ಕರ್ನಾಟಕದಲ್ಲಿ ಶುಕ್ರವಾರವೂ ಎರಡೂವರೆ ಸಾವಿರ ದಾಟಿದ ದೈನಂದಿನ ಕೊರೊನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಕೊರೋನಾ 2ನೇ ಅಲೆ ಶುರುವಾಗಿದ್ದು ಕಳೆದ 24 ಗಂಟೆಯಲ್ಲಿ 2,566 ಕೋರೊನಾ ಸೋಂಕು ವರದಿಯಾಗಿವೆ. ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 13 ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,484ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಸೋಂಕಿತರ ಸಂಖ್ಯೆ 9,81,044ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಶುಕ್ರವಾರ 1,490 ಮಂದಿಗೆ ಸೋಂಕು … Continued

ಅಂತಹ ಸರ್ಕಾರವನ್ನೇ ಉರುಳಿಸಿದ್ದೇನೆ.. ಇದ್ಯಾವ ಲೆಕ್ಕ..

ಬೆಂಗಳೂರು: ಅಂತಹ ಸರ್ಕಾರವನ್ನೇ(ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ) ಉರುಳಿಸಿದ್ದೇನೆ. ಇದ್ಯಾವ ಲೆಕ್ಕ..?. ಇನ್ನೂ ಇಂತಹ 10 ಸಿಡಿಗಳು ಬಂದರೂ ಅದನ್ನು ಎದುರಿಸಲು ಸಿದ್ಧವಿದ್ದೇನೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಯುವತಿ ಪೊಲೀಸರಿಗೆ ದೂರು ನೀಡಿದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದೊಮ್ಮೆ ಸಿಡಿ ಯುವತಿ ತಾನು ಸಂತ್ರಸ್ತೆ ಎನ್ನುವುದೇ ಆಗಿದ್ದರೆ ಆಕೆ … Continued

ಯಾರೇ ದೂರು ಸಲ್ಲಿಸಿದರೂ ಎಸ್‌ಐಟಿಯಿಂದ ಪರಿಶೀಲನೆ

ಬೆಂಗಳೂರು; ಮಾಜಿ ಸಚಿವ ರಮೇಶ ಜಾರಕಿಹೊಳಿ‌ ಸಿಡಿ ಪ್ರಕರಣದ ಕುರಿತು ಯಾರೇ ದೂರು ಸಲ್ಲಿಸಿದರೂ ಅದನ್ನು ವಿಶೇಷ ತನಿಖಾ ದಳ (ಎಸ್‌ಐಟಿ) ಕಾನೂನಾತ್ಮಕವಾಗಿ ಪರಿಶೀಲನೆ ನಡೆಸಿ ಕ್ರಮ‌ಕೈಗೊಳ್ಳುತ್ತದೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಶುಕ್ರವಾರ ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಿಡಿಯಲ್ಲಿನ ಯುವತಿಯೇ ಆಗಲಿ, … Continued

ದೇಗುಲ ಸಿಬ್ಬಂದಿಗೆ ಸಂತಸದ ಸುದ್ದಿ ನೀಡಿದ ಸಚಿವ ಪೂಜಾರಿ

ಮೈಸೂರು : ದೇಗುಲ ಸಿಬ್ಬಂದಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸಂತಸದ ಸುದ್ದಿ ನೀಡಿದ್ದಾರೆ. ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ದೇಗುಲ ಸಿಬ್ಬಂದಿಗೆ ಶೀಘ್ರದಲ್ಲೇ 6ನೇ ವೇತನ ಶ್ರೇಣಿ ಜಾರಿಗೊಳಿಸಲಾಗುವುದು ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಗುಲ ಸಿಬ್ಬಂದಿಗೆ 6ನೇ ವೇತನ ಶ್ರೇಣಿ ಜಾರಿಗೆ ಕೆಲವೊಂದು ಅಡಚಣೆಗಳಿವೆ. ಈ ಅಡಚಣೆಗಳ ಪರಿಹಾರಕ್ಕೆ ಅಂತಿಮ ರೂಪ … Continued

ಬೆಂಗಳೂರಲ್ಲಿ ೧೪ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು..!

