ರ‍್ಯಾಪಿಡ್ ಸಂಸ್ಥೆ-ಜೆಎಸ್‌ಎಸ್ ಮಂಜುನಾಥೇಶ್ವರ ಸ್ನಾತಕ-ಸ್ನಾತಕೋತ್ತರ ಅಧ್ಯಯನ ಸಂಸ್ಥೆ ಒಡಂಬಡಿಕೆ

ಮಹಿಳಾ ಸಬಲೀಕರಣಕ್ಕಾಗಿ ಮಹಿಳೆಯರಿಗಾಗಿ ವಿವಿಧ ಕ್ಷೇತಗಳಲ್ಲಿ ಪರಸ್ಪರ ಸಹಾಯ ಮಾಡಲು ಧಾರವಾಡದ ರ‍್ಯಾಪಿಡ್ ಸಂಸ್ಥೆ, ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಸಂಸ್ಥೆಯೊಂದಿಗೆ ಒಡಂಬಡಿಕೆ ಮಾಡಿಕೊಂಡಿತು. ಈ ಸಂದರ್ಭದಲ್ಲಿ ಜನತಾ ಶಿಕ್ಷಣ ಸಮಿತಿಯ ಕಾರ್ಯದರ್ಶಿಗಳಾದ ಡಾ. ಅಜಿತ ಪ್ರಸಾದ, ಮಾಳವಿಕಾ ಕಡಕೋಳ, ಸ್ನೇಹಾ ದೇಶಪಾಂಡೆ ಮಹಾವೀರ ಉಪಾದ್ಯೆ ಉಪಸ್ಥಿತರಿದ್ದರು.

ಜೈನ ವಿದ್ಯಾರ್ಥಿಗಳಿಂದ ಧಾರವಾಡದ ಜೈನ ಮಿಲನ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಧಾರವಾಡ: ಧಾರವಾಡ ಜಿಲ್ಲೆಯಲ್ಲಿ 2022-23ನೇ ಸಾಲಿನ ಪ್ರಥಮ ವರ್ಷ ಪಿಯುಸಿ/ ಐಟಿಐ/ ಡಿಪ್ಲೋಮಾ/ಬಿ.ಎ/ ಬಿ.ಕಾಂ/ ಬಿಎಸ್ಸಿ /ಬಿಬಿಎ/ಬಿಸಿಎ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ ಜೈನ ಸಮುದಾಯದ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಂದ ಧಾರವಾಡ ಜೈನ ಮಿಲನ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಿದೆ. ಸಂಪರ್ಕ ಸಂಖ್ಯೆ, ಪಾಲಕರ ಉದ್ಯೋಗ ಇತ್ಯಾದಿ ವಿವರಗಳನ್ನೊಳಗೊಂಡ ವಿನಂತಿ ಅರ್ಜಿಯೊಂದಿಗೆ, ಶುಲ್ಕ ಪಾವತಿಸಿದ ರಶೀದಿ, … Continued

ಕರ್ನಾಟಕ ವಿದ್ಯಾವರ್ಧಕ ಸಂಘದಿಂದ ಡಾ ಅಜಿತ ಪ್ರಸಾದರಿಗೆ ಸನ್ಮಾನ

ಧಾರವಾಡ: ವಿದ್ಯಾಕಾಶಿ ಎಂದು ಕರೆಯಲ್ಪಡುವ ಧಾರವಾಡದ ಶೈಕ್ಷಣಿಕ ಬೆಳವಣಿಗೆಗೆ ಪ್ರೊ. ನ. ವಜ್ರಕುಮಾರ ಅವರ ಕೊಡುಗೆ ಅಪಾರ. ಅವರು ಧಾರವಾಡಕ್ಕೆ ಬರದೇ ಇದ್ದಿದ್ದರೆ ಧಾರವಾಡದ ಶೈಕ್ಷಣಿಕ ಕ್ಷೇತ್ರ ಬಡವಾಗುತ್ತಿತ್ತು ಎಂದು ಕರ್ನಾಟಕ ವಿದ್ಯಾವರ್ಧಕ ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಹೇಳಿದರು. ಕರ್ನಾಟಕ ವಿದ್ಯಾ ವರ್ಧಕ ಸಂಘದ ವತಿಯಿಂದ ಡಾ.ಅಜಿತ ಪ್ರಸಾದ ಅವರನ್ನು ಸನ್ಮಾನಿಸು ಕಾರ್ಯಕ್ರಮದಲ್ಲಿ … Continued

