ವೀಡಿಯೊ..| ಶಿರಸಿ-ಕುಮಟಾ ಹೆದ್ದಾರಿಯ ದೇವಿಮನೆ ಘಟ್ಟದ ದೇವಸ್ಥಾನದ ಬಳಿ ಭೂ ಕುಸಿತ

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಶಿರಸಿ-ಕುಮಟಾ ಹೆದ್ದಾರಿಯ ದೇವಿಮನೆ ಘಟ್ಟದ ದೇವಸ್ಥಾನದ ಬಳಿ  ಭಾನುವಾರ ಭೂ ಕುಸಿತ ಉಂಟಾಗಿದೆ ಎಂದು ವರದಿಯಾಗಿದೆ. ನಿರಂತರವಾಗಿ ವಿಪರೀತ ಮಳೆ ಸುರಿಯುತ್ತಿರುವುದರಿಂದ ಭೂ ಕುಸಿತವಾಗಿದೆ. ದೇವಿ ಮನೆಯ ಕ್ಷೇತ್ರ ಪಾಲೇಶ್ವರ ದೇವಸ್ಥಾನಕ್ಕೆ ಇಳಿಯುವ ಮೆಟ್ಟಿಲುಗಳಿಗೆ ಸಮೀಪದಲ್ಲಿ ಭೂ ಕುಸಿತ ಉಂಟಾಗಿದೆ. ದೇವಸ್ಥಾನದ ಮೆಟ್ಟಿಲುಗಳಿಂದ ಸುಮಾರು 20-25 ಅಡಿಗಳಷ್ಟು ದೂರದಲ್ಲಿ ಭೂ … Continued

ಹೊನ್ನಾವರ : ರಭಸದ ಮಳೆಗೆ ಹಳ್ಳದಲ್ಲಿ ಕೊಚ್ಚಿ ಹೋದ ವ್ಯಕ್ತಿ

ಹೊನ್ನಾವರ: ಭಾರಿ ಮಳೆಯಿಂದಾಗಿ ಉಕ್ಕಿ ಹರಿಯುತ್ತಿದ್ದ ಹಳ್ಳದಲ್ಲಿ ಕೊಚ್ಚಿ ಹೋಗಿ ಕೃಷಿ ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಅನಂತವಾಡಿ ಸಮೀಪ ಸಂಭವಿಸಿದೆ ಎಂದು ವರದಿಯಾಗಿದೆ. ಅನಂತವಾಡಿ, ಖಾಸಗೇರಿ ನಿವಾಸಿ ಜನಾರ್ದನ ರಾಮ ಮರಾಠಿ (45) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಕೃಷಿ ಕಾರ್ಮಿಕರಾಗಿದ್ದ ಜನಾರ್ದನ ಅವರು ಶುಕ್ರವಾರ ಅನಂತವಾಡಿಯ ಮರಾಠಿಕೇರಿ … Continued

ಅಡಕೆ ಎಂದು ಭಾವಿಸಿ ಜಜ್ಜಿದಾಗ ಸಿಡಿಮದ್ದು ಸ್ಫೋಟ, ಮಹಿಳೆಗೆ ತೀವ್ರ ಗಾಯ

ಮೈಸೂರು: ಮನೆ ಬಳಿ ರಸ್ತೆಯಲ್ಲಿ ಬಿದ್ದಿದ್ದ ಸಿಡಿಮದ್ದನ್ನು ಅಡಕೆ ಎಂದು ಭಾವಿಸಿ ಚೂರು ಮಾಡಲು ಕಲ್ಲಿನಿಂದ ಜಜ್ಜಿದಾಗ ಅದು ಸ್ಫೋಟಗೊಂಡು ಮಹಿಳೆಯೊಬ್ಬರು ತೀವ್ರ ಗಾಯಗೊಂಡ ಘಟನೆ ಜಿಲ್ಲೆಯ ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿಯ ಹುಲ್ಯಾಳು ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಗ್ರಾಮದ ಕಮಲಮ್ಮ (55) ಎಂಬವರು ಗಾಯಗೊಂಡವರು. ಶುಕ್ರವಾರ ಬೆಳಗ್ಗೆ ಜಮೀನಿನಿಂದ ಮನೆಗೆ ಬರುತ್ತಿದ್ದ ವೇಳೆ … Continued

ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಂದಿಸಿದ ಆರೋಪ: ಸೂಲಿಬೆಲೆ ವಿರುದ್ಧದ ಪ್ರಕರಣ ರದ್ದುಗೊಳಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ: ಕಾಂಗ್ರೆಸ್‌  ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಅಯೋಗ್ಯ ಎಂದು ಜರೆದ ಆರೋಪಕ್ಕೆ ಸಂಬಂಧಿಸಿದಂತೆ ಚಕ್ರವರ್ತಿ ಸೂಲಿಬೆಲೆ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಸುಪ್ರೀಂ ಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ನ್ಯಾಯಮೂರ್ತಿಗಳಾದ ಎಂ.ಎಂ. ಸುಂದರೇಶ ಮತ್ತು ಎನ್ ಕೋಟಿಶ್ವರ ಸಿಂಗ್ ಅವರಿದ್ದ ಪೀಠ ಈ ತೀರ್ಪು ನೀಡಿದೆ ಎಂದು ಬಾರ್‌ & ಬೆಂಚ್‌ ವರದಿ ಮಾಡಿದೆ. ನಮೋ … Continued

ಕರ್ನಾಟಕಕ್ಕೆ 42,517 ಕೋಟಿ ರೂ. ವೆಚ್ಚದ 25 ರೈಲ್ವೆ ಯೋಜನೆಗಳು ಮಂಜೂರು : ರೈಲ್ವೆ ಸಚಿವ ಅಶ್ವಿನಿ ವೈಷ್ಣವ

ನವದೆಹಲಿ: ಕರ್ನಾಟಕದಲ್ಲಿ ರೈಲು ಸಂಪರ್ಕವನ್ನು ಹೆಚ್ಚಿಸಲು ಭಾರತೀಯ ರೈಲ್ವೆ ಹಲವಾರು ಯೋಜನೆಗಳನ್ನು ಕೈಗೆತ್ತಿಕೊಂಡಿದೆ. ಆದಾಗ್ಯೂ, ಭೂಸ್ವಾಧೀನದ ವಿಳಂಬದಿಂದಾಗಿ ಅನೇಕ ಯೋಜನೆಗಳು ವಿಳಂಬವಾಗುತ್ತಿವೆ. ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ರಾಜ್ಯಸಭೆಯಲ್ಲಿ ಅಜಯ್ ಮಾಕನ್ ಅವರ ನಕ್ಷತ್ರ ಚಿಹ್ನೆಯ ಪ್ರಶ್ನೆಗೆ ಉತ್ತರಿಸಿದ ಸಚಿವರು, “ಕರ್ನಾಟಕದಲ್ಲಿ ರೈಲ್ವೆ ಸಂಪರ್ಕವನ್ನು ಹೆಚ್ಚಿಸಲು, ಭಾರತೀಯ ರೈಲ್ವೆ ಹಲವಾರು ಯೋಜನೆಗಳನ್ನು ಕೈಗೆತ್ತಿಕೊಂಡಿದೆ. … Continued

ವಿಪರೀತ ಮಳೆ ಮುನ್ಸೂಚನೆ ; ಉತ್ತರ ಕನ್ನಡ ಜಿಲ್ಲೆ 5 ತಾಲೂಕುಗಳ ಎಲ್ಲ ಶಾಲಾ-ಕಾಲೇಜುಗಳಿಗೆ ಜುಲೈ 26ರಂದು ರಜೆ ಘೋಷಣೆ

ಕಾರವಾರ : ಹವಾಮಾನ ಇಲಾಖೆಯು ಉತ್ತರ ಕನ್ನಡ ಜಿಲ್ಲೆಯಲ್ಲಿ, ವಿಶೇಷವಾಗಿ ಕರಾವಳಿ ತಾಲೂಕುಗಳಲ್ಲಿ ಭಾರೀ ಮಳೆಯಾಗುವ ಮುನ್ನೆಚ್ಚರಿಕೆ ನೀಡಿದ್ದು, ‘ರೆಡ್ ಅಲರ್ಟ್’ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಉತ್ತರ ಕನ್ನಡಜಿಲ್ಲೆಯ ಐದು ತಾಲೂಕುಗಳ ಎಲ್ಲ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಶುಕ್ರವಾರ, ಶನಿವಾರ ಜುಲೈ 26ರಂದು ರಜೆ ಘೋಷಿಸಲಾಗಿದೆ. ಭಾರತೀಯ ಹವಾಮಾನ … Continued

ವಿಪರೀತ ಮಳೆ ಮುನ್ನೆಚ್ಚರಿಕೆ : ದಕ್ಷಿಣ ಕನ್ನಡ, ಕೊಡಗು ಜಿಲ್ಲೆಗಳ ಶಾಲೆಗಳಿಗೆ ಇಂದು (ಜುಲೈ 25) ರಜೆ ಘೋಷಣೆ

