ಶುಲ್ಕ ಕಡಿತ ವಿರೋಧಿಸಿ ಖಾಸಗಿ ಶಾಲಾ ಮಂಡಳಿಗಳ ಪ್ರತಿಭಟನೆ

ಬೆಂಗಳೂರು: ಶುಲ್ಕ ಕಡಿತ ವಿರೋಧಿಸಿ ಖಾಸಗಿ ಶಾಲಾ ಆಡಳಿತ ಮಂಡಳಿಯವರು ನಗರದಲ್ಲಿ ಮಂಗಳವಾರ ಬೃಹತ್ ಪ್ರತಿಭಟನೆ ನಡೆಸಿ ಸರ್ಕಾರದ ಕ್ರಮ ಖಂಡಿಸಿದರು. ಶೇ.30ರಷ್ಟು ಶುಲ್ಕ ಕಡಿತ ಮಾಡಿರುವುದರಿಂದ ಖಾಸಗಿ ಶಾಲೆಗಳವರಿಗೆ ತೀವ್ರ ತೊಂದರೆಯಾಗುತ್ತಿದೆ ಎಂದು ಆರೋಪಿಸಿ ಕರ್ನಾಟಕ ಖಾಸಗಿ ಶಾಲಾ ಆಡಳಿತ ಮಂಡಳಿ ಬೋಧಕ-ಬೋಧಕೇತರ ಸಿಬ್ಬಂದಿ ಸಮನ್ವಯ ಸಮಿತಿ ವತಿಯಿಂದ ರೈಲ್ವೆ ನಿಲ್ದಾಣದಿಂದ ಫ್ರೀಡಂಪಾರ್ಕ್‍ವರೆಗೆ ಸಾವಿರಾರು … Continued

ಮಹದಾಯಿ ನೀರು ಹಂಚಿಕೆ: ರಾಜ್ಯಕ್ಕೆ ಯಾವುದೇ ನೋಟಿಸ್‌ ಜಾರಿಯಾಗಿಲ್ಲ- ಸಚಿವ ರಮೇಶ ಜಾರಕಿಹೊಳಿ

ನವದೆಹಲಿ: ಮಹದಾಯಿ ನದಿ ನೀರು ಹಂಚಿಕೆ ಕುರಿತು ನ್ಯಾಯಾಂಗ ನಿಂದನೆ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯಕ್ಕೆ ಯಾವುದೇ ನೋಟಿಸ್‌ ಜಾರಿಯಾಗಿಲ್ಲ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ. ವಿವಿಧ ರಾಜ್ಯಗಳೊಂದಿಗಿನ ನದಿ ನೀರು ಹಂಚಿಕೆ ಸಂಬಂಧ ಉದ್ಭವಿಸಿರುವ ಬಿಕ್ಕಟ್ಟಿಗೆ ಪ್ರತಿಯಾಗಿ ನವದೆಹಲಿಗೆ ತೆರಳಿದ ಸಚವ ರಮೇಶ್ ಜಾರಕಿಹೊಳಿ, ಸೋಮವಾರದ ಬೆಳವಣಿಗೆಗಳಿಗೆ ಪ್ರತಿಯಾಗಿ ಈ ಸ್ಪಷ್ಟನೆ ನೀಡಿದ್ದಾರೆ. … Continued

ಜನಪ್ರತಿನಿಧಿಗಳೇ ಅಕ್ರಮ ಗಣಿಗಾರಿಕೆಯಲ್ಲಿ ಶಾಮೀಲು: ಮಾಜಿ ಸಿಎಂ ಕುಮಾರಸ್ವಾಮಿ ಆರೋಪ

ರಾಜ್ಯದಲ್ಲಿ ಜನಪ್ರತಿನಿಧಿಗಳೇ ಅಕ್ರಮ ಗಣಿಗಾರಿಕೆಯಲ್ಲಿ ಶಾಮೀಲಾಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ಹಲವು ಜನಪ್ರತಿನಿಧಿಗಳೇ ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿದ್ದಾರೆ. ಚಿಕ್ಕಬಳ್ಳಾಪುರ ಗಣಿಯಲ್ಲಿ ಜಿಲೆಟಿನ್‌ ಸ್ಫೋಟಗೊಂಡಿರುವುದು ಸರಕಾರದ ಬೇಜವಾಬ್ದಾರಿತನವನ್ನು ತೋರಿಸುತ್ತದೆ. ಸರಕಾರಕ್ಕೆ ಜನರ ಜೀವದ ಬಗ್ಗೆ ಬದ್ಧತೆಯೇ ಇಲ್ಲವಾಗಿದೆ. ಪೊಲೀಸರು ಒಂದು ವಾರದ ಮುಂಚೆಯೇ ಘಟನಾ ಸ್ಥಳಕ್ಕೆ ಹೋಗಿದ್ದಾರೆ. ಅವರಿಗೆ ಈ ಬಗ್ಗೆ ಮೊದಲೇ … Continued

