ಧಾರವಾಡ: ಮಾಜಿ ಪೈಲ್ವಾನರಿಗೆ ಶ್ರದ್ಧಾಂಜಲಿ

ಧಾರವಾಡ : ರಾಜ್ಯದ ಹಾಗೂ ಜಿಲ್ಲೆಯ ಅನೇಕ ಮಾಜಿ ಪೈಲ್ವಾನರು ಕೋವಿಡ್ ಮಹಾಮಾರಿಯಿಂದ ಮೃತರಾಗಿದ್ದು, ಅವರ ಸ್ಮರಣಾರ್ಥ ಶ್ರದ್ಧಾಂಜಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಅವರೆಲ್ಲರ ಸಾಧನೆ ಹಾಗೂ ಸೇವೆಯನ್ನು ಈ ಕಾರ್ಯಕ್ರಮದಲ್ಲಿ ಸ್ಮರಿಸಲಾಯಿತು. ಈ ಸಂದರ್ಭದಲ್ಲಿ ಶಾಸಕರಾದ ಅಮೃತ್ ದೇಸಾಯಿ ಮಾತನಾಡಿ ಕಳೆದ ವರ್ಷ ಕುಸ್ತಿ ಹಬ್ಬಕ್ಕೆ ಅವಿರತ ಸೇವೆ ಮಾಡಿದ ಹಿರಿಯ ಪೈಲ್ವಾರನ್ನು ನೆನಪಿಸಿಕೊಂಡರು. ಮೃತರಾದ … Continued

ಕುಮಟಾ ಬಾಳಿಗಾ ವಾಣಿಜ್ಯ ಕಾಲೇಜಿನಲ್ಲಿ ಯಶಸ್ವಿಯಾದ ಕೋವಿಡ್ ಲಸಿಕಾ ಅಭಿಯಾನ

ಕುಮಟಾ; ಉತ್ತರ ಕನ್ನಡ ಜಿಲ್ಲೆ  ಕುಮಟಾದ ಡಾ.ಎ.ವಿ.ಬಾಳಿಗಾ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಗುರುವಾರ ಕಾಲೇಜು ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿಗೆ ಒಟ್ಟು ೨೦೬ ಜನರಿಗೆ ಎರಡನೆ ಡೋಸ್ ಕೋವಿಡ್ ಲಸಿಕೆ ನೀಡಲಾಯಿತು. ಕಾಲೇಜಿನ ೧೮ ವರ್ಷ ಮೇಲ್ಪಟ್ಟ ಪದವಿ, ಬಿ.ಬಿ.ಎ ಮತ್ತು ಎಂ.ಕಾಮ್‌ ವಿದ್ಯಾರ್ಥಿಗಳು ಲಸಿಕಾ ಅಭಿಯಾನದಲ್ಲಿ ಭಾಗವಹಿಸಿದ್ದರು. ಪದವಿ ಪ್ರಾಚಾರ್ಯ ಡಾ.ಎಸ್.ವಿ.ಶೇಣ್ವಿ ಮಾತನಾಡಿ, ಲಸಿಕೆ ಪಡೆದುಕೊಳ್ಳುವುದರಿಂದ ವಿದ್ಯಾರ್ಥಿಗಳು … Continued

ಧಾರವಾಡ ಜೆಎಸ್ಎಸ್ ಮಂಜುನಾಥೇಶ್ವರ ಸಿಬಿಎಸ್ ಸಿ ಶಾಲೆ ನೂರಕ್ಕೆ ೧೦೦ ಫಲಿತಾಂಶ

ಧಾರವಾಡ: ಧಾರವಾಡದ ವಿದ್ಯಾಗಿರಿಯ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಸಿಬಿಎಸ್ ಸಿ ಶಾಲೆಯ ೨೦೨೦-೨೧ ನೇ ಸಾಲಿನ ೧೦ನೇ ತರಗತಿ ಫಲಿತಾಂಶವು ೧೦೦ ಕ್ಕೆ ೧೦೦ ರಷ್ಟಾಗಿದೆ. , ವಿದ್ಯಾರ್ಥಿಗಳು ಉತ್ತಮ ಸಾಧನೆಗೈದು ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಶಾಲೆಯು ಸತತ ೧೫ ವರ್ಷಗಳಿಂದ ೧೦೦% ಫಲಿತಾಂಶಗಳನ್ನು ಸಾಧಿಸುತ್ತ ಬಂದಿದೆ. ಒಟ್ಟು ಪರೀಕ್ಷೆಗೆ ೨೧೫ ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ಅವರಲ್ಲಿ … Continued

