ಬೆಳಗಾವಿ: ರಮೇಶ ಜಾರಕಿಹೊಳಿ ರಾಜೀನಾಮೆ ಅಂಗೀಕಾರದ ಬೆನ್ನಲ್ಲೇ ಬೆಂಬಲಿಗರಿಂದ ಬಸ್‌ಗಳಿಗೆ ಕಲ್ಲು ತೂರಾಟ

ಬೆಳಗಾವಿ: ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಬೆಳಗಾವಿ ಜಿಲ್ಲೆಯಲ್ಲಿ ಅವರ ಬೆಂಬಲಿಗರ ಆಕ್ರೋಶ ಭುಗಿಲೆದ್ದಿದೆ. ಅವರು ಯಾವುದೇ ಕಾರಣಕ್ಕೂ ರಮೇಶ ಜಾರಕಿಹೊಳಿ ರಾಜೀನಾಮೆ ಅಂಗೀಕಾರ ಮಾಡಬಾರದು ಹಾಗೂ ಅವರು ರಾಜೀನಾಮೆ ಹಿಂಪಡೆಯಬೇಕೆಂದು ಪ್ರತಿಭಟನೆ ನಡೆಸಿ ಒತ್ತಾಯಿಸುತ್ತಿದ್ದಾರೆ. ಬೆಳಗಾವಿ, ಗೋಕಾಕಿನ ಕೆಲವೆಡೆ ಮಾರ್ಕೆಟ್ ಬಂದ್ ಮಾಡಿಸುತ್ತಿದ್ದರೆ, ಇನ್ನು ಹಲವಡೆ ಬಸ್ ಗಳ ಮೇಲೆ … Continued

ಸ್ಫೋಟಕ ವಸ್ತುಗಳ ಬಳಕೆ ಪರವಾನಿಗೆ ಪಡೆಯಲು ಇನ್ನಷ್ಟು ಕಾಲಾವಕಾಶ ಕೊಡಿ

ಬೆಂಗಳೂರು; ಕಲ್ಲು ಕ್ವಾರಿಯಲ್ಲಿ ಕಾರ್ಯಾಚರಣೆ ನಡೆಸುವ ವೇಳೆ ಸ್ಫೋಟಕ ವಸ್ತುಗಳ ಪರವಾನಿಗೆ ಪಡೆಯಲು ಗಣಿ ಸುರಕ್ಷತಾ ಮಹಾ ನಿದೇರ್ಶಕರು( ಡಿಜಿಎಂಎಸ್) ನೀಡಿರುವ ಸಮಯಾವಕಾಶವನ್ನು  ಇನ್ನಷ್ಟು ‌ ವಿಸ್ತರಣೆ ಮಾಡುವಂತೆ ಕೋರಿ ಫೆಡರೇಷನ್ ಆಫ್ ಕರ್ನಾಟಕ ಕ್ವಾರಿ ಮತ್ತು ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್ ಮನವಿ ಮಾಡಿದೆ. ಬುಧವಾರ ಫೆಡರೇಷನ್ ಆಫ್ ಕರ್ನಾಟಕ ಕ್ವಾರಿ ಮತ್ತು ಸ್ಟೋನ್ … Continued

ರಮೇಶ ಜಾರಕಿಹೊಳಿ ರಾಜೀನಾಮೆ ಅಂಗೀಕಾರ

ಬೆಂಗಳೂರು: ರಮೇಶ ಜಾರಕಿಹೊಳಿಯವರದ್ದು ಎನ್ನಲಾದ ರಾಸಲೀಲೆ ಸಿಡಿ ಹೊರಬಿದ್ದ ಮಾರನೇ ದಿನ ಬುಧವಾರ ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಅದನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಂಗೀಕರಿಸಿದ್ದಾರೆ. ತಮ್ಮ ವಿರುದ್ಧ ಕೇಳಿಬಂದಿರುವ ಆರೋಪಗಳಿಗೂ ತನಗೂ ಸಮಬಂಧವಿಲ್ಲ, ಅದು ಸತ್ಯಕ್ಕೆ ದೂರವಾಗಿದ್ದು, ಈ ಬಗ್ಗೆ ಸಮಗ್ರ ತನಿಖೆಯಾಗಬೇಕು. ಈ ವಿಯದಲ್ಲಿ ನಾನು ನಿರ್ದೋಷಿಯಾಗುವ ಭರವಸೆಯಿದ್ದರೂ ನೈತಿಕ ಹೊಣೆ … Continued

