ಬೆಂಗಳೂರು ನಗರ ವಿವಿಗೆ ಮಾಜಿ ಪ್ರಧಾನಿ ಡಾ.ಮನಮೋಹನ ಸಿಂಗ್ ಹೆಸರು ; ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ

ಬೆಂಗಳೂರು: ಬೆಂಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ಮಾಜಿ ಪ್ರಧಾನಿ ಡಾ.ಮನಮೋಹನ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ ಎಂದು ಮರುನಾಮಕರಣ ಮಾಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ದೇಶದ ಪ್ರಧಾನಿಯಾಗಿ ಬೆಂಗಳೂರು ನಗರದ ಅಭಿವೃದ್ಧಿಗೆ ಸಾಕಷ್ಟು ಯೋಜನೆ ಮತ್ತು ಕೊಡುಗೆಗಳನ್ನು ನೀಡಿದ್ದ ಆರ್ಥಿಕ ತಜ್ಞ ಡಾ. … Continued

ದೇಶದಲ್ಲಿ ಮೊದಲ ಬಾರಿಗೆ ಜಾತಿಗಣತಿ ಕೈಗೊಂಡಿದ್ದು ಕಾಂಗ್ರೆಸ್ ಸರ್ಕಾರ ; ಬಿಜೆಪಿ ವಿರುದ್ಧ ವಸಂತ ಲದವಾ ವಾಗ್ದಾಳಿ

ಹುಬ್ಬಳ್ಳಿ : ಸ್ವಾತಂತ್ರ್ಯ ಬಂದ ನಂತರ ಮೊದಲ ಬಾರಿಗೆ ಜಾತಿಗಣತಿ ಕೈಗೊಂಡಿದ್ದು ಕಾಂಗ್ರೆಸ್ ಸರ್ಕಾರವೇ ಹೊರತು ಬಿಜೆಪಿ ಸರ್ಕಾರ ಅಲ್ಲ ಎಂದು ಕಾಂಗ್ರೆಸ್‌ ವಕ್ತಾರ ವಸಂತ ಲದವಾ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ೨೦೧೧ರಲ್ಲಿ ಭಾರತದ ಸಾಮಾಜಿಕ, ಆರ್ಥಿಕ ಜಾತಿ ಗಣತಿ ನಡೆಸಲಾಗಿದೆ. ೨೦೧೦ರಲ್ಲಿ ಸಂಸತ್ತಿನ ಉಭಯ … Continued

ಐಪಿಎಸ್ ಅಧಿಕಾರಿ ಅಮಾನತು ರದ್ದು: ಸಿಎಟಿ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರದಿಂದ ಹೈಕೋರ್ಟ್‌ನಲ್ಲಿ ಮೇಲ್ಮನವಿ

ಬೆಂಗಳೂರು : ನಗರದ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇತ್ತೀಚಿಗೆ ಸಂಭವಿಸಿದ್ದ ಕಾಲ್ತುಳಿತ ಪ್ರಕರಣದ ಸಂಬಂಧ ಕರ್ತವ್ಯಲೋಪದ ಆರೋಪದ ಮೇಲೆ ಐಪಿಎಸ್‌ ಅಧಿಕಾರಿ ವಿಕಾಸಕುಮಾರ ವಿಕಾಸ ಅವರನ್ನು ಅಮಾನತು ಮಾಡಿದ್ದ ರಾಜ್ಯ ಸರ್ಕಾರದ ಆದೇಶವನ್ನು ಕೇಂದ್ರೀಯ ಆಡಳಿತಾತ್ಮಕ ನ್ಯಾಯ ಮಂಡಳಿಯು (ಸಿಎಟಿ)ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಬುಧವಾರ ಕರ್ನಾಟಕ ಹೈಕೋರ್ಟ್‌ ಮೆಟ್ಟಿಲೇರಿದೆ. ಅಡ್ವೊಕೇಟ್‌ ಜನರಲ್‌ ಕೆ ಶಶಿಕಿರಣ … Continued

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಬಾಗೇಪಲ್ಲಿ ಪಟ್ಟಣದ ಹೆಸರು ಬದಲಾವಣೆಗೆ ಸಚಿವ ಸಂಪುಟ ಅನುಮೋದನೆ

ಚಿಕ್ಕಬಳ್ಳಾಪುರ : ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಮನಗರ ಜಿಲ್ಲೆಯ ನಂತರ ಮತ್ತೊಂದು ಜಿಲ್ಲೆಯ ಹೆಸರು ಬದಲಾವಣೆಗೆ ಮುಂದಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಬೆಂಗಳೂರು ಉತ್ತರ ಜಿಲ್ಲೆ ಎಂದು ಮರು ನಾಮಕರಣ ಮಾಡಲು ಬುಧವಾರ ನಡೆದ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಇಂದು, ಬುಧವಾರ (ಜುಲೈ ೨) ನಂದಿ ಗಿರಿಧಾಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ … Continued

