ಯತ್ನಾಳಗೆ ತಾಕತ್ತಿದ್ದರೆ ಸಿಎಂ ಬದಲಾವಣೆ ಮಾಡಲಿ: ರೇಣುಕಾಚಾರ್ಯ ಸವಾಲು

ದಾವಣಗೆರೆ : ಸಿಎಂ ಬದಲಾವಣೆ ವಿಚಾರವಾಗಿ ಬಸನಗೌಡ ಪಾಟೀಲ್ ಯತ್ನಾಳ ಹೇಳಿಕೆಯನ್ನು ಖಂಡಿಸಿರುವ ಹೊನ್ನಾಳಿ ಬಿಜೆಪಿ ಶಾಸಕ ಎಂಪಿ ರೇಣುಕಾಚಾರ್ಯ, ನಿನಗೆ ತಾಕತ್ತಿದ್ದರೆ ಸಿಎಂ ಬದಲಾವಣೆ ಮಾಡು ಎಂದು ಸವಾಲು ಹಾಕಿದ್ದಾರೆ. ರಾಜ್ಯದಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸಿದ್ದು ಯಡಿಯೂರಪ್ಪ, ಅನಂತಕುಮಾರ್ ಅವರಂಥ ಹಿರಿಯ ನಾಯಕರೇ ಹೊರತು ನಿನ್ನಂಥ ನಾಯಕರಲ್ಲ ಎಂದು ರೇಣುಕಾಚಾರ್ಯ ಯತ್ನಾಳ ವಿರುದ್ಧ ಹರಿಹಾಯ್ದಿದ್ದಾರೆ. … Continued

ಗ್ರಾಮ ವಾಸ್ತವ್ಯದಿಂದ ಜನಸಾಮಾನ್ಯರು- ಅಧಿಕಾರಿಗಳ ನಡುವಿನ ಕಂದಕ ದೂರ

ಹುಬ್ಬಳ್ಳಿ; ಜನಪ್ರತಿನಿಧಿಗಳು, ಅಧಿಕಾರಿಗಳು ಮೇಲಿನಿಂದ ಧರೆಗೆ ಇಳಿದು ಬಂದವರಲ್ಲ. ಜನರು ಮಂತ್ರಿಗಳು,ಜಿಲ್ಲಾಧಿಕಾರಿಗಳು ಹಾಗೂ ಸಹಾಯಕ ಆಯುಕ್ತರ ಬಳಿ ತಮ್ಮ ಅಹವಾಲು ಹೇಳಿಕೊಳ್ಳಲು ಮುಜುಗರ ಪಟ್ಟುಕೊಳ್ಳುತ್ತಾರೆ. ಜನಸಾಮಾನ್ಯರ ನಡುವಿನ ಕಂದಕ ಮುಚ್ಚಿ, ಸೇತುವೆ ನಿರ್ಮಿಸುವಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಯಶಸ್ವಿಯಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು. ಛಭ್ಬಿ ಗ್ರಾಮದಲ್ಲಿ ವಾಸ್ತವ್ಯ ಹೂಡಿದ್ದ ಸಚಿವರು … Continued

ಬೇರೆ ತನಿಖಾ ಸಂಸ್ಥೆಗೆ ಸಿಡಿ ಪ್ರಕರಣ ವಹಿಸುವುದಿಲ್ಲ: ಬೊಮ್ಮಾಯಿ

ಧಾರವಾಡ: ಸಿಡಿ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡ (ಎಸ್ ಐ ಟಿ) ಸಮರ್ಥವಾಗಿ  ನಡೆಸುತ್ತಿದೆ. ಹೀಗಾಗಿ  ಈ  ಪ್ರಕರಣದ ತನಿಖೆಯನ್ನು ಬೇರೆ ಸಂಸ್ಥೆ ಗೆ‌ ವಹಿಸುವುದಿಲ್ಲ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು. ಭಾನುವಾರ ಧಾರವಾಡದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು,  ಎಸ್ ಐ ಟಿ … Continued