ನಾನು ಒಕ್ಕಲಿಗನ ಮಗ ಎಲ್ಲಿಯೂ ಓಡಿ ಹೋಗಲ್ಲ: ಚಿತ್ರನಟ ಜಗ್ಗೇಶ

ಬೆಂಗಳೂರು: ನಾನು ಒಕ್ಕಲಿಗನಾಗಿ ಅಪ್ಪನಿಗೆ ಹುಟ್ಟಿದ ಮಗನಾಗಿ ಎಲ್ಲಿಯೂ ಓಡಿ ಹೋಗಲ್ಲ ಎಂದು ಚಿತ್ರನಟ ಜಗ್ಗೇಶ ಹೇಳಿದರು. ಚಿತ್ರನಟನೊಬ್ಬನ ಬಗ್ಗೆ ಕೀಳಾಗಿ ಮಾತನಾಡಿದ್ದೇನೆಂದು ಆರೋಪಿಸಿ ಕೆಲವರು ತಮ್ಮ ಮೇಲೆ ಹಲ್ಲೆ ಮಾಡಲೆತ್ನಿಸಿದ ಪ್ರಕರಣ ಕುರಿತು ಮಾತನಾಡಿ, ೨೦ ಜನ ಹುಡುಗರು ಉದ್ವೇಗದಿಂದ ಬಂದಿದ್ದರು. ನನಗೆ ಬೈದರು. ಆದರೆ ನಾನು ಹೆದರಿ ಹೋಗಲಿಲ್ಲ. ಎಲ್ಲಿಯೂ ಓಡಿ ಹೋಗುವುದಿಲ್ಲ. … Continued

ಹಿರೇನಾಗವಲ್ಲಿ ಸ್ಫೋಟ ಪ್ರಕರಣ: ಸಚಿವ ನಿರಾಣಿ ದಿಗ್ಭ್ರಾಂತಿ

ನವದೆಹಲಿ: ಚಿಕ್ಕಬಳ್ಳಾಪುರ ಜಿಲ್ಲೆ ಗುಂಡಿಬಂಡೆ ತಾಲ್ಲೂಕಿನ ಹಿರೆನಾಗವಲ್ಲಿಯಲ್ಲಿ ಜೆಲಿಟಿನ್ ಕಡ್ಡಿ ಸೋಟಿಸಿ ಆರು ಜನ ಮೃತಪಟ್ಟಘಟನೆಗೆ ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್. ನಿರಾಣಿ ಆಘಾತ ವ್ಯಕ್ತಪಡಿಸಿದ್ದಾರೆ. ಸಂತ್ರಸ್ತರ ಕುಟುಂಬಗಳಿಗೆ ಸಂತಾಪ ಸೂಚಿಸಿರುವ ಅವರು, ಮೃತರ ಕುಟುಂಬ ಸದಸ್ಯರಿಗೆ ಮತ್ತು ಗಾಯಾಳುಗಳಿಗೆ ಎಲ್ಲಾ ನೆರವು ನೀಡುವ ಭರವಸೆ ನೀಡಿದ್ದಾರೆ. ಶಿವಮೊಗ್ಗ ಸ್ಫೋಟದ ನಂತರ  ಮತ್ತೊಂದು ದುರಂತ  ನಡೆದಿರುವುದು … Continued

ಸ್ಫೋಟಕ ವಸ್ತು ಬಳಕೆಗೆ ಕಡ್ಡಾಯ ಕಾನೂನು ಜಾರಿ, ಯಾರೇ ಭಾಗಿಯಾಗಿದ್ದರೂ ನಿರ್ದಾಕ್ಷಿಣ್ಯ ಕ್ರಮ:ನಿರಾಣಿ

ನವ ದೆಹಲಿ: ಇನ್ನು ಮುಂದೆ ಕಲ್ಲುಕ್ವಾರಿ ಹಾಗೂ ಗಣಿಗಾರಿಕೆ ಪ್ರದೇಶಗಳಲ್ಲಿ ಸೋಟಕ ವಸ್ತುಗಳನ್ನು ಬಳಸಲು ಸರ್ಕಾರದಿಂದ ಅನುಮತಿ ಪಡೆದವರು ಮಾತ್ರ ಬಳಕೆ ಮಾಡಲು ಹೊಸ ಕಾನೂನು ಜಾರಿ ಮಾಡುತ್ತೇವೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ. ನವ ದೆಹಲಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವರು ಕಾನೂನು ಬಾಹಿರವಾಗಿ  ಕಲ್ಲು … Continued

