ಯಲ್ಲಾಪುರ : ಶಿರಸಿ ಮಾರಿಜಾತ್ರೆಯಲ್ಲಿ ಕಳ್ಳತನಕ್ಕೆ ಯೋಜಿಸಿದ್ದ ಅಂತಾರಾಜ್ಯ ಕಳ್ಳರ ಬಂಧನ

ಯಲ್ಲಾಪುರ : ಇಲ್ಲಿ ದರೋಡೆ ನಡೆಸಿ ಮುಂದೆ ಶಿರಸಿ ಮಾರಿಕಾಂಬಾ ದೇವಿ ಜಾತ್ರೆಯಲ್ಲಿ ದರೋಡೆ ಮಾಡಲು ಯೋಜಿಸಿದ್ದ ಎಂಟು ಜನ ಅಂತಾರಾಜ್ಯ ದರೋಡೆಕೋರರನ್ನು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ರಾಷ್ಟ್ರೀಯ ಹೆದ್ದಾರಿ ಬಳಿಯ  ಕೆ ಮಿಲನ್ ಹೋಟೆಲ್ ಹತ್ತಿರ ಬುಧವಾರ ಬೆಳಗಿನ ಜಾವ ಪೋಲಿಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.  ಪಿಎಸ್ಐ ಸಿದ್ದಪ್ಪ ಗುಡಿ ತಮ್ಮ ತಂಡದೊಂದಿಗೆ … Continued

ವೀಡಿಯೊ | ಕರ್ನಾಟಕದ ಸುಪ್ರಸಿದ್ಧ ಶಿರಸಿ ಮಾರಿಕಾಂಬಾ ದೇವಿ ಜಾತ್ರೆ ಆರಂಭ : ಗದ್ದುಗೆಯಲ್ಲಿ ದೇವಿ ವಿರಾಜಮಾನ

ಶಿರಸಿ: ಕರ್ನಾಟಕದ ಅತಿದೊಡ್ಡ ಜಾತ್ರೆಯಾದ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಶ್ರೀ ಮಾರಿಕಾಂಬಾ ದೇವಿಯ ಜಾತ್ರೆಯು ರಥೋತ್ಸವ ಬುಧವಾರ ಅತ್ಯಂತ ಸಡಗಡ ಸಂಭ್ರಮದಿಂದ ಚಾಲನೆಗೊಂಡಿತು. ರಥದಲ್ಲಿ ಆಗಮಿಸಿದ ಭಕ್ತರ ಆರಾಧ್ಯ ದೈವ ಮಾರಿಕಾಂಬಾ ದೇವಿಯು  ಜಾತ್ರಾ  ಗದ್ದುಗೆಗೆ ಆಗಮಿಸಿ ಬುಧವಾರ ಪ್ರತಿಷ್ಠಾಪನೆಗೊಂಡಿದ್ದಾಳೆ..  ಶ್ರೀ ಮಾರಿಕಾಂಬೆಯ ದರ್ಶನಕ್ಕಾಗಿ ಆಗಮಿಸಿದ ಲಕ್ಷಾಂತರ ಭಕ್ತರು ಈ ರಥೋತ್ಸವಕ್ಕೆ ಸಾಕ್ಷಿಯಾಗುವ ಮೂಲಕ … Continued

ವೀಡಿಯೊ | ಹುಬ್ಬಳ್ಳಿಯಲ್ಲಿ ರಣಜಿ ಫೈನಲ್ : ಕರ್ನಾಟಕ ಆಟಗಾರನಿಗೆ ತಲೆಯಿಂದ ಡಿಚ್ಚಿ ಹೊಡೆದ ಜಮ್ಮು ತಂಡದ ನಾಯಕ

ಹುಬ್ಬಳ್ಳಿ: ಇಲ್ಲಿನ ಕೆ.ಎಸ್.ಸಿ.ಎ ಮೈದಾನದಲ್ಲಿ ನಡೆಯುತ್ತಿರುವ ಕರ್ನಾಟಕ ಮತ್ತು ಜಮ್ಮು-ಕಾಶ್ಮೀರ ನಡುವಿನ 2025-26ರ ಸಾಲಿನ ರಣಜಿ ಟ್ರೋಫಿ ಫೈನಲ್ ಪಂದ್ಯದ ಎರಡನೇ ದಿನದಂದು ಅನಿರೀಕ್ಷಿತ ಘಟನೆಯೊಂದು ನಡೆದಿದೆ. ಜಮ್ಮು-ಕಾಶ್ಮೀರ ತಂಡದ ನಾಯಕ ಪರಾಸ್ ಡೋಗ್ರಾ ಅವರು ಕರ್ನಾಟಕದ ಫೀಲ್ಡರ್ ಕೆ.ವಿ. ಅನೀಶ್ ಅವರಿಗೆ ತಲೆಯಿಂದ ಡಿಚ್ಚಿ ಹೊಡೆದ (Headbutt) ಪ್ರಸಂಗ ನಡೆದಿದೆ. ಜಮ್ಮು-ಕಾಶ್ಮೀರ ಇನಿಂಗ್ಸ್‌ನ 101ನೇ … Continued

