ದೆಹಲಿಗೂ ತಲುಪಲಿದೆಯೇ ಕಾಂಗ್ರೆಸ್‌ ಬಣ ರಾಜಕೀಯದ ಜಗಳ..?

ಬೆಂಗಳೂರು:  ಮೈಸೂರು ಮಹಾನಗರ ಪಾಲಿಕೆಯ ಮೇಯರ್-ಉಪಮೇಯರ್ ಚುನಾವಣೆಯಲ್ಲಿ ಜೆಡಿಎಸ್ ಜತೆ ಕಾಂಗ್ರೆಸ್ ಕೊನೆಕ್ಷಣದಲ್ಲಿ ಮಾಡಿಕೊಂಡ ಮೈತ್ರಿ ಕಾಂಗ್ರೆಸ್‌ನಲ್ಲಿ ಆಂತರಿಕ ಜಗಳಕ್ಕೆ ಕಾರಣವಾಗಿದೆ. ಶುಕ್ರವಾರ ಶಾಸಕ ತನ್ವೀರ್‌ ಸೇಠ್‌ ಸಿದ್ದರಾಮಯ್ಯ ವಿರುದ್ಧ ಅಸಮಾದಾನ ವ್ಯಕ್ತಪಡಿಸಿದ ಬೆನ್ನಲ್ಲೇ ಏಕಪಕ್ಷೀಯವಾಗಿ ಮೈತ್ರಿ ನಿರ್ಧಾರ ತೆಗೆದುಕೊಂಡ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಹೈಕಮಾಂಡ್‌ಗೆ ದೂರು … Continued

ನಿವೃತ್ತ ಪೊಲೀಸ್‌ ಮಹಾನಿರ್ದೇಶಕ ಶಂಕರ ಬಿದರಿ ಇಮೇಲ್‌ ಐಡಿ ಹ್ಯಾಕ್‌ !

ಬೆಂಗಳೂರು: ನಿವೃತ್ತ ರಾಜ್ಯ ಪೊಲೀಸ್​ ಮಹಾ ನಿರ್ದೇಶಕ ಶಂಕರ್ ಬಿದರಿ ಅವರ ಇ-ಮೇಲ್​​ ಐಡಿಯನ್ನು ದುಷ್ಕರ್ಮಿಗಳು ಹ್ಯಾಕ್​ ಮಾಡಿದ್ದಾರೆ. ಇ-ಮೇಲ್‌ ಐಡಿಯನ್ನು ಅಪರಿಚಿತರು ಹ್ಯಾಕ್‌ ಮಾಡಿ ಇ-ಮೇಲ್‌ ಅಡ್ರೆಸ್‌ನಲ್ಲಿದ್ದ ಸ್ನೇಹಿತರಿಗೆ ಪಂಜಾಬ್‌ ನ್ಯಾಷನಲ್‌ ಖಾತೆ ಹಾಗೂ ಐಎಫ್‌ಎಸ್‌ಸಿ ಕೋಡ್‌ ಕಳಿಸಿದ್ದಾರೆ. ನಂತರ ಖಾತೆಗೆ ಹಣ ಜಮಾ ಮಾಡುವಂತೆ ಬೇಡಿಕೆ ಇಟ್ಟಿದ್ದಾರೆ. ನಾನೇ ಇ-ಮೇಲ್‌ ಕಳಿಸಿರಬಹುದು ಎಂದು … Continued

