ಎಸ್‌ಐಟಿಗೆ ಸರ್ವ ಸ್ವಾತಂತ್ರ್ಯವನ್ನೂ ನೀಡಲಾಗಿದೆ: ಬೊಮ್ಮಾಯಿ

ಬೆಂಗಳೂರು : ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಚಿಸಲಾಗಿರುವ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ಸರ್ವ ಸ್ವಾತಂತ್ರ್ಯವನ್ನೂ ನೀಡಲಾಗಿದೆ ಎಂದು ಗೃಹ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತನಿಖೆ ನಡೆಯುತ್ತರುವುದರಿಂದ ಈ ವಿಚಾರವಾಗಿ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಮೀಸಲಾತಿಗೆ … Continued

ಸಿಂಧಗಿ ಉಪಚುನಾವಣೆ: ಮನಗೂಳಿ ಕಿರಿಯ ಪುತ್ರಗೆ ಟಿಕೆಟ್-ಜೆಡಿಎಸ್‌ ಚಿಂತನೆ

ವಿಜಯಪುರ: ದಿವಂಗತ ಎಂ.ಸಿ.ಮನಗೂಳಿ ಅವರ ಪುತ್ರ ಅಶೋಕ ಜೆಡಿಎಸ್‌ ತೊರೆದು ಕಾಂಗ್ರೆಸ್‌ ಸೇರಿದ ನಂತರ ಸಿಂಧಗಿ ಉಪಚುನಾವಣೆಯಲ್ಲಿ ಜೆಡಿಎಸ್‌ ದಿವಂಗತ ಮನಗೂಳಿಯವರಕಿರಿಯ ಪುತ್ರ ಡಾ.ಶಾಂತವೀರ ಅವರಿಗೆ ಟಿಕೆಟ್‌ ಕೊಡಲು ಚಿಂತನೆ ನಡೆಸಿದೆ. ಜೆಡಿಎಸ್ ಶಾಸಕರಾಗಿದ್ದ ಎಂ.ಸಿ.ಮನಗೂಳಿ ನಿಧನರಾಗಿದ್ದರಿಂದ ಈ ಸ್ಥಾನ ತೆರವಾಗಿದೆ, ಹಾಗೂ ಜೆಡಿಎಸ್‌ ಅವರ ಪುತ್ರ ಅಶೋಕ್ ಮನಗೂಳಿ ಅವರಿಗೆ ಟಿಕೆಟ್‌ ಕೊಡಲು ನಿರ್ಧರಿಸಿತ್ತು. … Continued

ಬೆಳಗಾವಿಯಿಂದ ಕೊಲ್ಲಾಪುರಕ್ಕೆ ಬಸ್‌ ಸಂಚಾರ ಸ್ಥಗಿತ‌

ಬೆಳಗಾವಿ: ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಶಿವಸೇನಾ ಕಾರ್ಯಕರ್ತರು ಶುಕ್ರವಾರ ರಾತ್ರಿ ಕರ್ನಾಟಕದ ಬಸ್‌ಗಳಿಗೆ ಮಸಿ ಬಳಿಯಲು ಶುರು ಮಾಡಿದ್ದು, ಈ ಹಿನ್ನೆಲೆಯಲ್ಲಿ ಶನಿವಾರ ಬೆಳಿಗ್ಗೆಯಿಂದ ಬೆಳಗಾವಿಯಿಂದ ಕೊಲ್ಲಾಪುರಕ್ಕೆ ಸಾರಿಗೆ ಸಂಸ್ಥೆ ಬಸ್‌ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ  ಸ್ಥಗಿತಗೊಳಿಸಲಾಗಿದೆ. ಮಹಾರಾಷ್ಟ್ರದಿಂದಲೂ ಬಸ್‌ಗಳು ಬೆಳಗಾವಿಗೆ ಬರುತ್ತಿಲ್ಲ. ಕೆಲ ದಿನಗಳ ಹಿಂದೆ ಕೊಲ್ಲಾಪುರದಲ್ಲಿ ಶಿವಸೇನಾ ಕಾರ್ಯಕರ್ತರು ಅಂಗಡಿಗಳು, ಮಳಿಗೆಗಳಲ್ಲಿದ್ದ ಕನ್ನಡದ ನಾಮಫಲಕಗಳಿಗೆ ಮಸಿ … Continued

