ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕಾರದ ನಂತರ ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ವಿಸರ್ಜಿಸಿದ ಡಿ.ಕೆ. ಶಿವಕುಮಾರ

ಬೆಂಗಳೂರು: ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ನೀಡಿರುವ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅಂಗೀಕರಿಸಿದ್ದಾರೆ. ಅಲ್ಲದೆ, ಅಬ್ದುಲ್ ಜಬ್ಬಾರ್ ಅವರ ನೇತೃತ್ವದಲ್ಲಿ ರಚಿಸಲಾಗಿದ್ದ ಅಲ್ಪಸಂಖ್ಯಾತ ವಿಭಾಗದ ಸಮಿತಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಿಸರ್ಜಿಸಲಾಗಿದೆ ಎಂದು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಅಬ್ದುಲ್ ಜಬ್ಬಾರ್ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ … Continued

ವಿಡಿಯೋ | ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ಗಳಗಳನೆ ಅತ್ತ ನಟಿ ರಮ್ಯಾ..

ಬೆಂಗಳೂರು: ನಗರದ ಕಗ್ಗದಾಸಪುರದಲ್ಲಿ ಬೀದಿನಾಯಿಗಳ ನಾಪತ್ತೆ ಕುರಿತಂತೆ ನಟಿ ರಮ್ಯಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ನಗರದ ಕಗ್ಗದಾಸಪುರದಲ್ಲಿ ಇತ್ತೀಚೆಗೆ ಬೀದಿ ನಾಯಿಗಳನ್ನು ಚೀಲದಲ್ಲಿ ಕಟ್ಟಿ ಅಮಾನವೀಯಾಗಿ ಸಾಗಿಸಿದ್ದ ಘಟನೆ (Brutality on street dogs) ನಡೆದಿತ್ತು. ಈ ಕ್ರಮವನ್ನು ಖಂಡಿಸಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ಪ್ರಾಣಿಪ್ರಿಯರಿಂದ ಶನಿವಾರ ಬೃಹತ್ ಪ್ರತಿಭಟನೆ ನಡೆದಿದ್ದು, ಈ ವೇಳೆ ಶ್ವಾನಗಳ ಮೇಲೆ … Continued

ಬೆಳಗಾವಿ : ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹15.45 ಕೋಟಿ ವಂಚನೆ ; ಹೈದರಾಬಾದಿನಲ್ಲಿ ಇಬ್ಬರ ಬಂಧನ

ಬೆಳಗಾವಿ : ಸಿಬಿಐ ಅಧಿಕಾರಿಗಳೆಂದು ಹೇಳಿಕೊಂಡು 81 ವರ್ಷದ ಉದ್ಯಮಿಯೊಬ್ಬರಿಗೆ ಬರೋಬ್ಬರಿ 15.45 ಕೋಟಿ ರೂ. ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ನೀವು ಹಣಕಾಸು ಅಪರಾಧದಲ್ಲಿ ಭಾಗಿಯಾಗಿರುವುದಾಗಿ ಉದ್ಯಮಿಗೆ ಬೆದರಿಸಿ ಈ ವಂಚನೆ ಮಾಡಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತರನ್ನು ಹೈದರಾಬಾದ್ ನಿವಾಸಿಗಳಾದ ವೆಂಕಟೇಶ ಶರತ ನಾಯ್ಕ ಮತ್ತು ದೇಗಾವತ್ ಶ್ರೀಪಾದ … Continued