ಮೈಸೂರು ಮೇಯರ್‌ ಆಯ್ಕೆ ಗೊಂದಲಕ್ಕೆ ಸಿದ್ದರಾಮಯ್ಯನವರೇ ಕಾರಣ: ಸಾ.ರಾ.ಮಹೇಶ ತೀವ್ರ ವಾಗ್ದಾಳಿ

ಮೈಸೂರು: ಮೈಸೂರು ಮೇಯರ್‌ ಆಯ್ಕೆ ಗೊಂದಲಕ್ಕೆ ಸಿದ್ಧರಾಮಯ್ಯ ಅವರೇ ನೇರ ಕಾರಣ ಎಂದು ಜೆಡಿಎಸ್‌ ಮುಖಂಡ ಹಾಗೂ ಮಾಜಿ ಸಚಿವ ಸಾ.ರಾ.ಮಹೇಶ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣದ ಬಗ್ಗೆ ಎಳೆಎಳೆಯಾಗಿ ಬಿಡಿಸಿಟ್ಟರು. ಸಿದ್ದರಾಮಯ್ಯ ಜೆಡಿಎಸ್‍ ಟೀಕಿಸಿದ್ದರಿಂದ ಇಂದು ನಮಗೆ ಮೇಯರ್ ಸ್ಥಾನ ಲಭಿಸಿದೆ. ನಾವಾಗಿ ಮೇಯರ್ ಸ್ಥಾನ ಬಯಸಿರಲಿಲ್ಲ. ಜೆಡಿಎಸ್‍ಅನ್ನು ಹಗುರವಾಗಿ ಕಂಡಿದ್ದರಿಂದ ನಾವು … Continued

ಅಕ್ರಮ ಜಿಲೆಟಿನ್‌: ಬೆಳಗಾವಿ ಜಿಲ್ಲೆಯಲ್ಲಿ ಐವರ ಬಂಧನ

ಬೆಳಗಾವಿ: ಅಕ್ರಮವಾಗಿ ಜಿಲೆಟಿನ್ ಸಾಗಿಸುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಜಿಲ್ಲೆ ಗೋಕಾಕ್ ತಾಲೂಕಿನ ಹೊನಕಟ್ಟಿ ಗ್ರಾಮದಲ್ಲಿ ಬಂಧಿಸಲಾಗಿದೆ. ಬಂಧಿತರನ್ನು ಗೋಪಾಲ್ ಸೊರಗಾಂವಿ, ಗಿರಿಮಲ್ಲಪ್ಪ ಸಿದ್ಧಾಪುರ, ಭೀಮಪ್ಪ ಎಂದು ಗುರುತಿಸಲಾಗಿದ್ದು, ಇವರಿಂದ 156 ಜಿಲೆಟಿನ್ ಕಡ್ದಿ ಸೇರಿದಂತೆ ಹಲವು ಸ್ಫೋಟಕಗಳನ್ನು ವಶ ಪಡಿಸಿಕೊಳ್ಳಲಾಗಿದೆ.ಕುಲಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಿಕ್ಕೋಡಿ ತಾಲೂಕಿನ ಹತ್ತರವಾಟ ಗ್ರಾಮದ ಹೊರವಲಯದಲ್ಲಿ ಸ್ಫೋಟಗೊಳಿಸಲು … Continued

ಮಾ.೨೦ರಂದು ಶಿವಮೊಗ್ಗದಲ್ಲಿ ದಕ್ಷಿಣ ಭಾರತದ ಮೊದಲ ರೈತ ಮಹಾಪಂಚಾಯತ್‌

ನವ ದೆಹಲಿ: ವಿವಾದಾತ್ಮಕ ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ದೆಹಲಿಯಲ್ಲಿ ರೈತರು ಪ್ರತಿಭಟನೆ ಇದೀಗ ದಕ್ಷಿಣ ಭಾರತದ ಕಡೆ ವಿಸ್ತರಿಸಲು ರೈತರು ಮುಂದಾಗಿದ್ದಾರೆ. ಮಾರ್ಚ್ 20 ರಂದು ಮೊದಲ ಮಹಾ ಪಂಚಾಯತ್ ಶಿವಮೊಗ್ಗದಲ್ಲಿ ನಡೆಯಲಿದೆ. ಶಿವಮೊಗ್ಗದಲ್ಲಿ ನಡೆಯಲಿರುವ ದಕ್ಷಿಣ ಭಾರತದ ಮೊದಲ ರೈತ ಮಹಾಪಂಚಾಯತ್‍ಗೆ 20 ಸಾವಿರ ರೈತರು ಸೇರುವ ನಿರೀಕ್ಷೆಯಿದೆ. ಮಹಾಪಂಚಾಯತ್‍ನಲ್ಲಿ ಭಾಗವಹಿಸುವಂತೆ ಕರ್ನಾಟಕದ … Continued