ಮರೆತು ಹೋದ ಸ್ಥಳೀಯ ಸ್ವಾತಂತ್ರ್ಯ ಸೇನಾನಿಗಳ ಸ್ಮರಿಸಬೇಕು: ಡಾ. ಅಜಿತ ಪ್ರಸಾದ

ಧಾರವಾಡ: ಆಜಾದಿ ಕಾ ಅಮೃತ ಮಹೊತ್ಸವ ಅಂಗವಾಗಿ ಸ್ಥಳಿಯ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಸಂಸ್ಥೆ ಹಾಗೂ ಸ್ಥಳಿಯಯ ಪ್ರಾದೇಶಿಕ ಪತ್ರಾಗಾರ ಇಲಾಖೆ ಸಂಯೋಗದೂಂದಿಗೆ ಹಳೆಯ ದಾಖಲೆಗಳ ಪ್ರದರ್ಶನ ಏರ್ಪಡಿಸಲಾಗಿತ್ತು, ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಪ್ರಾಚಾರ್ಯ ಡಾ. ಅಜಿತ ಪ್ರಸಾದ ವಿದ್ಯಾರ್ಥಿಗಳಿಗೆ ಭಾರತದ ಸ್ವಾತಂತ್ರ್ಯ ಹೊರಾಟದ ಸಂಕ್ಷಿಪ್ತ ಪರಿಚಯವನ್ನು ನೀಡಿದರು. ಸ್ವಾತಂತ್ರ್ಯ … Continued

ಹುಬ್ಬಳ್ಳಿ ಜೆಎಸ್ಎಸ್ ಸಿಬಿಎಸ್ ಸಿ ಶಾಲೆ ನೂರಕ್ಕೆ ೧೦೦ ಫಲಿತಾಂಶ

ಹುಬ್ಬಳ್ಳಿ : ಇಲ್ಲಿನ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಸಿಬಿಎಸ್ ಸಿ ಶಾಲೆ ೧೦ನೇ ತರಗತಿ ಫಲಿತಾಂಶವು ೧೦೦ ಕ್ಕೆ ೧೦೦ ರಷ್ಟಾಗಿದೆ. ವಿದ್ಯಾರ್ಥಿಗಳು ಉತ್ತಮ ಸಾಧನೆಗೈದು ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಶಾಲೆ ಸತತ ೭ ನೇ ವರ್ಷಕ್ಕೆ ೧೦೦% ಫಲಿತಾಂಶಗಳನ್ನು ಸಾಧಿಸಿದೆ. Sl.No Name of the Student Percentage 1 CHETAN M PATIL … Continued

ನಾಳೆ ಸ್ವಾತಂತ್ರ್ಯ ಹೋರಾಟದ ದಾಖಲಾತಿ ಪ್ರದರ್ಶನ

ಧಾರವಾಡ : ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಜೆ.ಎಸ್.ಎಸ್. ಶ್ರೀ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಸಂಸ್ಥೆ, ಹಾಗೂ ಪ್ರಾದೇಶಿಕ ಪತ್ರಗಾರ ಇಲಾಖೆ, ಧಾರವಾಡ ಸಹಯೋಗದಲ್ಲಿ ಸ್ವಾತಂತ್ರ್ಯ ಹೋರಾಟದ ದಾಖಲಾತಿಯ ಪ್ರದರ್ಶನವನ್ನು ಆಗಸ್ಟ್‌ ೪ರಂದು ಬೆಳಿಗ್ಗೆ ೧೦ ಗಂಟೆಗೆ ಉತ್ಸವ ಸಭಾಭವನದಲ್ಲಿ ಏರ್ಪಡಿಸಲಾಗಿದೆ. ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಇವುಗಳನ್ನು ವೀಕ್ಷಿಸಬೇಕೆಂದು ಧಾರವಾಡದ … Continued

ಉತ್ತರ ಕನ್ನಡ ಜಿಲ್ಲೆ ಅತಿವೃಷ್ಟಿ-ಪ್ರವಾಹಕ್ಕೆ ಸರ್ಕಾರ ಸ್ಪಂದಿಸುತ್ತಿಲ್ಲ: ದೇಶಪಾಂಡೆ

ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಅತಿವೃಷ್ಠಿಯಿಂದಾಗಿ ಅಪಾರ ಪ್ರಮಾಣದಲ್ಲಿ ಆಸ್ತಿ,ಬೆಳೆಗಳು, ಮನೆಗಳು ಮತ್ತು ಜೀವ ಹಾನಿಯಾಗಿದ್ದರೂ ಸರ್ಕಾರ ಅದಕ್ಕೆ ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಿಲ್ಲ ಎಂದು ಮಾಜಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದ್ದಾರೆ. ಅತಿವೃಷ್ಠಿಯಲ್ಲಿ ಹಾನಿಗೊಳಗಾದ ತಾಲೂಕಿನ ಹಲವು ಭಾಗಗಳಿಗೆ ಭೇಟಿ ನೀಡಿ ನಂತರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ೪ ದಿನಗಳಿಂದ ಹಾನಿಗೊಳಗಾದ … Continued