ಸಿಡಿಗೂ ನನಗೆ ಸಂಬಂಧವೇ ಇಲ್ಲ, ನಾನು ಪ್ರಕರಣ ಹಿಂಪಡೆದಿದ್ದೇನೆ: ಕಲ್ಲಹಳ್ಳಿ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ರಾಸಲೀಲೆ ಸಿಡಿ ಬಿಡುಗಡೆ ಮಾಡಿ, ಸಚಿವ ಸ್ಥಾನದಿಂದ ಅವರು ಕೆಳಗಿಳಿಯಲು ಪ್ರಮುಖ ಕಾರಣರಾಗಿದ್ದ ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ ಇದೀಗ ತಮಗೂ ಸಿಡಿ ಪ್ರಕರಣಕ್ಕೂ ಸಂಬಂಧವಿಲ್ಲ ಎಂದು ಉಲ್ಟಾ ಹೊಡೆದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ದಿನೇಶ್ ಕಲ್ಲಹಳ್ಳಿ, ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೂ ನನಗೂ … Continued

ಈಡೇರದ ಬೇಡಿಕೆ: ಮಾ.೧೮ರಿಂದ ಮತ್ತೆ ಮುಷ್ಕರಕ್ಕೆ ಸಾರಿಗೆ ನೌಕರರ ನಿರ್ಧಾರ

ಬೆಂಗಳೂರು: ತಮ್ಮ ಬೇಡಿಕೆ ಈಡೇರದ ಕಾರಣ ಸಾರಿಗೆ ನೌಕರರು ಮತ್ತೊಮ್ಮೆ ಮುಷ್ಕರ ನಡೆಸಲು ಮುಂದಾಗಿದ್ದಾರೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಮಜ್ದೂರ್ ಸಂಘ ಒಕ್ಕೂಟವು ಮಾರ್ಚ್ ೧೮ರಿಂದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹಕ್ಕೆ ನಿರ್ಧರಿಸಿದ್ದು, ಪ್ರಮುಖ ನಾಲ್ಕು ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದೆ. ಇಲ್ಲದಿದ್ದರೆ ಮಾ.೧೮ರಂದು ಬೆಂಗಳೂರಿನ ಫ್ರೀಡಂ ಪಾರ್ಕಿಲ್ಲಿ ಧರಣಿ ಸತ್ಯಾಗ್ರಹ ನಡೆಸುತ್ತೇವೆ ಎಂದು … Continued

ಕರ್ನಾಟಕ: ೮೦೦ ದಾಟಿದ ಪ್ರತಿದಿನದ ಕೊರೊನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಏರುಮುಖವಾಗಿದೆ. ಕಳೆದ ೨೪ ತಾಸಿನಲ್ಲಿ (ಶುಕ್ರವಾರ) ಹೊಸ ಪ್ರಕರಣಗಳ ಸಂಖ್ಯೆ 800ರ ಗಡಿ ದಾಟಿದ್ದು ಅನೇಕ ದಿನಗಳ ನಂತರ ದಿನನಿತ್ಯದ ಪ್ರಕರಣ ೮೦೦ ದಾಟಿದೆ. ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಬೆಂಗಳೂರು ನಗರದಲ್ಲಿ ಸೋಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚಿದೆ. ಕೊರೋನಾ ಸೋಂಕಿಗೆ ಐದು ಜನರು ಮೃತಪಟ್ಟಿದ್ದು, ಬೆಂಗಳೂರು ನಗರದಲ್ಲಿ ಇಬ್ಬರು, … Continued

ಹಂಪಿಯಲ್ಲಿ ಐತಿಹಾಸಿಕ ಕೋಟೆ ಗೋಡೆ ಕುಸಿತ

ಹೊಸಪೇಟೆ: ವಿಶ್ವವಿಖ್ಯಾತ ಹಂಪಿಯಲ್ಲಿನ ಕಮಲ ಮಹಲ್ ಬಳಿ ವಿಜಯ ನಗರದ ರಾಮರಾಯನ ಕೋಟೆ ಅರಮನೆಯ ( ಕಮಲ ಮಹಲ್) ಗೋಡೆ ಕುಸಿದಿದೆ. ಕಮಲ ಮಹಲ್ ಕೋಟೆಯ ಹೊರ ಭಾಗ ಕುಸಿದಿದ್ದು, ಆದರೂ ಯಾವುದೇ ಹೆಚ್ಚಿನ ಹಾನಿ ಸಂಭವಿಸಿಲ್ಲ. ಒಂದು ವೇಳೆ ಒಳಭಾಗದಲ್ಲಿ ಕುಸಿತವಾಗಿದ್ದರೆ ಮತ್ತಷ್ಟು ಸ್ಮಾರಕಗಳಿಗೆ ಹಾನಿಯಾಗುವ ಸಂಭವವಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ. ಇಲ್ಲಿ ಶೌಚಾಲಯ … Continued

