ಕರ್ನಾಟಕದಲ್ಲಿ ಬುಧವಾರ 7 ಸಾವಿರದ ಸಮೀಪ ಬಂದ ದೈನಂದಿನ ಕೊರೊನಾ ಸೋಂಕು..!

ಬೆಂಗಳೂರು: ಕರ್ನಾಟಕದಲ್ಲಿ ಕೊರೋನಾ ಎರಡನೇ ಅಲೆಯಲ್ಲಿ ಸೋಂಕು ದಿನದಿಂದ ದಿನ್ಕೆ ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 6,976 ಜನರಿಗೆ ಹೊಸ ಕೊರೊನಾ ಸೋಂಕು ದೃಢಪಟ್ಟ ವರದಿಯಾಗಿದೆ. ಇದೇವೇಳೆ ಸೋಂಕಿನಿಂದ 35 ಮಂದಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಈಗ ಕೊರೋನಾ ಸೋಂಕಿತರ ಒಟ್ಟು ಸಂಖ್ಯೆ 10,33,560ಕ್ಕೆ ಏರಿಕೆಯಾಗಿದೆ. ಸಾವಿನ ಸಂಖ್ಯೆ 12,731ಕ್ಕೆ ತಲುಪಿದೆ ಎಂದು ಆರೋಗ್ಯ ಮತ್ತು ಕುಟುಂಬ … Continued

ಮಹತ್ವದ ಸುದ್ದಿ…ಕರ್ನಾಟಕದಲ್ಲಿ ಏಪ್ರಿಲ್‌ ಈ ದಿನದಿಂದ ಕೆಲಸ ಸ್ಥಳದಲ್ಲಿಯೇ ಲಸಿಕೆ..! 

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಹವಾಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಲಸಿಕೆ ಅಭಿಯಾನವನ್ನ ಮತ್ತಷ್ಟು ಚುರುಕುಗೊಳಿಸಲು ಸರ್ಕಾರ ನಿರ್ಧರಿಸಿದೆ. ಮಹತ್ವದ ನಿರ್ಧಾರದಲ್ಲಿ ಕೇಂದ್ರ ಸರ್ಕಾರವು ಕೆಲಸದ ಸ್ಥಳದಲ್ಲಿಯೇ ಲಸಿಕೆ ನೀಡಬಹುದು ಎಂದು ರಾಜ್ಯಗಳಿಗೆ ಅನುಮತಿ ನೀಡಿದ ನಂತರ ಕರ್ನಾಟಕ ಸರ್ಕಾರವು ಏಪ್ರಿಲ್ 11 ರಿಂದ ಕಚೇರಿಗಳಲ್ಲಿ ಮತ್ತು ಇತರೆ ಉದ್ಯೋಗ ಸ್ಥಳಗಳಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲು … Continued

ಸಾರಿಗೆ ಮುಷ್ಕರ: ಕರ್ನಾಟಕ ವಿವಿ ಕೆಲ ಪರೀಕ್ಷೆಗಳು ಮುಂದೂಡಿಕೆ

ಧಾರವಾಡ : ರಾಜ್ಯ ರಸ್ತೆ ಸಾರಿಗೆ ನೌಕರರ ಅನಿರ್ಧಿಷ್ಟಾವಧಿಯ ಮುಷ್ಕರದ ಹಿನ್ನಲೆಯಲ್ಲಿ, ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಕರ್ನಾಟಕ ವಿಶ್ವ ವಿದ್ಯಾಲಯ  ಏಪ್ರಿಲ್‌ 8 ಹಾಗೂ 9ರಂದು ನಡೆಯಲಿರುವ ಪರೀಕ್ಷೆಯನ್ನು ಮುಂದೂಡಿ ಆದೇಶ ಹೊರಡಿಸಿದೆ. ದಿನಾಂಕ 08-04-2021 ಮತ್ತು 09-04-2021ರಂದು ನಡೆಯಲಿರುವ ಎಲ್ಲ ಸ್ನಾತಕ ಕೋರ್ಸುಗಳ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಕರ್ನಾಟಕ ವಿಶ್ವವಿದ್ಯಾಲಯ ಪ್ರಕಟನೆಯಲ್ಲಿ ತಿಳಿಸಿದೆ. ಈ ಕುರಿತಂತೆ … Continued

