ಮೂಡಿಗೆರೆ : ಪತಿಯ ಕೊಳೆತ ಶವದೊಂದಿಗೆ 10 ದಿನ ಕಳೆದ ಪತ್ನಿ…!

ಚಿಕ್ಕಮಗಳೂರು :  ಮೃತಪಟ್ಟ ಪತಿಯ ಕೊಳೆತ ಶವದೊಂದಿಗೇ ಪತ್ನಿ 10 ದಿನಗಳ ಕಾಲ ಕಳೆದ ಆಘಾತಕಾರಿ ಘಟನೆಯೊಂದು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಾಣಕಲ್‌ನಲ್ಲಿ ಬೆಳಕಿಗೆ ಬಂದಿದೆ. ಮಹಿಳೆ ಮಾನಸಿಕ ಅಸ್ವಸ್ಥರಾಗಿದ್ದೇ ಈ ದುರಂತಕ್ಕೆ ಕಾರಣ ಎಂದು ಹೇಳಲಾಗಿದೆ. ಬಾಣಕಲ್ ನಿವಾಸಿ ಸಿರಿಲ್ ಮೋನಿಸ್ (77) ಮತ್ತು ಅವರ ಪತ್ನಿ ಸಿಸಿಲ್ (62) ಮಾತ್ರ ಮನೆಯಲ್ಲಿ … Continued

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ; ಈ ಬಾರಿ ದಾಖಲೆ ಫಲಿತಾಂಶ

ಬೆಂಗಳೂರು: 2025-26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಫಲಿತಾಂಶದಲ್ಲಿ ಬಾರಿ ಹೆಚ್ಚಳವಾಗಿದೆ. ಏಪ್ರಿಲ್‌ 9ರ ಗುರುವಾರ ಮಧ್ಯಾಹ್ನ 3 ಗಂಟೆಗೆ ಪರೀಕ್ಷೆ- 1 ರ ಫಲಿತಾಂಶ ಪ್ರಕಟಗೊಂಡಿದೆ. ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ಕಳೆದ ವರ್ಷಕ್ಕಿಂತ ಶೇ. 12 ರಷ್ಟು ಹೆಚ್ಚು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ … Continued

ಕಾಳಿ ಹುಲಿ ಸಂರಕ್ಷಿತ ಪ್ರದೇಶದ ಸುತ್ತ 663 ಚದರ ಕಿಮೀ ‘ಪರಿಸರ ಸೂಕ್ಷ್ಮ ವಲಯ’ : ಕೇಂದ್ರದ ಕರಡು ಅಧಿಸೂಚನೆ

ನವದೆಹಲಿ: ಕರ್ನಾಟಕದ ಪ್ರಕೃತಿ ಸಂಪತ್ತಿನ ಪ್ರಮುಖ ಭಾಗವಾಗಿರುವ ಉತ್ತರ ಕನ್ನಡ ಜಿಲ್ಲೆಯ ಕಾಳಿ ಹುಲಿ ಸಂರಕ್ಷಿತ ಪ್ರದೇಶದ (KTR) ಅಸ್ತಿತ್ವಕ್ಕೆ ಮತ್ತಷ್ಟು ರಕ್ಷಣೆ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ಈ ಪ್ರದೇಶದ ಸುತ್ತಲಿನ 663.32 ಚದರ ಕಿಲೋಮೀಟರ್‌ ವ್ಯಾಪ್ತಿಯನ್ನು ಪರಿಸರ ಸೂಕ್ಷ್ಮ ವಲಯ (Eco-Sensitive Zone – ESZ) ಎಂದು ಕೇಂದ್ರ ಪರಿಸರ ಸಚಿವಾಲಯವು ಕರಡು … Continued

