ಎಚ್‌ಡಿಎಂಸಿ ಚುನಾವಣೆಗೆ ಸುಪ್ರೀಂಕೋರ್ಟ್‌ ತಡೆ

ಹುಬ್ಬಳ್ಳಿ:  ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ  ಚುನಾವಣೆಗೆ ಸುಪ್ರೀಂಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ರಾಜ್ಯ ಸರಕಾರ ಅವಕಾಶ ಕೇಳಿದ ಮೇಲೆ  ಹುಬ್ಬಳ್ಳಿ-ಧಾರವಾಡ ಸೇರಿದಂತೆ ರಾಜ್ಯದ ಕೆಲ ಮಹಾನಗರ ಪಾಲಿಕೆಗಳಿಗೆ ಎಂಟು ತಿಂಗಳಲ್ಲಿ ಚುನಾವಣೆ ನಡೆಸುವಂತೆ ಸರಕಾರಕ್ಕೆ ಸೂಚನೆ ನೀಡಿತ್ತು. ಇದನ್ನ ಪ್ರಶ್ನಿಸಿ ಸುಪ್ರೀಂಕೋರ್ಟಿಗೆ ಹೋಗಲಾಗಿತ್ತು. ಸುಪ್ರೀಂಕೋರ್ಟ್ ಚುನಾವಣೆಗೆ ತಡೆಯಾಜ್ಞೆ ನೀಡಿದೆ. ಇದರಿಂದ ಚುನಾವಣೆ ಮತ್ತೆ ಮುಂದಕ್ಕೆ ಹೋಗಿದೆ.   ಈಗಾಗಲೇ … Continued

ಕೋವಿಡ್‌ನಿಂದ ಆರ್ಥಿಕ ಸಂಕಷ್ಟ: ಸಾರಿಗೆ ನೌಕರರ ಸಂಬಳ ವಿಳಂಬ

ಬೆಂಗಳೂರು: ಕೋವಿಡ್  ಕಾರಣದಿಂದ ಸಾರಿಗೆ ಇಲಾಖೆ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ನೌಕರರಿಗೆ ವೇತನ ನೀಡಲು ಸಾಧ್ಯವಾಗದಂತಹ ಪರಿಸ್ಥಿತಿ ಬಂದಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ವಿಧಾನಸಭೆಗೆ ತಿಳಿಸಿದರು. ಪ್ರಶ್ನೋತ್ತರ ಅವಧಿಯಲ್ಲಿ ಉತ್ತರಿಸಿದ ಅವರು, ಸಾರಿಗೆ ಸಂಸ್ಥೆಯ 4 ನಿಗಮಗಳು ನಷ್ಟದಲ್ಲಿವೆ. ಸದ್ಯಕ್ಕೆ ನಮಗೆ ಬರುತ್ತಿರುವ ಆದಾಯದಲ್ಲಿ ವಾಹನಗಳಿಗೆ ಇಂಧನ ಭರ್ತಿ … Continued

ರಾಜ್ಯದಲ್ಲಿ ೩೯೫ ಜನರಿಗೆ ಕೊರೋನಾ ಸೋಂಕು, ೪೧೨ ಗುಣಮುಖ

ಬೆಂಗಳೂರು: ರಾಜ್ಯದಲ್ಲಿ ಕಳೆದ ೨೪ ತಾಸಿನಲ್ಲಿ ೩೯೫ ಜನರಿಗೆ ಕೊರೋನಾ ಸೋಕು ತಗುಲಿದ್ದು, ಮೂವರು ಮೃತಪಟ್ಟಿದ್ದಾರೆ. ಒಟ್ಟು ೪೧೨ ಜನ ಗುಣಮುಖರಾಗಿ ಆಸ್ಪತ್ರೆಯಿಂದ   ಬಿಡುಗಡೆಯಾಗಿದ್ದಾರೆ. ಐಸಿಯುವಿನಲ್ಲಿ ೧೪೮ ಜನ ಚಿಕಿತ್ಸೆ ಪಡೆಯುತ್ತಿದ್ದು ಒಟ್ಟಾರೆಯಾಗಿ ರಾಜಯದಲ್ಲಿ ೫೯೨೪ ಸಕ್ರಿಯ ಪ್ರಕಣಗಳಿವೆ.