ಕಾಶ್ಮೀರದ ಹಿಮಪಾತ; ಲಾಡ್ಜ್‌ನಲ್ಲಿ ಸಿಲುಕಿದ ಹೊಸಪೇಟೆ-ಹುಬ್ಬಳ್ಳಿ ಪ್ರವಾಸಿಗರು

ಹೊಸಪೇಟೆ: ಕಾಶ್ಮೀರದಲ್ಲಿ ಅಧಿಕ ಹಿಮಪಾತ ಕಾರಣದಿಂದ ತಾವು ಉಳಿದುಕೊಂಡಿರುವ ಲಾಡ್ಜ್​​​​​ನಿಂದ ಹೊರ ಬರಲಾಗದೆ ಹೊಸಪೇಟೆ ನಿವಾಸಿಗಳು ಪರದಾಡುತ್ತಿದ್ದಾರೆ. ಒಟ್ಟಾರೆಯಾಗಿ ೧೦ ಜನ ಲಾಡ್ಜ್‌ನಲ್ಲಿ ಸಿಲುಕಿಕೊಂಡಿದ್ದು, ಹೊಸಪೇಟೆಯ ಮೆಹರವಾಡೆ ಕುಟುಂಬ ಹಾಗೂ ಹುಬ್ಬಲ್ಳಿ ಮೂಲದವರು ಈ ಹಿಮಪಾತದಿಂದಾಗಿ ಹೊರಬರಲಾಗದೆ ಪರದಾಡುತ್ತಿದ್ದಾರೆ. ಇವರು ಮೂರ್ನಾಲ್ಕು ದಿನಗಳ ಹಿಂದೆ ಕಾಶ್ಮೀರದ ಪ್ರವಾಸಕ್ಕೆ ಹೋಗಿದ್ದರು ಎನ್ನಲಾಗಿದೆ. ಹಿಮಪಾತ ಇನ್ನೂ ಕೆಲವು ದಿನಗಳ … Continued

ವೀರಪ್ಪ ಮೊಯ್ಲಿಯವರ ಮಹಾಕಾವ್ಯ ‘ಶ್ರೀ ಬಾಹುಬಲಿ ಅಹಿಂಸಾ ದಿಗ್ವಿಜಯಂಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕಾರ

ನವ ದೆಹಲಿ: 2020ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳು ಪ್ರಕಟಗೊಂಡಿವೆ. ರಾಜಕಾರಣಿ-ಬರಹಗಾರ ವೀರಪ್ಪ ಮೊಯ್ಲಿ, ಕವಿ ಅರುಂಧತಿ ಸುಬ್ರಮಣಿಯನ್ ಸೇರಿದಂತೆ 20 ಬರಹಗಾರರು 2020ನೇ ಸಾಲಿನ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ವೀರಪ್ಪ ಮೊಯ್ಲಿ ಅವರ ಕನ್ನಡದ ಶ್ರೀ ಬಾಹುಬಲಿ ಅಹಿಂಸಾ ದಿಗ್ವಿಜಯಂ ಮಹಾಕಾವ್ಯ ಈ ಪ್ರಶಸ್ತಿಗೆ ಆಯ್ಕೆಯಾಗಿದೆ. ವಿವಿಧ ಭಾಷೆಗಳ ಏಳು ಕವನ … Continued

 ಪಂಚಮಸಾಲಿ ೨ಎಗೆ ಸೇರ್ಪಡೆ: ಮಾ.೨೨ರಂದು ಸಾಕ್ಷ್ಯಾಧಾರ ಸಲ್ಲಿಸಲು ಕೂಡಲಸಂಗಮ ಶ್ರೀ -ವಚನಾನಂದ ಶ್ರೀಗಳಿಗೆ ಆಯೋಗದಿಂದ ಪತ್ರ

ಬೆಂಗಳೂರು: ಲಿಂಗಾಯತ ಪಂಚಮಸಾಲಿ ಸಮುದಾಯವನ್ನು ಹಿಂದುಳಿದ ೨ಎಗೆ ಸೇರ್ಪಡೆ ಮಾಡುವ ಕುರಿತು ಶ್ರೀ ಜಯ ಬಸವ ಮೃತ್ಯುಂಜಯ ಸ್ವಾಮಿಗಳು ಹಾಗೂ   ವಚನಾನಂದ ಶ್ರೀಗಳಿಗೆ ದಾಖಲೆಗಳನ್ನು ನೀಡುವಂತೆ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ಪತ್ರ ಬರೆದಿದೆ. ಮಾಚ್೯ ೨೨ ರಂದು ( ಸೋಮವಾರ) ಸೂಕ್ತ ಸಾಕ್ಷ್ಯಾಧಾರಗಳನ್ನು ಆಯೋಗಕ್ಕೆ ನೀಡಬೇಕೆಂದು ಕೂಡಲಸಂಗಮದ ಜಯ ಬಸವ ಮೃತ್ಯುಂಜಯ ಶ್ರೀಗಳು ಹಾಗೂ … Continued