ಕಾನೂನುಗಳ ನಡುವೆ ಇರುವ ಅಸ್ಪಷ್ಟತೆ ನಿವಾರಣೆಯಾಗಬೇಕು: ಬೊಮ್ಮಾಯಿ

ಬೆಂಗಳೂರು: ನ್ಯಾಯಾಲಯಗಳಲ್ಲಿ ವಿವಿಧ ಇಲಾಖೆಗಳ ನಡುವೆ ಸಾವಿರಾರು ಪ್ರಕರಣಗಳು ದಾಖಲಾಗಿವೆ. ಇದಕ್ಕೆ ಕಾರಣವಾಗಿರುವ ಪರಸ್ಪರ ದ್ವಂದ್ವಕಾರಿ  ಕಾನೂನುಗಳನ್ನು ಸರಿಪಡಿಸಲಾಗುವುದು ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಶನಿವಾರ ಬೆಂಗಳೂರಿನಲ್ಲಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಏರ್ಪಡಿಸಲಾಗಿದ್ದ ಕರ್ನಾಟಕ ರಾಜ್ಯ ವಿವಾದ ಪರಿಹಾರ ನೀತಿ ಬಿಡುಗಡೆ ಸಮಾರಂಭದಲ್ಲಿ ಕಾಫಿ ಟೇಬಲ್ … Continued

ಮೂರು ದಿನದೊಳಗೆ ಸ್ಪೋಟಕ ಹಿಂತಿರುಗಿಸಿ; ಸಚಿವ ನಿರಾಣಿ ಸೂಚನೆ 

ಕೊಪ್ಪಳ: ಕಲ್ಲು ಕ್ವಾರಿ ಹಾಗೂ  ಗಣಿಗಾರಿಕೆ ಪ್ರದೇಶಗಳಲ್ಲಿ ಕಾನೂನು ಬಾಹಿರವಾಗಿ ಸ್ಪೋಟಕ ವಸ್ತುಗಳನ್ನು ಮೂರು ದಿನದೊಳಗೆ ಸಂಬಂಧಪಟ್ಟ ಅಧಿಕಾರಿಗಳಿಗೆ  ಹಿಂದಿತಿರುಗಿಸಬೇಕೆಂದು ಎಂದು ರಾಜ್ಯ ಗಣಿ ಸಚಿವ ಮುರುಗೇಶ ನಿರಾಣಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಇಲ್ಲು ಶನಿವಾರ ಸಭೆ ನಡೆಸಿ ಮಾತನಾಡಿದ ಅವರು, ಯಾರ್ಯಾರು  ತಮ್ಮ ತಮ್ಮ ಕಲ್ಲು ಕ್ವಾರಿ ಹಾಗೂ ಗಣಿಗಾರಿಕೆ ನಡೆಯುವ ಸ್ಥಳಗಳಲ್ಲಿ ಸ್ಫೋಟಕ್ಕಾಗಿ … Continued