ಜೆಎಸ್ಎಸ್‌ನ ನೂತನ ಐಟಿಐ ಉದ್ಘಾಟನೆ : ಶೈಕ್ಷಣಿಕ ಹರಿಕಾರ ಡಾ. ನ. ವಜ್ರಕುಮಾರ ಹೆಸರು ನಾಮಕರಣ

ಧಾರವಾಡ : ಕೌಶಲ್ಯ ತರಬೇತಿಗಳಿಗೆ ಈಗ ಅಪಾರ ಬೇಡಿಕೆಯಿದೆ ನಿಷ್ಠೆ, ಪ್ರಾಮಾಣಿಕತೆಯಿಂದ ದುಡಿಯುವ ಕಾರ್ಮಿಕ ವರ್ಗದವರನ್ನು ಇಂದು ಗುರುತಿಸುವ ಅಗತ್ಯವಿದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯ ಡಾ. ಡಿ ವೀರೇಂದ್ರ ಹೆಗ್ಗಡೆ ಹೇಳಿದರು. ಇಲ್ಲಿಯ ಮೃತ್ಯುಂಜಯ ನಗರದಲ್ಲಿ ಆರಂಭಗೊಂಡ ನೂತನ ಐ.ಟಿ.ಐ ಕಾಲೇಜು ಉದ್ಘಾಟಿಸಿ ಮಾತನಾಡಿದ ಅವರು, ನೂತನ ಐಟಿಐಗೆ ಡಾ. ವಜ್ರಕುಮಾರ … Continued

ಧಾರವಾಡ: ನಾಳೆ ಜೆಎಸ್‌ಎಸ್‌ನ ನೂತನ ಐಟಿಐ ಕಾಲೇಜ್‌ ಉದ್ಘಾಟನೆ

ಧಾರವಾಡ: ಧಾರವಾಡದ ಸವದತ್ತಿ ರಸ್ತೆಯಲ್ಲಿರುವ ಮೃತ್ಯುಂಜಯನಗರದಲ್ಲಿ ಜನತಾ ಶಿಕ್ಷಣ ಸಮಿತಿ ಅಡಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ಐಟಿಐ ಕಾಲೇಜಿನ ಉದ್ಘಾಟನೆ ಹಾಗೂ ನಾಮಕರಣ ಸಮಾರಂಭ ಅಕ್ಟೋಬರ್‌ 19ರಂದು ಬೆಳಿಗ್ಗೆ 10 ಗಂಟೆಗೆ ನೂತನ ಐಟಿಐ ಆವರಣದಲ್ಲಿ ಆಯೋಜಿಸಲಾಗಿದೆ. ಧಾರವಾಡದ ಮುರುಘಾಮಠದ ಶ್ರೀ ಮಲ್ಲಿಕಾರ್ಜುನ ಮಹಾಸ್ವಾಮಿಗಳು ಸಮಾರಂಭದ ಸಾನಿಧ್ಯ ವಹಿಸಲಿದ್ದಾರೆ. ರಾಜ್ಯಸಭಾ ಸದಸ್ಯ ಹಾಗೂ ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ … Continued

