಬಹುದ್ದೂರ ಶಾಸ್ತ್ರಿಗಳ ಜನ್ಮ ದಿನಾಚರಣೆ ನೆನಪಿಗಾಗಿ ಉತ್ತರಕನ್ನಡ ಜಿಲ್ಲೆಯಲ್ಲಿಯೇ ಸ್ವಚ್ಚತೆ ಮತ್ತು ಕರ್ತವ್ಯ ಮಾಸಾಚರಣೆಯನ್ನು ವೈಶಿಷ್ಟ್ಯವಾಗಿ ಆಚರಿಸಲು ನಿರ್ದರಿಸಿದ್ದೇವೆ. ಸ್ವತಂತ್ರ ಭಾರತದ ೭೬ ನೇ … Continued

ಕುಮಟಾ: ಸ್ಟೇರಿಂಗ್‌ ಲಾಕ್‌ ಆಗಿ ಉರುಳಿದ ಟಿಪ್ಪರ್‌, ಪವಾಡ ಸದೃಶ ಪಾರಾದ ಮೂವರು

ಕುಮಟಾ; ರಾಷ್ಟ್ರೀಯ ಹೆದ್ದಾರಿ ೬೬ ರಲ್ಲಿ ಗಿಬ್‌ ಹೈಸ್ಕೂಲ್ ಸಮೀಪ ಚಲಿಸುತ್ತಿದ್ದ ಟಿಪ್ಪರೊಂದು ಸ್ಟೇರಿಂಗ್ ಲಾಕಾಗಿ ಉರುಳಿ ಬಿದ್ದಿದೆ. ಈ ಸಂದರ್ಭದಲ್ಲಿ ರಸ್ತೆ ಬದಿಯಲ್ಲಿ ಸೈಕಲ್ ನಿಲ್ಲಿಸಿ ಮಾತಾಡುತ್ತಿದ್ದ ಇಬ್ಬರು ಉರುಳಿ ಬೀಳುತ್ತಿರುವ ಟಿಪ್ಪರ್ ಅಡಿಯಲ್ಲಿ ಸಿಲುಕಿದ್ದರು. ಆದರೆ ಅದೃಷ್ಟವಶಾತ್‌ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಟಿಪ್ಪರ್ ಉರುಳುತ್ತಿರುವಾಗ ತಕ್ಷಣ ಇಬ್ಬರೂ ಮಲಗಿ ಟಿಪ್ಪರ್ ಉರುಳುತ್ತಿರುವಂತೆ ಅದರ ಚಕ್ರ … Continued

ಶಿರಸಿ ಐಎಂಎ ಅಧ್ಯಕ್ಷರಾಗಿ ಡಾ.ರಾಮ ಹೆಗಡೆ ಆಯ್ಕೆ

ಶಿರಸಿ: ಭಾರತೀಯ ವೈದ್ಯಕೀಯ ಸಂಘ ಶಿರಸಿಯ ಶಾಖೆಯ 2021-2022 ಪದಾಧಿಕಾರಿಗಳ ಆಯ್ಕೆ ಮಾಡಲಾಗಿದ್ದು, ಅಧ್ಯಕ್ಷರಾಗಿ ಡಾ. ರಾಮ ಹೆಗಡೆ ಹಾಗೂ ಗೌರವ ಕಾರ್ಯದರ್ಶಿಯಾಗಿ ಡಾ. ರವೀಂದ್ರ ಕೊಳ್ವೇಕರ್ ಆಯ್ಕೆಯಾಗಿದ್ದಾರೆ. ಖಜಾಂಚಿಯಾಗಿ, ಡಾ ವಿಶ್ವನಾಥ ಅಂಕದ್, ಉಪಾಧ್ಯಕ್ಷರಾಗಿ ಡಾ.ವಿನಾಯಕ ತೆಂಬದ್ಮನೆ . ಜಂಟಿ ಕಾರ್ಯದರ್ಶಿಯಾಗಿ, ಡಾ ವಿನಾಯಕ ಎಸ್ . ಕೇಂದ್ರ ಸಮಿತಿ ಸದಸ್ಯರಾಗಿ ಡಾ ಜಿ. … Continued

ಕುಮಟಾ; ಭಾರತ ಬಂದ್‌ ಬೆಂಬಲಿಸಿ ಪ್ರತಿಭಟನಾ ಮೆರವಣಿಗೆ

ಕುಮಟಾ;ಭಾರತ ಬಂದ್ ಗೆ ಬೆಂಬಲ ಸೂಚಿಸಿ ಸಿಐಟಿಯು ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಿತು.ರಾಷ್ಟ್ರಿಯ ಹೆದ್ದಾರಿ ೬೬ ರ ಮಣಕಿ ಮೈದಾನದಿಂದ ತಹಶೀಲ್ದಾರ ಕಚೇರಿಯ ವರೆಗೆ ಮೆರವಣಿಗೆಯ ಮೂಲಕ ಸಾಗಿ ರಾಜ್ಯ ಮತ್ತು ಕೇಂದ್ರ ಸರಕಾರದ ರೈತ ವಿರೋಧಿ ನೀತಿ ವಿರುದ್ಧ ಘೋಷಣೆ ಕೂಗಲಾಯಿತು. ಬಿಸಿಯೂಟ ತಯಾರಕರು ಮತ್ತು ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದು.ನಂತರ ತಹಶೀಲ್ದಾರ ಕಚೇರಿಯ … Continued

