ಮಳೆ ನೀರು ಸಂಗ್ರಹಕ್ಕೆ ಸರ್ಕಾರಿ ಕಟ್ಟಡಗಳ ಛಾವಣಿ ಸ್ವರೂಪ ಬದಲಾವಣೆ

ಬೆಂಗಳೂರು: ಮಳೆ ನೀರು ಸಂಗ್ರಹಿಸಲು ಸರ್ಕಾರಿ ಕಟ್ಟಡಗಳ ಛಾವಣಿ ಸ್ವರೂಪ ಬದಲಾವಣೆ ಮಾಡಲಾಗುವುದು ಎಂದು ಸಚಿವ ಗೋವಿಂದ ಕಾರಜೋಳ ವಿಧಾನಸಭೆಗೆ ತಿಳಿಸಿದರು. ಪ್ರಶ್ನೋತ್ತರ ಅವಧಿಯಲ್ಲಿ ಶಾಸಕ ಹರತಾಳ್ ಹಾಲಪ್ಪ ಮಲೆನಾಡಿನ ಭಾಗಗಳಲ್ಲಿ ಮಳೆಗಾಲ ಬಂದರೆ ಕಾಲೇಜುಗಳು, ಆಸ್ಪತ್ರೆಗಳು ಸೇರಿದಂತೆ ಸರ್ಕಾರಿ ಕಟ್ಟಡಗಳು ಸೋರುತ್ತವೆ. ಇದನ್ನು ತಡೆಗಟ್ಟಲು ಕ್ರಮ ಕೈಗೊಳ್ಳಬೇಕೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ … Continued

ಬೇರೆ ಪಕ್ಷದಿಂದ ಬಂದು ಸಿಎಂ ಆಗಬಹುದು, ನಾವು ಮಂತ್ರಿಯಾಗೋದು ತಪ್ಪಾ..?

ಬೆಂಗಳೂರು: ಬೇರೆ ಬೇರೆ ಪಕ್ಷದಿಂದ ಬಂದು ಮುಖ್ಯಮಂತ್ರಿಗಳೇ ಆಗಿರುವಾಗ, ನಾವು ಕಾಂಗ್ರೆಸ್‌ನಿಂದ ಬಿಜೆಪಿಗೆ ಬಂದು ಮಂತ್ರಿ ಆದರೆ ತಪ್ಪೇನು ಎಂದು ಗುರುವಾರ ಸಚಿವ ಎಂಟಿಬಿ ನಾಗರಾಜು ವಿಧಾನಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ. ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಸಂದರ್ಭದಲ್ಲಿ ಜೆಡಿಎಸ್‌ನ ಬಂಡೆಪ್ಪಕಾಶಂಪುರ ಮಾತನಾಡುತ್ತ ಕಾಂಗ್ರೆಸ್-ಜೆಡಿಎಸ್‌ನಿಂದ ಬಂದವರಿಂದ ಈ ಸರ್ಕಾರ ಆಗಿದೆ ಎಂದು ತಿವಿದರು. … Continued

ಶಾಲಾ ಸಮಯದಲ್ಲಿ ಹೆಚ್ಚಿನ ಬಸ್‌ ಬಿಡಲು ಮನವಿ

ಬೆಂಗಳೂರು: ರಾಜ್ಯದಲ್ಲಿ ಶಾಲಾ ಕಾಲೇಜುಗಳು ಪೂರ್ಣಪ್ರಮಾಣದಲ್ಲಿ ಆರಂಭವಾಗಿರುವ ಹಿನ್ನೆಲೆಯಲ್ಲಿ ಮಕ್ಕಳ ಶಾಲಾ ಸಮಯಕ್ಕೆ ಅನುಕೂಲವಾಗುವಂತೆ ಸಾರಿಗೆ ಸಂಸ್ಥೆಯ ಬಸ್ಸುಗಳ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸಾರಿಗೆ ಸಚಿವರೂ ಆದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರಿಗೆ ಮನವಿ ಮಾಡಿದ್ದಾರೆ. ಈ ಕುರಿತು ಸಾರಿಗೆ ಸಚಿವರಿಗೆ ಆ ಪತ್ರ ಬರೆದಿರುವ … Continued

ಬರಹಗಾರ ಪ್ರೊ. ಭಗವಾನ್‌ ಮುಖಕ್ಕೆ ಕಪ್ಪು ಮಸಿ ಬಳಿದ ವಕೀಲೆ

ಬೆಂಗಳೂರು: ಬರಹಗಾರ ಪ್ರೊ. ಕೆ. ಎಸ್. ಭಗವಾನ್ ಅವರ ಮುಖಕ್ಕೆ ವಕೀಲೆಯೊಬ್ಬರು ಕಪ್ಪು ಮಸಿ ಬಳಿದ ಘಟನೆ ಬೆಂಗಳೂರಿನ ನ್ಯಾಯಾಲಯದ ಆವರಣದಲ್ಲಿ ಗುರುವಾರ ನಡೆದಿದೆ. ವಕೀಲಾರದ ಮೀರಾ ರಾಘವೇಂದ್ರ ಎಂಬುವವರು ಭಗವಾನ್‌ ಅವರು ಹಿಂದೂ ದೇವರನ್ನು ಅವಮಾನಿಸುತ್ತಿರುವುದನ್ನು ಖಂಡಿಸಿ ಕೋರ್ಟ್‌ ಆವರಣದಲ್ಲಿಯೇ ಭಗವಾನ್‌ ಅವರ ಮುಖಕ್ಕೆ ಕಪ್ಪು ಮಸಿ ಬಳಿದಿದ್ದಾರೆ. ಹಿಂದೂ ಧರ್ಮದ ಕಟು ಟೀಕಾಕಾರರಾಗಿರುವ … Continued