ಮಂಗಳೂರು/ಮಡಿಕೇರಿ : ಹವಾಮಾನ ಇಲಾಖೆ ಭಾರೀ ಮಳೆಯಾಗುವ ಮುನ್ನೆಚ್ಚರಿಕೆ ನೀಡಿದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕೊಡಗು ಜಿಲ್ಲೆಗಳ ಎಲ್ಲ ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಶುಕ್ರವಾರ, ಜುಲೈ 25 ರಂದು ರಜೆ ಘೋಷಿಸಲಾಗಿದೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್‌ ಅಲರ್ಟ್‌ ಎಚ್ಚರಿಕೆ ನೀಡಿರುವ … Continued

ರಾಜ್ಯದಲ್ಲಿ ಹೊಸದಾಗಿ ನಿರ್ಮಿಸುವ ಬಹುಮಹಡಿ ಕಟ್ಟಡಗಳಿಗೆ 1%ರಷ್ಟು ಫೈರ್ ಸೆಸ್ : ಸಚಿವ ಸಂಪುಟ ತೀರ್ಮಾನ

ಬೆಂಗಳೂರು: ರಾಜ್ಯಾದ್ಯಂತ ಹೊಸದಾಗಿ ನಿರ್ಮಾಣವಾಗುತ್ತಿರುವ ಬಹುಮಹಡಿ ಕಟ್ಟಡಗಳಿಗೆ ಶೇ1ರಷ್ಟು ಫೈರ್ ಸೆಸ್ ವಿಧಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.‌ ಈ ಸಂಬಂಧ ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ದಿ ಕರ್ನಾಟಕ ಫೈರ್‌ ಫೋರ್ಸ್‌ ಆಕ್ಟ್‌ (The Karnataka Fire Force Act) 1964ಕ್ಕೆ ತಿದ್ದುಪಡಿ ತರಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ … Continued

ಬೆಂಗಳೂರು | ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದ ತನಿಖೆ ಸಿಐಡಿ ಹೆಗಲಿಗೆ

ಬೆಂಗಳೂರು: ನಗರದ ಹಲಸೂರು ಕೆರೆ ಬಳಿ ಹತ್ಯೆಯಾದ ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಶಿವಪ್ರಕಾಶ್ ತಾಯಿ ವಿಜಯಲಕ್ಷ್ಮೀ ನೀಡಿದ ದೂರಿನ ಮೇರೆಗೆ ಶಾಸಕ ಬೈರತಿ ಬಸವರಾಜ್ ಸೇರಿದಂತೆ ಹಲವರ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದ ಭಾರತೀನಗರ ಪೊಲೀಸರು ಈವರೆಗೆ 14 ಮಂದಿ ಆರೋಪಿಗಳನ್ನು ಬಂಧಿಸಿದ್ದು, … Continued

ವೀಡಿಯೊ..| ʼಕಾಳುಮೆಣಸಿನ ರಾಣಿʼಗೆ ಗೌರವ; ರಾಷ್ಟ್ರಪತಿಗಳಿಂದ ಗೇರುಸೊಪ್ಪೆಯ ರಾಣಿ ಚೆನ್ನಭೈರಾದೇವಿ ಅಂಚೆಚೀಟಿ ಬಿಡುಗಡೆ

ನವದೆಹಲಿ : ಯೋಧರನ್ನು, ಐತಿಹಾಸಿಕ ಗೌರವಿಸುವ ಐತಿಹಾಸಿಕ ಕ್ರಮದಲ್ಲಿ, ಭಾರತ ಸರ್ಕಾರದ ಅಂಚೆ ಇಲಾಖೆಯು 16 ನೇ ಶತಮಾನದ ಕರಾವಳಿ ಕರ್ನಾಟಕದ ನಿರ್ಭೀತ ರಾಣಿ ಎಂದೇ ಖ್ಯಾತಿ ಪಡೆದಿದ್ದ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗೇರುಸೊಪ್ಪದ ರಾಣಿ ಚೆನ್ನಭೈರಾದೇವಿ ಅವರ ಸ್ಮರಣಾರ್ಥ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿದೆ. ‘ಕಾಳು ಮೆಣಸಿನ ರಾಣಿ’ ಖ್ಯಾತರಾಗಿದ್ದ ರಾಣಿ … Continued