ಚಿತ್ರಮಂದಿರಗಳಲ್ಲಿ ಪ್ರೇಕ್ಷಕರ ಸಂಪೂರ್ಣ ಹಾಜರಿಗೆ ಅನುಮತಿ

ಬೆಂಗಳೂರು: ಚಿತ್ರಮಂದಿರಗಳಲ್ಲಿ ಶೇ.೫೦ರಷ್ಟು  ಪ್ರೇಕ್ಷಕರ ಸಾಮರ್ಥ್ಯಕ್ಕೆ ಅವಕಾಶ ನೀಡಿದ್ದ ರಾಜ್ಯ ಸರ್ಕಾರದ ಕ್ರಮಕ್ಕೆ ಚಿತ್ರರಂಗದಲ್ಲಿ ಅಸಮಾಧಾನ ಭುಗಿಲೆದ್ದ ಬೆನ್ನಲ್ಲೇ   ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಶೇಕಡ ನೂರರಷ್ಟು ಪ್ರೇಕ್ಷಕರ ಹಾಜರಾತಿಯಲ್ಲಿ  ಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡಿದೆ. ರಾಜ್ಯ ಸರ್ಕಾರ ನಿನ್ನೆ ಥಿಯೇಟರ್ ಗಳಲ್ಲಿ ಶೇ.೫೦ರಷ್ಟು ಪ್ರೇಕ್ಷಕರಿಗೆ ಮಾತ್ರವೇ ಅವಕಾಶ ನೀಡಿ, ಕೊರೋನಾ ಪರಿಷ್ಕೃತ ಮಾರ್ಗಸೂಚಿ ಪ್ರಕಟಿಸಿತ್ತು. ಸರ್ಕಾರದ … Continued

೩ ಖಾಸಗಿ ವಿವಿ ಸ್ಥಾಪನೆಗೆ ಪರಿಷತ್ತಿನಲ್ಲೂ ಅಂಗೀಕಾರ

ಬೆಂಗಳೂರು: ಮೂರು ಖಾಸಗಿ ವಿಶ್ವವಿದ್ಯಾಲಯಗಳ ಸ್ಥಾಪನೆಗೆ ಅನುಮತಿ ನೀಡುವ ವಿಧೇಯಕಕ್ಕೆ ವಿಧಾನ ಪರಿಷತ್ ಧ್ವನಿಮತದ ಮೂಲಕ ಅಂಗೀಕಾರ ನೀಡಿದೆ. ಭೋಜನ  ವಿರಾಮದ ಬಳಿಕ ಉನ್ನತ ಶಿಕ್ಷಣ ಸಚಿವರೂ ಆದ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ , ನ್ಯೂ ಹೊರೈಜನ್, ವಿದ್ಯಾಶಿಲ್ಷ್ ವಿಶ್ವವಿದ್ಯಾಲಯ, ಏಟ್ರಿಯಾ ವಿಶ್ವವಿದ್ಯಾಲಯಗಳ ಸ್ಥಾಪನೆಗೆ ಅನುಮತಿ ನೀಡುವ ವಿಧೇಯಕ  ಮಂಡನೆ ಮಾಡಿದರು. ತಪ್ಪು ನಡೆದರೆ ಮಾನ್ಯತೆಯನ್ನೇ ರದ್ದು … Continued

ಬೆಂಗಳೂರಿನ ಮಾನದಂಡ ಅನುಸರಿಸಿ ನಮಗ್ಯಾಕೆ ಶಿಕ್ಷೆ..?

ಧಾರವಾಡ:  ಅವೈಜ್ಞಾನಿಕವಾಗಿರುವ  ಶೇ. ೭೦ರಷ್ಟು ಶುಲ್ಕಪಡೆಯುವ ಆದೇಶವನ್ನು ತಕ್ಷಣ ಹಿಂಪಡೆಯಬೇಕು. ಶಾಲಾ ಶುಲ್ಕ ಪಡೆಯುವ ಆಧಾರವಾಗಲಿ, ನಗರಗಳ ಗ್ರೇಡ್ ಮೇಲಾಗಲಿ ಶುಲ್ಕ   ಕಡಿತಗೊಳಿಸುವಂತೆ ಆಗಬೇಕು ಎಂದು ಧಾರವಾಡ ಅನುದಾನ ರಹಿತ ಖಾಸಗಿ ಶಾಲೆಗಳ ಅಭಿವೃದ್ಧಿ ಸಂಸ್ಥೆ ಹಾಗೂ ಧಾರವಾಡ ಜಿಲ್ಲಾ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಸಂಘ ಆಗ್ರಹಸಿವೆ. ಬುಧವಾರ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಹೇಳಿರುವ ಈ … Continued

