ಶತಮಾನದ ಸಂಭ್ರಮದಲ್ಲಿ ನಿವೃತ್ತ ಕುಲಸಚಿವ ಎಸ್. ಆರ್. ಹಿರೇಮಠ

( ೧೩-೦೭-೨೦೨೫ ರಂದು ಹುಬ್ಬಳ್ಳಿಯ  ದೇಶಪಾಂಡೆ ನಗರದ ಸವಾಯಿ ಗಂಧರ್ವ ಹಾಲಿನಲ್ಲಿ ಎಸ್‌. ಆರ್. ಹಿರೇಮಠ ಅವರ ಜನ್ಮ ಶತಮಾನೋತ್ಸವ ಜರುಗಲಿದ್ದು ಆ ನಿಮಿತ್ತ ಲೇಖನ) ಸೋಮಶೇಖರ ರಾಚಯ್ಯ ಹಿರೇಮಠ ಅವರು ಶೈಕ್ಷಣಿಕ ವಲಯದಲ್ಲಿ ಎಸ್.ಆರ್. ಹಿರೇಮಠ ಎಂದೇ ಚಿರಪರಿಚಿತರು. ಎಸ್.ಆರ್. ಹಿರೇಮಠರದು ಲಕ್ಷ್ಮೇಶ್ವರದ ಹತ್ತಿರದ ಬಟ್ಟೂರ ಗ್ರಾಮದಲ್ಲಿ ಶ್ರದ್ಧಾ ಭಕ್ತಿಯ ಹಿರೇಮಠ ಕುಟುಂಬದಲ್ಲಿ ಜನಿಸಿದವರು. … Continued

ಶಿವಮೊಗ್ಗದ ಕೇಂದ್ರ ಕಾರಾಗೃಹದ ಕೈದಿಯ ಹೊಟ್ಟೆಯಲ್ಲಿ ಮೊಬೈಲ್ ಪತ್ತೆ…!

ಶಿವಮೊಗ್ಗ : ನಗರದ ಸೋಗಾನೆಯ ಕೇಂದ್ರ ಕಾರಾಗೃಹದಲ್ಲಿದ್ದ ಕೈದಿಯೊಬ್ಬ ಮೊಬೈಲ್ ಫೋನ್ ನುಂಗಿದ್ದು, ಅದನ್ನು ಜುಲೈ ೮ರಂದು ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆಯಲಾಗಿದೆ. ಬಳಿಕ ಮೊಬೈಲ್ ಅನ್ನು ಜೈಲು ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ. ದೌಲತ್ ಅಲಿಯಾಸ್ ಗುಂಡ (30) ಎಂಬ ಕೈದಿಯ ಹೊಟ್ಟೆಯಲ್ಲಿ ಮೂರು ಇಂಚು ಉದ್ದದ ಒಂದು ಇಂಚು ಅಗಲದ ಮೊಬೈಲ್ ಫೋನ್ ಪತ್ತೆಯಾಗಿದೆ. ಪ್ರಕರಣವೊಂದರಲ್ಲಿ ದೌಲತ್‌ಗೆ … Continued

ವೀಡಿಯೊ…| ಗೋಕರ್ಣ ರಾಮತೀರ್ಥ ಗುಡ್ಡದ ಮೇಲಿನ ಗುಹೆಯಲ್ಲಿ ಉಳಿದುಕೊಂಡಿದ್ದ ವಿದೇಶಿ ಮಹಿಳೆ-ಇಬ್ಬರು ಪುಟ್ಟ ಮಕ್ಕಳ ರಕ್ಷಣೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ರಾಮತೀರ್ಥ ಗುಡ್ಡದ ಮೇಲಿನ ಅಪಾಯಕಾರಿ ಗುಹೆಯಲ್ಲಿ ಉಳಿದುಕೊಂಡಿದ್ದ ವಿದೇಶಿ ಮಹಿಳೆ ಹಾಗೂ ಅವರ ಇಬ್ಬರು ಚಿಕ್ಕ ಹೆಣ್ಣು ಮಕ್ಕಳನ್ನು ಪೊಲೀಸರು ರಕ್ಷಣೆ ಮಾಡಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಿದ್ದಾರೆ. ಗೋಕರ್ಣ ಪಿಎಸ್‌ಐ ಶ್ರೀಧರ ಎಸ್‌.ಆರ್‌. ಹಾಗೂ ಸಿಬ್ಬಂದಿ ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಜುಲೈ 9ರಂದು ರಾಮತೀರ್ಥ ಗುಡ್ಡದ ಮೇಲೆ … Continued

