ಕೆ.ಜಿ.ಹಳ್ಳಿ, ಡಿ.ಜಿ.ಹಳ್ಳಿ ಗಲಭೆ: ನಷ್ಟಪರಿಹಾರಕ್ಕೆ ಅರ್ಜಿ ಸಲ್ಲಿಸಲು ಮನವಿ

ಬೆಂಗಳೂರು: ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆ ಪ್ರಕರಣದಲ್ಲಿ ನಷ್ಟ ಅನುಭವಿಸಿದವರು ತಮ್ಮ ಆಸ್ತಿಯ ಮಾಹಿತಿಗಳ ಜತೆ ನಷ್ಟ ಪರಿಹಾರಕ್ಕಾಗಿ ಅರ್ಜಿ ಸಲ್ಲಿಸುವಂತೆ ಎಚ್.ಎಸ್.ಕೆಂಪಣ್ಣ ಆಯೋಗ ಮನವಿ ಮಾಡಿದೆ. ಆಯೋಗದ ಅಧ್ಯಕ್ಷ ನಿವೃತ್ತ ನ್ಯಾಯಮೂರ್ತಿ ಕೆಂಪಣ್ಣ ಶುಕ್ರವಾರ ಬಾಲಬ್ರೂಯಿ ಅತಿಥಿಗೃಹದ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಾರ್ವಜನಿಕರು ನಷ್ಟ ಪರಿಹಾರಕ್ಕಾಗಿ ಆಯೋಗದ ಮುಂದೆ ಅರ್ಜಿ ಸಲ್ಲಿಸುವಂತೆ ಮನವಿ ಮಾಡಿದರು. … Continued

ಮೀಸಲಾತಿ : ಸೂಕ್ತ ಸಂದರ್ಭದಲ್ಲಿ ಸೂಕ್ತ ತೀರ್ಮಾನ

ಬೆಂಗಳೂರು: ವಿವಿಧ ಸಮುದಾಯಗಳು ಮೀಸಲಾತಿ ಹೆಚ್ಚಳ ಮಾಡಬೇಕೆಂಬ ಬೇಡಿಕೆ ಇಟ್ಟಿರುವ ಕುರಿತು ಗುರುವಾರದ ಸಚಿವ ಸಂಪುಟ ಸಭೆಯಲ್ಲಿ ಸಚಿವರಿಂದ ಅಭಿಪ್ರಾಯಗಳನ್ನು ಸಂಗ್ರಹಿಸಿದ್ದೇನೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಯೊಬ್ಬ ಸಚಿವರು ಸಮುದಾಯಗಳ ಬೇಡಿಕೆ ಕುರಿತಾಗಿ ಅಭಿಪ್ರಾಯಗಳನ್ನು ನನ್ನ ಬಳಿ ಹಂಚಿಕೊಂಡಿದ್ದಾರೆ. ಸೂಕ್ತ ಸಂದರ್ಭದಲ್ಲಿ ಸರಿಯಾದ ನಿರ್ಣಯಗಳನ್ನು ಕೈಗೊಳ್ಳುವೆ ಎಂದರು. ವಿವಿಧ ಸಮುದಾಯಗಳಿಗೆ … Continued

ಪಿಎಫ್‌ಐ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಬೊಮ್ಮಾಯಿ ಸೂಚನೆ

ಬೆಂಗಳೂರು : ದೇಶ ವಿರೋಧಿ ಮತ್ತು ಅಸಂವಿಧಾನಿಕ ಹೇಳಿಕೆ ನೀಡಿರುವ ಪಾಪುಲರ್ ಫ್ರಂಟ್ ಆಫ್ ಇಂಡಿಯಾ ಸಂಸ್ಥೆಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಗೃಹ , ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ. ಶುಕ್ರವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಳ್ಳಾಲದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಿಎಫ್‌ಐ ನಾಯಕರು … Continued

