ಮಣಿಪಾಲ | ಹಣಕ್ಕಾಗಿ ತಾಯಿಯ ಕತ್ತು ಹಿಸುಕಿ ಕೊಲೆ ಮಾಡಿದ ಮಗ : ಮರಣೋತ್ತರ ಪರೀಕ್ಷೆಯಿಂದ ಪ್ರಕರಣ ಬೆಳಕಿಗೆ

ಉಡುಪಿ : ಮಗನೊಬ್ಬ ಹಣಕ್ಕಾಗಿ ಹೆತ್ತ ತಾಯಿಯನ್ನೇ ಕತ್ತು ಹಿಸುಕಿ ಕೊಲೆ ಮಾಡಿದ ಘಟನೆ ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಪದ್ಮಾಬಾಯಿ(45) ಎಂದು ಗುರುತಿಸಲಾದ ಮಹಿಳೆ ಕೊಲೆಯಾಗಿದ್ದು, ಮಗ ಈಶ ನಾಯಕ್‌ (26) ಕೊಲೆ ಆರೋಪಿಯಾಗಿದ್ದಾನೆ. ಜೂ.18ರಂದು ರಾತ್ರಿ ಪದ್ಮಾಬಾಯಿ ಸೊಂಟ ನೋವಿನಿಂದ ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದರು. ಅಂದು … Continued

ದೇಶದಲ್ಲಿ ಮೇಘ ಸ್ಫೋಟ, ಊಹಿಸಲಾಗದ ದುಃಖ, ಸಕ್ರಾಂತಿ ನಂತರ ರಾಜಕೀಯ ಬದಲಾವಣೆ : ಕೋಡಿಮಠ ಶ್ರೀಗಳ ಭವಿಷ್ಯ

ಹಾಸನ: ರಾಜ್ಯ, ದೇಶ, ವಿದೇಶಗಳಲ್ಲಿ ಸಂಭವಿಸಬಹುದಾದ ವಿದ್ಯಮಾನಗಳ ಬಗ್ಗೆ ಕೋಡಿಮಠದ ಸ್ವಾಮೀಜಿ (Kodi Mutt Swamiji) ಭವಿಷ್ಯ ನುಡಿದಿದ್ದಾರೆ. ಮುಂದಿನ 6 ತಿಂಗಳ ಬಗ್ಗೆ ಭವಿಷ್ಯ ನುಡಿದಿರುವ ಕೋಡಿಮಠದ ಶ್ರೀಗಳು, ದೇಶದಲ್ಲಿ ಮೇಘಸ್ಪೋಟವಾಗಲಿದೆ. ಸಂಕ್ರಾಂತಿ ಬಳಿಕ ರಾಜ್ಯ ರಾಜಕೀಯದಲ್ಲಿ ಭಾರೀ ಬದಲಾವಣೆಯಾಗಲಿದೆ ಎಂದು ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ಊಹಿಸಲಾಗದ ನೋವು ಭಾರತಕ್ಕೆ ಕಾಡಲಿದೆ ಎಂದು ಹೇಳಿದ್ದಾರೆ. … Continued

ಬೆಂಗಳೂರು | ಮಚ್ಚಿನಿಂದ ಆಕಳಿನ ಕೆಚ್ಚಲು ಕತ್ತರಿಸಿದ ದುಷ್ಕರ್ಮಿಗಳು ; ಹಸು ಸಾವು

ಬೆಂಗಳೂರು: ಕಿಡಿಗೇಡಿಗಳು ಹಸುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದಿರುವ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ಸೂಲಿವಾರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಶಸ್ತ್ರಚಿಕಿತ್ಸೆ ನಡೆಸಿದರೂ ಫಲಕಾರಿಯಾಗದೆ ಹಸು ಮೃತಪಟ್ಟಿದೆ ಎಂದು ಹೇಳಲಾಗಿದೆ. ಸೂಲಿವಾರದ ಡೇರಿ ಅಧ್ಯಕ್ಷರಾದ ಮರಿಬಸವಯ್ಯ ಎಂಬವರಿಗೆ ಸೇರಿದ ಹಸುವಿನ ಕೆಚ್ಚಲು ಕೊಯ್ದಿದ್ದು, ಹಳೆಯ ವೈಷಮ್ಯಕ್ಕೆ ಹಸುವಿನ ಕೆಚ್ಚಲ ಕೊಯ್ದಿದ್ದಾರೆ ಎಂದು ಮಾಲೀಕರು ಆರೋಪಿಸಿದ್ದಾರೆ. ಸುಮಾರು … Continued

ಕನಸಿನಲ್ಲಿ ಕಾಣಿಸಿಕೊಂಡ ಆಂಜನೇಯ : ಕ್ರೈಸ್ತ ಧರ್ಮ ತೊರೆದು ಹಿಂದೂ ಧರ್ಮಕ್ಕೆ ಮತಾಂತರಗೊಂಡ ಇಡೀ ಕುಟುಂಬ

