ಜೆಡಿಎಸ್‌ ನಂಬಿಕೆಗೆ ಅರ್ಹ ಪಕ್ಷವಲ್ಲ

ಮೈಸೂರು : ಜೆಡಿಎಸ್ ಗೆ ಶಕ್ತಿ ತುಂಬಿದರೆ ನಮಗೇ ಮಾರಕ, ಯಾಕೆಂದರೆ ಜೆಡಿಎಸ್ ಯಾವುದೇ ಕಾರಣಕ್ಕೂಪೂರ್ಣ ನಂಬಿಕೆ ಇಡುವ ಪಕ್ಷವಲ್ಲ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ್ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಜೆಡಿಎಸ್ ಅನ್ನು ಯಾವುದೇ ಕಾರಣಕ್ಕೂ ನಂಬುವಂತಿಲ್ಲ. ಬಿಜೆಪಿ ಪ್ರಬಲವಾಗಿ ಕಟ್ಟಬೇಕು. ಅದೇ ನನ್ನ ಉದ್ದೇಶ.ಈ ವಿಚಾರವನ್ನು ನಾನು ಪಕ್ಷದ ವರಿಷ್ಠರ … Continued

ದೇವೇಂದ್ರಪ್ಪ, ಆಪ್ತನ ಮನೆ ಮೇಲೆ ಎಸಿಬಿ ದಾಳಿ

ಬೆಂಗಳೂರು: ಲಂಚ ಸ್ವೀಕರಿಸುವಾಗ ಸಿಕ್ಕಿ ಬಿದ್ದು ನೌಕರಿಯಿಂದ ಅಮಾನತುಗೊಂಡಿರುವ ಬಿಬಿಎಂಪಿ ನಗರ ಯೋಜನೆ ವಿಭಾಗದ ಸಹಾಯಕ ಅಭಿಯಂತರ ದೇವೇಂದ್ರಪ್ಪ ಆಪ್ತರ ಮನೆ ಮೇಲೆ ಎಸಿಬಿ ದಾಳಿ ನಡೆದಿದೆ. . ದೇವೇಂದ್ರಪ್ಪ ಅವರ ಆಪ್ತ ಶ್ರೀನಿವಾಸ ಮೂರ್ತಿ ಅವರ ಅಲಸೂರು ಗುಪ್ತ ಲೇ ಔಟ್‍ನಲ್ಲಿರುವ ನಿವಾಸದ ಮೇಲೆ ಹಾಗೂ ದೇವೇಂದ್ರಪ್ಪ ಅವರ ಅಮೃತನಗರದ ಸಿ ಸೆಕ್ಟರ್ ಮನೆ … Continued

ಅಪಘಾತದಲ್ಲಿ ಖ್ಯಾತ ಯಕ್ಷಗಾನ ಕಲಾವಿದ ಚಿಟ್ಟಾಣಿಗೆ ಗಂಭೀರ ಗಾಯ

ಹೊನ್ನಾವರ: ರಸ್ತೆ ಅಪಘಾತದಲ್ಲಿ ಖ್ಯಾತ ಯಕ್ಷಗಾನ ಕಲಾವಿದ ಸುಬ್ರಹ್ಮಣ್ಯ ಚಿಟ್ಟಾಣಿ ಗಂಭೀರವಾಗಿ ಗಾಯಗೊಂಡಿದ್ದಾರೆ.ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲಕ್ಕೆ ಕರೆದೊಯ್ಯಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಹಡಿನಬಾಳದಲ್ಲಿ ಎರಡು ಬೈಕ್‌ಗಳ ಮುಖಾಮುಖಿ ಡಿಕ್ಕಿಯಾಗಿ ಅವರಿಗೆ ಗಂಭೀರ ಗಾಯಗಳಾಗಿದ್ದು, ಹೊನ್ನಾವರದಲ್ಲಿ ಚಿಕಿತ್ಸೆ ಕೊಡಿಸಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲಕ್ಕೆ ಕರೆದೊಯ್ಯಲಾಗಿದೆ. ಅವರ ಮುಖದ ಭಾಗಕ್ಕೆ ಸ್ವಲ ಗಾಯಗಳಾಗಿದ್ದು … Continued