ರಸಾಯನ ಶಾಸ್ತ್ರ ಪಠ್ಯ ಪುಸ್ತಕ ಬಿಡುಗಡೆ

ಧಾರವಾಡ: ಇಲ್ಲಿನ ವಿದ್ಯಾಗಿರಿಯ ಜೆ. ಎಸ್. ಎಸ್. ಮಹಾವಿದ್ಯಾಲಯದ ರಸಾಯನಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕರು ಹಾಗೂ ವಿಭಾಗದ ಮುಖ್ಯಸ್ಥರಾದ, ಡಾ. ವೆಂಕಟೇಶ ಮುತಾಲಿಕ್ ಕರ್ನಾಟಕ ವಿಶ್ವವಿದ್ಯಾಲಯ ಹಾಗೂ ರಾಣಿಚೆನ್ನಮ್ಮ ವಿಶ್ವವಿದ್ಯಾಲಯಗಳ ಸಿಬಿಸಿಎಸ್ ಪಠ್ಯಕ್ರಮದನ್ವಯ ಬಿ.ಎಸ್ಸಿ. ಒಂದು ಮತ್ತು ಎರಡನೇ ಸೆಮಿಸ್ಟರ ತರಗತಿಗಳಿಗೆ ರಸಾಯನಶಾಸ್ತ್ರದ ಪಠ್ಯಪುಸ್ತಕಗಳನ್ನು ರಚಿಸಿದ್ದಾರೆ. ಜನತಾ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ಡಾ. ನ. ವಜ್ರಕುಮಾರ … Continued

ಬಸವರಾಜ ಬೊಮ್ಮಾಯಿ ಸಿಎಂ ಸ್ಥಾನಕ್ಕೆ ಆಯ್ಕೆ: ರೂಪಾಲಿ ಸಂತಸ

ಕಾರವಾರ: ರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿರುವುದು ಅತೀವ ಸಂತಸವಾಗಿದೆ ಎಂದು ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದ ಶಾಸಕರಾದ ರೂಪಾಲಿ ನಾಯ್ಕ ಪ್ರತಿಕ್ರಿಯಿಸಿದ್ದಾರೆ. ಮಾನ್ಯ ಬೊಮ್ಮಾಯಿ ಅವರು ಸರ್ವಾನುಮತದಿಂದ ಮುಖ್ಯಮಂತ್ರಿ ಆಗಿ ಆಯ್ಕೆಯಾಗಿರುವುದು ಹರ್ಷದಾಯಕ ಸಂಗತಿ. ರೈತರು, ಬಡವರು, ಹಿಂದುಳಿದವರು, ದೀನ ದಲಿತರ ಬಗ್ಗೆ ಅಪಾರ ಕಾಳಜಿ ಉಳ್ಳವರಾಗಿರುವ ಮಾನ್ಯ ಬಸವರಾಜ ಬೊಮ್ಮಾಯಿ ಅವರು ಅಭಿವೃದ್ಧಿಪರ … Continued

ನೂತನ ಸಿಎಂ ಬಸವರಾಜ ಬೊಮ್ಮಾಯಿಗೆ ಶಿವರಾಮ ಹೆಬ್ಬಾರ ಅಭಿನಂದನೆ

ಕಾರವಾರ: ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಆಯ್ಕೆಯಾದ ಪಕ್ಷದ ಹಿರಿಯ ನಾಯಕರು ಹಾಗೂ ಆತ್ಮೀಯರಾದ ಬಸವರಾಜ ಬೊಮ್ಮಾಯಿ ಅವರಿಗೆ ಶಿವರಾಮ ಹೆಬ್ಬಾರ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಹೋರಾಟ ಮೂಲಕವಾಗಿ ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸಿ ದಶಕಗಳ ಕಾಲ ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಅನುಭವಿ ರಾಜಕಾರಣಿ ಬಸವರಾಜ ಬೊಮ್ಮಾಯಿ ಅವರಿಗೆ ಕನ್ನಡ ನಾಡಿನ ಮುಖ್ಯಮಂತ್ರಿ ಸ್ಥಾನ ಲಭಿಸಿರುವುದು … Continued