ಕರ್ನಾಟಕದಲ್ಲಿ ಇನ್ಮುಂದೆ ರೇಬೀಸ್ ಲಸಿಕೆ ಉಚಿತ

ಬೆಂಗಳೂರು : ಎಪಿಎಲ್ ಅಥವಾ ಬಿಪಿಎಲ್ ಕಾರ್ಡ್ ಎಂಬುದನ್ನು ಪರಿಶೀಲಿಸದೆ ಪ್ರಾಣಿ ಕಡಿತಕ್ಕೆ ಒಳಗಾದವರಿಗೆ ಎಲ್ಲರಿಗೂ ಆಂಟಿ ರೇಬೀಸ್ ಲಸಿಕೆ (ಎಆರ್‌ವಿ) ಮತ್ತು ರೇಬೀಸ್ ಇಮ್ಯುನೊಗ್ಲಾಬ್ಯುಲಿನ್ (ಆರ್‌ಐಜಿ) ಅನ್ನು ಉಚಿತವಾಗಿ ನೀಡಲು ರಾಜ್ಯ ಆರೋಗ್ಯ ಇಲಾಖೆ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಸೂಚಿಸಿದೆ. ಈ ಕುರಿತು ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರು ಸುತ್ತೋಲೆ … Continued

ಪ್ರಕಟಣೆ ನಿಲ್ಲಿಸಿದ ಕನ್ನಡ ವಾರಪತ್ರಿಕೆ ʼಮಂಗಳʼ

ಕನ್ನಡ ಓದುಗರ ಮನೆಮಾತಾಗಿದ್ದ ‘ಮಂಗಳ’ ವಾರ ಪತ್ರಿಕೆ ತನ್ನ ಪ್ರಕಟಣೆ ನಿಲ್ಲಿಸಲಿದೆ ಎಂದು ವರದಿಯಾಗಿದೆ. ಕನ್ನಡ ಪತ್ರಿಕಾರಂಗದಲ್ಲಿ ಅನೇಕ ದಶಕಗಳಿಂದ ಗುರುತಿಸಿಕೊಂಡಿದ್ದ ಮಂಗಳ ವಾರಪತ್ರಿಕೆ ಇನ್ನುಮುಂದೆ ಪ್ರಕಟವಾಗುವುದಿಲ್ಲ. ಈ ಕುರಿತು ಮಂಗಳ ವಾರ ಪತ್ರಿಕೆ ಸಂಪಾದಕರು ಪ್ರಕಟಣೆ ನೀಡಿದ್ದು, ಈ ವಾರ ಮಂಗಳ ವಾರಪತ್ರಿಕೆಯ ಕೊನೆಯ ಸಂಚಿಕೆ ಮುದ್ರಣಗೊಂಡಿದೆ ಎಂದು ತಿಳಿಸಿದ್ದಾರೆ. ಸರಿಸುಮಾರು ನಾಲ್ಕು ದಶಕಗಳ … Continued

ರಾಜ್ಯದ ಈ ಜಿಲ್ಲೆಗಳಲ್ಲಿ ಐದಾರು ದಿನ ಮಳೆಯ ಸಾಧ್ಯತೆ

ಬೆಂಗಳೂರು : ರಾಜ್ಯದಲ್ಲಿ ಮುಂದಿನ ಐದಾರು ದಿನ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಹಲವೆಡೆ ಸಾಧಾರಣ ಮಳೆ ಹಾಗೂ ಕೆಲವಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ದಕ್ಷಿಣ … Continued

ಧಾರವಾಡ-ಬೆಂಗಳೂರು ವಂದೇ ಭಾರತ ಎಕ್ಸ್ ಪ್ರೆಸ್ ರೈಲಿನ ವೇಳಾಪಟ್ಟಿ ಪರಿಷ್ಕರಣೆ

ಹುಬ್ಬಳ್ಳಿ: ಪ್ರಯಾಣಿಕರ ಅನುಕೂಲಕ್ಕಾಗಿ ಧಾರವಾಡ ಮತ್ತು ಬೆಂಗಳೂರು ನಿಲ್ದಾಣಗಳ ನಡುವೆ ಸಂಚರಿಸುವ ವಂದೇ ಭಾರತ ಎಕ್ಸ್ ಪ್ರೆಸ್ ರೈಲುಗಳ ಸಮಯವನ್ನು ಪರಿಷ್ಕರಣೆ ಮಾಡಲಾಗುತ್ತಿದೆ. ಅಕ್ಟೋಬರ್ 7ರಿಂದ ಜಾರಿಗೆ ಬರುವಂತೆ ಹುಬ್ಬಳ್ಳಿ ಮತ್ತು ಯಶವಂತಪುರ ನಿಲ್ದಾಣಗಳಲ್ಲಿ ಸಮಯವನ್ನು ಪರಿಷ್ಕರಿಸಲಾಗಿದೆ. ರೈಲು ಸಂಖ್ಯೆ 20661 ಕೆ.ಎಸ್.ಆರ್ ಬೆಂಗಳೂರು-ಧಾರವಾಡ ವಂದೇ ಭಾರತ ಎಕ್ಸ್ ಪ್ರೆಸ್ ಹುಬ್ಬಳ್ಳಿ ನಿಲ್ದಾಣಕ್ಕೆ ಬೆಳಿಗ್ಗೆ 11:30/11:35 … Continued

