ಹಿಂದುತ್ವದ ಬಗ್ಗೆ ಪೋಸ್ಟ್; ನಟ ಚೇತನ್ ಬಂಧನ

posted in: ರಾಜ್ಯ | 0

ಬೆಂಗಳೂರು: ಶೇಷಾದ್ರಿಪುರ ಠಾಣೆ ಪೊಲೀಸರು ನಟ ಅಹಿಂಸಾ ಚೇತನ್‌ ಅವರನ್ನು ಇಂದು, ಮಂಗಳವಾರ ಬೆಳಗ್ಗೆ ಬಂಧಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಹಿಂದುತ್ವದ ಬಗ್ಗೆ ನಟ ಚೇತನ್‌ ಪೋಸ್ಟ್‌ ಮಾಡಿದ್ದರು. ಹಿಂದುತ್ವವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ ಎಂದು ಸಾಮಾಜಿಕ ಜಾಲತಾಣ ಟ್ವಿಟರ್‌ನಲ್ಲಿ ಟ್ವೀಟ್‌ ಮಾಡಿದ್ದರು. ಜೊತೆಗೆ, ಉರಿಗೌಡ ಮತ್ತು ನಂಜೇಗೌಡ ಅವರ ಬಗ್ಗೆಯೂ ಟ್ವೀಟ್‌ನಲ್ಲಿ ಬರೆದಿದ್ದರು. ನಂತರ … Continued

ಕರ್ನಾಟಕ ವಿಧಾನಸಭೆ ಚುನಾವಣೆ 2023 : ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

posted in: ರಾಜ್ಯ | 0

ಬೆಂಗಳೂರು: ದೆಹಲಿ ಹಾಗೂ ಪಂಜಾಬ್‌ನ ಅಧಿಕಾರದಲ್ಲಿರುವ ಆಮ್ ಆದ್ಮಿ ಪಕ್ಷ ಈಗ ಕರ್ನಾಟಕ ರಾಜ್ಯದ ವಿಧಾನಸಭಾ ಚುನಾವಣೆಗೆ ತಯಾರಿ ನಡೆಸಿದೆ. ಚುನಾವಣಾ ಘೋಷಣೆ ಮೊದಲೇ ಆಮ್ ಆದ್ಮಿ ಪಕ್ಷ 80 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದೆ. ಚಲನಚಿತ್ರ ಖ್ಯಾತ ಹಾಸ್ಯನಟ ಟೆನ್ನಿಸ್ ಕೃಷ್ಣ, ಕಾಂಗ್ರೆಸ್ ಮಾಜಿ ವಕ್ತಾರ ಬ್ರಿಜೇಶ್ ಕಾಳಪ್ಪ, ಮಾಜಿ ಕೆಎಎಸ್ ಅಧಿಕಾರಿ ಕೆ. … Continued

ಚುನಾವಣೆ ಸನಿಹದಲ್ಲೇ ಬಿಜೆಪಿಯ ವಿಧಾನ ಪರಿಷತ್‌ ಸ್ಥಾನಕ್ಕೆ ಬಾಬುರಾವ್ ಚಿಂಚನಸೂರು ರಾಜೀನಾಮೆ : ಮುಂದಿನ ನಡೆ..?

posted in: ರಾಜ್ಯ | 0

ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಬಿಜೆಪಿಯ ಬಾಬುರಾವ್ ಚಿಂಚನಸೂರ್ ಸೋಮವಾರ ರಾಜೀನಾಮೆ ನೀಡಿದ್ದಾರೆ. ವಿಧಾನಸೌಧದಲ್ಲಿ ಬಾಬುರಾವ್ ಚಿಂಚನಸೂರು ರಾಜೀನಾಮೆ ನೀಡಿದ್ದು, ಸಭಾಪತಿ ಬಸವರಾಜ ಹೊರಟ್ಟಿ ರಾಜೀನಾಮೆ ಅಂಗೀಕರಿಸಿದ್ದಾರೆ. ವಿಧಾನಸಭೆ ಚುನಾವಣೆ ಹೊತ್ತಲ್ಲೇ ಬಿಜೆಪಿ ವಿಧಾನ ಪರಿಷತ್‌ ಬಾಬುರಾವ್ ಚಿಂಚನಸೂರು ರಾಜೀನಾಮೆ ನೀಡಿದ್ದಾರೆ. ಚಿಂಚನಸೂರು ನಡೆ ಬಹಳ ಕುತೂಹಲ ಮೂಡಿಸಿದೆ. ಬಾಬುರಾವ್ ಚಿಂಚನಸೂರ್ ಅವರು ಗುರುಮಿಠಕಲ್ … Continued

