ಕಲಬುರಗಿ-ಮಂಬೈ ವಿಮಾನ ಹಾರಾಟ ಆರಂಭ

ಕಲಬುರಗಿ:ವಾಣಿಜ್ಯ ರಾಜಧಾನಿ ಮುಂಬೈ ಹಾಗೂ ಕಲ್ಯಾಣ ‌ಕರ್ನಾಟಕದ ಪ್ರಮುಖ ‌ನಗರ ಕಲಬುರಗಿ ‌ಮಧ್ಯೆ ಅಲಯನ್ಸ್ ಏರ್ ಸಂಸ್ಥೆಯ ನೇರ ವಿಮಾನ ‌ಸಂಚಾರ ಗುರುವಾರದಿಂದ ಆರಂಭವಾಯಿತು. ಮುಂಬೈನಿಂದ ಹೊರಟ ಮೊದಲ ವಿಮಾನ ಬೆಳಿಗ್ಗೆ 9.07ಕ್ಕೆ ನಗರದ ವಿಮಾನ ನಿಲ್ದಾಣದಲ್ಲಿ ಬಂದಿಳಿಯಿತು. ಎಂಟು ಜನ ಪ್ರಯಾಣಿಕರು ಬಂದರು. 9.40ಕ್ಕೆ ಇಲ್ಲಿಂದ ಹೊರಟ ವಿಮಾನದಲ್ಲಿ 22 ಪ್ರಯಾಣಿಕರು ತೆರಳಿದರು. ಮಹಾರಾಷ್ಟ್ರದಲ್ಲಿ … Continued

ಕೊರೊನಾ ಸೋಂಕು ಹೆಚ್ಚಳ: ಬೆಂಗಳೂರಲ್ಲಿ ಸೋಂಕಿತರ ಕೈಗೆ ಮತ್ತೆ ಸೀಲ್‌…!

ಬೆಂಗಳೂರು: ರಾಜ್ಯದಲ್ಲಿ ಕೊರೊನಾ 2ನೇ ಅಲೆ ಆರಂಭವಾಗಿದ್ದು, ಬೆಂಗಳೂರಿನಲ್ಲಿ ಅತೀ ಹೆಚ್ಚು ಪ್ರಕರಣಗಳು ದಾಖಲಾಗುತ್ತಿವೆ. ಹೀಗಾಗಿ ಸೋಂಕು ದೃಢಪಟ್ಟಿರುವ ಎಲ್ಲರಿಗೂ ಸೀಲ್ ಹಾಕಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಹೇಳಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ‌ ಹೆಚ್ಚುತ್ತಿರುವ ಕೋವಿಡ್ ಹರಡುವಿಕೆಯನ್ನ ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅಧಿಕಾರಿಗಳ ಜೊತೆ ಸಚಿವರು ಸಮಾಲೋಚನಾ ಸಭೆ ನಡೆಸಿದ ಬಳಿಕ ಮಾತನಾಡಿದಅವರು, ’20 … Continued

ಹುಬ್ಬಳ್ಳಿ-ಧಾರವಾಡ ಮಾಜಿ ಮಹಾಪೌರ ಸುಧೀರ ಸರಾಫ ವಿಧಿವಶ

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮಾಜಿ ಮಹಾಪೌರರಾದ ಭಾರತೀಯ ಜನತಾ ಪಕ್ಷದ ಮುಖಂಡರಾದ ಸುಧೀರ ಸರಾಫ (೫೪) ಗುರುವಾರ ನಿಧನರಾಗಿದ್ದಾರೆ. ಮೃತರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸಕ್ರಿಯರಾಗಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಇಲೆಕ್ಟ್ರಿಕಲ್‌ ಎಂಜಿನೀಯರಿಂಗ್‌ ಡಿಪ್ಲೋಮಾ ಮುಗಿಸಿದ್ದ ಸುಧೀರ ಸರಾಫ, ೧೯೮೮ರಲ್ಲಿ ಬಿಜೆಪಿ ಸೇರಿದ್ದರು. ಮುಂದೆ ಬಿಜೆಪಿ ಹುಬ್ಬಳ್ಳಿ-ಧಾರವಾಡ … Continued