ತಾಂತ್ರಿಕ ಸಮಸ್ಯೆ: ಐಟಿಐ ವಿದ್ಯಾರ್ಥಿಗಳ ಪರೀಕ್ಷೆಗೆ ತೊಡಕು

ಬೆಂಗಳೂರು: ತಾಂತ್ರಿಕ ತೊಂದರೆಯಿಂದಾಗಿ ಐಟಿಐ ವಿದ್ಯಾರ್ಥಿಗಳು ಪರೀಕ್ಷೆಯಿಂದ ವಂಚಿತರಾಗುವ ಸ್ಥಿತಿ ಉಂಟಾಗಿದೆ. ರಾಜ್ಯದಲ್ಲಿ ೧೭೫೦ಕ್ಕೂ ಹೆಚ್ಚು ಐಟಿಐ ಕಾಲೇಜುಗಳಿದ್ದು, ೧ ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಬೇಕಿದೆ. ಕಳೆದ ವರ್ಷ ಜುಲೈ-ಆಗಸ್ಟ್‌ನಲ್ಲಿ ನಡೆಯಬೇಕಿದ್ದ ಪರೀಕ್ಷೆಗಳನ್ನು ಕೊವಿಡ್‌ ಕಾರಣದಿಂದ ಮುಂದೂಡಲಾಗಿತ್ತು. ೨೦೨೦ರ ನವಂಬರ್‌ನಲ್ಲಿ ಪ್ರಾಯೋಗಿಕ ಹಾಗೂ ಎಂಜಿನೀಯರಿಂಗ್‌ ಡ್ರಾಯಿಂಗ್‌ ಪರೀಕ್ಷೆಗಳನ್ನು ನಡೆಸಲಾಗಿದೆ. ಉಳಿದ ವಿಷಯಗಳ ಪರೀಕ್ಷೆಗಳನ್ನು ಆನ್‌ಲೈನ್‌ … Continued

ಬಿಜೆಪಿ ಸರ್ಕಾರ ಕೆಟ್ಟು ನಿಂತಿರುವ ಡಕೋಟಾ ಬಸ್:ಸಿದ್ದರಾಮಯ್ಯ

ಬೆಂಗಳೂರು:  ರಾಜ್ಯದಲ್ಲಿ ಸರ್ಕಾರ ಸತ್ತಿದೆ. ಈ ಸರ್ಕಾರ ಕೆಟ್ಟು ನಿಂತಿರುವ ಡಕೋಟಾ ಬಸ್ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿಧಾನಸಭೆಯಲ್ಲಿ  ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆ ವೇಳೆ ಮಾತನಾಡಿ,   ನಾನು ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಆಗ ವಿರೋಧ ಪಕ್ಷದ ನಾಯಕರಾಗಿದ್ದ ಜಗದೀಶ್‌ಶೆಟ್ಟರ್ ಅವರು ಸರ್ಕಾರ ಟೇಕ್ … Continued

ಬೋಗಸ್‌ ಬಿಲ್‌ ತೆಗೆದುಕೊಂಡಿದ್ದರೆ ತನಿಖೆ:ಕಾರಜೋಳ

ಬೆಂಗಳೂರು: ಯಾವುದೇ ಕೆಲಸ ಮಾಡದೆ ಬೋಗಸ್ ಬಿಲ್ ಮಾಡಿ ತೆಗೆದುಕೊಂಡಿದ್ದರೆ ಇಲಾಖೆಯ ಉನ್ನತಾಧಿಕಾರಿಗಳಿಂದ ತನಿಖೆ ಮಾಡಿಸಲಾಗುವುದು ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ವಿಧಾನ ಪರಿಷತ್ತಿಗೆ ತಿಳಿಸಿದರು. ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಮೀಸಲಿಟ್ಟ ಅನುದಾನವನ್ನು ಆ ವರ್ಗದ ಮನೆಗಳಿಂದ ಹಿಡಿದು ಶಾಲೆ, ಮಾರುಕಟ್ಟೆ, ದೇವಾಲಯದವರೆಗೂ ರಸ್ತೆ ನಿರ್ಮಿಸಲು ಅವಕಾಶ ಕಲ್ಪಿಸಲಾಗಿದೆ. ಅವರು ಹೋಗಿ ಬರುವ ಶಾಲೆ, … Continued

ಪಾಕ್‌ ಪರ ಘೋಷಣೆ ಇಂದು ಆರೋಪಿಗಳ ವಿಚಾರಣೆ

ಹುಬ್ಬಳ್ಳಿ: ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪ ಎದುರಿಸುತ್ತಿರುವ ಕಾಶ್ಮೀರ ಮೂಲದ ಮೂವರು ವಿದ್ಯಾರ್ಥಿಗಳಿಗೆ ನ್ಯಾಯಾಲಯ ಸಮನ್ಸ್‌ ನೀಡಿದ ಹಿನ್ನೆಲೆಯಲ್ಲಿ ಬುಧವಾರ ೫ನೇ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯಕ್ಕೆ ಮೂವರು ಆರೋಪಿಗಳು ಹಾಜರಾದರು. ಭಾರಿ ಪೊಲೀಸ್‌ ಬಿಗಿ ಭದ್ರತೆಯಲ್ಲಿ ಆರೋಪಿಗಳನ್ನು ನ್ಯಾಯಾಲಯಕ್ಕೆ ಕರೆತರಲಾಯಿತು. ನ್ಯಾಯಾಧೀಶರು  ಮುಂದಿನ ವಿಚಾರಣೆಯನ್ನು ಮಾರ್ಚ್‌ ೧೦ಕ್ಕೆ ಮುಂದೂಡಿದರು. ನಗರದ ಕಾಲೇಜೊಂದರಲ್ಲಿ … Continued