ದಾಂಡೇಲಿ : ಮಾಡಿಕೊಂಡ ಸಾಲ ತೀರಿಸಲು 20 ದಿನದ ಮಗು ಮಾರಾಟ ಮಾಡಿದ ದಂಪತಿ‌…!

ಕಾರವಾರ : ಮಾಡಿಕೊಂಡ ಸಾಲ ತೀರಿಸಲು ದಂಪತಿ‌ ತಮ್ಮ 20 ದಿನದ ಮಗುವನ್ನು ಮಾರಾಟ ಮಾಡಿರುವ ಘಟನೆ ಉತ್ತರ ಕ‌ನ್ನಡ ಜಿಲ್ಲೆಯ ದಾಂಡೇಲಿ (Dandeli) ತಾಲೂಕಿನ ಹಳೇ ದಾಂಡೇಲಿಯಲ್ಲಿ ನಡೆದಿದೆ. ಹಳೇ ದಾಂಡೇಲಿಯ ದೇಶಪಾಂಡೆ ನಗರದ ನಿವಾಸಿಯಾದ ಮಾಹೀನ್ ಎಂಬ ಮಹಿಳೆ ಜೂನ್ 17 ರಂದು ದಾಂಡೇಲಿಯ ಸರ್ಕಾರಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದರು. … Continued

ಕಿರುತೆರೆ ನಟಿ-ನಿರೂಪಕಿಗೆ ಚಾಕುವಿನಿಂದ ಇರಿದ ಗಂಡ…

ಬೆಂಗಳೂರು: ಕಿರುತೆರೆ ಧಾರಾವಾಹಿ ನಟಿ ಹಾಗೂ ನಿರೂಪಕಿಗೆ ಆಕೆಯ ಗಂಡನೇ ಚಾಕುವಿನಿಂದ ಇರಿದಿರುವ ಘಟನೆ ಶುಕ್ರವಾರ ವರದಿಯಾಗಿದೆ. ವರದಿಗಳ ಪ್ರಕಾರ, ಧಾರಾವಾಹಿ ನಟಿ ಹಾಗೂ ಖಾಸಗಿ ವಾಹಿನಿಯ ನಿರೂಪಕಿಗೆ ಮಂಜುಳಾ ಅಲಿಯಾಸ್‌ ಶ್ರುತಿ ಎಂಬವರಿಗೆ ಚಾಕು ಇರಿಯಲಾಗಿದ್ದು,  ಆಕೆಯ ಗಂಡನೇ ಆಕೆಯ ಮೇಲೆ ಪೆಪ್ಪರ್ ಸ್ಪ್ರೇ ಹಾಕಿ ಬಳಿಕ ಆಕೆಗೆ ಚಾಕುವಿನಿಂದ ಇರಿದಿದ್ದಾನೆ ಎನ್ನಲಾಗಿದೆ. ಬೆಂಗಳೂರಿನ … Continued

ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ವ್ಯವಸ್ಥೆ : ರಾಜ್ಯ ಸರ್ಕಾರದ ಮಹತ್ವದ ಘೋಷಣೆ

ಬೆಂಗಳೂರು : ರಾಜ್ಯ ಸರ್ಕಾರ ಸರ್ಕಾರಿ ಶಾಲಾ ಮಕ್ಕಳಿಗೆ ಮಹತ್ವದ ಘೋಷಣೆ ಮಾಡಿದೆ. ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ (Karnataka Public School) ಎಲ್‌ಕೆಜಿ (LKG)ಯಿಂದ ಪಿಯುಸಿ ವರೆಗೆ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಕಲ್ಪಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಮೂಲಕ ಸರ್ಕಾರಿ ಶಾಲೆಗಳ ಬಲವರ್ಧನೆಗೆ ಒತ್ತು ನೀಡಲು ನಿರ್ಧರಿಸಿದೆ. ಈ ಕುರಿತು … Continued

