ಬಸ್-ಬೈಕ್ ಡಿಕ್ಕಿ: ಹೊತ್ತಿ ಉರಿದ ಬಸ್ ; ಬೈಕ್‌ ಸವಾರ ಸಜೀವ ದಹನ

ವಿಜಯಪುರ: ಜಿಲ್ಲೆಯ ಸಿಂದಗಿ ತಾಲೂಕಿನ ಕನ್ನೊಳ್ಳಿ ಟೋಲ್‌ಗೇಟ್ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಸಜೀವ ದಹನಗೊಂಡು ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ ಎಂದು ವರದಿಯಾಗಿದೆ. ಮಾಹಿತಿಯ ಪ್ರಕಾರ, ರಾಷ್ಟ್ರೀಯ ಹೆದ್ದಾರಿಯ ಕನ್ನೊಳ್ಳಿ ಟೋಲ್ ಪ್ಲಾಜಾ ಬಳಿ ವೇಗವಾಗಿ ಸಾಗುತ್ತಿದ್ದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಬಸ್ ಮತ್ತು ಬೈಕ್ ನಡುವೆ ಮುಖಾಮುಖಿ … Continued

ಬೆಳ್ತಂಗಡಿ : ಚಲಿಸುತ್ತಿದ್ದ ಬಸ್ಸಿನಿಂದ ರಸ್ತೆಗೆ ಬಿದ್ದ ವಿದ್ಯಾರ್ಥಿನಿಯರು ; ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಮಂಗಳೂರು: ವೇಗವಾಗಿ ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ (KSRTC) ಬಸ್‌ನ ಬಾಗಿಲು ಏಕಾಏಕಿ ತೆರೆದುಕೊಂಡ ಪರಿಣಾಮ ಇಬ್ಬರು ವಿದ್ಯಾರ್ಥಿನಿಯರು ರಸ್ತೆಗೆ ಬಿದ್ದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದಲ್ಲಿ ಸಂಭವಿಸಿದೆ ಎಂದು ವರದಿಯಾಗಿದೆ. ವರದಿಯ ಪ್ರಕಾರ, ಗೇರುಕಟ್ಟೆಯಿಂದ ಬೆಳ್ತಂಗಡಿ ಕಡೆ ಸರ್ಕಾರಿ ಬಸ್ ಸಂಚರಿಸುತ್ತಿತ್ತು. ಗೇರುಕಟ್ಟೆ ಪ್ರದೇಶದಲ್ಲಿ ಅಕ್ಕ-ತಂಗಿಯರಾದ ಇಬ್ಬರು ವಿದ್ಯಾರ್ಥಿನಿಯರು ಬಸ್‌ ಹತ್ತಿದ್ದರು.  … Continued

ಬೆಂಗಳೂರು : ಟೆಕ್ಕಿ ಪತಿ ಆತ್ಮಹತ್ಯೆ, ಅದನ್ನು ನೋಡಿ 17ನೇ ಮಹಡಿಯಿಂದ ಜಿಗಿದು ಪತ್ನಿ ಸಾವು

ಬೆಂಗಳೂರು: ಸೋಮವಾರ (ಮಾರ್ಚ್ 30) ಹೃದಯವಿದ್ರಾವಕ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದ್ದು, ಸಾಫ್ಟ್‌ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಯುವ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. . ಈ ಘಟನೆ ಬೆಂಗಳೂರಿನ ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪತಿಯ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ನೋಡಿದ ನಂತರ ಪತ್ನಿಯೂ ಸಹ 17ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಭಾನುಚಂದರ ರೆಡ್ಡಿ … Continued

ಹುಬ್ಬಳ್ಳಿ: 6 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ವಾಣಿಜ್ಯ ತೆರಿಗೆ ಉಪ ಆಯುಕ್ತ