7 ನೂತನ ವಿಶ್ವ ವಿದ್ಯಾಲಯಗಳಿಗೆ ಕುಲಪತಿಗಳ ನೇಮಕ

posted in: ರಾಜ್ಯ | 0

ಬೆಂಗಳೂರು: ರಾಜ್ಯ ಸರ್ಕಾರ ನೂತನವಾಗಿ ಸ್ಥಾಪಿಸಿರುವ ಚಾಮರಾಜನಗರ, ಬೀದರ್, ಹಾವೇರಿ, ಹಾಸನ, ಕೊಡಗು, ಕೊಪ್ಪಳ ಮತ್ತು ಬಾಗಲಕೋಟೆ ವಿಶ್ವವಿದ್ಯಾಲಯಗಳಿಗೆ ಕುಲಪತಿಗಳನ್ನು ನೇಮಿಸಿ ಸೋಮವಾರ ಆದೇಶ ಹೊರಡಿಸಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಬೆಂಗಳೂರು ವಿಶ್ವ ವಿದ್ಯಾಲಯದ ಪತ್ರಿಕೋದ್ಯಮ ವಿಭಾಗದ ಡಾ.ಬಿ.ಕೆ. ರವಿ ಅವರನ್ನು ಕೊಪ್ಪಳ ವಿಶ್ವ ವಿದ್ಯಾಲಯ, ಬಾಗಲಕೋಟೆಯ ತೋಟಗಾರಿಕೆ … Continued

ದಿ ಹಿಂದೂ ಸಂಗೀತ ಸ್ಪರ್ಧೆ: ಬಾಲಪ್ರತಿಭೆ ವಿಭಾಗದಲ್ಲಿ ಕುಮಟಾದ ಅದಿತಿ ಶಾನಭಾಗ ಪ್ರಥಮ

posted in: ರಾಜ್ಯ | 0

2022-23ನೇ ಸಾಲಿನ ದಿ ಹಿಂದೂ ಮಾರ್ಗಜಿ ಸಂಗೀತ ಸ್ಪರ್ಧೆಯ ಫಲಿತಾಂಶಗಳುಪ್ರಕಟವಾಗಿವೆ. ತೀರ್ಪುಗಾರರು ಸುಮಾರು 600 ಸ್ಪರ್ಧಿಗಳಲ್ಲಿ ವಿವಿಧ ವಿಭಾಗಗಳಲ್ಲಿ ಬಹುಮಾನಕ್ಕಾಗಿ  ಪ್ರಥಮ ಮೂರು ಬಹುಮಾನಗಳು ಹಾಗೂ ವಿಶೇಷ ಬಹುಮಾನಕ್ಕಾಗಿ ಆಯ್ಕೆ ಮಾಡಿದ್ದಾರೆ. ಇದರಲ್ಲಿ ಹಿಂದೂಸ್ತಾನೀ ಸಂಗೀತದ ಬಾಲಪ್ರತಿಭೆ ವಿಭಾಗದಲ್ಲಿ ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಕುಮಾರಿ ಅದಿತಿ ಶಾನಭಾಗ ಪ್ರಥಮ ಸ್ಥಾನಗಳಿಸಿದ್ದಾರೆ. ಬಾಲಕಿ ಅದಿತಿ ಶಾನಭಾಗ … Continued

ಕಾಂಗ್ರೆಸ್ 4ನೇ ಗ್ಯಾರಂಟಿ ‘ಯುವ ನಿಧಿ’ ಯೋಜನೆ ; ಪದವೀಧರರಿಗೆ ಪ್ರತಿ ತಿಂಗಳು 3,000 ರೂ. ನಿರುದ್ಯೋಗ ಭತ್ಯೆ ಘೋಷಿಸಿದ ರಾಹುಲ್‌ ಗಾಂಧಿ

posted in: ರಾಜ್ಯ | 0

ಬೆಳಗಾವಿ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕರ್ನಾಟಕದ ನಿರುದ್ಯೋಗಿ ಪದವೀಧರರಿಗೆ ಎರಡು ವರ್ಷಗಳವರೆಗೆ ಮಾಸಿಕ 3,000 ರೂ. ಮತ್ತು ಡಿಪ್ಲೋಮಾ ಕೋರ್ಸ್‌ ಮುಗಿಸಿದವರಿಗೆ ತಿಂಗಳಿಗೆ 1,500 ರೂ. ನೀಡಲಾಗುವುದು ಎಂದು ರಾಹುಲ್ ಗಾಂಧಿ ಘೋಷಿಸಿದ್ದಾರೆ. ಸೋಮವಾರ ಬೆಳಗಾವಿಯಲ್ಲಿ ನಡೆದ ಯುವಕ್ರಾಂತಿ ಸಮಾವೇಶದಲ್ಲಿ ಅವರು ನಿರುದ್ಯೋಗಿ ಯುವಕರಿಗಾಗಿ ʼಯುವ ನಿಧಿʼ ಎಂಬ ಪಕ್ಷದ … Continued