ಕ್ರೀಯಾಶೀಲ ಪ್ರಾಧ್ಯಾಪಕ ಶಿವಪುತ್ರಪ್ಪ ಆಶಿ, ನಾಳೆ ‘ವರ್ತುಲ’ ಕವನ ಸಂಕಲನ ಲೋಕಾರ್ಪಣೆ

ಕ್ರೀಯಾಶೀಲ ವ್ಯಕ್ತಿತ್ವದ ೭೦ ವಯಸ್ಸಿನ (ಜನನ ೦೧.೧೦.೧೯೫೩) ಶಿವಪುತ್ರಪ್ಪ ರಂಗಪ್ಪ ಆಶಿ ಅವರು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಆಶಿ ಸರ್ ಎಂದೇ ಚಿರಪರಿಚಿತರು. ಬಾಗಲಕೋಟಿ ಜಿಲ್ಲೆಯ ಬದಾಮಿ ತಾಲೂಕಿನ ಕೆಲವಡಿ ಗ್ರಾಮದವರಾದ ಅವರು ಕೆಲವಡಿ ಗ್ರಾಮದಲ್ಲಿ ಪ್ರಾಥಮಿಕ ಶಿಕ್ಷಣ, ಶಿವಯೋಗ ಮಂದಿರದಲ್ಲಿ ಮಾಧ್ಯಮಿಕ ಶಿಕ್ಷಣ ಹಾಗೂ ನರೇಗಲ್ಲದ ಅನ್ನದಾನೇಶ್ವರ ಮಹಾವಿದ್ಯಾಲಯದಿಂದ ಪದವಿ ಶಿಕ್ಷಣ ಪಡೆದರು. ನಂತರ … Continued

ಜೆಇಇ ಅಡ್ವಾನ್ಸ್ಡ್‌ ಪರೀಕ್ಷೆಯಲ್ಲಿ ನಮನ್‌ ಭಟ್‌ ಉತ್ತಮ ಸಾಧನೆ

ಧಾರವಾಡ: ಇಲ್ಲಿನ ಅರ್ಜುನ (ಶಾಂತಿನಿಕೇತನ) ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿಯಾದ ನಮನ್‌ ಭಟ್ ಅವರು ಐಐಟಿ ಜೆಇಇ ಅಡ್ವಾನ್ಸ್ಡ್‌ ಪರೀಕ್ಷೆಯಲ್ಲಿ ಪ್ರಮುಖ ಶ್ರೇಣಿ ಅಂಕ ಪಡೆದು ರಾಷ್ಟ್ರೀಯ ಮಟ್ಟದಲ್ಲಿ ೭೭೮೦ ನೇ ರ‍್ಯಾಂಕ ಪಡೆದು ಉತ್ತಮ ಸಾಧನೆ ಮಾಡಿದ್ದಾನೆ. ಕೇರಳದ ತಿರುವುನಂತಪುರದಲ್ಲಿರುವ ಏಷ್ಯಾದ ಮೊಟ್ಟಮೊದಲ ಬಾಹ್ಯಾಕಾಶದ ಅಧ್ಯಯನ ಹಾಗೂ ಸಂಶೋಧನೆಯ ವಿಶ್ವವಿದ್ಯಾಲಯ (IIST – … Continued

ದತ್ತಾತ್ರೇಯ ವೈದ್ಯ ನಿಧನ

ಕುಮಟಾ : ಹೊನ್ನಾವರ ತಾಲೂಕಿನ ನವಿಲುಗೋಣದ ಭುವಿನಕೊಡ್ಲು ದತ್ತಾತ್ರೇಯ ವೈದ್ಯ (87) ಭಾನುವಾರ ಸಂಜೆ ನಿಧನರಾದರು. ಮೃತರು ಪುತ್ರ, ಆರು ಪುತ್ರಿಯರು  ಹಾಗೂ ಅಪಾರಬಂಧು ಬಳಗವನ್ನು ಅಗಲಿದ್ದಾರೆ. ಉತ್ತಮ ಕೃಷಿಕರು ಆಗಿದ್ದ ಅವರು ಸುಧೀರ್ಘ ಕಾಲದಿಂದ ಶ್ರೀ ಭುವನೇಶ್ವರ ಮತ್ತು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಪೂಜೆ ನೆರವೇರಿಸಿ ಕೊಂಡುಬಂದಿದ್ದರು. ನವಿಲುಗೋಣ ಹಾಗೂ ಸುತ್ತಲಿನ ಪ್ರದೇಶದಲ್ಲಿ ದತ್ತಣ್ಣ … Continued