ರಮೇಶ ಜಾರಕಿಹೊಳಿ ರಾಜೀನಾಮೆ: ಮೂವರು ಬೆಂಬಲಿಗರಿಂದ ಆತ್ಮಾಹುತಿಗೆ ಯತ್ನ

ಬೆಳಗಾವಿ: ರಾಸಲೀಲೆ ಸಿಡಿ ಹೊರಬಿದ್ದ ನಂತರ ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ ಬೆನ್ನಲ್ಲೇ ಅವರ ರಾಜೀನಾಮೆ ಅಂಗೀಕರಿಸಬಾರದು ಎಂದು ಆಗ್ರಹಿಸಿ ರಮೇಶ್ ಜಾರಕಿಹೊಳಿ ಬೆಂಬಲಿಗರು ಆತ್ಮಾಹುತಿಗೆ ಯತ್ನಿಸಿದ ಘಟನೆ ಬೆಳಗಾವಿ ಜಿಲ್ಲೆ ಗೋಕಾಕದಲ್ಲಿ ನಡೆದಿದೆ. ಮೂವರು ಆತ್ಮಾಹುತಿಗೆ ಯತ್ನಿಸಿದ್ದು, ಪೊಲೀಸರು ತಡೆದಿದ್ದಾರೆ. ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ವಿಷಯ ಗೊತ್ತಾಗುತ್ತಿದ್ದಂತೆ … Continued

ರಾಸಲೀಲೆ ಸಿಡಿ ವಿಚಾರ: ಸಿಎಂ, ಬಿಜೆಪಿ ನಾಯಕರ ಬಳಿಯೇ ಪ್ರತಿಕ್ರಿಯೆ ಕೇಳಿ: ಎಚ್‌ಡಿಕೆ

ಬೆಂಗಳೂರು: ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಸಂಬಂಧಿಸಿದ್ದೆನ್ನಲಾದ ಸಿಡಿ ವಿಚಾರದ ಆರೋಪ ಕುರಿತು ತಾನು ರಾಜಕೀಯ ಮಾಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಸಲೀಲೆ ಸಿಡಿ ಆರೋಪದ ವಿಚಾರದ ಬಗ್ಗೆ ಚರ್ಚೆ ಮಾಡುವುದು ಶೋಭೆ ತರುವುದಿಲ್ಲ. ರಾಜಕೀಯ ಮಾಡಲು ಬೇರೆ ಮಾರ್ಗಗಳಿವೆ ಎಂದರು. ಆದರೆ ರಾಜಕೀಯ ವ್ಯಕ್ತಿಗಳ ಈ ರೀತಿಯ … Continued

ಕರ್ನಾಟಕವೂ ಸೇರಿದಂತೆ ೬ ರಾಜ್ಯಗಳ ಕೊರೊನಾ ಸೋಂಕು ಹೆಚ್ಚಳ: ಕೇಂದ್ರ

ಕರ್ನಾಟಕ, ಮಹಾರಾಷ್ಟ್ರ, ತಮಿಳುನಾಡು, ಕೇರಳ, ಪಂಜಾಬ್, ಗುಜರಾತ್ ರಾಜ್ಯಗಳಲ್ಲಿ ಕೋವಿಡ್-19 ಪ್ರಕರಣಗಳಲ್ಲಿ ಏರಿಕೆಯಾಗಿದೆ. 24 ಗಂಟೆಗಳ ಅವಧಿಯಲ್ಲಿ ದೃಢಪಟ್ಟ ಹೊಸ ಪ್ರಕರಣಗಳ ಪೈಕಿ ಶೇ 85.95 ಈ ರಾಜ್ಯಗಳಿಂದ ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ತಿಳಿಸಿದೆ. ದೇಶದಲ್ಲಿ 24 ತಾಸುಗಳ ಅವಧಿಯಲ್ಲಿ 14,989 ಕೊರೊನಾ ಸೋಕುಗಳ ವರದಿಯಾಗಿದ್ದು, ಇದರಲ್ಲಿ ಮಹಾರಾಷ್ಟ್ರದಲ್ಲಿ ಗರಿಷ್ಠ, 7,863 … Continued

ವಕೀಲರಿಗೆ ಜೀವವಿಮೆ, ಆರೋಗ್ಯವಿಮೆ ಸೌಲಭ್ಯ ಯೋಜನೆ: ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ

ಬೆಂಗಳೂರು: ವಕೀಲರಿಗೆ ಜೀವ ವಿಮೆ, ಆರೋಗ್ಯ ವಿಮೆ ಸೌಲಭ್ಯ ಕಲ್ಪಿಸುವ ಯೋಜನೆ ರೂಪಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ದೆಹಲಿಯಲ್ಲಿ ವಕೀಲರಿಗೆ ಜೀವ ವಿಮೆ, ಆರೋಗ್ಯ ವಿಮೆ ಸೌಲಭ್ಯ ಕಲ್ಪಿಸಿರುವಂತೆಯೇ ರಾಜ್ಯದಲ್ಲಿಯೂ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಕೊರೋನಾ ಸಂದರ್ಭದಲ್ಲಿ ಜೀವ ಲೆಕ್ಕಿಸದೆ ಕೆಲಸ ಮಾಡುತ್ತಿರುವ ವಕೀಲರಿಗೆ ವಿಮೆ ಸೌಲಭ್ಯ ಕಲ್ಪಿಸಲು ಕೇಂದ್ರ … Continued