ಕೊರೊನಾ ಹೆಚ್ಚಳ: ಶಾಲಾ-ಕಾಲೇಜುಗಳ ಬಗ್ಗೆ ಸಿಎಂ ಜೊತೆ ಚರ್ಚಿಸಿ ನಿರ್ಧಾರ

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಅಬ್ಬರ ಹೆಚ್ಚಳವಾಗುತ್ತಿದೆ. ಹೀಗಾಗಿ ಶಾಲಾ-ಕಾಲೇಜುಗಳ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜೊತೆಗೆ ಚರ್ಚೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ದಿನಗಳಿಂದ ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದೆ. ಹೀಗಾಗಿ ನಾವು ಮಕ್ಕಳ ಆರೋಗ್ಯದ … Continued

ರಾಸಾಯನಿಕ ಲಾರಿ ಪಲ್ಟಿ: ಮೂವರ ಸಾವು

ಹಾಸನ: ರಾಸಾಯನಿಕ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ ಹೊತ್ತಿ ಉರಿದ ಪರಿಣಾಮ ಮೂವರು ಸಜೀವ ದಹನಗೊಂಡ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಬಸವನಹಳ್ಳಿ ಸಮೀಪ ನಡೆದಿದೆ. ಮೈಸೂರಿನಿಂದ ಹಾಸನಕ್ಕೆ ಕೆಮಿಕಲ್ಸ್ ಬಾಕ್ಸ್‌ಗಳನ್ನು ತುಂಬಿಕೊಂಡು ತೆರಳುತ್ತಿದ್ದ ಲಾರಿ ಪಡುವಲಹಿಪ್ಪೆ ರಸ್ತೆಯ ತಿರುವಿನಲ್ಲಿ ಉರುಳಿದೆ. ಪರಿಣಾಮ ಕೆಮಿಕಲ್ಸ್ ಬಾಕ್ಸ್‌ಗಳು ತೆರೆಯಲ್ಪಟ್ಟು ಬೆಂಕಿ ಹೊತ್ತಿಕೊಂಡು ಲಾರಿಯಲ್ಲಿದ್ದ ಮೂವರು ಸಜೀವವಾಗಿ ದಹನಗೊಂಡಿದ್ದಾರೆ. … Continued

ತಮ್ಮ ಪುತ್ರ ಉಪಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಬಿಎಸ್‌ವೈ

ರಾಯಚೂರು: ಬಸವಕಲ್ಯಾಣ ವಿಧಾನಸಭೆ ಉಪ ಚುನಾವಣೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಸ್ಪರ್ಧಿಸಲಿದ್ದಾರೆ ಎಂಬಂತಹ ಮಾತುಗಳು ಕೇಳಿಬರುತಿತ್ತು. ಆದರೆ, ಇಂತಹ ಹೇಳಿಕೆಗಳನ್ನು ತಳ್ಳಿಹಾಕಿರುವ ಮುಖ್ಯಮಂತ್ರಿ ಯಡಿಯೂರಪ್ಪ, ಉಪ ಚುನಾವಣೆಯಲ್ಲಿ ತಮ್ಮ ಪುತ್ರ ಸ್ಪರ್ಧೆ ಮಾಡುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರಿನಲ್ಲಿ ಉಳಿದುಕೊಳ್ಳುವಂತೆ ಒತ್ತಾಯ ಇರುವುದರಿಂದ, ವಿಜಯೇಂದ್ರ … Continued

ಬಿಜೆಪಿಯಿಂದ ರಾಮ ಮಾಧವ್‌ ಪುನಃ ಆರೆಸ್ಸೆಸ್‌ಗೆ ವಾಪಸ್‌

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿದ್ದ ರಾಮ ಮಾಧವ್ ಅವರನ್ನು ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ ವಾಪಸ್ ಕರೆಸಿಕೊಳ್ಳಲಾಗಿದೆ. ಬೆಂಗಳೂರು ನಗರದ ಹೊರವಲಯದ ಚನ್ನೇನಹಳ್ಳಿಯ ಜನಸೇವಾ ವಿದ್ಯಾಕೇಂದ್ರದಲ್ಲಿ ನಡೆದ ಅಖಿಲ ಭಾರತೀಯ ಪ್ರತಿನಿಧಿ ಸಭಾದಲ್ಲಿ ಈ ಕುರಿತು ನಿರ್ಣಯ ಕೈಗೊಳ್ಳಲಾಗಿದೆ. ರಾಮ್ ಮಾಧವ್ ಅವರಿಗೆ ಅಖಿಲ ಭಾರತ ಕಾರ್ಯಕಾರಣಿ ಸದಸ್ಯ ಸ್ಥಾನ ನೀಡಲಾಗಿದೆ. ರಾಮ್ ಮಾಧವ್ … Continued

ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮದಿಂದ ಆಡಳಿತದಲ್ಲಿ ಕ್ರಾಂತಿ; ಬೊಮ್ಮಾಯಿ

ಹುಬ್ಬಳ್ಳಿ: ಕಂದಾಯ ಸಚಿವ ಆರ್.ಅಶೋಕ ರೂಪಿಸಿದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮದಿಂದ ಆಡಳಿತದಲ್ಲಿ ಕ್ರಾಂತಿಯಾಗಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದರು. ಛಬ್ಬಿ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಭಾಗವಹಸಿ ಅವರು ಮಾತನಾಡಿದರು.ಸಚಿವರ ಪರಿಶ್ರಮದಿಂದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮ ಯಶಸ್ವಿಯಾಗಿದೆ. ಸಚಿವ ಸ್ನೇಹಿತ ಅಶೋಕ ರಾತ್ರಿ ಗ್ರಾಮಕ್ಕೆ ಬಂದು ವಾಸ್ತವ್ಯ ಮಾಡದೇ … Continued

ಗ್ರಾಮ ವಾಸ್ತವ್ಯದಲ್ಲಿ ಜನರ ಮನೆ ಬಾಗಿಲಿಗೆ ಬಂದ ಸರ್ಕಾರದಿಂದ ಸಮಸ್ಯೆಗಳಿಗೆ ಪರಿಹಾರ: ಸಚಿವ ಅಶೋಕ

ಹುಬ್ಬಳ್ಳಿ: ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದಲ್ಲಿ ಸ್ವೀಕರಿಸುವ ಅರ್ಜಿಗಳನ್ನು ದಾಖಲಿಸುವ ಮತ್ತು ಇತ್ಯರ್ಥಪಡಿಸಿದ ಕುರಿತು ಮಾಹಿತಿ ದಾಖಲಿಸುವ ಧಾರವಾಡ ಜಿಲ್ಲಾಡಳಿತದ ಕ್ರಮ ಮಾದರಿಯಾಗಿದ್ದು, ಇದನ್ನು ಇತರ ಜಿಲ್ಲೆಗಳಿಗೆ ಜಾರಿಗೊಳಿಸಿ ಜಿಲ್ಲಾ ಆಡಳಿತದ ಈ ಕಾರ್ಯವನ್ನು ರಾಜ್ಯ ಆಡಳಿತದೊಂದಿಗೆ ಜೋಡಿಸಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ ಹೇಳಿದರು. ಅವರು ಶನಿವಾರ ಮಧ್ಯಾಹ್ನ ಧಾರವಾಡ ಜಿಲ್ಲೆಯ … Continued

ಗ್ರಾಮ ವಾಸ್ತವ್ಯ: ಲಘು ಆಹಾರ ಸೇವಿಸಿ ಪವಡಿಸಿದ ಸಚಿವ ಅಶೋಕ

ಹುಬ್ಬಳ್ಳಿ: ಛಬ್ಬಿ ಗ್ರಾಮದಲ್ಲಿ ಬೆಳಿಗ್ಗೆನಿಂದ ಅಧಿಕಾರಿಗಳ ದಂಡು ಕಟ್ಟಿಕೊಂಡು ಗ್ರಾಮದ ಬೀದಿ ಸುತ್ತಿ ಜನರ ಅಹವಾಲುಗಳನ್ನು ಸ್ವೀಕರಿಸಿ ಪರಿಷ್ಕರಣೆ ಮಾರ್ಗ ತೋರಿದ ಕಂದಾಯ ಸಚಿವ ಆರ್.ಅಶೋಕ್ ಸರ್ಕಾರಿ ಶಾಲೆ ಕೊಠಡಿಯಲ್ಲಿ ವಾಸ್ತವ್ಯ ಹೂಡಿದರು. ಮಧ್ಯಾಹ್ನ ಉತ್ತರ ಕರ್ನಾಟಕದ ರೊಟ್ಟಿ ಊಟ ಸವಿದ ಸಚಿವರಿಗೆ ತುಸು ಖಾರ ಎನಿಸಿತು. ರಾತ್ರಿ ಲಘು ಆಹಾರವಾಗಿ ಮೊಸರನ್ನ ಸೇವಿಸಿದರು. ಸರ್ಕಾರ … Continued