ಆ ಹೆಣ್ಣು ಮಗಳು ಯಾರದ್ದೋ ಕುತಂತ್ರಕ್ಕೆ ಸಿಲುಕಿದ್ದಾಳೆ: ಎಚ್‌ಡಿಕೆ

ಬಸವ ಕಲ್ಯಾಣ: ಯುವತಿ ಯಾರದ್ದೋ ಕುತಂತ್ರಕ್ಕೆ ಸಿಲುಕಿ ಬಲವಂತವಾಗಿ ವಿಡಿಯೋ ಬಿಡುಗಡೆ ಮಾಡುತ್ತಿದ್ದಾಳೆ. ನೀವು ಯಾರದೋ ಬಲವಂತಕ್ಕೆ ಒಳಗಾಗಿ ಗುಪ್ತವಾಗಿ ವಿಡಿಯೋ ಮಾಡಿ ಹೇಳಿಕೆಗಳನ್ನು ಬಿಡುಗಡೆ ಮಾಡುವುದನ್ನು ಬಿಟ್ಟು ಹೊರ ಬನ್ನಿ ಎಂದು ನಾನು ಆ ಹೆಣ್ಣು ಮಗಳಿಗೆ ಮನವಿ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.‌ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಬಸವ ಕಲ್ಯಾಣದಲ್ಲಿ ಸಿಡಿ … Continued

ಇಂಥ ಹತ್ತು ಸಿಡಿ ಬಿಡುಗಡೆ ಮಾಡಿದರೂ ಎದುರಿಸಲು ಸಿದ್ಧ:ರಮೇಶ ಜಾರಕಿಹೊಳಿ

ಬೆಂಗಳೂರು: ಒಂದಲ್ಲ ಇನ್ನೂ ಇಂಥ ಹತ್ತು ಸಿಡಿ ಬಿಡುಗಡೆ ಮಾಡಿದರೂ ಎದುರಿಸಲು ಸಿದ್ಧ. ನಾನು ಯಾವುದೇ ತಪ್ಪು ಮಾಡಿಲ್ಲ. ಈ ಷಡ್ಯಂತ್ರದ ಆರೋಪದಿಂದ ಮುಕ್ತನಾಗಿ ಹೊರಗೆ ಬರುತ್ತೇನೆ ಎಂಬ ವಿಶ್ವಾಸವಿದೆ  ಎಂದು ಮಾಜಿ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಬಳಿಯೂ ಮಹತ್ವದ ಸಾಕ್ಷ್ಯಗಳಿವೆ. ಅದನ್ನು ಬಿಡುಗಡೆ ಮಾಡಿದರೆ ಎಲ್ಲರೂ ಶಾಕ್ … Continued

ಸಿಡಿ ಹಗರಣ: ಈಗ ಮತ್ತೊಂದು ಸಿಡಿ ಬಿಡುಗಡೆ ಮಾಡಿದ ಯುವತಿ

ಬೆಂಗಳೂರು: ಮಾಜಿ ಸಚಿವ ರಮೇಶ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡಿಯಲ್ಲಿರುವ ಯುವತಿಯದ್ದು ಎನ್ನಲಾದ ಮತ್ತೊಂದು ವಿಡಿಯೋ ಹೊರಗೆ ಬಂದಿದೆ. ನನ್ನ ತಂದೆ-ತಾಯಿ ಸ್ವ ಇಚ್ಛೆಯಿಂದ ಪೊಲೀಸ್ ದೂರು ನೀಡಿಲ್ಲ. ನಾನು ತಪ್ಪು ಮಾಡಿಲ್ಲ ಎಂದು ಅವರಿಗೆ ಗೊತ್ತಿದೆ. ಹಾಗಾಗಿ ಅವರು ಸ್ವಇಚ್ಛೆಯಿಂದ ದೂರು ನೀಡಲು ಸಾಧ್ಯವೇ ಇಲ್ಲ ಎಂದು ಅವಳಿ ಈ ವಿಡೊಯೋದಲ್ಲಿ ಹೇಳಿದ್ದಾಳೆ. … Continued

ಕರ್ನಾಟಕಕ್ಕೆ ಬಂತು ೪ ಲಕ್ಷ ಲಸಿಕೆ, ಇನ್ನೂ ಬರಲಿದೆ ೧೨ಲಕ್ಷ

ಬೆಂಗಳೂರು : ಬುಧವಾರ ತಡರಾತ್ರಿ ರಾಜ್ಯಕ್ಕೆ 4 ಲಕ್ಷ ಡೋಸ್ ಕೊರೊನಾ ಲಸಿಕೆ ಬಂದಿದೆ, ಈ ವಾರದೊಳಗೆ ಇನ್ನೂ 12 ಲಕ್ಷ ಡೋಸ್ ಲಸಿಕೆ ಬರಲಿದೆ. ರಾಜ್ಯದಲ್ಲಿ ಲಸಿಕೆಯ ಕೊರತೆ ಉಂಟಾಗದಂತೆ ಕ್ರಮ ಕೈಗೊಂಡಿದ್ದು,ಎಲ್ಲ ಅರ್ಹ ನಾಗರೀಕರು ಕೂಡಲೇ ನೋಂದಣಿ ಮಾಡಿ ಲಸಿಕೆ ಪಡೆಯಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ ಮನವಿ … Continued