ಉಡುಪಿಯಲ್ಲಿ ೧೨ನೇ ಶತಮಾನದ ವಿಷ್ಣು ಮೂರ್ತಿ ಪತ್ತೆ

ಉಡುಪಿ: ಜಿಲ್ಲೆಯ ಶಿರ್ವಾದಲ್ಲಿ ೧೨ನೇ ಶತಮಾನದ ವಿಷ್ಣುವಿನ ವಿಗ್ರಹ ಪತ್ತೆಯಾಗಿದ್ದು, ಎಂಎಸ್‌ಆರ್‌ಎಸ್‌ ಕಾಲೇಜಿನ ಪ್ರಾಚ್ಯ ಇತಿಹಾಸ ಹಾಗೂ ಪುರಾತತ್ವ ವಿಭಾಗ ಹರಿಯ ಮೂರ್ತಿಯನ್ನು ಪತ್ತೆ ಮಾಡಿದೆ. ಇಲ್ಲಿನ ಪಂಚಾಯತ ಕಚೇರಿಯ ಹಿಂದೆ ಹಳೆಯ ದೇವಸ್ಥಾನದ ಸಮೀಪ ಉತ್ಖನನ ಮಾಡುತ್ತಿದ್ದ ಸಂದರ್ಭದಲ್ಲಿ ೨೦ ಅಡಿ ಆಳದಲ್ಲಿ ಸುಂದರ ವಿಷ್ಣು ಮೂರ್ತಿ ಪತ್ತೆಯಾಗಿದೆ. ಮೂರ್ತಿ ಕಾರಂದ ಮುಕುಟ, ಮಕರ … Continued

ಉಳ್ಳಾಲದಲ್ಲಿ ೪೯ ನರ್ಸಿಂಗ್‌ ವಿದ್ಯಾರ್ಥಿಗಳಿಗೆ ಕೊರೋನಾ, ಕಾಲೇಜ್‌ ಸೀಲ್‌

ಮಂಗಳೂರು: ಕೇರಳದ ಗಡಿಯಲ್ಲಿರುವ ಕರ್ನಾಟಕದ ಕರಾವಳಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಆಲಿಯಾ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಕಾಲೇಜಿನಲ್ಲಿ ೪೯ ನರ್ಸಿಂಗ್‌ ವಿದ್ಯಾರ್ಥಿಗಳಿಗೆ ಕೊರೋನಾ ದೃಢಪಟ್ಟಿರುವುದರಿಂದ ಕಾಲೇಜನ್ನು ಸೀಲ್‌ ಮಾಡಲಾಗಿದೆ. ಈ ಕಾಲೇಜು ಕರ್ನಾಟಕ ಮತ್ತು ಕೇರಳ ನಡುವಿನ ಅಂತಾರಾಜ್ಯ ಗಡಿಯಿಂದ ಕೆಲವು ಕಿಲೋಮೀಟರ್ ದೂರದಲ್ಲಿದೆ. ವಿದ್ಯಾರ್ಥಿಗಳು COVID-19 ಪರೀಕ್ಷೆಗೆ ಒಳಪಡುವ ಮೊದಲು ಕಾಲೇಜಿನ ಆರು ವಿದ್ಯಾರ್ಥಿಗಳು … Continued

ಅಯೋಧ್ಯಾ ಮಸೀದಿ ಮಾಲೀಕತ್ವದ ವಿಚಾರ: ಇಬ್ಬರು ಸಹೋದರಿಯರು ಕೋರ್ಟಿಗೆ

ಲಕ್ನೋ: ರಾಮ ಜನಮಭೂಮಿ-ಬಾಬ್ರಿ ವಿಚಾರದಲ್ಲಿ ಸುಪ್ರೀಂ ಕೋರ್ಟ್ ತೀರ್ಪಿನಂತೆ ಉತ್ತರ ಪ್ರದೇಶ ಸುನ್ನಿ ಕೇಂದ್ರ ವಕ್ಫ್ ಮಂಡಳಿಗೆ ಅಯೋಧ್ಯೆಯ ಬೇರೊಂದು ಜಾಗದಲ್ಲಿ ಮಸೀದಿ ನಿರ್ಮಾಣಕ್ಕಾಗಿ ಮಂಜೂರು ಮಾಡಿದ ಐದು ಎಕರೆ ಜಮೀನಿನ ಮಾಲೀಕತ್ವದ ವಿಚಾರದಲ್ಲಿ ದೆಹಲಿ ಮೂಲದ ಇಬ್ಬರು ಸಹೋದರಿಯರು ಬುಧವಾರ ಅಲಹಾಬಾದ್ ಹೈಕೋರ್ಟ್‌ನಲ್ಲಿ ಮೊಕದ್ದಮೆ ಹೂಡಿದ್ದಾರೆ. ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠದ ಮುಂದೆ ಸಲ್ಲಿಸಿದ್ದ … Continued

