ಧಾರ್ಮಿಕ ಬೆಳವಣಿಗೆಯಿಂದ ಸಾಮಾಜಿಕ ಬೆಳವಣಿಗೆ ಸಾಧ್ಯ

ಸಿದ್ದಾಪುರ: ಧಾರ್ಮಿಕ ಬೆಳವಣಿಗೆಯಿಂದ ಸಾಮಾಜಿಕ ಬೆಳವಣಿಗೆ ಸಾಧ್ಯ ಎಂದು ಚಿತ್ರದುರ್ಗದ ಮುರುಘಾಮಠದ ಶ್ರೀ ಶಿವಮೂರ್ತಿ ಮುರುಘರಾಜೇಂದ್ರ ಶರಣರು ಹೇಳಿದರು. ಅವರು ಪಟ್ಟಣದ ಸೊರಬ ರಸ್ತೆಯಲ್ಲಿನ ಶ್ರೀ ಮುರುಘಾಮಠದ ಆವರಣದಲ್ಲಿ ನೂತನವಾಗಿ ನಿರ್ಮಿಸಲಾಗುವ ಅನುಭವ ಮಂಟಪ, ಸಮುದಾಯ ಭವನ ಮತ್ತು ಶ್ರೀಮಠದ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ಆಧುನಿಕ ಜೀವನದಲ್ಲಿ ಭೌತಿಕ, ವೈಜ್ಞಾನಿಕ, ತಾಂತ್ರಿಕ ಬೆಳವಣಿಗೆಗಳು ಅತಿ ವೇಗವಾಗಿ … Continued

ದ್ವೇಷ ಬಿತ್ತುವ ಬಿಜೆಪಿಯವರು ಅಲ್ಪಮಾನವರು: ಸಿದ್ದರಾಮಯ್ಯ

ಬೆಂಗಳೂರು: ಧರ್ಮದ ಹೆಸರಿನಲ್ಲಿ ಸಮಾಜವನ್ನು ಒಡೆದು, ದ್ವೇಷಭಾವನೆ ಬಿತ್ತುವ ಬಿಜೆಪಿಯವರು ಅಲ್ಪಮಾನವರು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಜಾತಿ, ಧರ್ಮಗಳನ್ನು ಮೀರಿ ಪ್ರತಿಯೊಬ್ಬನನ್ನು ಸಮಾನವಾಗಿ ಕಾಣುವುದೇ ಜಾತ್ಯತೀತತೆ. ಇದು ಕುವೆಂಪುರವರ ವಿಶ್ವಮಾನವ ತತ್ವಕ್ಕೆ ಅನುಗುಣವಾಗಿದೆ. ಧರ್ಮದ ಹೆಸರಿನಲ್ಲಿ ಸಮಾಜ ಒಡೆಯುವ ಬಿಜೆಪಿಯವರು ಅಲ್ಪಮಾನವರು ಎಂದು ತಿಳಿಸಿದ್ದಾರೆ. ಸರ್ವಧರ್ಮ ಸಮನ್ವಯತೆಯ ತವರಾಗಿದ್ದ ದಕ್ಷಿಣ ಕನ್ನಡವನ್ನು ಬಿಜೆಪಿ … Continued

ಮಹಾರಾಷ್ಟ್ರಕ್ಕೆ ಸಂಚರಿಸುವ ಎಲ್ಲ ಬಸ್‌ಗಳಿಗೆ ಪರ್ಮಿಟ್‌ ಇದೆ

ಬೆಳಗಾವಿ: ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ಸಂಚರಿಸುವ ಎಲ್ಲ ಬಸ್‌ಗಳಿಗೂ ಪರ್ಮಿಟ್‌ ಇದ್ದು, ಯಾವುದೇ ಬಸ್‌ಗಳು ಅನಧಿಕೃತವಾಗಿ ಸಂಚಾರ ಮಾಡುತ್ತಿಲ್ಲ ಎಂದು ಬೆಳಗಾವಿ ಕೆಎಸ್‌ಆರ್‌ಟಿಸಿ ಡಿಸಿ ಎಂ.ಆರ್‌.ಮುಂಜಿ ತಿಳಿಸಿದ್ದಾರೆ. ನಮ್ಮ ಸಾರಿಗೆ ಬಸ್‌ಗಳು ಶುಚಿಯಾಗಿವೆ. ಇದರಿಂದಾಗಿ ಹೆಚ್ಚಿನ ಪ್ರಯಾಣಿಕರು ನಮ್ಮ ಬಸ್‌ಗಳಲ್ಲಿ ಪ್ರಯಾಣಿಸಲು ಬಯಸುತ್ತಾರೆ. ಇದನ್ನು ಸಹಿಸದ ಮಹಾರಾಷ್ಟ್ರ ಸಾರಿಗೆ ಅಧಿಕಾರಿಗಳು ಅಸಮಾಧಾನದಿಂದ ಶಿವಸೇನೆ ಪತ್ರವನ್ನು ಉಲ್ಲೇಖಿಸಿ ನಮಗೆ … Continued