ವಿಜಯಪುರ: ಭೂತನಾಳ ಕೆರೆಯಲ್ಲಿ ಮುಳುಗಿ ಬೆಂಗಳೂರಿನ ಮೂವರು ಸಾವು

ವಿಜಯಪುರ : ಪ್ರವಾಸಕ್ಕೆ ಬಂದಿದ್ದ ಮೂವರು ಕೆರೆಯಲ್ಲಿ ಮುಳುಗಿ ಸಾವಿಗೀಡಾಗಿರುವ ಘಟನೆ ವಿಜಯಪುರ ನಗರದ ಹೊರವಲಯದಲ್ಲಿರುವ ಭೂತನಾಳ ಕೆರೆಯಲ್ಲಿ (Bhutnal Lake) ಬುಧವಾರ ನಡೆದಿದೆ ಎಂದು ವರದಿಯಾಗಿದೆ. ಬೆಂಗಳೂರಿನ ಆರ್.ಟಿ ನಗರದಿಂದ 14 ಜನ ಕುಟುಂಬಸ್ಥರು ಪ್ರವಾಸಕ್ಕೆಂದು ವಿಜಯಪುರಕ್ಕೆ ಬಂದಿದ್ದರು. ಈ ವೇಳೆ ಭೂತನಾಳ ಕೆರೆ ವೀಕ್ಷಣೆಗೆ ಹೋಗಿದ್ದರು. ಬಾಲಕನೊಬ್ಬ ನೀರಿಗೆ ಇಳಿದು ಆಟವಾಡುವಾಗ ಮುಳುಗಿದ್ದಾನೆ. … Continued

ಯಲ್ಲಾಪುರ : ಅರೆಬೈಲ್‌ ಘಟ್ಟದಲ್ಲಿ ಕಾರಿನಲ್ಲಿ ಸಜೀವ ದಹನವಾದ ಚಾಲಕ

ಕಾರವಾರ: ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಕಾರಿನೊಳಗಿದ್ದ ಚಾಲಕ ಸುಟ್ಟು ಕರಕಲಾದ ದುರ್ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರೆಬೈಲ್ ಘಟ್ಟದ ರಾಷ್ಟ್ರೀ ಹೆದ್ದಾರಿಯಲ್ಲಿ ಬುಧವಾರ ಬೆಳಿಗ್ಗೆ ಸಂಭವಿಸಿದೆ ಎಂದು ವರದಿಯಾಗಿದೆ. ಹುಬ್ಬಳ್ಳಿ ಕಡೆಯಿಂದ ಅಂಕೋಲಾಕ್ಕೆ ಬರುತ್ತಿದ್ದ ವೋಕ್ಸ್‌ ವ್ಯಾಗನ್‌ (Volkswagen) ಕಾರಿನಲ್ಲಿ ಈ ಅವಘಡ ಸಂಭವಿಸಿದೆ. ಬೆಂಕಿ ತೀವ್ರವಾಗಿದ್ದರಿಂದ ಕಾರಿನಲ್ಲಿದ್ದ ಚಾಲಕನಿಗೆ … Continued

ನಾಳೆ (ಏ.9) ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ಬೆಂಗಳೂರು : ಗುರುವಾರ (ಏ.9) ದ್ವಿತೀಯ ಪಿಯುಸಿ ಪರೀಕ್ಷೆ 1ರ ಫಲಿತಾಂಶ ಪ್ರಕಟವಾಗಲಿದ್ದು, ಮಧ್ಯಾಹ್ನ 3ಕ್ಕೆ ವೆಬ್‌ಸೈಟ್‌ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ಮೊದಲು ವೈಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸಂಜೆ 6:15ಕ್ಕೆ ಫಲಿತಾಂಶದ ಬಗ್ಗೆ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಇಲಾಖೆಯ ವೆಬ್‌ಸೈಟ್ https://karresults.nic.in ಫಲಿತಾಂಶ ಲಭ್ಯವಾಗಲಿದೆ ಜೊತೆಗೆ … Continued

ಚಿಕ್ಕಮಗಳೂರು : ಪ್ರವಾಸಕ್ಕೆ ಬಂದಿದ್ದ ಕೇರಳದ ವಿದ್ಯಾರ್ಥಿನಿ ಚಂದ್ರದ್ರೋಣ ಪರ್ವತ ಪ್ರದೇಶದಲ್ಲಿ ನಾಪತ್ತೆ

ಚಿಕ್ಕಮಗಳೂರು : ಕೇರಳದಿಂದ 40 ಜನರ ತಂಡದೊಂದಿಗೆ ಚಿಕ್ಕಮಗಳೂರು ಪ್ರವಾಸಕ್ಕೆ ಬಂದಿದ್ದ 16 ವರ್ಷದ ವಿದ್ಯಾರ್ಥಿನಿ  ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ (Mullayanagiri) ಭಾಗದ ಚಂದ್ರದ್ರೋಣ ಪರ್ವತಗಳ ಸಾಲಿನಲ್ಲಿ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ನಾಪತ್ತೆಯಾಗಿರುವ 10ನೇ ತರಗತಿ ವಿದ್ಯಾರ್ಥಿನಿ ಶ್ರೀನಂದಾ (16) ಎಂದು ಗುರುತಿಸಲಾಗಿದ್ದು, ಕೇರಳದಿಂದ ಬಂದ 40 ಜನರ ತಂಡ ಮಂಗಳವಾರ ಸಂಜೆ 6:30ರ ಸುಮಾರಿಗೆ … Continued

ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣ ; ʼಬಿʼ ರಿಪೋರ್ಟ್‌ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಇ.ಡಿ. ಅರ್ಜಿ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ ಹಾಗೂ ಮತ್ತಿತರರು ಆರೋಪ ಎದುರಿಸುತ್ತಿದ್ದ ಮುಡಾ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಸಲ್ಲಿಸಿರುವ ಬಿ ರಿಪೋರ್ಟ್‌ ಅಂಗೀಕಾರ ಪ್ರಶ್ನಿಸಿ ಜಾರಿ ನಿರ್ದೇಶನಾಲಯವು (ಇಡಿ) ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶ ಪ್ರಶ್ನಿಸಿ ಜಾರಿ ನಿರ್ದೇಶನಾಲಯ ಅರ್ಜಿ ಸಲ್ಲಿಸಿದ್ದು,  ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ ಎಂದು ಬಾರ್‌ … Continued

20 ಅಡಿ ಆಳದ ಬಾವಿಗೆ ಬಿದ್ದು 3 ದಿನದಿಂದ ಜೀವ ಹಿಡಿದುಕೊಂಡಿದ್ದ ವೃದ್ಧ ; ಕಾಪಾಡಿದ್ದು ಗ್ಯಾಸ್‌ ಸಿಲಿಂಡರ್‌…!

ಉಡುಪಿ : ಬಾವಿಯ ಪಂಪ್ ಸರಿಪಡಿಸಲು ಹೋಗಿ ಬಾವಿಗೆ ಬಿದ್ದ ವೃದ್ಧರೊಬ್ಬರು (senior citizen) ಸತತ ಮೂರು ದಿನಗಳ ಕಾಲ ಸಾವು-ಬದುಕಿನ ನಡುವೆ ಹೋರಾಟ ನಡೆಸಿ ಪವಾಡ ಸದೃಶವಾಗಿ ಪ್ರಾಣಾಪಾಯದಿಂದ ಪಾರಾದ ಘಟನೆ ನಡೆದಿದೆ ಎಂದು ವರದಿಯಗಿದೆ. ಗ್ಯಾಸ್‌ ಸಿಲಿಂಡರ್ ಒಟಿಪಿಯ ಕಾರಣದಿಂದ ಬಾವಿಗೆ ಬಿದ್ದ ವೃದ್ಧರು ಪತ್ತೆಯಾಗಿದ್ದು, ಆದಿ ಉಡುಪಿಯ ಕಂಬಳಕಟ್ಟೆಯಲ್ಲಿ ಎಂಬಲ್ಲಿ ಈ … Continued

ಅಂಕೋಲಾ : ವಿಭೂತಿ ಜಲಪಾತದಲ್ಲಿ ಮುಳುಗಿ ಪ್ರವಾಸಿಗ ಸಾವು

ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅಚವೆ ಸಮೀಪದ ಚನಗಾರದ ವಿಭೂತಿ ಜಲಪಾತದಲ್ಲಿ ಪ್ರವಾಸಿಗನೊಬ್ಬ ಮುಳುಗಿ ಮೃತಪಟ್ಟ ಘಟನೆ ಸೋಮವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ. ಮೃತ ವ್ಯಕ್ತಿಯನ್ನುತೆಲಂಗಾಣ ರಾಜ್ಯದ ಅಜಯ (24) ಎಂದು ಗುರುತಿಸಲಾಗಿದೆ. ತೆಲಂಗಾಣದಿಂದ 6 ಜನರು ಇಲ್ಲಿಗೆ ಪ್ರವಾಸಕ್ಕೆ ಬಂದಿದ್ದ ವೇಳೆ ಜಲಪಾತದ ನೀರಿಗಿಳಿದಿದ್ದಾರೆ. ಈ ವೇಳೆ ಕಾಲು ಜಾರಿ … Continued