ಅಪಘಾತಕ್ಕೀಡಾದ ಗೃಹ ಸಚಿವ ಆರಗ ಜ್ಞಾನೇಂದ್ರ ಬೆಂಗಾವಲು ವಾಹನ

ಶಿವಮೊಗ್ಗ: ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಬೆಂಗಾವಲು ವಾಹನ ಅಪಘಾತಕ್ಕೀಡಾಗಿದೆ. ಭದ್ರಾವತಿ ಜಂಕ್ಷನ್ ಬಳಿ ಈ ಅಪಘಾತ ಸಂಭವಿಸಿದ್ದು, ಬೆಂಗಾವಲು ಜೀಪಿಗೆ ಎದುರಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ಗೃಹ ಸಚಿವರು ತುಮಕೂರಿನಿಂದ ತೀರ್ಥಹಳ್ಳಿಗೆ ಬರುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಕಾರು ಬೆಂಗಳೂರು ಕಡೆಗೆ ಹೋಗುತ್ತಿತ್ತು. ಈ ಪರಿಣಾಮ, ಬೆಂಗಾವಲು ವಾಹನ ಜಖಂಗೊಂಡಿದೆ. … Continued

ಶಿವಮೊಗ್ಗದಲ್ಲಿ ಮತ್ತೆ ಭುಗಿಲೆದ್ದ ಫೋಟೋ ವಿವಾದ: ಇಬ್ಬರಿಗೆ ಚೂರಿ ಇರಿತ, ಉದ್ವಿಗ್ನ, ಶಿವಮೊಗ್ಗ ನಗರದಾದ್ಯಂತ ನಿಷೇಧಾಜ್ಞೆ ಜಾರಿ

ಶಿವಮೊಗ್ಗ: ವೀರ ಸಾವರ್ಕರ್ ಭಾವಚಿತ್ರ ವಿಚಾರದಲ್ಲಿ ಎರಡು ಕೋಮಿನ ನಡುವೆ ಜಟಾಪಟಿಯಾಗಿ  ಪ್ರಹಾರ ನಡೆದ ಘಟನೆ ಶಿವಮೊಗ್ಗದ ಅಮೀರ್ ಅಹಮದ್ ವೃತ್ತದಲ್ಲಿ ಸೋಮವಾರ ನಡೆದಿದೆ. ಪರಿಸ್ಥಿತಿ ಉದ್ವಿಗ್ನಗೊಂಡಿದ್ದು ಇಬ್ಬರಿಗೆ ಚಾಕುವಿನಿಂದ ಇರಿಯಲಾಗಿದೆ ಎಂದು ಹೇಳಲಾಗಿದೆ. ಇಲ್ಲಿನ ಅಮೀರ್ ಅಹಮದ್ ಸರ್ಕಲ್‌ನಲ್ಲಿ ಎರಡು ಕೋಮುಗಳ ನಡುವೆ ಗಲಾಟೆ ಹಿನ್ನೆಲೆಯಲ್ಲಿ ನಗರ ವ್ಯಾಪ್ತಿಯಲ್ಲಿ ಸೆಕ್ಷನ್ 144, ನಿಷೇದಾಜ್ಞೆ ಜಾರಿ … Continued

ಆನೆ ದಾಳಿಗೆ ರೈತ ಸಾವು: ಕಾಡಿನೊಳಗೆ ಅರ್ಧ ಕಿಮೀ ದೂರ ಮೃತದೇಹ ಎಳೆದೊಯ್ದ ಒಂಟಿ ಸಲಗ…!