ದೆಹಲಿ ದಂಗೆ ಹಿಂದೆ ಕಾಂಗ್ರೆಸ್‌, ಎಡ‌ ಪಕ್ಷಗಳ ಕೈವಾಡ: ಕಟೀಲು

ಬೆಂಗಳೂರು: ದೆಹಲಿಯಲ್ಲಿ ಗಣರಾಜ್ಯೋತ್ಸವದಂದು ನಡೆದ ಹಿಂಸಾಚಾರದ ಹಿಂದೆ ದಲ್ಲಾಳಿಗಳನ್ನು ಬೆಂಬಲಿಸುವ ಕಾಂಗ್ರೆಸ್‌, ಕಮ್ಯುನಿಸ್ಟ್‌ ಪಕ್ಷ ಹಾಗೂ ದೇಶವಿರೋಧಿ ಖಲಿಸ್ತಾನಿ ಶಕ್ತಿಗಳಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ಕುಮಾರ ಕಟೀಲು‌ ಹೇಳಿದರು, ಆದರೆ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರಚಾರಕ್ಕಾಗಿ ದೆಹಲಿ ದಂಗೆಯ ಹಿಂದೆ ಬಿಜೆಪಿ ಒಳಸಂಚಿದೆ ಎಂದು ತಪ್ಪು ಮಾಹಿತಿ ನೀಡುತ್ತಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ … Continued

ಕೋವಿಡ್‌ ೨ನೇ ಅಲೆ ಭೀತಿ; ಮದುವೆ ಸಮಾರಂಭಗಳಿಗೆ ಮಾರ್ಷಲ್‌ಗಳ ನಿಯೋಜನೆ

ಬೆಂಗಳೂರು: ಕೋವಿಡ್‌ ಎರಡನೇ ಅಲೆ ಭೀತಿ ಎದುರಾಗಿರುವ ಹಿನ್ನೆಲೆಯಲ್ಲಿ  ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಿದೆ. ಮದುವೆ ಸಮಾರಂಭಗಳಲ್ಲಿ ಕೋವಿಡ್ ಸುರಕ್ಷತಾ ಕ್ರಮ ಕಟ್ಟುನಿಟ್ಟಾಗಿ  ಪಾಲಿಸಲು ಮಾರ್ಷಲ್ ನಿಯೋಜಿಸಲಾಗುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಸೋಮವಾರ ಕರ್ನಾಟಕದ ಎಲ್ಲ ಜಿಲ್ಲೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮದುವೆ … Continued

೬ರಿಂದ ೮ನೇ ತರಗತಿಗಳು ಆರಂಭ

ಬೆಂಗಳೂರು: ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವುದರೊಂದಿಗೆ ಸೋಮವಾರದಿಂದ ರಾಜ್ಯದಲ್ಲಿ 6ರಿಂದ 8ನೇ ತರಗತಿಗಳು ಪೂರ್ಣಪ್ರಮಾಣದಲ್ಲಿ ಪ್ರಾರಂಭವಾಗಿವೆ. ಗಡಿಭಾಗದ ತಾಲ್ಲೂಕು, ಗ್ರಾಮ ಹಾಗೂ ಬೆಂಗಳೂರುನಗರದಲ್ಲಿ 8ನೇ ತರಗತಿಗಳನ್ನು ಮಾತ್ರ ಪ್ರಾರಂಭಿಸಲಾಗಿದೆ. ಕೇರಳ ಗಡಿಭಾಗದ ಶಾಲೆಗಳಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆ ಕಡ್ಡಾಯಗೊಳಿಸಲಾಗಿದೆ. ಆರು ಮತ್ತು 7ನೇ ತರಗತಿ ಆರಂಭವಾಗದ ಶಾಲೆಗಳಲ್ಲಿ ವಿದ್ಯಾಗಮವನ್ನು ಮುಂದುವರೆಸಲಾಗಿದೆ. ಆದರೆ ಹಾಜರಾತಿ … Continued

ಮೈಸೂರು ಮೇಯರ್‌ ಆಯ್ಕೆ: ಬಿಜೆಪಿ-ಜೆಡಿಎಸ್‌ ಮೈತ್ರಿ..?

ಮೈಸೂರು: ಮೇಯರ್ ಆಯ್ಕೆಗೆ ಸಂಬಂಧಪಟ್ಟಂತೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಚರ್ಚಿಸುವುದಾಗಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು. ಅದರೊಂದಿಗೆ ಜೆಡಿಎಸ್‌ ಜೊತೆ ಹೊಂದಾಣಿಕೆ ಮಾಡಿಕೊಳ್ಳುವ ಸುಳಿವು ನೀಡಿದರು. ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು ಈ ಸಂಬಂಧ ಪಕ್ಷದ ಅಧ್ಯಕ್ಷರು, ಸಂಸದರು, ಶಾಸಕರ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳಾಗುವುದು. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಜೊತೆಯೂ ಚರ್ಚಿಸಲಾಗುವುದು. … Continued