ಅಯೋಧ್ಯಾ ಶ್ರೀರಾಮ ಮಂದಿರ ಲೆಕ್ಕ ಕೇಳಲು ಸಿದ್ದರಾಮಯ್ಯ ಯಾರು?: ಸಚಿವ ಈಶ್ವರಪ್ಪ

ಅಯೋಧ್ಯೆಯಲ್ಲಿ ನಿರ್ಮಿಸುತ್ತಿರುವ ಶ್ರೀರಾಮ ಮಂದಿರದ ಲೆಕ್ಕ ಕೇಳಲು ಸಿದ್ದರಾಮಯ್ಯ ಯಾರು ಎಂದು ಪ್ರಶ್ನಿಸಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ, ಬೇಕಾದರೆ ಕೂಲಿ ಮಾಡುವ ವ್ಯಕ್ತಿ ಲೆಕ್ಕ ಕೇಳಲಿ ಎಂದು ಅಭಿಪ್ರಾಯಪಟ್ಟಿದ್ದಾರೆ. ಸುಪ್ರೀಂ ಕೋರ್ಟ್ ತೀರ್ಪಿನ ಬಗ್ಗೆ ಗೌರವವಿಲ್ಲದೇ ರಾಮಮಂದಿರ ನಿರ್ಮಾಣದ ಸ್ಥಳವನ್ನು ವಿವಾದಿತ ಸ್ಥಳ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಪ್ರಧಾನಿ ಮೋದಿ ಬಗ್ಗೆ ಏಕವಚನದಲ್ಲಿ ಮಾತನಾಡುವುದು … Continued

ಕೇರಳದಲ್ಲಿ ಕೊರೊನಾ ಕೇಕೆ: ಕೊಡಗು ಜಿಲ್ಲೆಯಲ್ಲಿ ಕಟ್ಟೆಚ್ಚರ

ಕೇರಳದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ವಿಪರೀತ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ಗಡಿ ಭಾಗಗಳಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕೇರಳಕ್ಕೆ ಹೋಗಿ ಬರುವವರನ್ನು ಪರೀಕ್ಷೆಗೊಳಪಡಿಸಲಾಗುತ್ತಿದೆ. ಕೇರಳದಲ್ಲಿ ಬುಧವಾರ ಫೆ.17 ರಂದು ಒಂದೇ ದಿನ 4,892 ಕೊರೊನಾ ಪಾಸಿಟಿವ್‌ ಪ್ರಕರಣಗಳು ಪತ್ತೆಯಾಗಿದೆ. ಈ ಮೂಲಕ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ ಅಲ್ಲಿ ಈಗ 60,803ಕ್ಕೆ ಏರಿದಂತಾಗಿದೆ. 746 … Continued

ಕರ್ನಾಟಕದಲ್ಲಿ ಮುಂದಿನ ೨೪ ತಾಸಿನಲ್ಲಿ ಮಳೆ ಸಾಧ್ಯತೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ, ಮಧ್ಯ ಮತ್ತು ದಕ್ಷಿಣ ಭಾರತದ ಕೆಲವು ಭಾಗಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಮಳೆಯಾಗುವ ಸಾಧ್ಯತೆಗಳಿವೆ. ಕರ್ನಾಟಕ, ಕೇರಳ, ವಿದರ್ಭ, ಛತ್ತೀಸಗಡ, ಮಧ್ಯ ಮಹಾರಾಷ್ಟ್ರ, ತಮಿಳುನಾಡು, ಪುದುಚೇರಿ ಹಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಕುರಿತಂತೆ ಭಾರತೀಯ ಹವಾಮಾನ ಇಲಾಖೆ ಮಾಹಿತಿ … Continued

ಮಾ.೨೦ರಿಂದ ರಾಜ್ಯದಲ್ಲಿ ರೈತರ ಸಮಾವೇಶ

ದೆಹಲಿಯಲ್ಲಿ ರೈತ ಹೋರಾಟ ಬೆಂಬಲಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಮಾರ್ಚ್‌ ೨೦ರಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ರೈತ ಸಮಾವೇಶ ಆಯೋಜಿಸಲಾಗುವುದು ಎಂದು ರೈತ ಸಂಘದ ವರಿಷ್ಠೆ ಚುಕ್ಕಿ ನಂಜುಂಡಸ್ವಾಮಿ ಹೇಳಿದ್ದಾರೆ. ಮಾ.೨೦ರಂದು ಶಿವಮೊಗ್ಗ, ಮಾ.೨೧ರಂದು ಹಾವೇರಿ, ಮಾ.೨೨ರಂದು ಬೆಳಗಾವಿಯಲ್ಲಿ ರೈತ ಸಮಾವೇಶ ನಡೆಯಲಿದೆ. ಸಮಾವೇಶಗಳಲ್ಲಿ ಭಾರತೀಯ ಕಿಸಾನ ಯೂನಿಯನ್‌ ಮುಖಂಡ … Continued