ಕಾಂಗ್ರೆಸ್‌ನಲ್ಲಿ ಬೆಳವಣಿಗೆ : ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ

ಬೆಂಗಳೂರು : ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚಚುನಾವಣೆ ಮತದಾನ ಮುಗಿದ ಬೆನ್ನಲ್ಲೇ ಕಾಂಗ್ರೆಸ್ಸಿನಲ್ಲಿ ರಾಜಕೀಯ ಬೆಳವಣಿಗೆ ನಡೆದಿದ್ದು, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಎಂಎಲ್‌ಸಿಯೂ ಆಗಿರುವ ಅಬ್ದುಲ್‌ ಜಬ್ಬಾರ್‌ (MLC Abdul Jabbar) ರಾಜೀನಾಮೆ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ. ದಾವಣೆಗೆರೆ ಕ್ಷೇತ್ರದಲ್ಲಿ ಮುಸ್ಲಿಮರಿಗೆ ಟಿಕೆಟ್ ಕೊಡದ ಹಿನ್ನೆಲೆಯಲ್ಲಿ ಆರಂಭವಾಗಿದ್ದ ಮುನಿಸು ಹಾಗೂ ಆಂತರಿಕ ಬೆಳವಣಿಗೆಗಳ ಕುರಿತಾದ … Continued

ಕರ್ನಾಟಕ ಕೆಲವು ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ ; ಕೆಲ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಬೆಂಗಳೂರು : ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮೂರು ದಿನ ಬಿಸಿಗಾಳಿ ಮತ್ತು ಅಧಿಕ ಆರ್ದ್ರತೆ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ  ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ  ಉಡುಪಿ, ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಇದೆ. ಆರ್ದ್ರತೆ ಸಹ ಹೆಚ್ಚಾಗುವುದರಿಂದ  ಸೆಕೆ ಅನುಭವ ಜಾಸ್ತಿ ಆಗುವ ಸಾಧ್ಯತೆ ಇದೆ. ಅರಬ್ಬಿ … Continued

ಧಾರವಾಡ : : ಮನೆಗೆ ನುಗ್ಗಿ ಯುವ ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ

ಧಾರವಾಡ : ಧಾರವಾಡದಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಯುವ ಕಾಂಗ್ರೆಸ್‌ (youth congress) ಮುಖಂಡ ಫೈರೋಜ್‌ ಪಠಾಣ್‌ ಅವರನ್ನು ದುಷ್ಕರ್ಮಿಗಳು ಅವರ ಮನೆಯಲ್ಲೇ ಶುಕ್ರವಾರ ರಾತ್ರಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ನಡೆದಿದೆ ಎಂದು ವರದಿಯಾಗಿದೆ. ​ಧಾರವಾಡದ ಹಾಶ್ಮಿನಗರದಲ್ಲಿ ಫೈರೋಜ್‌ ಪಠಾಣ್‌ ವಾಸವಿದ್ದರು. ಶುಕ್ರವಾರ ಅವರ ಮನೆಗೆ ನುಗ್ಗಿದ ನಾಲ್ವರು ಅಪರಿಚಿತ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ … Continued

ಚಿಕ್ಕಮಗಳೂರು: ಚಂದ್ರದ್ರೋಣ ಪರ್ವತ ಶ್ರೇಣಿಯ ತಪ್ಪಲಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶವವಾಗಿ ಪತ್ತೆ

ಚಿಕ್ಕಮಗಳೂರು : ಚಂದ್ರದ್ರೋಣ ಪರ್ವತ ಶ್ರೇಣಿಯ ಮಾಣಿಕ್ಯಧಾರಾ ಜಲಪಾತದ ಬಳಿ ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದ ಕೇರಳ ಮೂಲದ ೧೪ ವರ್ಷದ ಬಾಲಕಿ ಶ್ರೀನಂದಾ ಅವರ ಮೃತದೇಹ ಇಂದು, ಶುಕ್ರವಾರ (ಏ.10) ಮಧ್ಯಾಹ್ನ ಪತ್ತೆಯಾಗಿದೆ ಎಂದು ವರದಿಯಾಗಿದೆ. ಸುಮಾರು 2 ಸಾವಿರ ಅಡಿ ಆಳದ ಪ್ರಪಾತದಲ್ಲಿ ಬಾಲಕಿಯ ಶವ ಸಿಕ್ಕಿದೆ ಎಂದು ಹೇಳಲಾಗಿದೆ. ಕೇರಳದಿಂದ ಕಳೆದ … Continued