ಕಾಂಗ್ರೆಸ್‌ನ ಜನಧ್ವನಿ ಯಾತ್ರೆ ಆರಂಭ, ೧೦೦ ವಿಧಾನಸಭಾ ಕ್ಷೇತ್ರಗಳಲ್ಲಿ ಸಂಚಾರ

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಅಧಿಕಾರ ಹಿಡಿಯಲೇಬೇಕೆಂಬ ಉದ್ದೇಶದಿಂದ ಕಾಂಗ್ರೆಸ್ ಪೂರ್ವಭಾವಿಯಾಗಿ ಬುಧವಾರದಿಂದ ಜನಧ್ವನಿ ಯಾತ್ರೆಗೆ ಚಾಲನೆ ನೀಡಿದೆ. ಚಿಕ್ಕಬಳ್ಳಾಪುರ ಜಿಲ್ಲೆ ದೇವನಹಳ್ಳಿಯಲ್ಲಿ ಜನಧ್ವನಿ ಯಾತ್ರೆ ಆರಂಭಗೊಂಡಿದ್ದು, ಬೆಳಿಗ್ಗೆ ಕೆಪಿಸಿಸಿ ಕಚೇರಿ ಬಳಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ವಿಧಾನಪರಿಷತ್ ಪ್ರತಿಪಕ್ಷದ ನಾಯಕ … Continued

ರಮೇಶ ಜಾರಕಿಹೊಳಿ ರಾಸಲೀಲೆ ಸಿಡಿ: ದೂರು ನೀಡಿದ ದಿನೇಶ್‌ ಕಲ್ಹಳ್ಳಿಗೆ ಇಂದು ನೋಟಿಸ್‌?

ಬೆಂಗಳೂರು: ರಮೇಶ್‌ ಜಾರಕಿಹೊಳಿ ಸೆಕ್ಸ್‌ ಸಿಡಿ ಬಯಲು ಮಾಡಿದ, ದೂರುದಾರ ದಿನೇಶ್‌ ಕಲ್ಲಹಳ್ಳಿಗೆ ಬುಧವಾರ ಸಂಜೆಯೊಳಗೆ ಕಬ್ಬನ್‌ ಪಾರ್ಕ್‌ ಪೊಲೀಸರು ನೋಟಿಸ್‌ ನೀಡಲಿದ್ದಾರೆ. ಸಂತ್ರಸ್ತೆ ಬಗ್ಗೆ ದೂರುದಾರ ದಿನೇಶ್‌ ಮಾಹಿತಿ ನೀಡದ ಹಿನ್ನೆಲೆಯಲ್ಲಿ ಕಬ್ಬನ್‌ ಪಾರ್ಕ್‌ ಪೊಲೀಸರು ನೋಟಿಸ್‌ ನೀಡಲಿದ್ದು, ಸಿಡಿ, ಸಂತ್ರಸ್ತೆ ಬಗ್ಗೆ ಮತ್ತಷ್ಟು ಮಾಹಿತಿ ನೀಡುವ ಕುರಿತು ಗುರುವಾರ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ನಲ್ಲಿ … Continued

ರಮೇಶ ಜಾರಕಿಹೊಳಿ ವಿರುದ್ಧ ಗೋಕಾಕದಲ್ಲಿ ಪ್ರತಿಭಟನೆ

ಬೆಳಗಾವಿ: ಗೋಕಾಕ್ ಕ್ಷೇತ್ರದ ಬಿಜೆಪಿ ಶಾಸಕ, ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ರಾಜ್ಯ ರಾಜಕೀಯದಲ್ಲಿ ಮಂಗಳವಾರ ಸಂಚಲನ ಮೂಡಿಸಿತ್ತು. ಅವರ ವಿರುದ್ಧ ಪ್ರತಿಭಟನೆಗಳು ನಡೆದಿವೆ. ಬುಧವಾರ ರಮೇಶ್ ಜಾರಕಿಹೊಳಿ ರಾಜೀನಾಮೆಗೆ ಒತ್ತಾಯಿಸಿ ಗೋಕಾಕ್‌ನಲ್ಲಿ ಪ್ರತಿಭಟನೆ ನಡೆಯಿತು. ಬಸವೇಶ್ವರ ವೃತ್ತದಲ್ಲಿ ಜೆಡಿಎಸ್ ಮುಖಂಡ ಅಶೋಕ ಪೂಜಾರಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ … Continued