ಮಂಡ್ಯ ಜಿಲ್ಲೆಯಲ್ಲಿ ಲಿಥಿಯಂ ನಿಕ್ಷೇಪ

ಕರ್ನಾಟಕದ ಮಂಡ್ಯ ಜಿಲ್ಲೆಯಲ್ಲಿ 1,600 ಟನ್‌ಗಳಷ್ಟು ಲಿಥಿಯಂ ನಿಕ್ಷೇಪ ಇರುವುದು ಪ್ರಾಥಮಿಕ ಸಮೀಕ್ಷೆಯಲ್ಲಿ ಕಂಡುಬಂದಿದೆ ಎಂದು ಕೇಂದ್ರ ಸರಕಾರ  ಲೋಕಸಭೆಗೆ ಲಿಖಿತ ಉತ್ತರದಲ್ಲಿ ತಿಳಿಸಿದೆ. ಪರಮಾಣು ಇಂಧನ ಇಲಾಖೆಯ ಘಟಕ  ಅಟಾಮಿಕ್ ಮಿನರಲ್ಸ್ ಡೈರೆಕ್ಟರೇಟ್ ಫಾರ್ ಎಕ್ಸ್‌ಪ್ಲೋರೇಶನ್ ಅಂಡ್ ರಿಸರ್ಚ್ (ಎಎಮ್‌ಡಿ) ಮಾರ್ಲಗಲ್ – ಅಲಪಟ್ಟಣ ಪ್ರದೇಶದ ಪೆಗ್‌ಮ್ಯಾಟೈಟ್‌ಗಳಲ್ಲಿ ಈ ಸಮೀಕ್ಷೆಯನ್ನು ನಡೆಸಲಾಗಿದೆ. ಹೊಸ ತಂತ್ರಜ್ಞಾನಗಳಲ್ಲಿ … Continued

ದಂಪತಿಯಿಂದ ಆತ್ಮಹತ್ಯೆಗೆ ಯತ್ನ, ಪತಿ ಸಾವು

ಬೆಳಗಾವಿ: ಕೌಟುಂಬಿಕ ಕಲಹಕ್ಕೆ ಬೇಸತ್ತ ಬೆಳಗಾವಿಯ ದಂಪತಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಘಟನೆಯಲ್ಲಿ ಪತಿ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿರುವ ಪತ್ನಿಯನ್ನುಆಸ್ಪತ್ರೆಗೆ ಸೇರಿಸಲಾಗಿದೆ. ಮಾಧ್ಯಮ ಕ್ಷೇತ್ರದ ಮುದ್ರಣ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಬೆಳಗಾವಿಯ ಹಿಂಡಲಗಾ ತಾಲೂಕಿನ ರಾಕೇಶ್ ಪಾಟೀಲ್ ಮೃತಪಟ್ಟವ. ಕೌಟುಂಬಿಕ ಕಲಹವೇ ಆತ್ಮಹತ್ಯೆಗೆ ಕಾರಣ ಎನ್ನಲಾಗಿದ್ದು, ಗುರುವಾರ ಮುಂಜಾನೆ ನಗರದ ಎರಡನೇ ರೈಲ್ವೆ ಗೇಟ್ … Continued

ಇಂದಿನಿಂದ ರಾಷ್ಟ್ರಪತಿಗಳ  ೪ ದಿನಗಳ ಕರ್ನಾಟಕ ಪ್ರವಾಸ

ಬೆಂಗಳೂರು: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಗುರುವಾರ ರಾಜ್ಯಕ್ಕೆ ಆಗಮಿಸಲಿದ್ದಾರೆ. ನಾಲ್ಕು ದಿನಗಳ ಕಾಲ ಅನೇಕ ಅಧಿಕೃತ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ವಿಶೇಷ ವಿಮಾನದ ಮೂಲಕ ಗುರುವಾರ ರಾತ್ರಿ ಬೆಂಗಳೂರಿಗೆ ಆಗಮಿಸುವ ರಾಷ್ಟ್ರಪತಿ ಅವರು ಶುಕ್ರವಾರ (ಫೆ.೫) ಮಧ್ಯಾಹ್ನ ಏರೋ ಇಂಡಿಯಾ ಪ್ರದರ್ಶನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಫೆ.6ರಂದು ತಲಕಾವೇರಿಗೆ ಭೇಟಿ ನೀಡಲಿದ್ದು, ಅಂದು ಮಧ್ಯಾಹ್ನ ಮಡಿಕೇರಿಯಲ್ಲಿ ಜನರಲ್ ತಿಮ್ಮಯ್ಯ … Continued