ಯಾದಗಿರಿ: ಕ್ರೈಸ್ತ ಧರ್ಮಕ್ಕೆ ಮತಾಂತರವಾಗಿದ್ದ ಕುಟುಂಬವೊಂದು ಇದೀಗ ಹಿಂದೂ ಧರ್ಮಕ್ಕೆ ಮರಳಿ ಬಂದಿರುವ ವಿದ್ಯಮಾನ ಯಾದಗಿರಿಯಲ್ಲಿ ನಡೆದಿದೆ. ಇಲ್ಲಿನ ಗಿರಿನಗರ ಕಾಲೊನಿಯಲ್ಲಿರುವ ಬುಡ್ಗ ಜಂಗಮ ಸಮಾಜದ ವೆಂಕಟೇಶ ಎಂಬುವರು ಕುಟುಂಬ ಸಮೇತ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದರು. ಈಗ ಮತ್ತೆ ಹಿಂದೂ ಧರ್ಮಕ್ಕೆ ವಾಪಸ್‌ ಆಗಿದ್ದಾರೆ. ಇದಕ್ಕೆ ಕಾರಣ ಆಂಜನೇಯನಂತೆ. ಕನಸಿನಲ್ಲಿ ಆಂಜನೇಯ ಪದೇಪದೇ ಕಾಣಿಸಿಕೊಂಡಿದ್ದರಿಂದ ಹಿಂದೂ … Continued

ಮನೆಕೆಲಸದಾಕೆ ಮೇಲಿನ ಅತ್ಯಾಚಾರ ಪ್ರಕರಣ : ಪ್ರಜ್ವಲ್‌ ರೇವಣ್ಣ ವಿರುದ್ಧ ವಿಚಾರಣೆಗೆ ಹೈಕೋರ್ಟ್‌ ಸಮ್ಮತಿ

ಬೆಂಗಳೂರು : ಮನೆಕೆಲಸದಾಕೆಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ವಿಚಾರಣಾಧೀನ ನ್ಯಾಯಾಲಯವು ಪ್ರಜ್ವಲ್‌ ರೇವಣ್ಣ ವಿರುದ್ಧ ವಿಚಾರಣೆ ಮುಂದುವರಿಸಬಹುದು ಎಂದು ಕರ್ನಾಟಕ ಹೈಕೋರ್ಟ್‌ ಶುಕ್ರವಾರ ಹೇಳಿದೆ. ಮನೆಕೆಲಸದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಸಂಬಂಧ ದಾಖಲಾಗಿರುವ ಎಫ್‌ಐಆರ್‌, ಆನಂತರ ಸಲ್ಲಿಕೆಯಾಗಿರುವ ಆರೋಪ ಪಟ್ಟಿ ಹಾಗೂ ನ್ಯಾಯಾಂಗ ಪ್ರಕ್ರಿಯೆ ರದ್ದುಪಡಿಸಬೇಕು ಎಂದು ಕೋರಿ ಜೆಡಿಎಸ್‌ ಶಾಸಕ … Continued

ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಜೂನ್‌ 21ರಿಂದ 4 ದಿನ ಜೋರಾದ ಗಾಳಿ ಸಹಿತ ಭಾರಿ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಜೂನ್‌ 21ರಂದು ಬಲವಾದ ಗಾಳಿಯೊಂದಿಗೆ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಿಸಿದೆ. ರಾಜ್ಯದ ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಗದಗ ಜಿಲ್ಲೆಗಳಲ್ಲಿ ನಿರಂತರ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. … Continued

500 ರೂ. ಲಂಚ ಪಡೆದ ಪ್ರಕರಣ : ನಿವೃತ್ತಿಯಾಗಿ 10 ವರ್ಷದ ಬಳಿಕ ಗ್ರಾಮ ಲೆಕ್ಕಾಧಿಕಾರಿಗೆ ಜೈಲು ಶಿಕ್ಷೆ

ಬೆಳಗಾವಿ : 30 ವರ್ಷದ ಹಿಂದೆ ಪಡೆದಿದ್ದ 500 ರೂ. ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ನಿವೃತ್ತಿಯಾದ 10 ವರ್ಷದ ಬಳಿಕ ಗ್ರಾಮ ಲೆಕ್ಕಾಧಿಕಾರಿಗೆ ಜೈಲು ಶಿಕ್ಷೆಯಾಗಿದೆ. ಅಣ್ಣ-ತಮ್ಮಂದಿರ ಹೆಸರಿಗೆ ಜಮೀನು ಖಾತೆ ಮಾಡಿಕೊಡಲು 500 ರೂ. ಲಂಚ ಪಡೆದಿದ್ದ ಗ್ರಾಮ ಲೆಕ್ಕಿಗನಿಗೆ ಸುಪ್ರೀಂ ಕೋರ್ಟ್‌ ಶಿಕ್ಷೆ ವಿಧಿಸಿದೆ. ನಾಗೇಶ ಶಿವಂಗೇಕರ ಎಂಬವರು ಜೈಲು ಪಾಲಾದ ನಿವೃತ್ತ … Continued

ನನ್ನಲ್ಲಿರುವ ಮಾಹಿತಿ ಬಹಿರಂಗವಾದ್ರೆ ಸರ್ಕಾರದ ಬುಡವೇ ಅಲ್ಲಾಡುತ್ತೆ : ವಸತಿ ಇಲಾಖೆ ಭ್ರಷ್ಟಾಚಾರದ ಬಗ್ಗೆ ಕಾಂಗ್ರೆಸ್ ಶಾಸಕ ಬಿ.ಆರ್‌.ಪಾಟೀಲ ಆಡಿಯೋ ವೈರಲ್..!