ಕಾಂಗ್ರೆಸ್‌ ಆಂತರಿಕ ತಿಕ್ಕಾಟ ಮೊದಲು ಬಗೆಹರಿಸಿಕೊಳ್ಳಲಿ: ಸಿದ್ದುಗೆ ಬಿಜೆಪಿ ಟಾಂಗ್‌

ಬೆಂಗಳೂರು: ನಿಮ್ಮ ಪಕ್ಷದೊಳಗಿನ ಆಂತರಿಕ ಹೋರಾಟವನ್ನು ಮೊದಲು ಬಗೆಹರಿಸಿಕೊಳ್ಳಿ ಎಂದು ಬಿಜೆಪಿ ಸಿದ್ದರಾಮಯ್ಯ ಅವರಿಗೆ ಸಲಹೆ ನೀಡಿದೆ. ಕಾಂಗ್ರೆಸ್‌ನಲ್ಲಿ ಅಹಿಂದ ವಿಚಾರವಾಗಿ ಪರ ಹಾಗೂ ವಿರೋಧ ಚರ್ಚೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಟ್ವೀಟ್ ಮೂಲಕ ಟಾಂಗ್ ನೀಡಿದೆ. ಅಹಿಂದ ಎಂದು ಹೊರಟಿದ್ದ ಸಿದ್ದರಾಮಯ್ಯ ದಿಢೀರನೆ ಅಲ್ಪಸಂಖ್ಯಾತರನ್ನು ಕೈಬಿಟ್ಟು ಹಿಂದ ಎನ್ನುತ್ತಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಪರಾಭವಗೊಂಡಾಗಲೇ ಜಾತಿ, … Continued

ಬೆಂಗಳೂರು ವಿಮಾನ ನಿಲ್ದಾಣದಿಂದ 5 ಹೊಸ ಮಾರ್ಗಗಳಿಗೆ ವಿಮಾನ ಸೇವೆ

ಫೆಬ್ರವರಿ ಅಂತ್ಯಕ್ಕೆ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಿಂದ ಐದು ಹೊಸ ಮಾರ್ಗಗಳಿಗೆ ವಿಮಾನಯಾನ ಸೇವೆ ಆರಂಭಗೊಳ್ಳಲಿದೆ. ಆಗ್ರಾ, ಕರ್ನೂಲ, ರಾಜಕೋಟ್‌, ದುರ್ಗಾಪುರ, ದಿಬ್ರೂಗಢ ನಗರಗಳಿಗೆ ಫೆಬ್ರವರಿ ಅಂತ್ಯದಿಂದ ವಿಮಾನಯಾನ ಸೇವೆ ಆರಂಭವಾಗುವುದು. ರಾಜಕೋಟ್‌, ದುರ್ಗಾಪುರಕ್ಕೆ ಸ್ಪೈಸ್‌ ಜೆಟ್‌ ಹಾಗೂ ದಿಬ್ರೂಗಢಕ್ಕ ಇಂಡಿಗೊ, ಆಗ್ರಾ ಮತ್ತು ಕರ್ನೂಲ್‌ಗೆ ಮಾರ್ಚ್‌ ಮೊದಲ ವಾರದಿಂದ ವಿಮಾನಸೇವೆ ಶುರುವಾಗಲಿದೆ. ಇದರಿಂದಾಗಿ ಬೆಂಗಳೂರಿನಿಂದ … Continued

ಹುಬ್ಬಳ್ಳಿಗೆ ಬರಲಿವೆ ಮಲೇಶಿಯಾ ಸೈಕಲ್‌ಗಳು

ಸ್ಮಾರ್ಟ್‌ ಸಿಟಿ ಯೋಜನೆಯಡಿ ಬೈಸಿಕಲ್‌ ಪೂರೈಸಲು ಚೀನಾ ಕಂಪನಿಯೊಂದಿಗಿನ ಟೆಂಡರ್‌ ರದ್ದುಗೊಂಡ ಹಿನ್ನೆಲೆಯಲ್ಲಿ ಮಲೇಶಿಯಾ ಸೈಕಲ್‌ಗಳು ಹುಬ್ಬಳ್ಳಿಗೆ ಬರಲಿವೆ. ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿದ 340 ಸೈಕಲ್‌ಗಳು ಕೌಲಾಲಂಪುರದಿಂದ ಹಡಗು ಏರಿದ್ದು, ಮುಂದಿನ ತಿಂಗಳ ಆರಂಭದಲ್ಲಿ ಹುಬ್ಬಳ್ಳಿ ರಸ್ತೆಯಲ್ಲಿ ಮಲೇಶಿಯಾ ಸೈಕಲ್‌ಗಳು ಸಂಚರಿಸಲಿವೆ. ಪರಿಸರ ಸ್ನೇಹಿ ಸಾರಿಗೆಗೆ ಉತ್ತೇಜನ ನೀಡುವ ಉದ್ದೇಶದಿಂದ ಸ್ಮಾರ್ಟ್‌ ಸಿಟಿ ಯೋಜನೆಯಡಿ ಸೈಕಲ್‌ … Continued