ಬೆಂಗಳೂರು: ಬೆಂಗಳೂರು ನಗರದ ಶಾಲಾ ಮಕ್ಕಳಲ್ಲಿ ೧೪ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಬಿಬಿಎಂಪಿ ನಾಲ್ಕು ಶಾಲೆಗಳ ೧೪ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಇದು ಆಡಳಿತಕ್ಕೆ ತಲೆನೋವು ತಂದಿದೆ. ಹತ್ತು ವರ್ಷದೊಳಗಿನ ಮಕ್ಕಳಿಗೆ ಸೋಂಕು ಹರಡುತ್ತಿದೆ ಎಂಬ ತಜ್ಞರ ಎಚ್ಚರಿಕೆ ಹಿನ್ನಲೆಯಲ್ಲಿ ಬಿಬಿಎಂಪಿ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಕೊರೊನಾ ತಪಾಸಣೆ ನಡೆಸಲಾಗಿತ್ತು. ಜೋಗುಪಾಳ್ಯ ವಾರ್ಡ್‍ನಲ್ಲಿರುವ ಬಿಬಿಎಂಪಿಯ ಒಂದೇ … Continued

ಸಂಸದೀಯ ವ್ಯವಸ್ಥೆ ಅಡಿ ಸಚಿವ ಸುಧಾಕರ ಮೇಲೆ ಕ್ರಮ: ಕಾಗೇರಿ

ಬೆಂಗಳೂರು: ಶಾಸಕರ ಕುರಿತಾಗಿ ಸಚಿವ ಡಾ.ಕೆ.ಸುಧಾಕರ್ ಅವರ ಮೇಲೆ ಸಂಸದೀಯ ವ್ಯವಸ್ಥೆ ಅಡಿಯಲ್ಲಿ ಏನು ಕ್ರಮ ತೆಗೆದುಕೊಳ್ಳಬೇಕೋ ಅದನ್ನು ತೆಗೆದುಕೊಳ್ಳುತ್ತೇನೆ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವ ಡಾ.ಕೆ.ಸುಧಾಕರ್ ಆಕ್ಷೇಪಾರ್ಹ ಹೇಳಿಕೆ ಸರಿಯಲ್ಲ. ಅದರ ಬಗ್ಗೆ ಅವರೇ ಸ್ಪಷ್ಟೀಕರಣ ಕೂಡಾ ಕೊಟ್ಟಿದ್ದಾರೆ. ಆದರೂ ಸಹ ಸಭಾಧ್ಯಕ್ಷನಾಗಿ ಸಂಸದೀಯ ವ್ಯವಸ್ಥೆ … Continued

ಕೊರೊನಾ 2ನೇ ಅಲೆ ಭೀತಿ: ಹಬ್ಬಗಳ ಸಾರ್ವಜನಿಕ ಆಚರಣೆ-ಕಾರ್ಯಕ್ರಮಗಳಿಗೆ ಸರ್ಕಾರ ನಿಷೇಧ

ಕರ್ನಾಟಕದಲ್ಲಿ ಕೊವಿಡ್‌ -19 ಪ್ರಕರಣಗಳ ಉಲ್ಬಣದ ಹಿನ್ನೆಲೆಯಲ್ಲಿ, ಮುಂಬರುವ ಹಬ್ಬಗಳಾದ ಹೋಳಿ, ಯುಗಾದಿ, ಶಾಬ್-ಎ-ಬರಾತ್ ಮತ್ತು ಶುಭ ಶುಕ್ರವಾರದಂದು ಸಾರ್ವಜನಿಕ ಸಮಾರಂಭ ಹಾಗೂ ಕಾರ್ಯಕ್ರಮವನ್ನು ರಾಜ್ಯದಾದ್ಯಂತ ರಾಜ್ಯ ಸರ್ಕಾರ ನಿಷೇಧಿಸಿದೆ. ಸಾರ್ವಜನಿಕ ಮೈದಾನಗಳು, ಉದ್ಯಾನವನಗಳು, ಮಾರುಕಟ್ಟೆಗಳು ಮತ್ತು ಧಾರ್ಮಿಕ ಸ್ಥಳಗಳಲ್ಲಿನ ಸಭೆ-ಸಮಾರಂಭಗಳು ಇವುಗಳಲ್ಲಿ ಸೇರಿವೆ. ತನ್ನ ಆದೇಶದಲ್ಲಿ, ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆಯುಕ್ತರು … Continued