ಅರ್ಚಕ ನೌಕರಿ ಬ್ರಾಹ್ಮಣರಿಗೆ ಮೀಸಲಿಡಬೇಕು

ಮೈಸೂರು: ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ದೇವಾಲಯಗಳಿಗೆ ರಾಜ್ಯ ಸರ್ಕಾರವು ಸಮಾಜದ ಎಲ್ಲಾ ವರ್ಗದ ಜನರನ್ನು ಅರ್ಚಕರನ್ನಾಗಿ ನೇಮಿಸುತ್ತಿದೆ, ಸರ್ಕಾರ ಹೀಗೆ ಮಾಡದೇ ಕೇವಲ ಬ್ರಾಹ್ಮಣ ಸಮುದಾಯಕ್ಕೆ ಮಾತ್ರ ಅರ್ಚಕ ಉದ್ಯೋಗವನ್ನು ಮೀಸಲಿಡಬೇಕು ಎಂದು ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮಿಜಿ ತಿಳಿಸಿದ್ದಾರೆ. ಮೈಸೂರಿನ ಖಾಸಗಿ ಸಭಾಂಗಣದಲ್ಲಿ ಜಿಲ್ಲಾ ಮತ್ತು ನಗರ ಬ್ರಾಹ್ಮಣ ಸಂಘ … Continued

ಭಯವಿಲ್ಲದೆ ಕೋವಿಡ್‌ ಲಸಿಕೆ ಪಡೆಯಿರಿ: ಸಚಿವ ಸುಧಾಕರ

ಶಿರಸಿ: ಮೂರನೇ ಹಂತದ ಕೋವಿಡ್ ಲಸಿಕೆ ನೀಡುವ ಪ್ರಕ್ರಿಯೆ ಆರಂಭವಾಗಿದ್ದು, ಯಾವುದೇ ವದಂತಿಗಳಿಗೆ ಕಿವಿಗೊಡದೆ ವಿಶ್ವಾಸದಿಂದ ಲಸಿಕೆ ಪಡೆಯಬೇಕು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದರು. ಶಿರಸಿಯಲ್ಲಿ ಕೋವಿಡ್ ಲಸಿಕೆ ಅಭಿಯಾನದ ೩ನೇ ಹಂತಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮೊದಲ ಹಂತದ ಕೋವಿಡ್ ಲಸಿಕೆ ಬೆಂಗಳೂರು, ಎರಡನೇ ಹಂತದ ಲಸಿಕೆ ಹೈದರಾಬಾದ್ ಕರ್ನಾಟಕ ಹಾಗೂ … Continued

ಮೈಸೂರು ಮಹಾಪೌರ ಚುನಾವಣಾ ಮೈತ್ರಿ ಗೊಂದಲ ಸಣ್ಣ ವಿಚಾರ: ಡಿಕೆಶಿ

ಮೈಸೂರು ಮಹಾನಗರ ಪಾಲಿಕೆ ಮಹಾಪೌರ ಚುನಾವಣಾ ಮೈತ್ರಿ ಗೊಂದಲ ಸಣ್ಣ ವಿಚಾರವಾಗಿದ್ದು, ಇದನ್ನು ಪಕ್ಷದೊಳಗೆ ಬಗೆಹರಿಸಿಕೊಳ್ಳುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹೇಳಿದರು. ಸಿದ್ದರಾಮಯ್ಯ ಅವರು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಸುರ್ಜೇವಾಲ ಅವರ ಪುತ್ರನ ಮದುವೆಗೆ ದೆಹಲಿಗೆ ಹೋಗಿದ್ದಾರೆ. ನಾನೂ ಹೋಗಬೇಕಿತ್ತು. ಆದರೆ ಮನೆಯಲ್ಲಿ ಕೆಲಸ ಇದ್ದುದರಿಂದ ಹೋಗಲು ಸಾಧ್ಯವಾಗಲಿಲ್ಲ ಎಂದರು. ಮೈಸೂರು ಮಹಪೌರ ಚುನಾವಣೆ … Continued

ನನಗೆ ವಯಸ್ಸಾಗಿದೆ ಕೊರೊನಾ ಲಸಿಕೆ ಬೇಡ: ಖರ್ಗೆ

ನನಗೆ ವಯಸ್ಸಾಗಿದೆ. ನನ್ನ ಬದಲಿಗೆ ಯುವಕರಿಗೆ ಕೊರೊನಾ ಲಸಿಕೆ ನೀಡಿ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ. ನನಗೆ ೭೦ ವರ್ಷ ದಾಟಿದೆ. ನನಗಿಂತ ಹೆಚ್ಚು ಆಯುಷ್ಯ ಹೊಂದಿರುವ ಯುವಕರಿಗೆ ಲಸಿಕೆ ನೀಡುವುದು ಒಳಿತು. ನಾನು ಹೆಚ್ಚೆಂದರೆ ಇನ್ನು ೧೦-೧೫ ವರ್ಷ ಮಾತ್ರ ಬದುಕಬಹುದು ಎಂದರು. ಸೋಮವಾರ ಪ್ರಧಾನಿ ನರೇಂದ್ರ ಮೋದಿ, … Continued

ಜೆಡಿಎಸ್‌ಗೆ ಥೂ….ಎಂದು ಉಗಿದು ಕಾಂಗ್ರೆಸ್‌ ಸೇರಿದ ದೇವೆಗೌಡರ ಸಂಬಂಧಿ..!