ಹುಲಿಕಲ್ ಘಾಟ್‌ನಲ್ಲಿ ಭೀಕರ ದುರಂತ: ಕಾಮಗಾರಿ ವೇಳೆ ಗುಡ್ಡ ಕುಸಿದು ಮೂವರು ಸಾವು

ಶಿವಮೊಗ್ಗ : ಜಿಲ್ಲೆಯ ಹೊಸನಗರ ತಾಲೂಕಿನ  ಹುಲಿಕಲ್‌ ಘಾಟ್‌ನಲ್ಲಿ (ಬಾಳೇಬರೆ) ತಡೆಗೋಡೆ ನಿರ್ಮಾಣ ಕಾಮಗಾರಿ ವೇಳೆ  ಕುಸಿತ (landslide) ಸಂಭವಿಸಿ ಮೂವರು ಕಾರ್ಮಿಕರು ಸಾವಿಗೀಡಾಗಿರುವ ಘಟನೆ ನಡೆದಿದೆ ಎಂದು ವರದಿಯಾಗಿದೆ.  ಕಾಮಗಾರಿ ಮೇಲ್ವಿಚಾರಕ ಸೇರಿ ಮೂವರು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಮೃತರನ್ನು ಕಾಮಗಾರಿ ಮೇಲ್ವಿಚಾರಕ ಚಕ್ಕಾರು ಗ್ರಾಮದ ರಾಘವೇಂದ್ರ (37), ಕಾರ್ಮಿಕರಾದ ಹಾವೇರಿ ಜಿಲ್ಲೆಯ ನೆಲಗಲು … Continued

ಪರೀಕ್ಷೆ ನಡೆಯುತ್ತಿರುವಾಗಲೇ ತಾಯಿಯ ಸಾವು; ದುಃಖದಲ್ಲಿಯೇ ಪರೀಕ್ಷೆ ಬರೆದು ರಾಜ್ಯಕ್ಕೆ ಟಾಪರ್‌ : 600 ಕ್ಕೆ 600 ಅಂಕ…!

ಮಂಗಳೂರು: ಜೀವನದಲ್ಲಿ ಎದುರಾಗುವ ಕಷ್ಟಗಳು ಸಾಧನೆಯ ಹಾದಿಗೆ ಅಡ್ಡಿಯಾಗಬಾರದು ಎಂಬುದಕ್ಕೆ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿಶಾ ಒಂದು ನಿದರ್ಶನವಾಗಿ ಹೊರಹೊಮ್ಮಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿರುವಾಗಲೇ ಹೆತ್ತ ತಾಯಿಯನ್ನು ಕಳೆದುಕೊಂಡ ತೀವ್ರ ದುಃಖದಲ್ಲೂ ಧೃತಿಗೆಡದ ದಿಶಾ, ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೇ ಮೊದಲ ಸ್ಥಾನ ಪಡೆದಿದ್ದಷ್ಟೇ ಅಲ್ಲ, 600 ಕ್ಕೆ 600 ಅಂಕ … Continued

ಕರ್ನಾಟಕ ದ್ವಿತೀಯ ಪಿಯು ಫಲಿತಾಂಶ | ಯಾವ ಜಿಲ್ಲೆ ಪ್ರಥಮ ; ಯಾವ ಜಿಲ್ಲೆಗೆ ಕೊನೆಯ ಸ್ಥಾನ : ಟಾಪರ್ ಯಾರು? ಇಲ್ಲಿದೆ ಮಾಹಿತಿ

ಬೆಂಗಳೂರು : ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕರ್ನಾಟಕದಲ್ಲಿ ಮೊದಲ ಬಾರಿಗೆ ಶೇ.86.48ರಷ್ಟು ದಾಖಲೆಯ ಫಲಿತಾಂಶ ಬಂದಿದೆ. ನಗರದಲ್ಲಿ ಗುರುವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು, 6,32,200 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 5,46,698 ವಿದ್ಯಾರ್ಥಿಗಳು ಪಾಸ್‌ ಆಗಿದ್ದಾರೆ. ಈ ಪೈಕಿ 2,32,928 ( 83.65%) ಬಾಲಕರು, 3,13,770 (88.70%) … Continued