ಉರಿಗೌಡ, ನಂಜೇಗೌಡ ಸಿನೆಮಾ ನಿರ್ಮಾಣ ಕೈಬಿಟ್ಟ ಸಚಿವ ಮುನಿರತ್ನ

posted in: ರಾಜ್ಯ | 0

ಮಂಡ್ಯ : ಆದಿಚುಂಚನಗಿರಿ ನಿರ್ಮಲಾನಂದನಾಥ ಶ್ರೀಗಳನ್ನ ಭೇಟಿಯಾಗಿ ಚರ್ಚಿಸಿದ ಬಳಿಕ ಉರಿಗೌಡ ನಂಜೇಗೌಡ ಕುರಿತು ಸಿನಿಮಾ ನಿರ್ಮಾಣ ಮಾಡುವುದಿಲ್ಲ ಎಂದು ತೋಟಗಾರಿಕೆ ಸಚಿವ ಮುನಿರತ್ನ ಹೇಳಿದ್ದಾರೆ. ಉರಿಗೌಡ ನಂಜೇಗೌಡ ಕುರಿತು ಸಿನಿಮಾ ನಿರ್ಮಾಣಕ್ಕೆ ಮುಂದಾಗಿದ್ದ ಸಚಿವ ಮುನಿರತ್ನ ಶ್ರೀಗಳ ಭೇಟಿ ಬಳಿಕ ಸಿನಿಮಾ ಮಾಡುವ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ. ಈ ಕುರಿತು ಮಾತನಾಡಿರುವ ಸಚಿವ ಮುನಿರತ್ನ, … Continued

ಇತಿಹಾಸ ತಿರುಚುವುದಲ್ಲಿ ಬಿಜೆಪಿ ಎತ್ತಿದ ಕೈ: ಈಗ ಒಕ್ಕಲಿಗರ ಇತಿಹಾಸ ತಿರುಚಲು ಹೊರಟಿದೆ-ಡಿಕೆ ಶಿವಕುಮಾರ ಕಿಡಿ

posted in: ರಾಜ್ಯ | 0

ಬೆಳಗಾವಿ : ಯುವ ಕ್ರಾಂತಿ ಸಮಾವೇಶದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮಾಜಿ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿ ಬೆಳಗಾವಿ ಕಾರ್ಯಕ್ರಮ ಆಯೋಜಿತಗೊಂಡಿದೆ. ಈ ಹಿನ್ನಲೆಯಲ್ಲಿ ಸೋಮವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಎಂದಿನಂತೆ ರಾಜ್ಯದ ಬಿಜೆಪಿ ಸರ್ಕಾರದ ವಿರುದ್ಧ ಕೆಂಡಕಾರಿದ್ದಾರೆ. ಇತಿಹಾಸ ತಿರುಚುವಲ್ಲಿ ಬಿಜೆಪಿಯವರದು ಎತ್ತಿದ ಕೈ. ಬಸವಣ್ಣ, ಕುವೆಂಪು, ನಾರಾಯಣ ಗುರು, ಡಾ. … Continued

ಕೆ.ಆರ್.ಪುರಂ-ವೈಟ್ ಫೀಲ್ಡ್ ಮೆಟ್ರೋ ಮಾರ್ಗ: ಮಾರ್ಚ್‌ 25ರಂದು ಪ್ರಧಾನಿ ಮೋದಿಯಿಂದ ಉದ್ಘಾಟನೆ

posted in: ರಾಜ್ಯ | 0

ಬೆಂಗಳೂರು : ಬೆಂಗಳೂರಿನ ಕೆ.ಆರ್. ಪುರಂ-ವೈಟ್‌ಫೀಲ್ಡ್ ಮಧ್ಯದ ಮೆಟ್ರೋದ ನೇರಳೆ ಮಾರ್ಗದ ವಿಸ್ತರಣೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 25ರಂದು ಉದ್ಘಾಟಿಸಲಿದ್ದಾರೆ. ನಮ್ಮ ಮೆಟ್ರೋದ 13.71 ಕಿಮೀ ಮಾರ್ಗವು ಒಂದು ತಾಸು ಇದ್ದ ಪ್ರಯಾಣದ ಅವಧಿಯನ್ನು ಸುಮಾರಿ 25 ನಿಮಿಷಗಳ ವರೆಗೆ ಕಡಿಮೆ ಮಾಡಲಿದೆ ಎಂದು ನಿರೀಕ್ಷಿಸಲಾಗಿದೆ. ಪ್ರಯಾಣಿಕರು ವೈಟ್‌ಫೀಲ್ಡ್ ಮತ್ತು ಕೆಆರ್ ಪುರಂ … Continued

ಕೃಷಿ ಹೊಂಡದಲ್ಲಿ ಮುಳುಗಿ ಬಾಲಕರಿಬ್ಬರ ಸಾವು

posted in: ರಾಜ್ಯ | 0

ಬೆಳಗಾವಿ: ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರು ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಯಾದಗುಡ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತ ಬಾಲಕರನ್ನು ಯಾದಗುಡ ಗ್ರಾಮದ ಯಮನಪ್ಪ ರೆಡ್ಡಿರಟ್ಟಿ (10), ಯಶು ಬಸಪ್ಪ (14) ಎಂದು ಗುರುತಿಸಲಾಗಿದೆ. ಕ್ರಿಕೆಟ್​ ಆಡಿದ ನಂತರ ಬಾಲಕರು ಕೃಷಿ ಹೊಂಡಕ್ಕೆ ಈಜಲು ತೆರಳಿದ್ದಾಗ ದುರಂತ ಘಟನೆ ನಡೆದಿದೆ … Continued