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ : ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಎರಡ್ಮೂರು ದಿನ ಮಳೆ ಸಾಧ್ಯತೆ

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪ್ರಭಾವದಿಂದಾಗಿ ಫೆಬ್ರವರಿ 27 ರವರೆಗೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮಧ್ಯಂತರ ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ಬಂಗಾಳಕೊಲ್ಲಿಯ ಮೇಲೆ ಉತ್ತರ ಶ್ರೀಲಂಕಾದ ಬಳಿ ಕೇಂದ್ರೀಕೃತವಾಗಿರುವ ವಾಯುಭಾರ ಕುಸಿತವು ಕ್ರಮೇಣ ಪೂರ್ವಕ್ಕೆ ಬದಲಾಗುತ್ತಿದೆ. ಈ ಚಲನೆಯೊಂದಿಗೆ, ಬಂಗಾಳಕೊಲ್ಲಿಯಿಂದ ಬೀಸುವ ತೇವಾಂಶ-ವಾಹಕ ಗಾಳಿಯು ದುರ್ಬಲಗೊಳ್ಳಬಹುದು, … Continued

ಕಾಂತಾರ ಮಿಮಿಕ್ರಿ ಪ್ರಕರಣ ; ನಟ ರಣವೀರ್‌ ಸಿಂಗ್‌ ಗೆ ಕರ್ನಾಟಕ ಹೈಕೋರ್ಟ್‌ ತರಾಟೆ

ಬೆಂಗಳೂರು : ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಗೆ ಕರ್ನಾಟಕ ಹೈಕೋರ್ಟ್ ಬಂಧನದಿಂದ ತಾತ್ಕಾಲಿಕ ಸಮಾಧಾನ ನೀಡಿದೆಯಾದರೂ, ಅವರ ವರ್ತನೆಯ ಬಗ್ಗೆ ನ್ಯಾಯಾಧೀಶರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಂಗಳವಾರ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು, “ಸೆಲೆಬ್ರಿಟಿಯಾದ ತಕ್ಷಣ ಧಾರ್ಮಿಕ ನಂಬಿಕೆಗಳನ್ನು ಅಪಹಾಸ್ಯ ಮಾಡುವ ಹಕ್ಕು ಯಾರಿಗೂ ಇಲ್ಲ” ಎಂದು ಹೇಳಿದ್ದಾರೆ. ಕೋರ್ಟ್ … Continued

ಶಿವಮೊಗ್ಗ: ಜಗಳ ಬಿಡಿಸಲು ಹೋದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯ ಹತ್ಯೆ

ಶಿವಮೊಗ್ಗ: ಶಿವಮೊಗ್ಗದ ಹೊರವಲಯದ ಸೂಳೆಬೈಲು ಪ್ರದೇಶದಲ್ಲಿ 15 ವರ್ಷದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯನ್ನು ಆತನ ಸಹಪಾಠಿಗಳೇ ಬರ್ಬರವಾಗಿ ಹೊಡೆದು ಕೊಂದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಸೋಮವಾರ ರಾತ್ರಿ ವಿಶೇಷ ತರಗತಿ ಮುಗಿಸಿ ವಿದ್ಯಾರ್ಥಿಗಳು ಮನೆಗೆ ಮರಳುತ್ತಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ. ಮೃತ ವಿದ್ಯಾರ್ಥಿಯನ್ನು ಸಂಕೇತ ಎಂದು ಗುರುತಿಸಲಾಗಿದೆ. ವರದಿಗಳ ಪ್ರಕಾರ, ಎಸ್‌ಎಸ್‌ಎಲ್‌ಸಿ ಪರೀಕ್ಷೆಯ (SSLC … Continued

ಧಾರವಾಡ : ಕೆಡಿಪಿ ಸಭೆಯಲ್ಲಿ ಸಚಿವ ಲಾಡ್-ಕಾಂಗ್ರೆಸ್‌ ಪರಿಷತ್‌ ಸದಸ್ಯ ಜಕ್ಕಪ್ಪನವರ ತೀವ್ರ ಜಟಾಪಟಿ

ಧಾರವಾಡ : ಸೋಮವಾರ ಧಾರವಾಡದಲ್ಲಿ ನಡೆದ ಜಿಲ್ಲಾ ಪಂಚಾಯತ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡಗಳ ಅನುದಾನ ಬಳಕೆ ಹಾಗೂ ಸೌಲಭ್ಯ ಹಂಚಿಕೆ ವಿಚಾರವಾಗಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್‌ ಹಾಗೂ ಕಾಂಗ್ರೆಸ್ಸಿನ ವಿಧಾನ ಪರಿಷತ್‌ ಸದಸ್ಯ ಎಫ್‌.ಎಚ್‌ ಜಕ್ಕಪ್ಪನವರ ಮಧ್ಯೆ ತೀವ್ರ ಜಟಾಪಟಿ ನಡೆದಿದೆ. ಇಬ್ಬರು ನಾಯಕರು … Continued