ಚಿಕ್ಕಮಗಳೂರು: ಕಾಡಾನೆ ದಾಳಿಯಿಂದ ವ್ಯಕ್ತಿ ಸಾವಿಗೀಡಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹಾರ್ಗೋಡು ಗ್ರಾಮದಲ್ಲಿ ನಡೆದ ಬಗ್ಗೆ ವರದಿಯಾಗಿದ್ದು, ದಾಳಿ ಮಾಡಿ ಸಾಯಿಸಿದ ಕಾಡಾನೆ ನಂತರ ಸುಮಾರು ಅರ್ಧ ಕಿಮೀಗಿಂತಲೂ ದೂರ ಮೃತ ದೇಹವನ್ನು ಕಾಡಿನಲ್ಲಿ ಎಳೆದೊಯ್ದಿದೆ ಎಂದು ಹೇಳಲಾಗಿದೆ. ಮೃತ ವ್ಯಕ್ತಿಯನ್ನು ಆನಂದ ದೇವಾಡಿಗ (52 ವರ್ಷ) ಎಂದು ಗುರುತಿಸಲಾಗಿದೆ. ಇವರು ಮನೆಯ … Continued

ಧ್ವಜಾರೋಹಣದ ವೇಳೆ ಕುಸಿದು ಬಿದ್ದು ನಿವೃತ್ತ ಸೈನಿಕ ಸಾವು

ಮಂಗಳೂರು: ಸ್ವಾತಂತ್ರ್ಯ ದಿನೋತ್ಸವದ ಧ್ವಜಾರೋಹಣದ ವೇಳೆ ನಿವೃತ್ತ ಸೈನಿಕರೊಬ್ಬರು ಕುಸಿದು ಬಿದ್ದು ಬಳಿಕ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ವರದಿಯಾಗಿದೆ. ಮೃತರನ್ನು ನಿವೃತ್ತ ಸೈನಿಕ ಗಂಗಾಧರ ಗೌಡ ಎಂದು ಗುರುತಿಸಲಾಗಿದೆ. ಕುಟ್ರುಪಾಡಿ ಗ್ರಾ.ಪಂ. ವತಿಯಿಂದ ಹಳೆ ಸ್ಟೇಷನ್ ಅಮೃತ ಸರೋವರದ ಬಳಿ ಹೊಸಮಠ ಸಿ.ಎ.ಬ್ಯಾಂಕಿನ ಮಾಜಿ ಅಧ್ಯಕ್ಷ ಎನ್. … Continued

ಸ್ವಾತಂತ್ರ್ಯ ಅಮೃತ ಮಹೋತ್ಸವದ ಸವಿನೆನಪಿಗೆ ಹೊಸ ಯೋಜನೆಗಳನ್ನು ಘೋಷಣೆ ಮಾಡಿದ ಸಿಎಂ ಬೊಮ್ಮಾಯಿ

ಬೆಂಗಳೂರು : ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಮಾಣೆಕ್ ಶಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ್ದಾರೆ. ಇದೇ ಸಂದರ್ಭದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸವಿನೆನಪಿಗಾಗಿ ಅವರು ಹಲವು ಹೊಸ ಯೋಜನೆಗಳನ್ನು ಘೋಷಿಸಿದ್ದಾರೆ. 250 ಕೋಟಿ ರೂ. ವೆಚ್ಚದಲ್ಲಿ ರಾಜ್ಯದ ಎಲ್ಲ ಸರ್ಕಾರಿ ಶಾಲೆ, ಕಾಲೇಜುಗಳಲ್ಲಿ ಸಂಪೂರ್ಣವಾಗಿ ಶೌಚಾಲಯಗಳ ನಿರ್ಮಾಣ ಮಾಡಲಾಗುವುದು ಎಂದು ಅವರು … Continued

