ಬೆಳಗಾವಿ : ಇಬ್ಬರು ಅಂತಾರಾಜ್ಯ ಬೈಕ್ ಕಳ್ಳರ ಬಂಧನ ; 27 ಬೈಕ್‌ಗಳು ವಶ

ಬೆಳಗಾವಿ:   ಜಿಲ್ಲೆಯ ವಿವಿಧೆಡೆ ಹಾಗೂ ಪಕ್ಕದ ಮಹಾರಾಷ್ಟ್ರದಲ್ಲಿ ದ್ವಿಚಕ್ರ ವಾಹನಗಳನ್ನು ಕದಿಯುತ್ತಿದ್ದ ಇಬ್ಬರು ಕುಖ್ಯಾತ ಅಂತಾರಾಜ್ಯ ಕಳ್ಳರನ್ನು ಸಂಕೇಶ್ವರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ ₹18.30 ಲಕ್ಷ ಮೌಲ್ಯದ ಒಟ್ಟು 27 ಬೈಕ್‌ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಲಕ್ಷ್ಮಣ ವಿರುಪಾಕ್ಷಿ ಕಣಬರಗಿ (31) ಹಾಗೂ ಫಕೀರಪ್ಪ ಸಿದ್ದಪ್ಪಾ ಕರಿಗಾರ (25) ಬಂಧಿತ ಆರೋಪಿಗಳಾಗಿದ್ದಾರೆ. … Continued

ಕಲಬುರಗಿಯಲ್ಲಿ ಮಾಜಿ ಸಚಿವರ ಸಂಬಂಧಿಯ ಭೀಕರ ಕೊಲೆ

ಕಲಬುರಗಿ: ನಗರದ ಹಳೇ ಜೇವರ್ಗಿ ರಸ್ತೆಯ ಪಿ ಅಂಡ್‌ ಟಿ ಕಾಲೊನಿಯಲ್ಲಿ ಗುರುವಾರ ರಾತ್ರಿ ವ್ಯಕ್ತಿಯೊಬ್ಬರನ್ನು ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಕೊಲೆಯಾದ ವ್ಯಕ್ತಿಯನ್ನು ಅನಿಲ ರಾಠೋಡ ಎಂದು ಗುರುತಿಸಲಾಗಿದೆ. ಅನಿಲ ರಾಠೋಡ ಅವರು ವೆಂಕಟೇಶ್ವರ ಕಾಂಪ್ಲೆಕ್ಸ್‌ನಲ್ಲಿರುವ ತಮ್ಮ ಕಚೇರಿಯಲ್ಲಿದ್ದಾಗ, ಆಟೋದಲ್ಲಿ ಬಂದ ಮೂವರು ದುಷ್ಕರ್ಮಿಗಳ ತಂಡ ಕಚೇರಿ ಒಳಗೆ ನುಗ್ಗಿದೆ. ಮಾರಕಾಸ್ತ್ರಗಳಿಂದ … Continued

ಶಿರಸಿ : ಎರಡು ಬಸ್‌ಗಳ ನಡುವೆ ಡಿಕ್ಕಿ ; ಹಲವರಿಗೆ ಗಾಯ

ಶಿರಸಿ : ಉತ್ತರ ಕನ್ನಡ ಜಿಲ್ಲೆಯ ಶಿರಸಿ-ಕುಮಟಾ ಹೆದ್ದಾರಿಯಲ್ಲಿ ಕೊಳಗಿಬೀಸ್ ಬಳಿ ಎರಡು ಬಸ್‌ಗಳ ನಡುವೆ ಶುಕ್ರವಾರ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಸುಮಾರು 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ. ಭಟ್ಕಳದಿಂದ ಹುಬ್ಬಳ್ಳಿ ಮಾರ್ಗವಾಗಿ ಮುದ್ದೆಬಿಹಾಳಕ್ಕೆ ಹೋಗುತ್ತಿದ್ದ ಎನ್‌ಡಬ್ಲ್ಯುಕೆಆರ್‌ಟಿಸಿ ಬಸ್‌ ಮತ್ತು ಶಿರಸಿ ಕಡೆಯಿಂದ ಹೋಗುತ್ತಿದ್ದ ಖಾಸಗಿ ಬಸ್‌ ನಡುವೆ ಡಿಕ್ಕಿ ಸಂಭವಿಸಿದ್ದು, ಡಿಕ್ಕಿಯ … Continued