ಪಿರಿಯಾಪಟ್ಟಣ: ಜೆಡಿಎಸ್‌ ಪಕ್ಷಕ್ಕೆ ಯಾವುದೇ ತತ್ವ ಸಿದ್ಧಾಂತವಿಲ್ಲ, ಕೇವಲ ಸ್ವಾರ್ಥ ಹಾಗೂ ಅವಕಾಶವಾದಿ ರಾಜಕಾರಣ ಮಾತ್ರ ಗೊತ್ತಿದೆ ಎಂದು ಜೆಡಿಎಸ್‌ ತೊರೆದು ಕಾಂಗ್ರೆಸ್‌ ಸೇರಿದ ಮಾಜಿ ಶಾಸಕ ಕೆ. ವೆಂಕಟೇಶ ಆರೋಪ ಮಾಡಿದರು. ತಾಲೂಕಿನ ಭುವನಹಳ್ಳಿಯಲ್ಲಿ ನಡೆದ ಕಾಂಗ್ರೆಸ್‌ ಕಾರ್ಯಕರ್ತರ ಸಮಾವೇಶದಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಗೊಂಡ ವೆಂಕಟೇಶ ಮಾತನಾಡಿ, ೨೫ ವರ್ಷಗಳಿಂದ ಜೆಡಿಎಸ್‌ನಲ್ಲಿದ್ದೆ. ಎಚ್‌.ಡಿ. ದೇವೆಗೌಡರು ನಮ್ಮ … Continued

ಎಂಜಿನಿಯರಿಂಗ್​ ವಿದ್ಯಾರ್ಥಿ ಆತ್ಮಹತ್ಯೆ:ಪಾಲಕರಿಗೆ ಸಲಹೆ ನೀಡಿದ ನಟ ಜಗ್ಗೇಶ

ಬೆಂಗಳೂರು: ಬೆಂಗಳೂರಿನಲ್ಲಿ ಎಂಜಿನಿಯರಿಂಗ್​ ವಿದ್ಯಾರ್ಥಿ ಆತ್ಮಹತ್ಯೆ (ಮಾರ್ಚ್ 1) ಪ್ರಕರಣಕ್ಕೆ ಸಂತಾಪ ಸೂಚಿಸಿರುವ ನಟ ನಾಯಕ ಜಗ್ಗೇಶ್ ಮಕ್ಕಳ ದುರ್ಬಲ ಮನಸ್ಸಿನ ಬಗ್ಗೆ ಮರುಕಪಟ್ಟಿದ್ದಾರೆ. ಬೆಂಗಳೂರು ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ಬಿಇ ಮೂರನೇ ಸೆಮಿಸ್ಟರ್​ ಓದುತ್ತಿದ್ದ ಜಯಂತ್ ರೆಡ್ಡಿ, ಸೋಮವಾರ ಕಾಲೇಜಿನ ನಾಲ್ಕನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು … Continued

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ೨.೮೦ ಕೋಟಿ ರೂ.ಮೌಲ್ಯದ ಐ ಫೋನ್‌ಗಳು ವಶಕ್ಕೆ

ಬೆಂಗಳೂರು: ಭಾರತಕ್ಕೆ ಐಫೋನ್‍ಗಳನ್ನು ಕಳ್ಳಸಾಗಾಣಿಕೆ ಮಾಡುತ್ತಿದ್ದ ದಂಪತಿಯನ್ನು ಕಸ್ಟಮ್ಸ್ ಅಧಿಕಾರಿಗಳು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಅವರಿಂದ 2.8 ಕೋಟಿ ರೂ. ಮೌಲ್ಯದ 206 ಮೊಬೈಲ್‍ಗಳನ್ನು ವಶಪಡಿಸಿಳ್ಳಲಾಗಿದೆ. 49 ವರ್ಷದ ಪತಿ, 38 ವರ್ಷದ ಪತ್ನಿ ಅವರನ್ನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಪಾಸಣೆ ಮಾಡಿದಾಗ ಲಗೇಜ್‍ನಲ್ಲಿ ದುಬಾರಿ ಮೌಲ್ಯದ ಫೋನ್‍ಗಳನ್ನು ಅಕ್ರಮವಾಗಿ ತಂದಿದ್ದು ಪತ್ತೆಯಾಗಿದೆ. … Continued