ಶೇ.8ರಷ್ಟು ಸಂಬಳ ಹೆಚ್ಚಳಕ್ಕೆ ಸರ್ಕಾರ ಬದ್ಧ, ಮುಷ್ಕರ ಕೈಬಿಡದಿದ್ರೆ ಕಠಿಣ ಕ್ರಮ :ಸಿಎಂ

ಬೆಳಗಾವಿ : ಸಾರಿಗೆ ನೌಕರರಿಗೆ ಶೇ. 8ರಷ್ಟು ಸಂಬಳ ಹೆಚ್ಚಿಸಲು ಸರ್ಕಾರ ಬದ್ಧವಾಗಿದೆ ಎಂಬುದನ್ನು ಈಗಾಗಲೇ ಸ್ಪಷ್ಟ ಮಾಡಿದ್ದೇವೆ. ಹಠ ಮಾಡದೇ ಮುಷ್ಕರ ಕೈ ಬಿಡಬೇಕು. ಮುಷ್ಕರ ಕೈ ಬಿಟ್ಟರೆ ಮಾತುಕತೆ ನಡೆಸಲು ರಾಜ್ಯ ಸರ್ಕಾರ ಸಿದ್ಧ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಬೆಳಗಾವಿಯಲ್ಲಿ ಈ ಬಗ್ಗೆ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಪ್ರಯಾಣಿಕರಿಂದ ಹೆಚ್ಚುವರಿ … Continued

ಮೇ 2ರ ನಂತರ ಏನೇನು ಬದಲಾವಣೆಯಾಗುತ್ತದೆ ಕಾದುನೋಡಿ:ಯತ್ನಾಳ

ಬೆಳಗಾವಿ : ಮುಖ್ಯಮಂತ್ರಿ ಯಡಿಯೂರಪ್ಪನವರು ಮೀಸಲಾತಿ ಕೊಡದಿದ್ರೂ ಪರವಾಗಿಲ್ಲ. ಯಾರು ಹೊಸ ಮುಖ್ಯಮಂತ್ರಿಯಾಗುತ್ತಾರೆಯೋ ಅವರು ಕೊಡುತ್ತಾರೆ. ಮೇ 2ರ ನಂತರ ಏನೇನು ಬದಲಾವಣೆ ಆಗುತ್ತದೆ ಕಾದು ನೋಡಿ.. ಬದಲಾವಣೆ ಖಚಿತ ಬರೆದಿಟ್ಟುಕೊಳ್ಳಿ. ಉತ್ತರ ಕರ್ನಾಟಕದವರೊಬ್ಬರು ಮುಖ್ಯಮಂತ್ರಿಯಾಗುತ್ತಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೊಮ್ಮೆ ಭವಿಷ್ಯ ನುಡಿದಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನನ್ನು ಪ್ರಚಾರಕ್ಕೆ … Continued

ನೋ ವರ್ಕ್ ನೋ ಪೇ:ಶಿಖಾ

ಬೆಂಗಳೂರು: ಕೆಲಸಕ್ಕೆ ಹಾಜರಾಗದಿದ್ದರೆ ಮಾರ್ಚ್ ತಿಂಗಳ ವೇತನ ಕಡಿತಗೊಳಿಸಲಾಗುವುದು ಎಂದು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಶಿಖಾ ಹೇಳಿದ್ದಾರೆ. ಯಶವಂತಪುರ ಡಿಪೋಕ್ಕೆಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೋ ವರ್ಕ್ ನೋ ಪೇ ಎಂಬುದನ್ನು ಈಗಾಗಲೇ ಸ್ಪಷ್ಟಪಡಿಸಿದ್ದೇವೆ ಎಂದು ತಿಳಿಸಿದರು. ಮುಷ್ಕರ ನಿರತರ ಮನವೊಲಿಕೆಗೆ ಸಾಕಷ್ಟು ಪ್ರಯತ್ನ ಮಾಡಿದ್ದೇವೆ. ಉಪಮುಖ್ಯಮಂತ್ರಿಗಳು ಕೂಡ ಸಭೆ ನಡೆಸಿ ಸಂಧಾನ … Continued

ಶಿಕ್ಷಕರ ವರ್ಗಾವಣೆ: ಕೆಎಟಿ ಆದೇಶ ಎತ್ತಿ ಹಿಡಿದ ಹೈಕೋರ್ಟ್‌

ಬೆಂಗಳೂರು: ಶಿಕ್ಷಕರ ವರ್ಗಾವಣೆ ಕುರಿತಂತೆ ಕೆಎಟಿ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. 2020 -21 ನೇ ಸಾಲಿನಲ್ಲಿ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ಸಂದರ್ಭದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಹೆಚ್ಚುವರಿ ಶಿಕ್ಷಕರಿಗೆ ಆದ್ಯತೆ ನೀಡಬೇಕೆಂದು ಶಿಕ್ಷಣ ಇಲಾಖೆಯ ಆದೇಶ ರದ್ದುಗೊಳಿಸಿ ಕರ್ನಾಟಕ ಆಡಳಿತ ನ್ಯಾಯ ಮಂಡಳಿ(KAT) ತೀರ್ಪು ನೀಡಿತ್ತು. ಈ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ. ಹೈಕೋರ್ಟ್ ಹಿರಿಯ … Continued