ಬೆಂಗಳೂರು ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ರಾಷ್ಟ್ರ ಧ್ವಜಾರೋಹಣ

ಬೆಂಗಳೂರು: ಜಾಗದ ಒಡೆತನ ವಿಚಾರವಾಗಿ ಸುದ್ದಿಯಾಗಿದ್ದ ಚಾಮರಾಜಪೇಟೆ ಮೈದಾನದಲ್ಲಿ ಮೈದಾನದಲ್ಲಿ 76ನೇ ಸ್ವಾತಂತ್ರ್ಯದಿನಾಚರಣೆ ಸಂಭ್ರಮದ ದಿನದಂದು ರಾಷ್ಟ್ರ ಧ್ವಜಾರೋಹಣ ಮಾಡಲಾಯಿತು. ಜಾಗದ ಒಡೆತನ ವಿಚಾರವಾಗಿ ಹೆಚ್ಚು ಸುದ್ದಿಯಾಗಿದ್ದ ಚಾಮರಾಜಪೇಟೆ ಮೈದಾನದಲ್ಲಿ ಪೊಲೀಸರ ಸರ್ಪಗಾವಲಿನಲ್ಲಿ ಸೋಮವಾರ ಬೆಳಿಗ್ಗೆ ಧ್ವಜಾರೋಹಣ ನೆರವೇರಿತು. ಸರ್ಕಾರದ ವತಿಯಿಂದಲೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಕಾರ್ಯಕ್ರಮದ ನಿಮಿತ್ತ ಬೆಂಗಳೂರು ನಗರ ಉಪ ವಿಭಾಗಾಧಿಕಾರಿ ಶಿವಣ್ಣ … Continued

ಸ್ವಾತಂತ್ರ್ಯ ದಿನಾಚರಣೆ ಮುನ್ನಾದಿನದ ಭಾಷಣದಲ್ಲಿ ರಾಷ್ಟ್ರಕವಿ ಕುವೆಂಪು ಪದ್ಯದ ಸಾಲು ಉಲ್ಲೇಖಿಸಿ ಭಾರತಕ್ಕಾಗಿ ಸಂಪೂರ್ಣ ತ್ಯಾಗ ಮಾಡಲು ಕರೆ ನೀಡಿದ ರಾಷ್ಟ್ರಪತಿ ಮುರ್ಮು

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಭಾನುವಾರ ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನ ರಾಷ್ಟ್ರವನ್ನುದ್ದೇಶಿಸಿ ಮಾಡಿದ ಮೊದಲ ಭಾಷಣದಲ್ಲಿ ಕನ್ನಡದ ಅಪ್ರತಿಮ ಕವಿ ಕುವೆಂಪು ಅವರನ್ನು ಉಲ್ಲೇಖಿಸಿ ದೇಶವನ್ನು ಕಟ್ಟಲು ಉದ್ದೇಶಿಸಿರುವ ಯುವ ಸಮೂಹ ಮಾತೃಭೂಮಿ ಮತ್ತು ಸಹವರ್ತಿ ನಾಗರಿಕರ ಉನ್ನತಿಗಾಗಿ ಸಂಪೂರ್ಣ ತ್ಯಾಗ ಮಾಡುವಂತೆ ಕರೆ ನೀಡಿದ್ದಾರೆ. ಕನ್ನಡ ಭಾಷೆಯ ಮೂಲಕ ಭಾರತೀಯ ಸಾಹಿತ್ಯವನ್ನು ಶ್ರೀಮಂತಗೊಳಿಸಿದ ಮಹಾನ್ … Continued