ಕಾರ್ಯಕ್ರಮದಲ್ಲಿ ಕುಸಿದುಬಿದ್ದ ನಿವೃತ್ತ ನ್ಯಾಯಮೂರ್ತಿ ಸಂತೋಷ ಹೆಗ್ಡೆ : ಆಸ್ಪತ್ರೆಗೆ ದಾಖಲು

ಬೆಂಗಳೂರು: ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ ಹೆಗ್ಡೆ ಅವರು ಭಾಷಣದ ವೇಳೆ ಅಸ್ವಸ್ಥಗೊಂಡು ದಿಢೀರ್‌ ಕುಸಿದು ಬಿದ್ದಿದ್ದು ಅವರನ್ನು ತಕ್ಷಣವೇ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಬೆಂಗಳೂರಿನ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಸ್ಕೌಟ್ಸ್ ಅಂಡ್ ಗೈಡ್ಸ್ ವತಿಯಿಂದ ಡಾ. ಪಿಜಿಆರ್ ಸಿಂಧ್ಯ ಅಭಿನಂದನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಅವರು, ವೇದಿಕೆಯಲ್ಲಿ ಮಾತಾಡುತ್ತಿದ್ದ … Continued

ಚಿತ್ರದುರ್ಗ : ಪ್ರಾಧ್ಯಾಪಕನ ಜೊತೆ ಸಂಬಂಧ ಕಲ್ಪಿಸಿ ಅಪಪ್ರಚಾರ ; ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ

ಚಿತ್ರದುರ್ಗ: ಪ್ರಾಧ್ಯಾಪಕರೊಬ್ಬರ ಜೊತೆ ಸಂಬಂಧ ಕಲ್ಪಿಸಿ ಸುಳ್ಳು ವದಂತಿ ಹರಡಿ ಸಹಪಾಠಿಗಳು ನೀಡಿದ ಮಾನಸಿಕ ಕಿರುಕುಳಕ್ಕೆ ಬೇಸತ್ತು 22 ವರ್ಷದ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿತ್ರದುರ್ಗ  ಜಿಲ್ಲೆಯ  ಹೊಳಲ್ಕೆರೆ ನಗರದ ಬಸವ ಲೇಔಟ್‌ನಲ್ಲಿ ನಡೆದಿದೆ ಎಂದು ವರದಿಯಾಗಿದೆ. ನಿಖಿತಾ ಎಂ.ಯು (22) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಎಂದು ಹೇಳಲಾಗಿದೆ. ಈಕೆ ಚಿತ್ರದುರ್ಗ ಜಿಲ್ಲೆಯ … Continued

ಹೊನ್ನಾವರ : ಅಪರಿಚಿತ ವಾಹನ ಡಿಕ್ಕಿ ; ಯುವಕ ಸಾವು

ಹೊನ್ನಾವರ : ಅಪರಿಚಿತ ವಾಹನ ಡಿಕ್ಕಿ ಹೊಡೆದು ಯುವಕನೊಬ್ಬ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕಾಸರಕೋಡಿನ ದುರ್ಗಾಂಬಾ ಹೊಟೇಲಿನ ಎದುರಿಗೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಮಧ್ಯರಾತ್ರಿ ಸಂಭವಿಸಿದೆ ಎಂದು ವರದಿಯಾಗಿದೆ. ಮೃತ ಯುವಕನನ್ನು ಹೊನ್ನಾವರ ತಾಲೂಕಿನ ಕೆಳಗಿನ ಇಡಗುಂಜಿಯ ಅಂಗಡಿಮನೆಯ ಕಿರಣ ಬಾಲಚಂದ್ರ ನಾಯ್ಕ ( 24 ) … Continued

ಬೆಂಗಳೂರಿನಲ್ಲಿ ಮನಕಲಕುವ ಘಟನೆ : ನೀರಿನ ಬಕೆಟ್‌ನಲ್ಲಿ ಬಿದ್ದು11 ತಿಂಗಳ ಮಗು ಸಾವು ; ಮನನೊಂದು ತಾಯಿ ಆತ್ಮಹತ್ಯೆ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಅತ್ಯಂತ ಹೃದಯವಿದ್ರಕ ಘಟನೆಯೊಂದು ನಡೆದಿದೆ. 11 ತಿಂಗಳ ಹಸುಗೂಸು ಆಕಸ್ಮಿಕವಾಗಿ ನೀರಿನ ಬಕೆಟ್‌ನಲ್ಲಿ ಮುಳುಗಿ ಮೃತಪಟ್ಟ ಬೆನ್ನಲ್ಲೇ, ಮಗುವಿನ ಸಾವಿಗೆ ತಾನೇ ಕಾರಣ ಎಂದು ನೊಂದು ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದ ತಾಯಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ವರದಿಯಾಗಿದೆ. ಮಗುವನ್ನು ಅಗಸ್ತ್ಯ ಎಂದು ಗುರುತಿಸಲಾಗಿದ್ದು, ಮೃತ ತಾಯಿ ಪ್ರತಿಭಾ (29) ಎಂದು ಹೇಳಲಾಗಿದೆ. … Continued