200 ವರ್ಷಗಳಿಂದ ನವರಾತ್ರಿ ಹಬ್ಬವನ್ನು ವೈಶಿಷ್ಟ್ಯಪೂರ್ಣವಾಗಿ ಆಚರಿಸಿಕೊಂಡು ಬರುತ್ತಿರುವ ಧಾರವಾಡದ ಕಟ್ಟಿಮಠ ಕುಟುಂಬ

(ನವರಾತ್ರಿಯನ್ನು ದಿನಾಂಕ ೨೫ ಸೆಪ್ಟೆಂಬರ್ ರಿಂದ ಅಕ್ಟೋಬರ ೫ರ ವರೆಗೆ ಆಚರಿಸಲಾಗುತ್ತಿದೆ) ೨೦೦ಕ್ಕೂ ಹೆಚ್ಚು ವರ್ಷಗಳ ಪಾರಂಪರಿಕ ಇತಿಹಾಸವುಳ್ಳ, ಅಧ್ಯಾತ್ಮಿಕ ಹಿನ್ನೆಲೆಯ ಧಾರವಾಡದ ಕಟ್ಟಿಮಠ ಕುಟುಂಬ ನವರಾತ್ರಿಯ ಉತ್ಸವವನ್ನು ಹಲವಾರು ವರ್ಷಗಳಿಂದ ವಿಶಿಷ್ಟವಾಗಿ ಆಚರಿಸುತ್ತ ಬಂದಿದೆ. ಈಗ ಕುಟುಂಬದ ನಾಲ್ಕನೇ ತಲೆಮಾರಿನವರಾದ ಕಾರ್ತಿಕ ಕಟ್ಟಿಮಠ ಅವರು ೨೦೧೭ರಿಂದ ನವರಾತ್ರಿ ಹಬ್ಬದ ಅರ್ಥಪೂರ್ಣವಾದ ಆಚರಣೆ ಮಾಡುತ್ತ ಬಂದಿದ್ದಾರೆ. … Continued

ಕುಮಟಾದಲ್ಲಿ ಅಕ್ಟೊಬರ್ 6ರಿಂದ 12ರ ವರೆಗೆ ತಾಳಮದ್ದಳೆ ಸಪ್ತಾಹ

ಕುಮಟಾ : ನಗರದ ಶ್ರೀ ಮಹಾಸತಿ ಸಭಾಭವನದಲ್ಲಿ ಅಕ್ಟೊಬರ್ ೬ರಿಂದ ೧೨ರ ವರೆಗೆ ತಾಳಮದ್ದಳೆ ಸಪ್ತಾಹ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಪ್ರಖ್ಯಾತ ಯಕ್ಷ ಕಲಾವಿದರು ಭಾಗವಹಿಸಲಿದ್ದಾರೆ ಎಂದು ಮೈಸೂರು ಶ್ರೀರಂಗಪಟ್ಟಣದ ಯಕ್ಷ ಕೌಮುದಿ ಟ್ರಸ್ಟ್ ಅಧ್ಯಕ್ಷರಾದ ಗ. ನಾ. ಭಟ್ಟ ತಿಳಿಸಿದರು. ಯಕ್ಷ ಕೌಮುದಿ ಟ್ರಸ್ಟ್ ಮತ್ತು ಕುಮಟಾದ ಯುಗಾದಿ ಉತ್ಸವ ಸಮಿತಿ ಕುಮಟಾ ಸಂಯುಕ್ತ … Continued