ವಿವಾಹೇತರ ಸಂಬಂಧ ಹೊಂದಿರುವ ಮಹಿಳೆಗೆ ಪತಿ ಜೀವನಾಂಶ ನೀಡಬೇಕಿಲ್ಲ: ಹೈಕೋರ್ಟ್​​

ಬೆಂಗಳೂರು: ವಿವಾಹೇತರ ಸಂಬಂಧ ಹೊಂದಿರುವ ಪತ್ನಿಯು ಪತಿಯಿಂದ ಜೀವನಾಂಶ ಪಡೆಯಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಇತ್ತೀಚೆಗೆ ಹೇಳಿದೆ. ನ್ಯಾಯಮೂರ್ತಿ ರಾಜೇಂದ್ರ ಬಾದಾಮಿಕರ ಅವರಿದ್ದ ನ್ಯಾಯಪೀಠವು ಈ ರೀತಿ ಅಭಿಪ್ರಾಯಪಟ್ಟು ಪತ್ನಿಯು ಸಲ್ಲಿಸಿದ್ದ ಮೇಲ್ಮನವಿಯನ್ನು ಅರ್ಜಿಯನ್ನು ವಜಾಗೊಳಿಸಿದೆ. ಅರ್ಜಿದಾರರು ವಿವಾಹೇತರ ಸಂಬಂಧ ಹೊಂದಿರುವಾಗ, ಪ್ರಾಮಾಣಿಕರಲ್ಲದಿದ್ದಾಗ ಪತಿಯು ಜೀವನಾಂಶ ಕೊಡಬೇಕು ಎಂಬ ವಾದ ಒಪ್ಪಿಕೊಳ್ಳಲಾಗುವುದಿಲ್ಲ. ಪತಿಯ ಕಡೆಯಿಂದ … Continued

ಕುಮಟಾ: ರಾಷ್ಟ್ರಧ್ವಜದಂತೆ ಕಾಣುವ ಧ್ವಜದಲ್ಲಿ ಬೇರೆ ಚಿಹ್ನೆ, ಗುರುತು ಬಳಸಿ ಈದ್ ಮಿಲಾದ್ ಮೆರವಣಿಗೆ, ಪ್ರಕರಣ ದಾಖಲು

 ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಮಿರ್ಜಾನ್‌ ಸಮೀಪ ತ್ರಿವರ್ಣ ಧ್ವಜಕ್ಕೆ ಅಪಮಾನ ಮಾಡಿದ ಶಂಕೆ ವ್ಯಕ್ತವಾಗಿದ್ದು ಈ ಕುರಿತು ಎಫ್‌ಐಆರ್‌ ದಾಖಲಾಗಿದೆ. ಈದ್‌ ಮಿಲಾದ್‌ ದಿನ ಕುಮಟಾ ತಾಲೂಕಿನ ಮಿರ್ಜಾನ್‌ ಸಮೀಪ ರಾಷ್ಟ್ರ ಧ್ವಜದಂತೆ ಹೋಲುತ್ತಿರುವ ರೀತಿಯ ಧ್ವಜದ ಮೇಲೆ ಅರ್ಧ ಚಂದ್ರ, ಸ್ಟಾರ್, ಇತ್ಯಾದಿ ಗುರುತನ್ನು ಪ್ರದರ್ಶಿಸಲಾಗಿತ್ತು. ಈ ಘಟನೆ … Continued

ಕ್ರಿಕೆಟ್‌ ವಿಶ್ವಕಪ್‌ ನಲ್ಲಿ ಇಂಗ್ಲೆಂಡ್ ವಿರುದ್ಧ ಸೆಂಚುರಿ ಸಿಡಿಸಿದ ನ್ಯೂಜಿಲೆಂಡ್ ಆಟಗಾರ ʼರಚಿನ್ʼ ರವೀಂದ್ರ ಕನ್ನಡಿಗ ; ಈ ಆಟಗಾರನ ಹೆಸರಲ್ಲಿರುವ ವಿಶೇಷತೆ ಏನು..?

ಗಾಯಗೊಂಡಿದ್ದ ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಅವರ ಅನುಪಸ್ಥಿತಿಯಲ್ಲಿ ಕಣಕ್ಕಿಳಿದು ಹಾಲಿ ವಿಶ್ವ ಚಾಂಪಿಯನ್‌ ಇಂಗ್ಲೆಂಡ್‌ ಅದ್ಭುತ ಆಟದೊಂದಿಗೆ ಗಮನ ಸೆಳೆದ ಭಾರತೀಯ ಮೂಲದ ಯುವ ಕ್ರಿಕೆಟರ್‌ ರಚಿನ್ ರವೀಂದ್ರ ಈಗ ಭಾರಿ ಸುದ್ದಿಯಾಗಿದ್ದಾರೆ. ಅಹ್ಮದಾಬಾದ್​ನ ನರೇಂದ್ರ ಮೋದಿ ಮೈದಾನದಲ್ಲಿ ಗುರುವಾರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ (ICC ODI World Cup 2023) … Continued