ಬೆಂಗಳೂರು: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಹಾಗೂ ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ್ ವಸತಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದ ಆಡಿಯೋ ಕ್ಲಿಪ್ ಒಂದು ಶುಕ್ರವಾರ (ಜೂ.20) ಎಲ್ಲೆಡೆ ವೈರಲ್ ಆಗಿದೆ. ಅವರದ್ದು ಎನ್ನಲಾದ ಆಡಿಯೋ ಕ್ಲಿಪ್‌ನಲ್ಲಿ, ಶಾಸಕ ಬಿ.ಆರ್‌.ಪಾಟೀಲ ಅವರು ತಮ್ಮಲ್ಲಿರುವ ಮಾಹಿತಿ ಬಹಿರಂಗಪಡಿಸಿದರೆ, ಕಾಂಗ್ರೆಸ್ ನೇತೃತ್ವದ … Continued

ವಸತಿ ಯೋಜನೆಯಲ್ಲಿ ಅಲ್ಪಸಂಖ್ಯಾತರ ಮೀಸಲಾತಿ ಹೆಚ್ಚಳ : ಸಂಪುಟ ಸಭೆಯಲ್ಲಿ ನಿರ್ಧಾರ

ಬೆಂಗಳೂರು: ರಾಜ್ಯ ಸರ್ಕಾರ ಗುತ್ತಿಗೆ ಬೆನ್ನಲ್ಲೇ ಈಗ ಅಲ್ಪಸಂಖ್ಯಾತರಿಗೆ ಮತ್ತೊಂದು ಯೋಜನೆಯಲ್ಲಿ ಮೀಸಲಾತಿ ಹೆಚ್ಚಳಕ್ಕೆ ನಿರ್ಧರಿಸಿದ್ದು, ವಿವಿಧ ವಸತಿ ಯೋಜನೆಗಳ ಅಡಿಯಲ್ಲಿ ಅಲ್ಪಸಂಖ್ಯಾತರಿಗೆ ಇದ್ದ ಮೀಸಲಾತಿಯನ್ನು ಶೇಕಡಾ 10 ರಿಂದ 15 ಕ್ಕೆ ಹೆಚ್ಚಿಸಲು ಸಚಿವ ಸಂಪುಟ ಸಭೆ ಗುರುವಾರ ಒಪ್ಪಿಗೆ ನೀಡಿದೆ. ಗುರುವಾರ (ಜೂನ್‌ ೧೯) ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಸಿದ ಸಚಿವ … Continued

ಮದುವೆಯಾಗಲು ಗೋವಾಕ್ಕೆ ಹೋಗಿದ್ದ ಬೆಂಗಳೂರಿನ ಜೋಡಿ ; ಆದ್ರೆ ಕನಸಿನ ಪ್ರವಾಸ ಪ್ರೇಯಸಿ ಕೊಲೆಯಲ್ಲಿ ಅಂತ್ಯ

ಪಣಜಿ : ಮನಕಲಕುವ ಘಟನೆಯೊಂದರಲ್ಲಿ, ಮದುವೆಯಲ್ಲಿ ಕೊನೆಗೊಳ್ಳಬೇಕಿದ್ದ ಗೋವಾ ಪ್ರವಾಸವು ಪ್ರೇಯಸಿಯ ಕೊಲೆಯಲ್ಲಿ ಅಂತ್ಯ ಕಂಡಿದೆ. ತನ್ನ ಪ್ರೇಯಸಿಯನ್ನು ಕೊಲೆ ಮಾಡಿದ ಆರೋಪದ ಮೇಲೆ ಬೆಂಗಳೂರಿನ 22 ವರ್ಷದ ಯುವಕನನ್ನು ಬಂಧಿಸಲಾಗಿದೆ. ದಕ್ಷಿಣ ಗೋವಾದ ಅರಣ್ಯ ಪ್ರದೇಶದಲ್ಲಿ ಯುವತಿಯ ಶವ ಪತ್ತೆಯಾಗಿದ್ದು ಗೋವಾಕ್ಕೆ ಮದುವೆಯಾಗಬೇಕೆಂದು ಬಂದಿದ್ದ ಯುವತಿಯ ಬದುಕು ದುರಂತದಲ್ಲಿ ಕೊನೆಗೊಂಡಿತು. ಉತ್ತರ ಬೆಂಗಳೂರಿನ ನಿವಾಸಿ … Continued