ವಸತಿ ಸಮುಚ್ಚಯಗಳಿಗೆ ಎಲೆಕ್ಟ್ರಿಕ್‌ ಚಾರ್ಜಿಂಗ್‌ ಕಡ್ಡಾಯ

ಬೆಂಗಳೂರು:ವಸತಿ ಸಮುಚ್ಚಯಗಳು ಸೇರಿದಂತೆ ದೊಡ್ಡ ದೊಡ್ಡ ಕಟ್ಟಡಗಳು ಎಲೆಕ್ಟ್ರಿಕ್ ವಾಹನಗಳ ಚಾರ್ಜ್ ಮಾಡಿಕೊಳ್ಳುವ ವ್ಯವಸ್ಥೆಯನ್ನು ಕಡ್ಡಾಯವಾಗಿ ಹೊಂದಿರಬೇಕು ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು. ಬೆಂಗಳೂರಿನಲ್ಲಿ ಸೋಮವಾರ ಎಲೆಕ್ಟ್ರಿಕ್ ವಾಹನಗಳ ಬಳಕೆಯ ಬಗ್ಗೆ ಹಾರ್ವರ್ಡ್ ಇಂಡಿಯಾ ಕಾನರೆನ್ಸ್ ವತಿಯಿಂದ ಏರ್ಪಡಿಸಿದ್ದ ಭವಿಷ್ಯದತ್ತ ಸುಸ್ಥಿರ ಸಾರಿಗೆ ವರ್ಚುಯಲ್ ಗೋಷ್ಠಿಯಲ್ಲಿ ಮಾತನಾಡಿದ ಅವರು, ಚಾರ್ಜಿಂಗ್ ವ್ಯವಸ್ಥೆಯ ಬಗ್ಗೆ ಅಗತ್ಯ ಕ್ರಮ … Continued

ಪಂಚಮಸಾಲಿಗಳಿಗೆ ೨ಎ ಮೀಸಲು: ಫ್ರೀಡಂಪಾರ್ಕಿನಲ್ಲಿ ಸತ್ಯಾಗ್ರಹ

ಬೆಂಗಳೂರು: ಪಂಚಮಸಾಲಿ ಸಮಾಜವು 2ಎ ಮೀಸಲಾತಿಗಾಗಿ ನಡೆಸುತ್ತಿರುವ ಹೋರಾಟ ಮತ್ತಷ್ಟು ತೀವ್ರಗೊಂಡಿದೆ. ಮಾರ್ಚ್ 4ರೊಳಗೆ 2ಎ ಮೀಸಲಾತಿ ನೀಡದಿದ್ದರೆ ಅಮರಣಾಂತ ಉಪವಾಸ ಕೈಗೊಳ್ಳುವುದಾಗಿ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿಗಳು ಎಚ್ಚರಿಕೆ ನೀಡಿದ್ದಾರೆ. ಸೋಮವಾರದಿಂದ ಫ್ರೀಡಂಪಾರ್ಕ್‍ನಲ್ಲಿ ಸತ್ಯಾಗ್ರಹ ಆರಂಭಗೊಂಡಿದ್ದು, ಮಾ.4ರೊಳಗೆ 2ಎ ಮೀಸಲಾತಿ ದೊರೆಯದ್ದಿರೆ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ಹೇಳಿದ್ದಾರೆ. ಕೂಡಲಸಂಗಮದಿಂದ ಬೆಂಗಳೂರು ವರೆಗೆ ನಡೆಸಿ … Continued

ತಮಿಳುನಾಡು ಕಾವೇರಿ-ವೆಲ್ಲಾರು-ಗುಂಡಾರು ನದಿ ಜೋಡಣೆ ಯೋಜನೆ ಕೈಬಿಡಬೇಕು: ಸಿದ್ದು ಆಗ್ರಹ

ತಮಿಳುನಾಡು ಕೈಗೊಂಡಿರುವ ಕಾವೇರಿ-ವೆಲ್ಲಾರು-ವೈಗೈ-ಗುಂಡಾರು ನದಿ ಜೋಡಣೆ ಯೋಜನೆಯನ್ನು ಕೂಡಲೇ ಕೈಬಿಡಬೇಕೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ತಮಿಳುನಾಡು ಸರಕಾರ ಕಾವೇರಿ ನದಿಯ ೪೫ ಟಿಎಂಸಿ ನೀರನ್ನು ಅಕ್ರಮವಾಗಿ ಬಳಕೆ ಮಾಡಿಕೊಂಡು ಕೈಗೊಂಡಿರುವ ನದಿ ಜೋಡಣೆಯನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಒತ್ತಾಯಿಸಿದ್ದಾರೆ. ಈ ಕುರಿತು ತಮಿಳುನಾಡು ಮುಖ್ಯಮಂತ್ರಿಗೆ ಪತ್ರ ಬರೆದು ಆಗ್ರಹಿಸುತ್ತೇನೆ. ಮುಖ್ಯಮಂತ್ರಿ ಯಡಿಯೂರಪ್ಪ ಈ ವಿಚಾರವನ್ನು … Continued