ಹುಬ್ಬಳ್ಳಿ: ತೆರಿಗೆ ಪ್ರಕರಣವೊಂದನ್ನು ಇತ್ಯರ್ಥಪಡಿಸಲು ಉದ್ಯಮಿಯೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದ ವಾಣಿಜ್ಯ ತೆರಿಗೆ ಇಲಾಖೆಯ ಉಪ ಆಯುಕ್ತರನ್ನು (Deputy Commissioner) ಲೋಕಾಯುಕ್ತ ಪೊಲೀಸರು ಸೋಮವಾರ ರೆಡ್‌ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಬಂಧಿತ ಅಧಿಕಾರಿಯನ್ನು ಭರತಕುಮಾರ ಹೆಗಡೆ (48) ಎಂದು ಗುರುತಿಸಲಾಗಿದೆ. ಅಂಕೋಲಾ ಮೂಲದ ಉದ್ಯಮಿ ವಿಶ್ವಜೀತ ನಾಯಕ್ (53) ಎಂಬವರಿಂದ 6 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾ … Continued

ಭದ್ರಾವತಿ : ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಬಸ್‌ ; 30ಕ್ಕೂ ಹೆಚ್ಚು ಜನರಿಗೆ ಗಾಯ

ಶಿವಮೊಗ್ಗ :ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಕ್ಕೆ ಹಳ್ಳದಲ್ಲಿ ಬಿದ್ದು ೩೦ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಎಂದು ವೀರಪುರ ಗ್ರಾಮದ ಕಾಗೆಹಳ್ಳ ಎಂಬಲ್ಲಿ ನಡೆದಿದೆ ಎಂದು ವರದಿಯಾಗಿದೆ. ಬಸ್ಸು ನಿಯಂತ್ರಣ ಕಳೆದುಕೊಂಡು ಸೇತುವೆಯ ತಡೆಗೋಡೆಗೆ (Railing) ಡಿಕ್ಕಿ ಹೊಡೆದು ನಂತರ ಕೆಳಕ್ಕೆ ಬಿದ್ದಿದೆ ಎನ್ನಲಾಗಿದೆ. 10ಕ್ಕೂ … Continued

ಹುಣಸೂರು : ದಾಸವಾಳ ಹೂವು ನುಂಗಿ ಆರೂವರೆ ತಿಂಗಳ ಮಗು ಸಾವು

ಮೈಸೂರು : ಆಟವಾಡುತ್ತಿದ್ದ ಸಂದರ್ಭದಲ್ಲಿ ಅಕಸ್ಮಾತ್ ಆಗಿ ಒಣಗಿದ ದಾಸವಾಳದ ಹೂವನ್ನು ನುಂಗಿದ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ದೊಡ್ಡಹೆಜ್ಜೂರು ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ದೊಡ್ಡಹೆಜ್ಜೂರಿನ ಸುದರ್ಶನ ಮತ್ತು ನವ್ಯ ದಂಪತಿಯ ಎರಡನೇ ಪುತ್ರ ಚಿನ್ಮಯಿಗೌಡ ಮೃತಪಟ್ಟ ಮಗು ಎಂದು ಗುರುತಿಸಲಾಗಿದೆ. ಮಗು … Continued

ದೇಶಾದ್ಯಂತ 1,100ಕ್ಕೂ ಹೆಚ್ಚು ಹುಸಿ ಬಾಂಬ್ ಬೆದರಿಕೆ : ಮೈಸೂರಿನಲ್ಲಿ ಆರೋಪಿಯ ಬಂಧನ

ನವದೆಹಲಿ: ದೇಶಾದ್ಯಂತ ಶಾಲೆಗಳು, ಆಸ್ಪತ್ರೆಗಳು, ಹೈಕೋರ್ಟ್‌ಗಳು ಮತ್ತು ಸರ್ಕಾರಿ ಕಚೇರಿಗಳಿಗೆ 1,100 ಕ್ಕೂ ಹೆಚ್ಚು ನಕಲಿ ಬಾಂಬ್ ಬೆದರಿಕೆ ಸಂದೇಶಗಳನ್ನು ಕಳುಹಿಸಿದ ಆರೋಪದ ಮೇಲೆ ಕರ್ನಾಟಕದ ಮೈಸೂರಿನಲ್ಲಿ ವ್ಯಕ್ತಿಯೊಬ್ಬನನ್ನು ದೆಹಲಿ ಪೊಲೀಸರು ಸೋಮವಾರ ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಬಂಧಿತ ಆರೋಪಿಯನ್ನು ಶ್ರೀನಿವಾಸ ಲೂಯಿಸ್ (47) ಎಂದು ಗುರುತಿಸಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಶ್ರೀನಿವಾಸ … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೂ 4 ದಿನ ಗುಡುಗು ಸಹಿತ ಮಳೆ