೩ ಕ್ಷೇತ್ರಗಳಿಗೆ ಉಪಚುನಾವಣೆ: ಮೂವರು ಕಾಂಗ್ರೆಸ್‌ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ದಿನಾಂಕ ಪ್ರಕಟ

ಬೆಂಗಳೂರು : ಮೂರು ಕ್ಷೇತ್ರಗಳ ಉಪಚುನಾವಣೆ ಸಮರಕ್ಕೆ ಕಾಂಗ್ರೆಸ್‌ ಸಜ್ಜಾಗಿದೆ.ಈಗಾಗಲೇ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು ಈಗ ನಾಮಪತ್ರ ಸಲ್ಲಿಸುವ ದಿನಾಂಕಗಳನ್ನೂ ನಿಗದಿ ಮಾಡಲಾಗಿದೆ. ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಅಭ್ಯರ್ಥಿಯಾಗಿ ಸತೀಶ್ ಜಾರಕಿಹೊಳಿ ಮಾರ್ಚ್.29ರಂದು ಸೋಮವಾರ ನಾಮಪತ್ರ ಸಲ್ಲಿಸಲಿದ್ದಾರೆ. ಈ ಸಂರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಉಪಸ್ಥಿತರಿರುವರು ಎಂದು ಹೇಳಲಾಗಿದೆ. ರಾಯಚೂರು … Continued

ಸಿಡಿ ಮಹಿಳೆ ಸಿದ್ದರಾಮಯ್ಯ- ಡಿಕೆಶಿ ಬಳಿ ರಕ್ಷಣೆ ಕೋರಿರುವ ಮಾಹಿತಿ ಇಲ್ಲ: ಬೊಮ್ಮಾಯಿ

ಬೆಂಗಳೂರು: ರಮೇಶ್ ಜಾರಕಿಹೊಳಿ ಪ್ರಕರಣದ ಸಿಡಿ ಮಹಿಳೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಬಳಿ ರಕ್ಷಣೆ ಕೋರಿರುವ ಬಗ್ಗೆ ತಮಗೆ ಮಾಹಿತಿ ಇಲ್ಲ ಆ ಬಗ್ಗೆ ಅವರಿಂದಲೇ ಮಾಹಿತಿ ಪಡೆಯಿರಿ ಎಂದು ಗೃಹ ,  ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು. . … Continued

ಕರ್ನಾಟಕದಲ್ಲಿ ಎರಡೂವರೆ ಸಾವಿರ ದಾಟಿದ ಏಕದಿನದ ಕೊರೊನಾ ಸೋಂಕು…! ಬೆಂಗಳೂರಲ್ಲಿ ಎಚ್ಚರಿಕೆ ಗಂಟೆ…!!

ಬೆಂಗಳೂರು: ರಾಜ್ಯದಲ್ಲಿ ಕೊರೊನಾ 2ನೇ ಅಲೆ ಶುರುವಾಗಿದ್ದು ಕಳೆದ 24 ಗಂಟೆಯಲ್ಲಿ (ಗುರುವಾರ) 2,523 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ 10 ಮಂದಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 9,78,478ಕ್ಕೆ ಏರಿಕೆಯಾಗಿದೆ. ಹಾಗೂ ಒಟ್ಟು ಸಾವಿನ ಸಂಖ್ಯೆ 12,471ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಬೆಂಗಳೂರಿನಲ್ಲಿಯೇ … Continued