ಹೊಲನಗದ್ದೆ ಸೀತಾ ಹೆಗಡೆ ನಿಧನ

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ತಾಲೂಕಿನ ಹೊಲನಗದ್ದೆಯ ಸೀತಾ ಎಂ. ಹೆಗಡೆ(77) ಮಂಗಳವಾರ ಸಂಜೆ ನಿಧನರಾದರು. ಇವರು ಖ್ಯಾತ ಪರಿಸರ ಹೋರಾಟಗಾರರಾಗಿದ್ದ ದಿ. ಎಂ. ಆರ್. ಹೆಗಡೆ ಅವರ ಪತ್ನಿ. ಮೃತರು ಸೀತಕ್ಕ ಎಂದೇ ಪ್ರಸಿದ್ದರಾಗಿದ್ದರು. ಪರಿಸರ, ಸಮಾಜಿಕ ಹಾಗೂ ದಾರ್ಮಿಕ ಸಂಘಟನೆಗಳಲ್ಲಿ ಸಕ್ರಿಯರಾಗಿದ್ದರು. ಮೃತರು ಮೂವರು ಪುತ್ರರು, ಸೊಸೆಯಂದಿರು, ಮೊಮ್ಮಕ್ಕಳು  ಹಾಗೂ ಅಪಾರ-ಬಂಧು ಬಳಗವನ್ನು … Continued

ಕುಮಟಾ: ಭತ್ತಕ್ಕೆ ಬೆಂಕಿರೋಗ-ಮಾಹಿತಿಯ ಕೊರತೆ, ಸಂಕಷ್ಟದಲ್ಲಿ ಭತ್ತದ ರೈತ

ಕುಮಟಾ;ಭತ್ತ ಬೆಳೆದ ರೈತ ಸಂಕಷ್ಟಕ್ಕೆ ಸಿಲುಕಿದ್ದಾನೆ. ಫಸಲು ಬರುವ ಸಂದರ್ಭಲ್ಲಿ ಭತ್ತಕ್ಕೆ ಬೆಂಕಿ ರೋಗ ಮತ್ತು ಕಾಡು ಪ್ರಾಣಿಗಳ ಉಪಟಳ ಹಾಗೂ ಕೃಷಿ ಅಧಿಕಾರಿಗಳಿಂದ ಸರಿಯಾಗಿ ಸಿಗದ ಮಾಹಿತಿಯಿಂದ ಭತ್ತ ಬೆಳೆಯುವದೇ ನಿಷ್ಟ್ರಯೋಜಕ ಎನ್ನುವುದು ರೈತರು ಹೇಳುವ ಮಾತು. ಕೃಷಿ ಇಲಾಖೆಯಿಂದ ಪ್ರತಿವರ್ಷ ಬಿತ್ತನೆ ಬೀಜ ತಂದಿದ್ದೆವು ೪ ತಿಂಗಳಿಗೆ ಉತ್ಪಾದನೆ ಬರುತ್ತದೆ ಎಂದಿದ್ದರು ಆದರೆ … Continued

ಕುಮಟಾದ ಎರಡು ಸಿಇಟಿ ಕೇಂದ್ರಗಳಲ್ಲಿ ಮೊದಲನೇ ದಿನ ಸುಗಮವಾಗಿ ನಡೆದ ಪರೀಕ್ಷೆ

ಕುಮಟಾ; ತಾಲೂಕಿನಲ್ಲಿ ಎರಡು ಸಿಇಟಿ ಪರಿಕ್ಷಾ ಕೇಂದ್ರಗಳಿದ್ದು ಡಾ.ಎ.ವಿ.ಬಾಳಿಗಾ ಕಲಾ ವಿಜ್ಞಾನ ಮಹಾವಿದ್ಯಾಲಯದಲ್ಲಿ ೨೬೪ ವಿದ್ಯಾರ್ಥಿಗಳು ಪರೀಕ್ಷೆಬರೆಯಲು ಅನುಮತಿ ಪಡೆದಿದ್ದಾರೆ. ಮುಂಜಾನೆ ಅವಧಿಯ ಜೀವಶಾಸ್ತ್ರ ಪರಿಕ್ಷೆಯಲ್ಲಿ ೬೯ ವಿದ್ಯಾರ್ಥಿಗಳು ಗೈರುಹಾಜರಾಗಿದ್ದು ೧೯೫ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಮಧ್ಯಾಹ್ನ ಗಣಿತ ಪರೀಕ್ಷೆಯಲ್ಲಿ ಕೇವಲ ೬ ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು. ಬೆಣ್ಣೆ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ೨೭೬ ಪರೀಕ್ಷಾರ್ಥಿಗಳಿದ್ದು … Continued

ದೀವಗಿ ಬಳಿ ಬೈಕ್‌-ಲಾರಿ ಡಿಕ್ಕಿ: ಒಬ್ಬ ಸಾವು, ಇನ್ನೊಬ್ಬನಿಗೆ ಗಾಯ

ಕುಮಟಾ : ಉತ್ತರ ಕನ್ನಡ ಜಿಲ್ಲೆ ಕುಮಟಾ ತಾಲೂಕಿನ ದೀವಗಿ ಬಳಿ ಬೈಕ್ ಹಾಗೂ ಮೀನು ಲಾರಿ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ವರದಿಯಾಗಿದೆ. ಹಿಂಬದಿಯ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. ಇಬ್ಬರು ವಿದ್ಯಾರ್ಥಿಗಳೆಂದು ಹೇಳಲಾಗಿದ್ದು, ಬೈಕ್ ಸವಾರ ಬಳ್ಳಾರಿ ಜಿಲ್ಲೆಯ ಹೊಸಪೇಟೆಯ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಬೈಕ್ ನಲ್ಲಿದ್ದ ಇನ್ನೋರ್ವ ವಿದ್ಯಾರ್ಥಿ … Continued