ದಾಂಡೇಲಿ: ಮೊಸಳೆ ಎಳೆದೊಯ್ದಿದ್ದ ವ್ಯಕ್ತಿಯ ಮೃತದೇಹ ಇಂದು ಪತ್ತೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ನಿನ್ನೆ, ಶನಿವಾರ ಮೊಸಳೆಯ ಬಾಯಿಗೆ ಸಿಲುಕಿ ನಾಪತ್ತೆಯಾಗಿದ್ದ ವ್ಯಕ್ತಿ ಇಂದು, ಭಾನುವಾರ ಶವವಾಗಿ ಪತ್ತೆಯಾಗಿದ್ದಾರೆ. ದಾಂಡೇಲಿಯ ವಿನಾಯಕನಗರದ ಅಲೈಡ್ ಬಳಿ ಶನಿವಾರ ಈ ದುರ್ಘಟನೆ ನಡೆದಿತ್ತು.ಸುರೇಶ​ ವಸಂತ ತೇಲಿ (44) ಮೃತ ವ್ಯಕ್ತಿ. ಹೊಳೆದಂಡೆಯಲ್ಲಿ ಮೀನು ಹಿಡಿಯುತ್ತಿದ್ದ ಸಂದರ್ಭದಲ್ಲಿ ಮೊಸಳೆ ಎಳೆದುಕೊಂಡು ಹೋಗಿತ್ತು. ರಕ್ಷಣಾ ತಂಡದವರು ಮತ್ತು ಪೊಲೀಸರು … Continued

ರಾಷ್ಟ್ರಪತಿ ಪದಕ ಪುರಸ್ಕೃತರ ಪಟ್ಟಿ ಬಿಡುಗಡೆ: ಕರ್ನಾಟಕದ 18 ಪೊಲೀಸ್​ ಅಧಿಕಾರಿಗಳಿಗೆ ಮೆರಿಟೋರಿಯಸ್​ ಅವಾರ್ಡ್​

ನವದೆಹಲಿ: ಪೊಲೀಸ್​ ಇಲಾಖೆಗೆ ಸ್ವಾತಂತ್ರ್ಯೋತ್ಸವದ ನಿಮಿತ್ತ ಪ್ರತಿವರ್ಷ ನೀಡಲಾಗುವ ವಿವಿಧ ಪ್ರಶಸ್ತಿಗಳ ಪಟ್ಟಿ ಬಿಡುಗಡೆ ಮಾಡಲಾಗಿದ್ದು, ಈ ಬಾರಿ ದೇಶದ ಒಟ್ಟು 1,082 ಪೊಲೀಸ್ ಸಿಬ್ಬಂದಿಯನ್ನು ಸ್ವಾತಂತ್ರ್ಯ ದಿನಾಚರಣೆಯ ಪದಕಗಳಿಗೆ ಆಯ್ಕೆ ಮಾಡಲಾಗಿದೆ. ಇದರಲ್ಲಿ ಕರ್ನಾಟಕದ 18 ಮಂದಿ ಪೊಲೀಸ್​ ಅಧಿಕಾರಿ ಹಾಗೂ ಪೊಲೀಸ್​ ಸಿಬ್ಬಂದಿಯನ್ನು ಮೆರಿಟೋರಿಸ್​ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಸ್ವಾತಂತ್ರ್ಯ ದಿನಾಚರಣೆಯ ಪದಕಗಳಿಗೆ … Continued

ಪತಿ ಕಿರುಕುಳ: ಪ್ರಧಾನಿ ಮೋದಿಗೆ ವೀಡಿಯೋ ಸಂದೇಶ ಕಳುಹಿಸಿ ಆತ್ಮಹತ್ಯೆಗೆ ಯತ್ನಿಸಿದ ಮಾಜಿ ಉಪ ಮೇಯರ್

ಬೆಂಗಳೂರು: ಮಾಜಿ ಉಪ ಮೇಯರ್‌ ಶಹತಾಜ್ ಬೇಗಂ ತಮ್ಮ ಪತಿ ಹಾಗೂ ಪೊಲೀಸರು ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ವೀಡಿಯೊ ಸಂದೇಶ ಕಳುಹಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕುತ್ತಿಗೆಗೆ ಸೀರೆಯಿಂದ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಫೇಸ್ಬುಕ್‌ನಲ್ಲಿ ಅವರು ವೀಡಿಯೋ ಅಪ್ಲೋಡ್ ಮಾಡಿದ್ದಾರೆ. ಮೋದಿಯವರೇ ಒಂದೋ ನನಗೆ ರಕ್ಷಣೆ ನೀಡಿ, … Continued