ಬೆಂಗಳೂರು : ಆರ್‌ಬಿಐನಲ್ಲೇ ₹2000 ನಕಲಿ ನೋಟು ಬದಲಿಸಲು ಯತ್ನ; ವ್ಯಕ್ತಿಯ ಬಂಧನ

ಬೆಂಗಳೂರು: ಭಾರತೀಯ ರಿಸರ್ವ ಬ್ಯಾಂಕ್ (RBI) ಕಚೇರಿಯಲ್ಲೇ ನಕಲಿ ನೋಟುಗಳನ್ನು ಅಸಲಿ ನೋಟುಗಳನ್ನಾಗಿ ಬದಲಿಸಲು ಯತ್ನಿಸಿದ ವ್ಯಕ್ತಿಯೊಬ್ಬನನ್ನು ಹಲಸೂರು ಗೇಟ್ ಪೊಲೀಸರು ಬಂಧಿಸಿದ್ದಾರೆ. ನಾಗಶೆಟ್ಟಿಹಳ್ಳಿಯ ಎಸ್‌.ವಿ. ರಮೇಶ ಎಂಬಾತ ಬಂಧಿತ ಆರೋಪಿಯಾಗಿದ್ದಾನೆ. ಈತ ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ಆರ್‌ಬಿಐ ಶಾಖೆಗೆ ₹2,000 ಮುಖಬೆಲೆಯ 375 ನೋಟುಗಳನ್ನು ಹಿಡಿದು ಬಂದಿದ್ದ. ಹಳೆಯ ನೋಟುಗಳನ್ನು ಬದಲಾಯಿಸಿಕೊಳ್ಳುವ ನೆಪದಲ್ಲಿ ಈತ … Continued

ಪಕ್ಷ ವಿರೋಧಿ ಚಟುವಟಿಕೆ : ಕಾಂಗ್ರೆಸ್‌ ಪ್ರಾಥಮಿಕ ಸದಸ್ಯತ್ವದಿಂದಲೇ ಎಂಎಲ್‌ಸಿ ಅಬ್ದುಲ್‌ ಜಬ್ಬಾರ್ ಅಮಾನತು

ಬೆಂಗಳೂರು: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಲಾಗಿದೆ. ಆಂತರಿಕ ಶಿಸ್ತು ಕಾಪಾಡುವ ನಿಟ್ಟಿನಲ್ಲಿ  ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನು ತಕ್ಷಣದಿಂದ … Continued

ವಿಡಿಯೋ | ಬೆಂಗಳೂರು : ಬೆಕ್ಕು ಗರ್ಭಿಣಿಯಾದ ವಿಚಾರಕ್ಕೆ ಅಕ್ಕಪಕ್ಕದ ಮನೆಯವರ ರಂಪಾಟ ;’ವಿಚಿತ್ರ’ ಜಗಳಕ್ಕೆ ಪೊಲೀಸರೇ ಸುಸ್ತು..!

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ನೆರೆಹೊರೆಯವರ ನಡುವೆ ಜಗಳವಾಗುವುದು ಸಾಮಾನ್ಯ. ಆದರೆ, ಬೆಂಗಳೂರಿನ ಶೇಷಾದ್ರಿಪುರಂನಲ್ಲಿ ಕಳೆದ ವಾರ ನಡೆದ ಘಟನೆ ಮಾತ್ರ ತೀರಾ ವಿಭಿನ್ನವಾಗಿದೆ. ಬೆಕ್ಕಿನ ಮರಿಗಳ ವಿಚಾರವಾಗಿ ಆರಂಭವಾದ ಜಗಳವೊಂದು ಬೀದಿ ರಂಪಾಟಕ್ಕೆ ಕಾರಣವಾಗಿ, ಕೊನೆಗೆ ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಬೇಕಾದ ಪ್ರಸಂಗ ನಡೆದಿದೆ ಎಂದು ವರದಿಯಾಗಿದೆ. ಈ ವಿವಾದದ ಮೂಲವೇ ವಿಚಿತ್ರವಾಗಿತ್ತು. ಮಹಿಳೆಯೊಬ್ಬರು ತನ್ನ … Continued

ವಿಜಯಪುರ : ನೋಡಲು ತನ್ನಂತಿಲ್ಲ ಎಂದು ಮಗನನ್ನೇ ನದಿಗೆ ಎಸೆದು ಸಾಯಿಸಿದ ತಂದೆ…!