ವಿಜಯಾನಂದ ಕಾಶಪ್ಪನವರಷ್ಟು ದೊಡ್ಡ ನಾಯಕ ನಾನಲ್ಲ:ನಿರಾಣಿ ವ್ಯಂಗ್ಯ

ಕೊಪ್ಪಳ: ಪಂಚಮಸಾಲಿ ಹೋರಾಟದಲ್ಲಿ ಎಲ್ಲರೂ ಒಗ್ಗಟ್ಟಾಗಿದ್ದೇವೆ.  ಮಾಜಿ ಶಾಸಕ ವಿಜಯ ಕಾಶಪ್ಪನವರಷ್ಟು ದೊಡ್ಡ  ನಾಯಕ ನಾನಲ್ಲ. ಅವರು ರಾಷ್ಟ್ರೀಯ ಅಧ್ಯಕ್ಷರು. ಅವರೇ ನಾಯಕತ್ವ ತೆಗೆದುಕೊಂಡು ಹೋರಾಟ ಮಾಡಲಿ ಎಂದು ಸಚಿವ ಮುರುಗೇಶ ನಿರಾಣಿ ಹೇಳಿದರು. ಶನಿವಾರ ಬಿಜೆಪಿ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರು ಹಾಗೂ ಸಾರ್ವಜನಿಕರನ್ನು ಭೇಟಿಯಾಗಿ ಅವರ ಸಮಸ್ಯೆಗಳನ್ನು ಆಲಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು … Continued

ಕಾಂಗ್ರೆಸ್‌ನಲ್ಲಿ ಒಡಕಿದೆ ಎಂಬ ಸಂದೇಶ ರವಾನೆ: ಡಾ. ಯತೀಂದ್ರ

ಮೈಸೂರು: ಮೇಯರ್‌ ಆಯ್ಕೆ ಸಂದರ್ಭದಲ್ಲಿ ನಡೆದ ಬೆಳವಣಿಗೆಗಳಿಂದ ಕಾಂಗ್ರೆಸ್‌ನಲ್ಲಿ ಒಡಕಿದೆ ಎಂಬ ಸಂದೇಶ ರವಾನೆಯಾಗಿದೆ ಎಂದು ವರುಣಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಡಾ. ಯತೀಂದ್ರ ಹೇಳಿದರು. ಮೇಯರ್‌ ಚುನಾವಣೆ ಸಂದರ್ಭದಲ್ಲಿ ನಡೆದ ಬೆಳವಣಿಗೆಗೆಳು ದುರದೃಷ್ಟಕರ. ಪಕ್ಷದ ನಾಯಕರೊಬ್ಬರಿಗೆ ಹಿನ್ನಡೆಯಾಗಬೇಕೆಂಬ ಏಕೈಕ ಉದ್ದೇಶದಿಂದ ನಮ್ಮ ಪಕ್ಷದ ಮುಖಂಡರೇ ಮಾಡಿದ ಕೆಲಸ … Continued

ಮೀಸಲಾತಿ ಹಕ್ಕೊತ್ತಾಯಕ್ಕೆ ಬೆಂಗಳೂರಿನಲ್ಲಿ ಒಕ್ಕಲಿಗರ ಸಭೆ

ಬೆಂಗಳೂರು: ಒಕ್ಕಲಿಗ ಮೀಸಲಾತಿ ಹೋರಾಟವನ್ನು ತೀವ್ರಗೊಳಿಸುವ ಕುರಿತು ಮಹತ್ವದ ಸಭೆ ನಗರದಲ್ಲಿ ಬೆಂಗಳೂರಿನ ಖಾಸಗಿ ಹೋಟೆಲ್‍ನಲ್ಲಿ ನಡೆಯಿತು.ಒಕ್ಕಲಿಗ ಸಮುದಾಯದ ಗಣ್ಯರು, ವಿವಿಧ ಸಂಘ, ಸಂಸ್ಥೆಗಳ ಮುಖಂಡರು, ಸಮುದಾಯದ ಹಿರಿಯರು ಮೀಸಲಾತಿ ವಿಚಾರ ಪ್ರಸ್ತಾಪಿಸಿದರು. ಹಿಂದೆ ನಮಗೆ 14 ಪರ್ಸೆಂಟ್೧೪% ಮೀಸಲಾತಿ ನೀಡಲಾಗಿತ್ತು. ಆದರೆ ಅದನ್ನು ಈಗ ೪% ಇಳಿಸಲಾಗಿದೆ. ರಾಜ್ಯದಲ್ಲಿರುವ ಒಕ್ಕಲಿಗ ಸಮುದಾಯದ ಜನಸಂಖ್ಯೆಗೆ ಅನುಗುಣವಾಗಿ … Continued