ಸಿಡಿ : ತಡೆಯಾಜ್ಞೆ ತಂದ ಸಚಿವರ ವಿರುದ್ಧ ತನಿಖೆಗೆ ಒತ್ತಾಯಿಸಿ ಕೋರ್ಟ್ ಮೆಟ್ಟಿಲೇರಲು ಕಾಂಗ್ರೆಸ್ ನಿರ್ಧಾರ

ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಾನಹಾನಿ ತಡೆ ಕೋರಿ ಕೋರ್ಟ್ ಮೆಟ್ಟಿಲೇರಿರುವ ಬಿಜೆಪಿ ಸರ್ಕಾರದ ಸಚಿವರ ವಿರುದ್ಧ ತನಿಖೆಗೆ ಆಗ್ರಹಿಸಿ ನ್ಯಾಯಾಲಯದ ಮೆಟ್ಟಿಲೇರಲು ಕಾಂಗ್ರೆಸ್ ನಿರ್ಧರಿಸಿದೆ. ಸುದ್ದಿಗಾರರೊಂದಿಗೆ ಮಾತನಾಡಿರುವ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ತಮ್ಮ ವಿರುದ್ಧ ಯಾವುದೇ ಮಾನಹಾನಿಕರ ಸುದ್ದಿಗಳನ್ನು ಪ್ರಸಾರ ಮಾಡದಂತೆ ತಡೆ ಕೋರಿ ಬಿಜೆಪಿ ಸರ್ಕಾರದ ಸಚಿವ ಸಂಪುಟದ ಆರು ಸಚಿವರು … Continued

ಪರಿಷತ್ತಿನಲ್ಲಿ‌ ಕಾಂಗ್ರೆಸ್‌ ಧರಣಿ ಮಧ್ಯೆಯೇ ಬಜೆಟ್ ಅಂಗೀಕಾರ, ಅಧಿವೇಶನ ಮುಂದೂಡಿಕೆ

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಮಂಡಿಸಿದ 2021ನೇ ಸಾಲಿನ ಬಜೆಟ್ ಮೇಲೆ ವಿಧಾನ ಪರಿಷತ್‍ನಲ್ಲಿ ಹೆಚ್ಚಿನ ಚರ್ಚೆ ನಡೆಯದೆ ಪ್ರತಿಪಕ್ಷ ಕಾಂಗ್ರೆಸ್‍ನ ಗದ್ದಲದ ನಡುವೆ ಧ್ವನಿಮತದ ಮೂಲಕ ಅಂಗೀಕಾರಗೊಂಡಿದೆ. ಅಧಿವೇಶನವನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಬಜೆಟ್ ಮೇಲೆ ವಿಧಾನ ಪರಿಷತ್‍ನಲ್ಲಿ ಬಹಳಷ್ಟು ಮಂದಿ ಮಾತನಾಡಿಲ್ಲ. ಖುದ್ದು ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲ್ ಅವರೇ ಮಾತನಾಡಿರಲಿಲ್ಲ. ಬುಧವಾರ ಬೆಳಗ್ಗೆ ಪ್ರಶ್ನೋತ್ತರ … Continued

ಕೊರೊನಾ ಸೋಂಕು ಹೆಚ್ಚಳ:ಕರ್ನಾಟಕದಲ್ಲಿ ಖಾಸಗಿ ಆಸ್ಪತ್ರೆಗೆ ಸಜ್ಜಾಗಲು ಸರ್ಕಾರ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಚಿಕಿತ್ಸೆಗೆ ಸಜ್ಜಾಗುವಂತೆ ಖಾಸಗಿ ಆಸ್ಪತ್ರೆಗಳಿಗೆ ರಾಜ್ಯಸ ಸರಕಾರ ಸೂಚಿಸಿದೆ. ಖಾಸಗಿ ಆಸ್ಪತ್ರೆಗಳ ಸಭೆ ನಡೆಸಿದ ಸರಕಾರ, ಕೊರೊನಾ ರೋಗಿಗಳ ಚಿಕಿತ್ಸೆಗೆ ಸಮರ್ಪಕ ವ್ಯವಸ್ಥೆ ಮಾಡಿಕೊಳ್ಳುವಂತೆ ತಿಳಿಸಿದೆ. ಮೊದಲ ಹಂತದಲ್ಲಿ ೨೦೦ಕ್ಕಿಂತ ಹೆಚ್ಚು ಹಾಸಿಗೆಗಳಿರುವ ಆಸ್ಪತ್ತೆಗಳನ್ನು ಆಯ್ಕೆ ಮಾಡಲು ನಿರ್ಧರಿಸಿದೆ. ಕೋರಮಂಗಲದ ಒಳಾಂಗಣ ಕ್ರೀಡಾಂಗಣ, ಹಜ್‌ ಭವನ, … Continued