ವಿಜಯಪುರ: ಮಗ ನೋಡಲು ತನ್ನಂತೆ ಇಲ್ಲ ಎಂಬ ಕಾರಣಕ್ಕೆ 6 ವರ್ಷದ ಮಗನನ್ನು ತಂದೆಯೇ ನದಿಗೆ ಎಸೆದು ಕೊಲೆ ಮಾಡಿದ ಕ್ರೂರ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ. ಜಿಲ್ಲೆಯ ನಾಗಠಾಣ ಗ್ರಾಮದ ಸಿದ್ದಾರ್ಥ ಮಲ್ಲಿಕಾರ್ಜುನ ಅರಕೇರಿ (6) ಕೊಲೆಯಾದ ಬಾಲಕ ಎಂದುಗುರುತಿಸಲಾಗಿದೆ. ಮಲ್ಲಿಕಾರ್ಜುನ ಅರಕೇರಿ ಎಂಬಾತನೇ ಈ ದುಷ್ಕೃತ್ಯ ಎಸಗಿದ ಆರೋಪಿಯಾಗಿದ್ದಾನೆ. ನಾಗಠಾಣ … Continued

ವಿಜಯಪುರ: ಗುಂಡು ಹಾರಿಸಿ ಗ್ರಾಪಂ ಸದಸ್ಯನ ಹತ್ಯೆ

ವಿಜಯಪುರ : ಗ್ರಾಮ ಪಂಚಾಯತ ಸದಸ್ಯನ ಮೇಲೆ ದುಷ್ಕರ್ಮಿಗಳ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ ಘಟನೆ ನಗರ ಹೊರ ವಲಯ ಅಲಿಯಾಬಾದ ಕೈಗಾರಿಕಾ ವಸಾಹತು ಪ್ರದೇಶದಲ್ಲಿ ಮಂಗಳವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ. ಮೃತ ವ್ಯಕ್ತಿಯನ್ನು ಅಲಿಯಾಬಾದ ಗ್ರಾಪಂ ಸದಸ್ಯರಾದ ಪಾಂಗರುನ ದೊಡ್ಡಿ ನಿವಾಸಿ ರಾಜು ಖರೆ (48) ಎಂದು ಗುರುತಿಸಲಾಗಿದೆ. ರಾಜು ಖರೆ … Continued

ಶಿವಮೊಗ್ಗ : ಪಶುವೈದ್ಯೆ ಸಾವಿಗೆ ಕಾರಣವಾಗಿದ್ದ ನೀರಾನೆ ಸಾವು

ಶಿವಮೊಗ್ಗ: ಸಮೀಪದ ತ್ಯಾವರೆಕೊಪ್ಪದ ಟೈಗರ್ ಅಂಡ್ ಲಯನ್ ಸಫಾರಿಯಲ್ಲಿ 12 ವರ್ಷದ ಹೆಣ್ಣು ನೀರಾನೆ ‘ಹಂಸಿನಿ’ ಮಂಗಳವಾರ ಮೃತಪಟ್ಟಿದೆ ಎಂದು ವರದಿಯಾಗಿದೆ. ಇದೇ ನೀರಾನೆ ಮಾರ್ಚ್ 19ರಂದು ಮೃಗಾಲಯದ ಪಶುವೈದ್ಯ ತರಬೇತಿ ವಿದ್ಯಾರ್ಥಿನಿ ಸಮೀಕ್ಷಾ ರೆಡ್ಡಿ (27) ಅವರ ಸಾವಿಗೆ ಕಾರಣವಾಗಿತ್ತು. ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ 12 ವರ್ಷದ ಹೆಣ್ಣು ನೀರಾನೆ (Hippopotamus) … Continued

ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ

ಬೆಂಗಳೂರು: ಕಾಂಗ್ರೆಸ್ಸಿನಲ್ಲಿ ದಿಢೀರ್ ರಾಜಕೀಯ ಬೆಳವಣಿಗೆಯಾಗಿದ್ದು, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿಯಾಗಿದ್ದ ನಸೀರ್‌ ಅಹ್ಮದ್ ಅವರನ್ನು ಹುದ್ದೆಯಿಂದ ವಜಾಗೊಳಿಸಲಾಗಿದೆ. ನಸೀರ್ ಅಹ್ಮದ್ ಅವರನ್ನು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಬಿಡುಗಡೆಗೊಳಿಸಿ ಆದೇಶ ಹೊರಡಿಸಲಾಗಿದೆ. ತಕ್ಷಣದಿಂದಲೇ ಜಾರಿಗೆ ಬರುವಂತೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ಅವರನ್ನು ಬಿಡುಗಡೆ ಮಾಡಲಾಗಿದೆ” ಎಂದು ಏಪ್ರಿಲ್ 13 ರಂದು ಹೊರಡಿಸಲಾದ … Continued