ಬೆಂಗಳೂರು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಏಪ್ರಿಲ್‌ 2ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಗಾಳಿಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ. 14 ಜಿಲ್ಲೆಗಳಲ್ಲಿ ಮಳೆಯಾಗಬಹುದು ಎಂದು ಹೇಳಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತು ಸ್ಥಳೀಯವಾಗಿ ಉಂಟಾಗಿರುವ ಪಶ್ಚಿಮ ಗಾಳಿಯ ಪ್ರಭಾವದಿಂದಾಗಿ ಈ ಮಳೆ ಸುರಿಯುತ್ತಿದೆ ಎಂದು ಹೇಳಲಾಗಿದೆ. … Continued

ವೀಡಿಯೊ | ಚನ್ನಪಟ್ಟಣ : ಬೈಕ್‌ ಸವಾರನ ಮೇಲೆ ಕರಡಿ ದಾಳಿ

ರಾಮನಗರ: ರಾಮನಗರ (ಬೆಂಗಳೂರು ಗ್ರಾಮಾಂತರ) ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಕೋಡಂಬಳ್ಳಿ ಗ್ರಾಮದಲ್ಲಿ ಶನಿವಾರ ಬೆಳಿಗ್ಗೆ ಕಾಡು ಕರಡಿಯೊಂದು ಜನವಸತಿ ಪ್ರದೇಶಕ್ಕೆ ನುಗ್ಗಿ, ಬೈಕ್‌ನಲ್ಲಿ ಹೋಗುತ್ತಿದ್ದ ಇಬ್ಬರು ಯುವಕರ ಮೇಲೆ ದಾಳಿ ಮಾಡಿದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಘಟನೆ ನಡೆದ ಕೆಲವು ಗಂಟೆಗಳ ನಂತರ, ಗ್ರಾಮಸ್ಥರ ಗುಂಪೊಂದು ಕರಡಿಯನ್ನು ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿದೆ. ಗ್ರಾಮಸ್ಥರು … Continued

ಸಿದ್ದಾಪುರ : ನಕಲಿ ಬಂಗಾರದ ನಾಣ್ಯ ನೀಡಿ 10 ಲಕ್ಷ ರೂ. ವಂಚನೆ ; ಅಂತರ ಜಿಲ್ಲಾ ವಂಚಕನನ್ನು ಬಂಧಿಸಿದ ಪೊಲೀಸರು

ಸಿದ್ದಾಪುರ: ಕಡಿಮೆ ಬೆಲೆಗೆ ಅಸಲಿ ಬಂಗಾರ ನೀಡುವುದಾಗಿ ನಂಬಿಸಿ ಸಾರ್ವಜನಿಕರಿಂದ  ಹಣ ಲೂಟಿ ಮಾಡುತ್ತಿದ್ದ ಅಂತರ ಜಿಲ್ಲಾ ವಂಚಕನನ್ನು ಬಂಧಿಸುವಲ್ಲಿ ಸಿದ್ದಾಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ಕೆಲವು ದಿನಗಳ ಹಿಂದೆ ಸಿದ್ದಾಪುರ ತಾಲೂಕಿನ ವ್ಯಕ್ತಿಯೊಬ್ಬರಿಗೆ ಈ ಆರೋಪಿಯು ಇದೇ ರೀತಿ ವಂಚಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಬಂಗಾರದ ನಾಣ್ಯವನ್ನು ಮಾರುಕಟ್ಟೆ ದರಕ್ಕಿಂತ ಕಡಿಮೆ ಬೆಲೆಗೆ ಕೊಡಿಸುವುದಾಗಿ ಹೇಳಿದ್ದ … Continued