ಪರಿಸರ ಸ್ನೇಹಿ ಕೈಚೀಲ ಖರೀದಿ ಪ್ರಕರಣ : ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿಗೆ ಸಂಕಷ್ಟ

ಬೆಂಗಳೂರು: ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ಖರೀದಿ (bag purchase) ಆರೋಪಿತ ಹಗರಣದಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಸಂಕಷ್ಟ ಎದುರಾಗಿದೆ. ಈ ಪ್ರಕರಣದಲ್ಲಿ ತನಿಖೆ ಕೋರಿ ಮೈಸೂರಿನ ವಕೀಲ ಎನ್.ಆರ್.ರವಿಚಂದ್ರೇಗೌಡ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಪುರಸ್ಕರಿಸಿರುವ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್‌ ಏಕಸದಸ್ಯ ಪೀಠವು, ಮೈಸೂರು ಜಿಲ್ಲೆಯ ಅಂದಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ … Continued

ವೀಡಿಯೊ | ಹಾವೇರಿ : ಬಸ್‌ ನಿಲ್ದಾಣದ ಪ್ಲಾಟ್​ಫಾರ್ಮಿಗೆ ನುಗ್ಗಿದ ಬಸ್‌ ; ಮಗು ಸಾವು, ನಾಲ್ವರಿಗೆ ಗಾಯ

ಹಾವೇರಿ: ಹಾವೇರಿ: ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಕಾರಿಡಾರ್‌ಗೆ ನುಗ್ಗಿ ಬಸ್ ಡಿಕ್ಕಿ ಹೊಡೆದಿದ್ದರಿಂದ ತೀವ್ರವಾಗಿ ಗಾಯಗೊಂಡ ಎರಡೂ ವರ್ಷದ ಮಗು ಮೃತಪಟ್ಟ ದುರ್ಘಟನೆ ನಡೆದಿದೆ ಎಂದು ವರದಿಯಾಗಿದೆ. ಈ ದುರ್ಘಟನೆಯಲ್ಲಿ ಇನ್ನೂ ನಾಲ್ವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹಾವೇರಿ-ಲಕ್ಷ್ಮೇಶ್ವರ ಬಸ್‌ ಅತಿವೇಗದಲ್ಲಿ ಬಸ್ ನಿಲ್ದಾಣಕ್ಕೆ ನುಗ್ಗಿ, ಪ್ಲಾಟ್‌ ಫಾರ್ಮ್‌ಗೆ ನುಗ್ಗಿ ಮುಂದೆ … Continued

ವಿಡಿಯೋ : ಚನ್ನಪಟ್ಟಣ : ವೃದ್ಧೆ ಮೃತದೇಹದ ಮೇಲೆ ಮಲಗಿ ದುಃಖಿಸಿದ ಮಂಗ ; ಅಲ್ಲಿದ್ದವರ ಕಣ್ಣಲ್ಲಿ ನೀರು

ರಾಮನಗರ : ತನ್ನನ್ನು ಪ್ರೀತಿಯಿಂದ ಸಲಹುತ್ತಿದ್ದ ವೃದ್ಧೆಯೊಬ್ಬರ ಅಗಲಿಕೆಗೆ ಮಂಗವೊಂದು ಮರುಗಿದ ರೀತಿಗೆ ಗ್ರಾಮಸ್ಥರು ಕಣ್ಣಿರಾಗಿದ್ದಾರೆ. ತನಗೆ ಪ್ರತಿದಿನ ಹಣ್ಣುಹಂಪಲು ನೀಡುತ್ತಿದ್ದ ವೃದ್ಧೆಯೊಬ್ಬರ ಸಾವಿಗೆ ಮಂಗ ದುಃಖಿಸಿದೆ. ಹಾಗೂ ತನ್ನ ಸಲಹುತ್ತಿದ್ದ ಅಜ್ಜಿಯ ಮೃತದೇಹದ ಮೇಲೆ ಮಲಗಿ ದುಃಖಿಸಿದ ಅಸಾಮಾನ್ಯ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಬಿ.ವಿ.ಹಳ್ಳಿ ಎಂಬ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. … Continued