ಕಾಳೇನಹಳ್ಳಿ ಗಣಿಪ್ರದೇಶ: ೨ ದಿನಗಳೊಳಗೆ ವರದಿಗೆ ನಿರಾಣಿ ಸೂಚನೆ

ಮಂಡ್ಯ:  ಶ್ರೀರಂಗಪಟ್ಟಣ ತಾಲ್ಲೂಕಿನ  ಕಾಳೇನಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಗಣಿಪ್ರದೇಶದ ವಸ್ತುಸ್ಥಿತಿ ಕುರಿತಾಗಿ ಎರಡು ದಿನದೊಳಗೆ ಸಮಿತಿಯನ್ನು ರಚಿಸಿ ಸಮಗ್ರ ವರದಿ ನೀಡುವಂತೆ ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ಆರ್.ನಿರಾಣಿ ಅವರು ಅಧಿಕಾರಿಗಳಿಗೆ ಸೂಚನೆ ಕೊಟ್ಟರು. ಸೋಮವಾರ ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದರಾದ ಸುಮಲತಾ ಅಂಬರೀಶ್  ಹಾಗೂ ಜಿಲ್ಲಾಧಿಕಾರಿ ಸೇರಿದಂತೆ ಇಲಾಖೆಯ ಅಧಿಕಾರಗಳ ಜೊತೆ ತಾಲ್ಲೂಕಿನ … Continued

ಕರ್ನಾಟಕ: ೩೧೭ ಜನರಿಗೆ ಕೊರೋನಾ ಸೋಂಕು ದೃಢ, ಐವರ ಸಾವು

ಬೆಂಗಳೂರು; ಕಳೆದ ೨೪ ತಾಸಿನಲ್ಲಿ ೩೧೭ ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಕೊರೊನಾದಿಂದ ಐವರು ಸೋಂಕಿತ ರು ಮೃತಪಟ್ಟಿದ್ದು ಬೆಂಗಳೂರು ನಗರದಲ್ಲಿ ಮೂರು, ಧಾರವಾಡ ಹಾಗೂ ತುಮಕೂರು ಜಿಲ್ಲೆಯಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ ರಾಜ್ಯದಲ್ಲಿ ಕೊರೋನಾ ಸೋಂಕು ಇಳಿಕೆಯ ಹಾದಿಯಲ್ಲಿದೆ. ರಾಜ್ಯದ 8 ಜಿಲ್ಲೆಗಳಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸ ಪ್ರಕರಣಗಳು ವರದಿಯಾಗಿಲ್ಲ. ಬೆಂಗಳೂರಿನಲ್ಲಿ ಕಳೆದ … Continued

೨೬ರಂದು ಭಾರತ ಬಂದ್‌:ಎಐಟಿಡಬ್ಲ್ಯುಎ ಬೆಂಬಲ

ಬೆಂಗಳೂರು: ಸರಕು ಮತ್ತು ಸೇವಾ ತೆರಿಗೆ (ಜಿಎಸ್‍ಟಿ) ವಿರುದ್ಧ ಕಾನ್ಫಿಡರೇಷನ್ ಆಫ್ ಆಲ್ ಇಂಡಿಯಾ ಟ್ರೇಡರ್ಸ್ (ಸಿಎಐಟಿ) ಫೆ.26ರಂದು ಕರೆ ನೀಡಿರುವ ಭಾರತ ಬಂದ್‍ಗೆ ಆಲ್ ಇಂಡಿಯಾ ಟ್ರಾನ್ಸ್ಪೋಟರ್ಸ್ ವೆಲ್ಫೇರ್ ಅಸೋಸಿಯೇಶನ್ (ಎಐಟಿಡಬ್ಲ್ಯುಎ) ಬೆಂಬಲ ನೀಡಿದೆ. ಇಂಧನ ದರ ಏರಿಕೆ ಮತ್ತು ಭಾರತ ಸರ್ಕಾರ ಜಾರಿಗೆ ತಂದಿರುವ ಹೊಸ ಇ-ವೇ ಬಿಲ್ ಕಾನೂನುಗಳ ವಿರುದ್ಧ ಒಂದು … Continued

ಸಿದ್ದಾಪುರ: ಮಂಗನಕಾಯಿಲೆ ಮೊದಲ ಪ್ರಕರಣ ದೃಢ

ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನಲ್ಲಿ ಮಂಗನ ಕಾಯಿಲೆಗೆ ಸಂಬಂಧಿಸಿದಂತೆ ಮೊದಲ ಪ್ರಕರಣ ಕಂಡುಬಂದಿದೆ.ಈ ಸಂಬಂಧ ತಹಶೀಲ್ದಾರರು  ಈ ಕುರಿತಂತೆ ಗ್ರಾಪಂ ಪಿ.ಡಿ.ಓಗಳ ಹಾಗೂ ಗ್ರಾಮ ಲೆಕ್ಕಾಧಿಕಾರಿಗಳ ಸಭೆ ಕರೆದಿದ್ದರು.  ಎಲ್ಲ ಇಲಾಖೆಗಳ, ಸಾರ್ವಜನಿಕರ ಸಹಕಾರದಿಂದ ಈ ಕಾಯಿಲೆ ಉಲ್ಬಣವಾಗದಂತೆ ತಡೆಯುವದು ಮುಖ್ಯವಾಗಿದೆ ಎಂದು ತಹಶೀಲ್ದಾರ ಪ್ರಸಾದ ಎಸ್.ಎ. ಹೇಳಿದರು. ಅವರು ತಾಪಂ ಸಭಾಭವನದಲ್ಲಿ … Continued