ಕ್ಯಾಂಪಸ್‌ ಶೌಚಾಲಯದಲ್ಲಿ ಮಹಿಳಾ ಉದ್ಯೋಗಿಗಳ ವೀಡಿಯೊ ಚಿತ್ರೀಕರಣ ; ಇನ್ಫೋಸಿಸ್‌ ಉದ್ಯೋಗಿಯ ಬಂಧನ

ಬೆಂಗಳೂರು :  ಕ್ಯಾಂಪಸ್‌ನ ಶೌಚಾಲಯದಲ್ಲಿ ಮಹಿಳಾ ಸಹೋದ್ಯೋಗಿಗಳ ಅಶ್ಲೀಲ ವೀಡಿಯೊಗಳನ್ನು ರಹಸ್ಯವಾಗಿ ರೆಕಾರ್ಡ್ ಮಾಡಿದ ಆರೋಪದ ಮೇಲೆ ಟೆಕ್ ಕಂಪನಿ ಇನ್ಫೋಸಿಸ್‌ನ ಉದ್ಯೋಗಿಯನ್ನು ಬಂಧಿಸಲಾಗಿದೆ. ಆರೋಪಿಯನ್ನು ಸ್ವಪ್ನಿಲ್ ನಾಗೇಶ ಮಾಲಿ (28) ಎಂದು ಗುರುತಿಸಲಾಗಿದೆ, ಈತ ಆಂಧ್ರಪ್ರದೇಶದವರಾಗಿದ್ದು, ಇನ್ಫೋಸಿಸ್‌ನ ಹೆಲಿಕ್ಸ್ ಘಟಕದಲ್ಲಿ ಹಿರಿಯ ಅಸೋಸಿಯೇಟ್ ಸಲಹೆಗಾರನಾಗಿದ್ದಾನೆ ಎನ್ನಲಾಗಿದೆ. ಪೊಲೀಸ್ ವರದಿಯ ಪ್ರಕಾರ, ಜೂನ್ 30 ರಂದು … Continued

ಗುಂಡ್ಲುಪೇಟೆ | ಕೊಡಸೋಗೆ ರಸ್ತೆಯಲ್ಲಿ 20ಕ್ಕೂ ಹೆಚ್ಚು ಮಂಗಗಳ ಶವಗಳು ಪತ್ತೆ, ವಿಷಪ್ರಾಶನದ ಶಂಕೆ

ಚಾಮರಾಜನಗರ: ಐದು ಹುಲಿಗಳಿಗೆ ವಿಷಪ್ರಾಶನ ಮಾಡಿದ ಆಘಾತಕಾರಿ ಘಟನೆಯ ಬೆನ್ನಲ್ಲೇ, ಚಾಮರಾಜನಗರ ಜಿಲ್ಲೆಯಲ್ಲಿ 20 ಮಂಗಗಳ ಶವಗಳು ಬುಧವಾರ ಪತ್ತೆಯಾಗಿವೆ…! ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕಂದೇಗಾಲ-ಕೊಡಸೋಗೆ ರಸ್ತೆಯ ಉದ್ದಕ್ಕೂ ಮಂಗಗಳ ಮೃತದೇಹಗಳು ಪತ್ತೆಯಾಗಿವೆ. ಮಂಗಗಳಿಗೆ ವಿಷಪ್ರಾಶನ ಮಾಡಲಾಗಿದೆ ಎಂದು ಅರಣ್ಯ ಮತ್ತು ಪೊಲೀಸ್ ಅಧಿಕಾರಿಗಳು ಶಂಕಿಸಿದ್ದಾರೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪ್ರಾಥಮಿಕ ತನಿಖೆಯಿಂದ ಕೋತಿಗಳನ್ನು ಬೇರೆಡೆ … Continued

ಕರ್ನಾಟಕದ 9ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜುಲೈ 7ರ ವರೆಗೆ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಜುಲೈ 7ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಿದೆ. ಜುಲೈ 2ರಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಸೇರಿ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಉಳಿದ ಜಿಲ್ಲೆಗಳಲ್ಲಿ … Continued

ವಾಲ್ಮೀಕಿ ಹಗರಣ | ರಾಜ್ಯ ಸರ್ಕಾರಕ್ಕೆ ಹಿನ್ನಡೆ, ಸಿಬಿಐ ತನಿಖೆಗೆ ಹೈಕೋರ್ಟ್ ಆದೇಶ; ಹಲವರಿಗೆ ಶುರುವಾಯ್ತು ಢವ ಢವ