ಉಡುಪಿ : ರಸ್ತೆಯಲ್ಲೇ ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಯುವಕ

ಉಡುಪಿ : ಯುವಕನೊಬ್ಬ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಉಡುಪಿಯ ಜನನಿಬಿಡ ಕಲ್ಸಂಕ ವೃತ್ತದ ಬಳಿ ಭಾನುವಾರ ಸಂಜೆ ಸಂಭವಿಸಿದೆ ಎಂದು ವರದಿಯಾಗಿದೆ. ಯುವಕನನ್ನು ತಕ್ಷಣವೇ ರಕ್ಷಿಸಲಾಗಿದೆ. ಬಾಟಲಿಯಲ್ಲಿ ಪೆಟ್ರೋಲ್ ಹಿಡಿದು ಬಂದಿದ್ದ ವ್ಯಕ್ತಿ, ಕಲ್ಸಂಕ ವೃತ್ತದ ಬಳಿ ಕಿರುಚಾಡುತ್ತ ಮೈಮೇಲೆ ಪೆಟ್ರೋಲ್ ಸುರಿದುಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ ಅಲ್ಲಿಯೇ … Continued

ಬೆಂಗಳೂರು : ಸ್ನೇಹಿತನಿಗೆ ಬ್ಯಾಂಕ್‌ ವಿವರ ನೀಡಿ 7 ಕೋಟಿ ರೂ. ವಂಚನೆ ಜಾಲದಲ್ಲಿ ಸಿಲುಕಿದ ವಿದ್ಯಾರ್ಥಿ…!

ಬೆಂಗಳೂರು: ತನ್ನ ಸ್ನೇಹಿತನನ್ನು ಅತಿಯಾಗಿ ನಂಬಿದ್ದು ಬೆಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬನ ಪಾಲಿಗೆ ಅದೇ ದುಸ್ವಪ್ನವಾಗಿ ಪರಿಣಮಿಸಿದೆ. ಸ್ನೇಹಿತನಿಗೆ ಸಹಾಯ ಮಾಡಲು ಹೋದ ಈತ ಈಗ ಕೋಟ್ಯಂತರ ರೂಪಾಯಿಗಳ ಸೈಬರ್ ಹಗರಣದಲ್ಲಿ ಸಿಲುಕಿಕೊಂಡಿದ್ದಾನೆ. ಈ ವಿದ್ಯಾರ್ಥಿಯ ಬ್ಯಾಂಕ್ ಖಾತೆಯನ್ನು ಸೈಬರ್ ವಂಚಕರು ಬರೋಬ್ಬರಿ 7 ಕೋಟಿ ರೂಪಾಯಿ ವಂಚನೆಗೆ ಬಳಸಿಕೊಂಡಿರುವುದು ಪೊಲೀಸ್ ತನಿಖೆಯಿಂದ ಬೆಳಕಿಗೆ ಬಂದಿದೆ. ಬೆಂಗಳೂರು … Continued

ಕಾರವಾರ : ಒಂದೇ ಸ್ಥಳದಲ್ಲಿ 6 ಹೆಬ್ಬಾವುಗಳು ಪತ್ತೆ…!

ಕಾರವಾರ : ನಗರದ ಕಠಿಣಕೋಣ ಭಾಗದಲ್ಲಿ ಭಾನುವಾರ ಅಪರೂಪದ ಘಟನೆಯೊಂದು ನಡೆದಿದ್ದು, ಇಲ್ಲಿನ ನಿವಾಸಿಯೊಬ್ಬರ ಮನೆಯ ಆವರಣದಲ್ಲಿ ಒಟ್ಟಿಗೆ ಆರು ಹೆಬ್ಬಾವುಗಳು ಪತ್ತೆಯಾಗಿವೆ. ವಿಜಯ ತಳೇಕರ ಎಂಬವರ ಮನೆಯ ಆವರಣದಲ್ಲಿ ಕಾಂಕ್ರೀಟ್ ಕಮಾನು ನಿರ್ಮಾಣಕ್ಕಾಗಿ ಇರಿಸಲಾಗಿದ್ದ ಕಬ್ಬಿಣದ ಸಾಮಗ್ರಿಗಳ ಮಧ್ಯೆ ಈ ಬೃಹತ್ ಹಾವುಗಳು ಅಡಗಿಕೊಂಡಿದ್ದವು. ಒಂದೇ ಕಡೆ ಇಷ್ಟೊಂದು ಸಂಖ್ಯೆಯ ಹೆಬ್ಬಾವುಗಳನ್ನು ಕಂಡ ಸ್ಥಳೀಯರು … Continued