ಶಿರಸಿ : ಜುಲೈ 13ಕ್ಕೆ ಕರ್ಮಫಲ ಕಾದಂಬರಿ ಲೋಕಾರ್ಪಣೆ

ಶಿರಸಿ : ತೋಟಗಾರಿಕೆ ಉಪ ನಿರ್ದೇಶಕರಾದ ಸತೀಶ ಹೆಗಡೆ ಅವರ ಕರ್ಮಫಲ ಕಾದಂಬರಿ ಲೋಕಾರ್ಪಣೆ ಕಾರ್ಯಕ್ರಮ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಸಾಮ್ರಾಟ ಹೊಟೇಲ್‌ ಎದುರಿನ ರಂಗಧಾಮದಲ್ಲಿ ಜುಲೈ 13 ರಂದು ಅಪರಾಹ್ನ 4 ಗಂಟೆಗೆ ನಡೆಯಲಿದೆ. ತೋಟಗಾರಿಕೆ ಇಲಾಖೆ ನಿರ್ದೇಶಕರಾದ ಡಾ.ಬಿ.ಪಿ.ಸತೀಶ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಖ್ಯಾತ ಚಲನಚಿತ್ರ ನಟ ಸುಚೇಂದ್ರ ಪ್ರಸಾದ ತ್ರಿವೇದಿ … Continued

ಶಿರಸಿ : ಇಂದಿನಿಂದ (ಜು.11) ಸಾಂಪ್ರದಾಯಿಕ ತರಕಾರಿ ಬೀಜ ಮೇಳ-ಮಲೆನಾಡು ಮೇಳ

ಶಿರಸಿ : ಉತ್ತರಕನ್ನಡ ಸಾವಯವ ಒಕ್ಕೂಟ , ಶಿರಸಿ ಮತ್ತು ವನಸ್ತ್ರೀ ಸಂಸ್ಥೆ ಸಹಯೋಗದಲ್ಲಿ ಎರಡು ದಿನಗಳ ಮಲೆನಾಡು ಮೇಳ ಹಾಗೂ ಸಾಂಪ್ರದಾಯಿಕ ತರಕಾರಿ ಬೀಜ ಮೇಳವನ್ನು ಜುಲೈ 11 ಮತ್ತು 12ರಂದು ಇಲ್ಲಿನ ಎಪಿಎಂಸಿಯ ಹೊಸ ಮಾರುಕಟ್ಟೆ ಆವರಣದಲ್ಲಿರುವ ಟಿಆರ್‌ಸಿ ಬ್ಯಾಂಕ್ ಪಕ್ಕದ ಪಿಸಿಆರ್‌ಡಿ ಬ್ಯಾಂಕ್ ಕಟ್ಟಡದ ನೆಲಸಿರಿ ಅರ್ಗ್ಯಾನಿಕ್ ಹಬ್‌ನಲ್ಲಿ ಆಯೋಜಿಸಲಾಗಿದೆ. ಜುಲೈ … Continued

ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿಗೆ ಇಡಿ ಶಾಕ್‌; ಹಲವು ಕಡೆ ದಾಳಿ

ಬೆಂಗಳೂರು: ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಸುಬ್ಬಾ ರೆಡ್ಡಿ ಮನೆ ಹಾಗೂ ಕಚೇರಿಯ ಮೇಲೆ ಗುರುವಾರ ಜಾರಿ ನಿರ್ದೇಶನಾಲಯ( ಇ.ಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಾಸಕ ಸುಬ್ಬಾ ರೆಡ್ಡಿಗೆ ಸೇರಿದ 5 ಸ್ಥಳಗಳ ಮೇಲೆ ಇ.ಡಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ. ದೇಶದ ವಿವಿಧ ಕಡೆಗಳಲ್ಲಿ ಇದೇ ರೀತಿಯಲ್ಲಿ ಇತರರ ಮೇಲೆ ದಾಳಿ … Continued