ಲೋಕಸಭೆ ಚುನಾವಣೆ 2024 : ಇಂಡಿಯಾ ಟಿವಿ-ಸಿಎನ್‌ಎಕ್ಸ್ ಸಮೀಕ್ಷೆ : ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿಕೂಟಕ್ಕೆ ಹೆಚ್ಚು ಸ್ಥಾನ, ಕಾಂಗ್ರೆಸ್‌ಗೆ ಲಾಭದ ಸಾಧ್ಯತೆ

ಇಂಡಿಯಾ ಟಿವಿ-ಸಿಎನ್‌ಎಕ್ಸ್ ಸಮೀಕ್ಷೆಯ ಪ್ರಕಾರ ಕರ್ನಾಟಕದಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) 16 ಲೋಕಸಭಾ ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ, ಕಾಂಗ್ರೆಸ್ 10 ಮತ್ತು ಜೆಡಿಎಸ್‌ 2 ಸ್ಥಾನಗಳನ್ನು ಗಳಿಸಬಹುದಾಗಿದೆ. ಸಮೀಕ್ಷೆ ಪ್ರಕಾರ ಕರ್ನಾಟಕದಲ್ಲಿ ಬಿಜೆಪಿ ಶೇ.44ರಷ್ಟು ಮತಗಳನ್ನು ಪಡೆಯಬಹುದು ಹಾಗೂ ಕಾಂಗ್ರೆಸ್ ಶೇ.40ರಷ್ಟು ಮತಗಳನ್ನು ಗಳಿಸುವ ಸಾಧ್ಯತೆಯಿದೆ ಮತ್ತು ಜೆಡಿಎಸ್ ಶೇ.11ರಷ್ಟು ಮತಗಳನ್ನು ಪಡೆಯುವ ಸಾಧ್ಯತೆಯಿದೆ. … Continued

ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲು : ಭಕ್ತವತ್ಸಲ ಸಮಿತಿ 5 ಶಿಫಾರಸುಗಳ ಪೈಕಿ ಮೂರು ಶಿಫಾರಸ್ಸಿಗೆ ಸಚಿವ ಸಂಪುಟ ಅಸ್ತು

ಬೆಂಗಳೂರು: ಹಿಂದುಳಿದ ವರ್ಗಳಿಗೆ ಪಂಚಾಯತ್‌ ರಾಜ್‌ ಸಂಸ್ಥೆಗಳಲ್ಲಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ರಾಜಕೀಯ ಪ್ರಾತಿನಿಧ್ಯ ನೀಡುವ ಕುರಿತು ರಚಿಸಲಾಗಿದ್ದು ನ್ಯಾಯಮೂರ್ತಿ ಭಕ್ತವತ್ಸಲ ಸಮಿತಿಯು ನೀಡಿದ್ದ 5 ಶಿಫಾರಸುಗಳ ಪೈಕಿ ಮೂರು ಶಿಫಾರಸ್ಸಿಗೆ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಕಾನೂನು ಮತ್ತು ಸಂಸದೀಯ ಸಚಿವ ಎಚ್‌.ಕೆ.ಪಾಟೀಲ ಗುರುವಾರ ಹೇಳಿದ್ದಾರೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ … Continued

ವೀಡಿಯೊ..| ಔಷಧಿ ಖರೀದಿಗೆಂದು ಔಷಧದ ಅಂಗಡಿಗೆ ಬಂದಾಗಲೇ ಹೃದಯಘಾತದಿಂದ ಸಾವು

ಮೈಸೂರು: ಈ ಹೃದಯ ಯಾವ ಕ್ಷಣದಲ್ಲಿ ಆಘಾತಕ್ಕೆ (Heart Attack) ಒಳಗಾಗುತ್ತದೆ ಎಂದು ಊಹಿಸಲು ಸಾಧ್ಯವಿಲ್ಲ. ಕುಳಿತಲ್ಲೇ ಕುಸಿಯುವುದು, ಮಾತನಾಡುತ್ತಿರುವಾಗಲೇ ಸ್ತಬ್ದವಾಗುವುದು, ನೃತ್ಯ ಮಾಡುತ್ತಲೇ ಬೀಳುವುದು.. ಹೀಗೆ ಸಾವಿನ ಹತ್ತಾರು ಸನ್ನಿವೇಶಗಳು ಕಂಡುಬರುತ್ತಿವೆ. ಮೈಸೂರಿನಲ್ಲಿ ಔಷಧದ ಅಂಗಡಿಯೊಂದಕ್ಕೆ (Medical Stores) ಔಷಧ ತೆಗೆದುಕೊಳ್ಳಲೆಂದು ಬಂದ ವ್ಯಕ್ತಿ ಅಲ್ಲೇ ಕುಸಿದುಬಿದ್ದು ಮೃತಪಟ್ಟ ಘಟನೆಯೊಂದು ವರದಿಯಾಗಿದೆ. ಘಟನೆಯ ದೃಶ್ಯಗಳು … Continued