ಬೆಂಗಳೂರು : ಪ್ರಮುಖ ಬೆಳವಣಿಗೆಯೊಂದರಲ್ಲಿ, ವಾಲ್ಮೀಕಿ ಎಸ್‌ಟಿ ಅಭಿವೃದ್ಧಿ ನಿಗಮ ಹಗರಣದ ತನಿಖೆಯನ್ನು ವಹಿಸಿಕೊಳ್ಳುವಂತೆ ಕರ್ನಾಟಕ ಹೈಕೋರ್ಟ್ ಮಂಗಳವಾರ ಕೇಂದ್ರ ತನಿಖಾ ದಳ(ಸಿಬಿಐ)ಕ್ಕೆ ನಿರ್ದೇಶಿಸಿದೆ. ಈ ಆದೇಶವು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ದೊಡ್ಡ ಹಿನ್ನಡೆಯಾಗಿದೆ. ಸಿಬಿಐ ಈವರೆಗೆ ಬ್ಯಾಂಕ್ ವಿಚಾರಕ್ಕೆ ಮಾತ್ರ ಸೀಮಿತವಾಗಿ ತನಿಖೆ ನಡೆಸುತ್ತಿತ್ತು. ಹೀಗಾಗಿ ಸಿಬಿಐನಿಂದ ಸಮಗ್ರ ತನಿಖೆ ಕೋರಿ ರಿಟ್​ … Continued

ಸಿಎಂ ಬದಲಾವಣೆ ಕುರಿತು ಹೇಳಿಕೆ ; ಕಾಂಗ್ರೆಸ್‌ ಶಾಸಕ ಇಕ್ಬಾಲ್ ಹುಸೇನಗೆ ಕೆಪಿಸಿಸಿಯಿಂದ ಶೋಕಾಸ್ ನೋಟಿಸ್

ಬೆಂಗಳೂರು: ಡಿಕೆ ಶಿವಕುಮಾರ (DK Shivakumar) ಮುಖ್ಯಮಂತ್ರಿ ಆಗುವ ಕಾಲ ಹತ್ತಿರ ಇದೆ. ರಾಜ್ಯದಲ್ಲಿ ಮುಂದೆ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬರಬೇಕು ಎಂದರೆ ಮುಖ್ಯಮಂತ್ರಿ ಬದಲಾಗಬೇಕು ಎಂದು ಹೇಳಿಕೆ ನೀಡಿದ್ದ ರಾಮನಗರದ ಶಾಸಕ ಇಕ್ಬಾಲ್‌ ಹುಸೇನ್‌ ಅವರಿಗೆ ಕೆಪಿಸಿಸಿಯಿಂದ ನೋಟಿಸ್‌ ಜಾರಿ ಮಾಡಲಾಗಿದೆ. ಮುಖ್ಯಮಂತ್ರಿಗಳ ಬದಲಾವಣೆ ವಿಚಾರವಾಗಿ ಪಕ್ಷದಲ್ಲಿ ಗೊಂದಲ ಹಾಗೂ ಮುಜುಗರ ಉಂಟುಮಾಡುವಂತಹ ಹೇಳಿಕೆ … Continued

ಸೋನಿಯಾ ಗಾಂಧಿಗೆ ಸಿದ್ದರಾಮಯ್ಯರನ್ನು ಪರಿಚಯಿಸಿದ್ದೇ ನಾನು, ಲಾಟರಿ ಹೊಡೆದ್ರು ಸಿಎಂ ಆದ್ರು ; ಬಿ.ಆರ್. ಪಾಟೀಲ ಫೋನ್ ಕರೆ ಲೀಕ್‌

ಬೆಂಗಳೂರು : ಕರ್ನಾಟಕದ ಹಿರಿಯ ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ ಈಗ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಅವರು ತಮ್ಮ ಆಪ್ತರೊಂದಿಗೆ ದೂರವಾಣಿ ಕರೆಯಲ್ಲಿ ಮಾತನಾಡಿರುವ ವೀಡಿಯೊ ವೈರಲ್ ಆಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸೋನಿಯಾ ಗಾಂಧಿ ಅವರಿಗೆ ಪರಿಚಯಿಸಿದ್ದು ತಾನೇ ಎಂದು ಹೇಳಿಕೊಂಡಿದ್ದಾರೆ ಮತ್ತು ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದು ಮುಖ್ಯಮಂತ್ರಿಯೂ ಎಂದು ಹೇಳಿದ್ದಾರೆ. ಮಂಡ್ಯ ಜಿಲ್ಲೆ … Continued