ಕೆಯುಡಬ್ಲ್ಯುಜೆ ರಾಜ್ಯ ಸಮಿತಿಗೆ ಹಿರಿಯ ಪತ್ರಕರ್ತ ಗಣಪತಿ ಗಂಗೊಳ್ಳಿ ನಾಮನಿರ್ದೇಶನ

ಹುಬ್ಬಳ್ಳಿ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ( ಕೆಯುಡಬ್ಲ್ಯುಜೆ) ರಾಜ್ಯ ಕಾರ್ಯಕಾರಿ ಸಮಿತಿಗೆ ಹುಬ್ಬಳ್ಳಿಯ ಹಿರಿಯ ಪತ್ರಕರ್ತ ಗಣಪತಿ ಗಂಗೊಳ್ಳಿ ನಾಮನಿರ್ದೇಶನಗೊಂಡಿದ್ದಾರೆ. ಏಪ್ರಿಲ್‌ 12ರಂದು ಬೀದರಿನಲ್ಲಿ ನಡೆದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ರಾಜ್ಯ ಅಧ್ಯಕ್ಷರಾದ ಶಿವಾನಂದ ತಗಡೂರ ಈ ನಾಮನಿರ್ದೇಶನ ಮಾಡಿದ್ದಾರೆ. ಹುಬ್ಬಳ್ಳಿ ಸಂಜೆ ದಿನಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕರಾಗಿರುವ ಗಂಗೊಳ್ಳಿಯವರು ಈ ಹಿಂದೆ … Continued

ಪಂಚಮಸಾಲಿ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಟ್ರಸ್ಟಿಗಳ ಸಭೆಯಲ್ಲಿ ನಿರ್ಧಾರ

ದಾವಣಗೆರೆ : ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದಿಂದ ಖ್ಯಾತ ಯೋಗಗುರು ಶ್ರೀ ವಚನಾನಂದ ಸ್ವಾಮೀಜಿ ಅವರನ್ನು ಉಚ್ಚಾಟನೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಇಂದು, ಸೋಮವಾರ ಮಠದಲ್ಲಿ ಟ್ರಸ್ಟಿಗಳ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.ದಾವಣಗೆರೆ ಜಿಲ್ಲೆಯ ಹರಿಹರದ ಹನಗವಾಡಿ ಬಳಿಯ ಪಂಚಮಸಾಲಿ ಪೀಠದಲ್ಲಿ ನಡೆದ ಸಭೆಯಲ್ಲಿ 15 ಟ್ರಸ್ಟಿಗಳ ಪೈಕಿ 12 ಟ್ರಸ್ಟಿಗಳು … Continued

ಹಬ್ಬು ಸಮುದಾಯ ಒಂದು ಜನಾಂಗೀಯ ಅಧ್ಯಯನ ಕೃತಿ ಬಿಡುಗಡೆ

ಕಾರವಾರ: ಅನ್ನ ಹಾಗೂ ಅಕ್ಷರ ತೋರಿಸಿದ ಹಬ್ಬು ಬ್ರಾಹ್ಮಣರ ಕುರಿತು ಎಲ್ಲ ದಾಖಲೆ ಪರಿಶೀಲಿಸಿ ನಮ್ಮಲ್ಲಿ ಯಾವುದೆ ಗೊಂದಲ ಇರದ ಹಾಗೆ ಆರ್.ಎಸ್. ಹಬ್ಬು ಕೃತಿ ನೀಡಿದ್ದಾರೆ ಎಂದು ಪರಿಸರ ತಜ್ಞ ಶಿವಾನಂದ ಕಳವೆ ಅಭಿಪ್ರಾಯಪಟ್ಟರು. ನಗರದ ರಾಘವೇಂದ್ರ ಮಠದ ಸಭಾಭವನದಲ್ಲಿ ಆರ್.ಎಸ್.ಹಬ್ಬು ಅವರ ʼಹಬ್ಬು ಸಮುದಾಯʼ ಒಂದು ಜನಾಂಗೀಯ ಅಧ್ಯಯನ ಕೃತಿ ಬಿಡುಗಡೆಗೊಳಿಸಿ ಮಾತನಾಡಿದ … Continued