ರಮೇಶ ಜಾರಕಿಹೊಳಿ ಆಸ್ಪತ್ರೆಯಿಂದ ಬಿಡುಗಡೆ, ಮನೆಯಲ್ಲಿಯೇ ಕ್ವಾರಂಟೈನ್‌

ಬೆಳಗಾವಿ : ಸಿಡಿ ಪ್ರಕರಣದಿಂದ ಸುದ್ದಿಯಾಗಿರುವ ಮಾಜಿ ಸಚಿವ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಬುಧವಾರ ಬೆಳಿಗ್ಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಮಾಜಿ ರಮೇಶ್ ಜಾರಕಿಹೊಳಿ ಏಪ್ರಿಲ್ 4ರಂದು ಕೋವಿಡ್-19 ಸೋಂಕಿನ ಹಿನ್ನೆಲೆಯಲ್ಲಿ ಬೆಳಗಾವಿಯ ಗೋಕಾಕ್ ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರಿಗೆ ಏಪ್ರಿಲ್ 1ರಂದು ಕೊರೋನಾ ಸೋಂಕು ದೃಢಪಟ್ಟಿತ್ತು … Continued

ಮಹತ್ವದ ಸುದ್ದಿ..ಮಂಗಳೂರು ವಿವಿ ಪರೀಕ್ಷೆ ಮುಂದೂಡಿಕೆ

ಮಂಗಳೂರು: ಸಾರಿಗೆ ನೌಕರರ ಮುಷ್ಕರ ಏ.೭ರಂದು (ನಾಳೆ) ನಡೆಯಲಿರುವ ಹಿನ್ನೆಲೆಯಲ್ಲಿ ಬುಧವಾರ ನಡೆಯಬೇಕಿದ್ದ ಮಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆ ಮುಂದೂಡಲಾಗಿದೆ. ಈ ಬಗ್ಗೆ ಮಂಗಳೂರು ವಿವಿ ಪರೀಕ್ಷಾಂಗ ವಿಭಾಗದ ಕುಲಸಚಿವ ಪ್ರೊ ಪಿ ಎಲ್ ಧರ್ಮೇಗೌಡ ಮಾಹಿತಿ ನೀಡಿದ್ದು, ಮುಂದೂಡಿಕೆಯಾದ ದಿನಾಂಕವನ್ನು ವಿಶ್ವವಿದ್ಯಾಲಯ ಇನ್ನೂ ಘೋಷಿಸಿಲ್ಲ. ಶೀಘ್ರದಲ್ಲೇ ದಿನಾಂಕ ಪ್ರಕಟ ಮಾಡಲಾಗುವುದು ಎಂದು ಹೇಳಿದ್ದಾರೆ. ಶಿವಮೊಗ್ಗದ ಕುವೆಂಪು … Continued

ಸಂಸದ ಅನಂತಕುಮಾರ ಹೆಗಡೆಗೆ ಮತ್ತೊಂದು ಜೀವ ಬೆದರಿಕೆ ಕರೆ

ಶಿರಸಿ: ಕೇಂದ್ರದ ಮಾಜಿ ಸಚಿವ ಹಾಗೂ ಉತ್ತರ ಕನ್ನಡ ಸಂಸದ, ಬಿಜೆಪಿ ಫೈರ್‌ ಬ್ರ್ಯಾಂಡ್‌  ಅನಂತಕುಮಾರ ಹೆಗಡೆ ಅವರಿಗೆ ಜೀವ ಬೆದರಿಕೆ ಹಾಕಿದವರ ಮೇಲೆ ಕ್ರಮ ಕೈಗೊಳ್ಳಬೇಕೆಂದು ಇಲ್ಲಿನ ಹೊರ ಮಾರುಕಟ್ಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಶಿರಸಿಯ ಕೆಎಚ್‌ಬಿ ಕಾಲೊನಿಯಲ್ಲಿರುವ ಸಂಸದರ ನಿವಾಸದ ಸ್ಥಿರ ದೂರವಾಣಿಗೆ ೯೪೬೪೫೫೪೦೩೯೯ ಈ ಸಂಖ್ಯೆಯಿಂದ ಎಪ್ರಿಲ್‌ ೫ರಂದು ಬೆಳಗ್ಗೆ … Continued